Andolana originals

ಶಿವಾನಂದಪುರಿ ಶ್ರೀಗಳಿಗೆ ಕನಕ ಭವನ ನಿರ್ವಹಣೆ ಹೊಣೆ

ಮಂಜು ಕೋಟೆ

ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ

ಎಚ್.ಡಿ.ಕೋಟೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಹಕಾರದಿಂದ ಪಟ್ಟಣದಲ್ಲಿ ೫ ಕೋಟಿ ರೂ.ಗಳಿಗೂ ಹೆಚ್ಚಿನ ಅನುದಾನದಲ್ಲಿ ನಿರ್ಮಾಣಗೊಂಡಿರುವ ಹೈಟೆಕ್ ಕನಕ ಭವನದ ನಿರ್ವಹಣೆಯ ಜವಾಬ್ದಾರಿಯನ್ನು ಕಾಗಿನೆಲೆ ಕನಕ ಗುರುಪೀಠದ ಮೈಸೂರು ಶಾಖಾ ಮಠಾಧೀಶರಾದ ಶ್ರೀ ಶಿವಾನಂದಪುರಿ ಸ್ವಾಮೀಜಿಗಳಿಗೆ ಶ್ರೀ ಕಾಳಿದಾಸ ಕುರುಬ ಕ್ಷೇಮಾಭಿವೃದ್ಧಿ ಸಂಘದವರು ನೀಡಿದ್ದಾರೆ.

ಪಟ್ಟಣದಲ್ಲಿ ಸರ್ಕಾರದ ಅನುದಾನದ ಮೂಲಕ ೫ ಕೋಟಿ ರೂ. ವೆಚ್ಚದಲ್ಲಿ ಸಂಘದವರ ಪರಿಶ್ರಮದಿಂದ ನಿರ್ಮಾಣಗೊಂಡಿರುವ ಹೈಟೆಕ್ ಕನಕ ಭವನ ೭-೮ ವರ್ಷಗಳ ಹಿಂದೆ ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ, ಶಾಸಕ ಅನಿಲ್ ಚಿಕ್ಕ ಮಾದು, ಸಂಸದರಾಗಿದ್ದ ಧ್ರುವನಾರಾಯಣ, ಸಮಾಜದ ತಾಲ್ಲೂಕು ಅಧ್ಯಕ್ಷರಾಗಿದ್ದ ಶಿವಪ್ಪ ಕೋಟೆ, ಅನೇಕ ಗಣ್ಯರಿಂದ ಉದ್ಘಾಟನೆಗೊಂಡಿತ್ತು. ೨೦೨೩ರಲ್ಲಿ ಮೊಳಿಯೂರು ಆನಂದ್ ಸಂಘದ ಅಧ್ಯಕ್ಷರಾದ ಸಂದರ್ಭದಲ್ಲಿ ಭವನ ಕೆಲವೊಂದು ಮೂಲಸೌಕರ್ಯಗಳನ್ನು ಕಲ್ಪಿಸಿ, ಸಾರ್ವಜನಿಕರ ಸೇವೆಗೆ ಸಮರ್ಪಿಸಲಾಗಿತ್ತು.

ಸಂಘಕ್ಕೆ ಪ್ರತಿ ವರ್ಷ ಲಕ್ಷಾಂತರ ರೂ. ಆದಾಯ ಬರುತ್ತಿತ್ತು. ಆದರೆ, ಷಭವನ ಮತ್ತು ಸಂಘದ ವಿಚಾರವಾಗಿ ಸಮಾಜದ ಎರಡು ಬಣಗಳ ನಡುವೆ ಗಲಾಟೆ, ಗದ್ದಲ ಉಂಟಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರ ಗಮನಕ್ಕೆ ಮೊಳಿಯೂರು ಆನಂದ್ ಮತ್ತಿತರರು ತಂದರು.

ಆಗ ಸಮಸ್ಯೆಗೆ ತೆರೆ ಎಳೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶದ ಮೇರೆಗೆ ಮುಖ್ಯಮಂತ್ರಿಗಳ ಮಾಜಿ ಜಂಟಿ ಕಾರ್ಯದರ್ಶಿ ರಾಮಯ್ಯ, ಕರ್ನಾಟಕ ರಾಜ್ಯ ಪ್ರದೇಶ ಕುರುಬರ ಸಂಘದ ಮಾಜಿ ಅಧ್ಯಕ್ಷರಾದ ಬಿ.ಸುಬ್ರಹ್ಮಣ್ಯ ಸಹಕಾರದೊಂದಿಗೆ ಶ್ರೀ ಕಾಳಿದಾಸ ಕುರುಬ ಕ್ಷೇಮಾಭಿವೃದ್ಧಿ ಸಂಘದ ತಾಲ್ಲೂಕು ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಕೋಟೆ ತಾಲ್ಲೂಕಿನ ಕನಕ  ಭವನದ ಜವಾಬ್ದಾರಿಯನ್ನು ಕಾಗಿನೆಲೆ ಕನಕ ಗುರು ಪೀಠದ ಮೈಸೂರು ಶಾಖಾ ಮಠಾಧೀಶರಾದ ಶ್ರೀ ಶಿವಾನಂದಪುರಿ ಸ್ವಾಮೀಜಿಯವರಿಗೆ ನೀಡಿದ್ದಾರೆ.

ತಾಲ್ಲೂಕು ಸಂಘದ ಅಧ್ಯಕ್ಷ ಎಂ.ಬಿ.ಆನಂದ್, ಪ್ರಧಾನ ಕಾರ್ಯದರ್ಶಿ ಎಸ್.ಬಿ.ಮಹದೇವ, ನಿರ್ದೇಶಕರುಗಳಾದ ಚನ್ನೇಗೌಡ, ಕೋಟೆ ಕುಮಾರೇಗೌಡ, ರಾಜೇಗೌಡ ಕೊಡಸಿಗೆ, ಶಿವಮಲ್ಲಪ್ಪ ಮೊತ್ತ, ಬೀರೇಗೌಡ ಮರಳು, ಕಳಸೂರು ಬೀರೇಗೌಡ, ನಾಗೇಗೌಡ ಶಿರಮಳ್ಳಿ, ಮಂಚನಹಳ್ಳಿ ಮಹಾದೇವ್, ಬೈಪಾಸ್ ಮಂಜು ನಾಥ್, ಕುಮಾರನ್, ಕ್ಯಾತನಹಳ್ಳಿ ಪ್ರಕಾಶ್, ಗೋವಿಂದ ರಾಜು, ಆರ್.ಸಿ.ನಾಗೇಗೌಡ, ದೇವ ರಾಜ್ ಮೊಳೆಯೂರು, ಸಂತೋಷ್, ಮುಂತಾದವರು ಕನಕ ಭವನದ ಕೀ ಮತ್ತು ಬ್ಯಾಂಕ್‌ನ ವಹಿವಾಟುಗಳ ಮಾಹಿತಿ ಮತ್ತು ದಾಖಲಾತಿಗಳನ್ನು ಸ್ವಾಮೀಜಿ ಯವರಿಗೆ ನೀಡಿದರು.

” ನಾನು ಅಧ್ಯಕ್ಷನಾದ ಮೇಲೆ ಕನಕ ಭವನವನ್ನು ಮತ್ತಷ್ಟು ಅಭಿವೃದ್ಧಿಪಡಿಸಿ, ಸಭೆ-ಸಮಾರಂಭ, ಮದುವೆಗಳಿಗೆ ನೀಡಿ ಭವನಕ್ಕೆ ಆದಾಯ ಬರುವಂತೆ ಮಾಡಲಾಗಿತ್ತು. ಇದನ್ನು ಕೆಲವರು ಸಹಿಸದೆ ಬಣಗಳನ್ನು ನಿರ್ಮಾಣ ಮಾಡಿಕೊಂಡು ಕೋರ್ಟು, ಕಚೇರಿ, ಪೊಲೀಸ್ ಠಾಣೆ ಮೆಟ್ಟಿಲೇರಿದ್ದರಿಂದ, ಗಲಾಟೆ ಗೊಂದಲ ನಿರ್ಮಾಣ ವಾಗಿತ್ತು. ಇದನ್ನೆಲ್ಲ ಗಮನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇನ್ನಿತರ ಗಣ್ಯರು ಭವನದ ನಿರ್ವಹಣೆ ಮತ್ತು ಅಭಿವೃದ್ಧಿ ಹೊಣೆಯನ್ನು ಮಠದವರಿಗೆ ನೀಡು ವಂತೆ ಸೂಚಿಸಿದ್ದು, ಅದರಂತೆ ಕನಕ ಭವನದ ಜವಾಬ್ದಾರಿಯನ್ನು ಶ್ರೀಗಳಿಗೆ ನೀಡಲಾಗಿದೆ.”

-ಎಂ.ಬಿ.ಆನಂದ್, ಅಧ್ಯಕ್ಷ, ತಾಲ್ಲೂಕು ಕುರುಬ ಸಮಾಜ

ಆಂದೋಲನ ಡೆಸ್ಕ್

Recent Posts

ಭಾನುವಾರದ ಹಾಡುಪಾಡು | ಈಗ ಕೇರಳದಲ್ಲೂ ಫ್ರೀ ಬಸ್ ಪ್ರಿಯದರ್ಶಿನಿ

ಕೇರಳಂ ಎಂಬ ಈ ಸ್ತ್ರೀ ರಾಜ್ಯದ ಮಹಿಳೆಯರು ಉಚಿತ ಪ್ರಯಾಣದ ಸಂಪೂರ್ಣ ಸುಖವನ್ನು ಪಡೆಯುತ್ತಿದ್ದಾರೆ. ಈ ಸುಖ ಕ್ಷಣಿಕವೋ, ಶಾಶ್ವತವೋ…

11 mins ago

ಭಾನುವಾರದ ಹಾಡುಪಾಡು | ಕೊಡಗು ಕಾಡಿನ ಆ ಕಾಲದ ಮಳೆಗಾಲ ವೈಭವ

ಕೃಪಾ ದೇವರಾಜ್, ಮಡಿಕೇರಿ ಧೋ... ಎಂದು ಸುರಿಯುವ ಮಳೆ, ಅಜ್ಜ ಕಟ್ಟಿದ ಹಳೇ ನಾಡ ಹೆಂಚಿನ ಮನೆ, ನಿರಂತರವಾಗಿ ಸುರಿಯುವ…

45 mins ago

ಭಾನುವಾರದ ಹಾಡುಪಾಡು | ಹತ್ತನೆಯ ಸಾಹಿತ್ಯ ಸಂಭ್ರಮದ ಹೊತ್ತಲ್ಲಿ ಹದಿನಾರರ ಹರಯದ ಬುಕ್ ಕ್ಲಬ್ ಕುರಿತು

ಜುಲೈ ನಾಲ್ಕು ಮತ್ತು ಐದರ ಶನಿವಾರ ಮತ್ತು ಭಾನುವಾರ ಮೈಸೂರಿನ ಸದರ್ನ್ ಸ್ಟಾರ್‌ನಲ್ಲಿ ವಾರ್ಷಿಕ ಸಾಹಿತ್ಯ ರಸದೂಟ ಪೃಥ್ವಿ ಸುಧೀಂದ್ರ…

1 hour ago

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

17 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

20 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

20 hours ago