Mysore
28
overcast clouds

Social Media

ಬುಧವಾರ, 19 ಆಗಸ್ಟ್ 2026
Light
Dark

ಚಾಮುಂಡಿ ಬೆಟ್ಟ ಹತ್ತಿ ಹರಕೆ ತೀರಿಸಿದ ಶೋಭಾ ಕರಂದ್ಲಾಜೆ

ಮೈಸೂರು: ದಸರಾ ಹಾಗೂ ಶರನ್ನವರಾತ್ರಿಯ ಅಂಗವಾಗಿ ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಬರಿಗಾಲಿನಲ್ಲಿ ಚಾಮುಂಡಿಬೆಟ್ಟ ಹತ್ತುವ ಮೂಲಕ ನವರಾತ್ರಿಯ ಹರಕೆ ತೀರಿಸಿದರು.

ಪ್ರತಿ ನವರಾತ್ರಿ ಹಾಗೂ ಆಷಾಢ ಮಾಸದ ಸಂದರ್ಭದಲ್ಲಿ ಅವರು ಬೆಟ್ಟ ಹತ್ತುವ ಪದ್ಧತಿಯನ್ನು ಆಚರಿಸುತ್ತಾ ಬಂದಿದ್ದು, ಅದೇ ರೀತಿ ಗುರುವಾರವೂ ಮೆಟ್ಟಿಲಿನ ಮೂಲಕ ಬೆಟ್ಟವನ್ನು ಹತ್ತಿದರು. ಕೆ. ಆರ್. ಕ್ಷೇತ್ರದ ಶಾಸಕ ಟಿ. ಎಸ್. ಶ್ರೀವತ್ಸ, ಮಾಜಿ ಮಹಾ ಪೌರ ಶಿವಕುಮಾರ್, ವಿಧಾನ ಪರಿಷತ್ ಮಾಜಿ ಸದಸ್ಯ ಸಿದ್ಧರಾಜು ಹಾಗೂ ಸ್ಥಳೀಯ ನಾಯಕರು ಸಾಥ್ ನೀಡಿದರು. ಚಾಮುಂಡಿಬೆಟ್ಟಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ಮಾತನಾಡಿದ ಅವರು, ನಾಡಹಬ್ಬ ದಸರಾ ಜನತೆಯ ದಸರಾ ಆಗಬೇಕೇ ಹೊರತು ಸರ್ಕಾರದ ದಸರಾವಾಗಬಾರದು. ಜೊತೆಗೆ ಅಽದೇವತೆ ನೆಲೆಸಿ ರುವ ಚಾ. ಬೆಟ್ಟವನ್ನು ಇನ್ನಷ್ಟು ಅಭಿವೃದ್ಧಿ ಮಾಡುವುದರ ಜತೆಗೆ ಸ್ವಚ್ಛತೆ ಕಡೆ ಹೆಚ್ಚು ಗಮನಹರಿಸಬೇಕು ಎಂದರು. ಸಿಎಂ ಸಿದ್ದರಾಮಯ್ಯ ಅವರು ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣ ಹಾಗೂ ಮುಡಾ ಹಗರಣದಲ್ಲಿ ಸಿಲುಕಿದ್ದಾರೆ. ವಾಲ್ಮೀಕಿ ನಿಗಮದ ಹಗರಣದಲ್ಲಿ ಆರೋಪಿಯಾಗಿದ್ದ ಸಚಿವ ಬಿ. ನಾಗೇಂದ್ರ ರಾಜೀನಾಮೆ ನೀಡಿದ್ದಾರೆ. ಈ ಪ್ರಕರಣದಲ್ಲಿ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಹಾಗಾಗಿ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

 

Tags:
error: Content is protected !!