ಮೈಸೂರು: ದಸರಾ ಹಾಗೂ ಶರನ್ನವರಾತ್ರಿಯ ಅಂಗವಾಗಿ ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಬರಿಗಾಲಿನಲ್ಲಿ ಚಾಮುಂಡಿಬೆಟ್ಟ ಹತ್ತುವ ಮೂಲಕ ನವರಾತ್ರಿಯ ಹರಕೆ ತೀರಿಸಿದರು.
ಪ್ರತಿ ನವರಾತ್ರಿ ಹಾಗೂ ಆಷಾಢ ಮಾಸದ ಸಂದರ್ಭದಲ್ಲಿ ಅವರು ಬೆಟ್ಟ ಹತ್ತುವ ಪದ್ಧತಿಯನ್ನು ಆಚರಿಸುತ್ತಾ ಬಂದಿದ್ದು, ಅದೇ ರೀತಿ ಗುರುವಾರವೂ ಮೆಟ್ಟಿಲಿನ ಮೂಲಕ ಬೆಟ್ಟವನ್ನು ಹತ್ತಿದರು. ಕೆ. ಆರ್. ಕ್ಷೇತ್ರದ ಶಾಸಕ ಟಿ. ಎಸ್. ಶ್ರೀವತ್ಸ, ಮಾಜಿ ಮಹಾ ಪೌರ ಶಿವಕುಮಾರ್, ವಿಧಾನ ಪರಿಷತ್ ಮಾಜಿ ಸದಸ್ಯ ಸಿದ್ಧರಾಜು ಹಾಗೂ ಸ್ಥಳೀಯ ನಾಯಕರು ಸಾಥ್ ನೀಡಿದರು. ಚಾಮುಂಡಿಬೆಟ್ಟಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ಮಾತನಾಡಿದ ಅವರು, ನಾಡಹಬ್ಬ ದಸರಾ ಜನತೆಯ ದಸರಾ ಆಗಬೇಕೇ ಹೊರತು ಸರ್ಕಾರದ ದಸರಾವಾಗಬಾರದು. ಜೊತೆಗೆ ಅಽದೇವತೆ ನೆಲೆಸಿ ರುವ ಚಾ. ಬೆಟ್ಟವನ್ನು ಇನ್ನಷ್ಟು ಅಭಿವೃದ್ಧಿ ಮಾಡುವುದರ ಜತೆಗೆ ಸ್ವಚ್ಛತೆ ಕಡೆ ಹೆಚ್ಚು ಗಮನಹರಿಸಬೇಕು ಎಂದರು. ಸಿಎಂ ಸಿದ್ದರಾಮಯ್ಯ ಅವರು ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣ ಹಾಗೂ ಮುಡಾ ಹಗರಣದಲ್ಲಿ ಸಿಲುಕಿದ್ದಾರೆ. ವಾಲ್ಮೀಕಿ ನಿಗಮದ ಹಗರಣದಲ್ಲಿ ಆರೋಪಿಯಾಗಿದ್ದ ಸಚಿವ ಬಿ. ನಾಗೇಂದ್ರ ರಾಜೀನಾಮೆ ನೀಡಿದ್ದಾರೆ. ಈ ಪ್ರಕರಣದಲ್ಲಿ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಹಾಗಾಗಿ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…
ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…