Andolana originals

ಶಿವಾನಂದಪುರಿ ಶ್ರೀಗಳಿಗೆ ಕನಕ ಭವನ ನಿರ್ವಹಣೆ ಹೊಣೆ

ಮಂಜು ಕೋಟೆ

ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ

ಎಚ್.ಡಿ.ಕೋಟೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಹಕಾರದಿಂದ ಪಟ್ಟಣದಲ್ಲಿ ೫ ಕೋಟಿ ರೂ.ಗಳಿಗೂ ಹೆಚ್ಚಿನ ಅನುದಾನದಲ್ಲಿ ನಿರ್ಮಾಣಗೊಂಡಿರುವ ಹೈಟೆಕ್ ಕನಕ ಭವನದ ನಿರ್ವಹಣೆಯ ಜವಾಬ್ದಾರಿಯನ್ನು ಕಾಗಿನೆಲೆ ಕನಕ ಗುರುಪೀಠದ ಮೈಸೂರು ಶಾಖಾ ಮಠಾಧೀಶರಾದ ಶ್ರೀ ಶಿವಾನಂದಪುರಿ ಸ್ವಾಮೀಜಿಗಳಿಗೆ ಶ್ರೀ ಕಾಳಿದಾಸ ಕುರುಬ ಕ್ಷೇಮಾಭಿವೃದ್ಧಿ ಸಂಘದವರು ನೀಡಿದ್ದಾರೆ.

ಪಟ್ಟಣದಲ್ಲಿ ಸರ್ಕಾರದ ಅನುದಾನದ ಮೂಲಕ ೫ ಕೋಟಿ ರೂ. ವೆಚ್ಚದಲ್ಲಿ ಸಂಘದವರ ಪರಿಶ್ರಮದಿಂದ ನಿರ್ಮಾಣಗೊಂಡಿರುವ ಹೈಟೆಕ್ ಕನಕ ಭವನ ೭-೮ ವರ್ಷಗಳ ಹಿಂದೆ ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ, ಶಾಸಕ ಅನಿಲ್ ಚಿಕ್ಕ ಮಾದು, ಸಂಸದರಾಗಿದ್ದ ಧ್ರುವನಾರಾಯಣ, ಸಮಾಜದ ತಾಲ್ಲೂಕು ಅಧ್ಯಕ್ಷರಾಗಿದ್ದ ಶಿವಪ್ಪ ಕೋಟೆ, ಅನೇಕ ಗಣ್ಯರಿಂದ ಉದ್ಘಾಟನೆಗೊಂಡಿತ್ತು. ೨೦೨೩ರಲ್ಲಿ ಮೊಳಿಯೂರು ಆನಂದ್ ಸಂಘದ ಅಧ್ಯಕ್ಷರಾದ ಸಂದರ್ಭದಲ್ಲಿ ಭವನ ಕೆಲವೊಂದು ಮೂಲಸೌಕರ್ಯಗಳನ್ನು ಕಲ್ಪಿಸಿ, ಸಾರ್ವಜನಿಕರ ಸೇವೆಗೆ ಸಮರ್ಪಿಸಲಾಗಿತ್ತು.

ಸಂಘಕ್ಕೆ ಪ್ರತಿ ವರ್ಷ ಲಕ್ಷಾಂತರ ರೂ. ಆದಾಯ ಬರುತ್ತಿತ್ತು. ಆದರೆ, ಷಭವನ ಮತ್ತು ಸಂಘದ ವಿಚಾರವಾಗಿ ಸಮಾಜದ ಎರಡು ಬಣಗಳ ನಡುವೆ ಗಲಾಟೆ, ಗದ್ದಲ ಉಂಟಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರ ಗಮನಕ್ಕೆ ಮೊಳಿಯೂರು ಆನಂದ್ ಮತ್ತಿತರರು ತಂದರು.

ಆಗ ಸಮಸ್ಯೆಗೆ ತೆರೆ ಎಳೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶದ ಮೇರೆಗೆ ಮುಖ್ಯಮಂತ್ರಿಗಳ ಮಾಜಿ ಜಂಟಿ ಕಾರ್ಯದರ್ಶಿ ರಾಮಯ್ಯ, ಕರ್ನಾಟಕ ರಾಜ್ಯ ಪ್ರದೇಶ ಕುರುಬರ ಸಂಘದ ಮಾಜಿ ಅಧ್ಯಕ್ಷರಾದ ಬಿ.ಸುಬ್ರಹ್ಮಣ್ಯ ಸಹಕಾರದೊಂದಿಗೆ ಶ್ರೀ ಕಾಳಿದಾಸ ಕುರುಬ ಕ್ಷೇಮಾಭಿವೃದ್ಧಿ ಸಂಘದ ತಾಲ್ಲೂಕು ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಕೋಟೆ ತಾಲ್ಲೂಕಿನ ಕನಕ  ಭವನದ ಜವಾಬ್ದಾರಿಯನ್ನು ಕಾಗಿನೆಲೆ ಕನಕ ಗುರು ಪೀಠದ ಮೈಸೂರು ಶಾಖಾ ಮಠಾಧೀಶರಾದ ಶ್ರೀ ಶಿವಾನಂದಪುರಿ ಸ್ವಾಮೀಜಿಯವರಿಗೆ ನೀಡಿದ್ದಾರೆ.

ತಾಲ್ಲೂಕು ಸಂಘದ ಅಧ್ಯಕ್ಷ ಎಂ.ಬಿ.ಆನಂದ್, ಪ್ರಧಾನ ಕಾರ್ಯದರ್ಶಿ ಎಸ್.ಬಿ.ಮಹದೇವ, ನಿರ್ದೇಶಕರುಗಳಾದ ಚನ್ನೇಗೌಡ, ಕೋಟೆ ಕುಮಾರೇಗೌಡ, ರಾಜೇಗೌಡ ಕೊಡಸಿಗೆ, ಶಿವಮಲ್ಲಪ್ಪ ಮೊತ್ತ, ಬೀರೇಗೌಡ ಮರಳು, ಕಳಸೂರು ಬೀರೇಗೌಡ, ನಾಗೇಗೌಡ ಶಿರಮಳ್ಳಿ, ಮಂಚನಹಳ್ಳಿ ಮಹಾದೇವ್, ಬೈಪಾಸ್ ಮಂಜು ನಾಥ್, ಕುಮಾರನ್, ಕ್ಯಾತನಹಳ್ಳಿ ಪ್ರಕಾಶ್, ಗೋವಿಂದ ರಾಜು, ಆರ್.ಸಿ.ನಾಗೇಗೌಡ, ದೇವ ರಾಜ್ ಮೊಳೆಯೂರು, ಸಂತೋಷ್, ಮುಂತಾದವರು ಕನಕ ಭವನದ ಕೀ ಮತ್ತು ಬ್ಯಾಂಕ್‌ನ ವಹಿವಾಟುಗಳ ಮಾಹಿತಿ ಮತ್ತು ದಾಖಲಾತಿಗಳನ್ನು ಸ್ವಾಮೀಜಿ ಯವರಿಗೆ ನೀಡಿದರು.

” ನಾನು ಅಧ್ಯಕ್ಷನಾದ ಮೇಲೆ ಕನಕ ಭವನವನ್ನು ಮತ್ತಷ್ಟು ಅಭಿವೃದ್ಧಿಪಡಿಸಿ, ಸಭೆ-ಸಮಾರಂಭ, ಮದುವೆಗಳಿಗೆ ನೀಡಿ ಭವನಕ್ಕೆ ಆದಾಯ ಬರುವಂತೆ ಮಾಡಲಾಗಿತ್ತು. ಇದನ್ನು ಕೆಲವರು ಸಹಿಸದೆ ಬಣಗಳನ್ನು ನಿರ್ಮಾಣ ಮಾಡಿಕೊಂಡು ಕೋರ್ಟು, ಕಚೇರಿ, ಪೊಲೀಸ್ ಠಾಣೆ ಮೆಟ್ಟಿಲೇರಿದ್ದರಿಂದ, ಗಲಾಟೆ ಗೊಂದಲ ನಿರ್ಮಾಣ ವಾಗಿತ್ತು. ಇದನ್ನೆಲ್ಲ ಗಮನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇನ್ನಿತರ ಗಣ್ಯರು ಭವನದ ನಿರ್ವಹಣೆ ಮತ್ತು ಅಭಿವೃದ್ಧಿ ಹೊಣೆಯನ್ನು ಮಠದವರಿಗೆ ನೀಡು ವಂತೆ ಸೂಚಿಸಿದ್ದು, ಅದರಂತೆ ಕನಕ ಭವನದ ಜವಾಬ್ದಾರಿಯನ್ನು ಶ್ರೀಗಳಿಗೆ ನೀಡಲಾಗಿದೆ.”

-ಎಂ.ಬಿ.ಆನಂದ್, ಅಧ್ಯಕ್ಷ, ತಾಲ್ಲೂಕು ಕುರುಬ ಸಮಾಜ

ಆಂದೋಲನ ಡೆಸ್ಕ್

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

15 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

18 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

20 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

20 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

20 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

20 hours ago