Andolana originals

ಚಾಮುಂಡಿ ಬೆಟ್ಟ ಹತ್ತಿ ಹರಕೆ ತೀರಿಸಿದ ಶೋಭಾ ಕರಂದ್ಲಾಜೆ

ಮೈಸೂರು: ದಸರಾ ಹಾಗೂ ಶರನ್ನವರಾತ್ರಿಯ ಅಂಗವಾಗಿ ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಬರಿಗಾಲಿನಲ್ಲಿ ಚಾಮುಂಡಿಬೆಟ್ಟ ಹತ್ತುವ ಮೂಲಕ ನವರಾತ್ರಿಯ ಹರಕೆ ತೀರಿಸಿದರು.

ಪ್ರತಿ ನವರಾತ್ರಿ ಹಾಗೂ ಆಷಾಢ ಮಾಸದ ಸಂದರ್ಭದಲ್ಲಿ ಅವರು ಬೆಟ್ಟ ಹತ್ತುವ ಪದ್ಧತಿಯನ್ನು ಆಚರಿಸುತ್ತಾ ಬಂದಿದ್ದು, ಅದೇ ರೀತಿ ಗುರುವಾರವೂ ಮೆಟ್ಟಿಲಿನ ಮೂಲಕ ಬೆಟ್ಟವನ್ನು ಹತ್ತಿದರು. ಕೆ. ಆರ್. ಕ್ಷೇತ್ರದ ಶಾಸಕ ಟಿ. ಎಸ್. ಶ್ರೀವತ್ಸ, ಮಾಜಿ ಮಹಾ ಪೌರ ಶಿವಕುಮಾರ್, ವಿಧಾನ ಪರಿಷತ್ ಮಾಜಿ ಸದಸ್ಯ ಸಿದ್ಧರಾಜು ಹಾಗೂ ಸ್ಥಳೀಯ ನಾಯಕರು ಸಾಥ್ ನೀಡಿದರು. ಚಾಮುಂಡಿಬೆಟ್ಟಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ಮಾತನಾಡಿದ ಅವರು, ನಾಡಹಬ್ಬ ದಸರಾ ಜನತೆಯ ದಸರಾ ಆಗಬೇಕೇ ಹೊರತು ಸರ್ಕಾರದ ದಸರಾವಾಗಬಾರದು. ಜೊತೆಗೆ ಅಽದೇವತೆ ನೆಲೆಸಿ ರುವ ಚಾ. ಬೆಟ್ಟವನ್ನು ಇನ್ನಷ್ಟು ಅಭಿವೃದ್ಧಿ ಮಾಡುವುದರ ಜತೆಗೆ ಸ್ವಚ್ಛತೆ ಕಡೆ ಹೆಚ್ಚು ಗಮನಹರಿಸಬೇಕು ಎಂದರು. ಸಿಎಂ ಸಿದ್ದರಾಮಯ್ಯ ಅವರು ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣ ಹಾಗೂ ಮುಡಾ ಹಗರಣದಲ್ಲಿ ಸಿಲುಕಿದ್ದಾರೆ. ವಾಲ್ಮೀಕಿ ನಿಗಮದ ಹಗರಣದಲ್ಲಿ ಆರೋಪಿಯಾಗಿದ್ದ ಸಚಿವ ಬಿ. ನಾಗೇಂದ್ರ ರಾಜೀನಾಮೆ ನೀಡಿದ್ದಾರೆ. ಈ ಪ್ರಕರಣದಲ್ಲಿ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಹಾಗಾಗಿ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

 

andolana

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

3 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

4 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

4 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

5 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

6 hours ago