Andolana originals

ಚಾಮುಂಡಿ ಬೆಟ್ಟ ಹತ್ತಿ ಹರಕೆ ತೀರಿಸಿದ ಶೋಭಾ ಕರಂದ್ಲಾಜೆ

ಮೈಸೂರು: ದಸರಾ ಹಾಗೂ ಶರನ್ನವರಾತ್ರಿಯ ಅಂಗವಾಗಿ ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಬರಿಗಾಲಿನಲ್ಲಿ ಚಾಮುಂಡಿಬೆಟ್ಟ ಹತ್ತುವ ಮೂಲಕ ನವರಾತ್ರಿಯ ಹರಕೆ ತೀರಿಸಿದರು.

ಪ್ರತಿ ನವರಾತ್ರಿ ಹಾಗೂ ಆಷಾಢ ಮಾಸದ ಸಂದರ್ಭದಲ್ಲಿ ಅವರು ಬೆಟ್ಟ ಹತ್ತುವ ಪದ್ಧತಿಯನ್ನು ಆಚರಿಸುತ್ತಾ ಬಂದಿದ್ದು, ಅದೇ ರೀತಿ ಗುರುವಾರವೂ ಮೆಟ್ಟಿಲಿನ ಮೂಲಕ ಬೆಟ್ಟವನ್ನು ಹತ್ತಿದರು. ಕೆ. ಆರ್. ಕ್ಷೇತ್ರದ ಶಾಸಕ ಟಿ. ಎಸ್. ಶ್ರೀವತ್ಸ, ಮಾಜಿ ಮಹಾ ಪೌರ ಶಿವಕುಮಾರ್, ವಿಧಾನ ಪರಿಷತ್ ಮಾಜಿ ಸದಸ್ಯ ಸಿದ್ಧರಾಜು ಹಾಗೂ ಸ್ಥಳೀಯ ನಾಯಕರು ಸಾಥ್ ನೀಡಿದರು. ಚಾಮುಂಡಿಬೆಟ್ಟಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ಮಾತನಾಡಿದ ಅವರು, ನಾಡಹಬ್ಬ ದಸರಾ ಜನತೆಯ ದಸರಾ ಆಗಬೇಕೇ ಹೊರತು ಸರ್ಕಾರದ ದಸರಾವಾಗಬಾರದು. ಜೊತೆಗೆ ಅಽದೇವತೆ ನೆಲೆಸಿ ರುವ ಚಾ. ಬೆಟ್ಟವನ್ನು ಇನ್ನಷ್ಟು ಅಭಿವೃದ್ಧಿ ಮಾಡುವುದರ ಜತೆಗೆ ಸ್ವಚ್ಛತೆ ಕಡೆ ಹೆಚ್ಚು ಗಮನಹರಿಸಬೇಕು ಎಂದರು. ಸಿಎಂ ಸಿದ್ದರಾಮಯ್ಯ ಅವರು ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣ ಹಾಗೂ ಮುಡಾ ಹಗರಣದಲ್ಲಿ ಸಿಲುಕಿದ್ದಾರೆ. ವಾಲ್ಮೀಕಿ ನಿಗಮದ ಹಗರಣದಲ್ಲಿ ಆರೋಪಿಯಾಗಿದ್ದ ಸಚಿವ ಬಿ. ನಾಗೇಂದ್ರ ರಾಜೀನಾಮೆ ನೀಡಿದ್ದಾರೆ. ಈ ಪ್ರಕರಣದಲ್ಲಿ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಹಾಗಾಗಿ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

 

andolana

Recent Posts

ಮುತ್ತತ್ತಿಯಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸೇರಿ ಐವರು ನೀರುಪಾಲು

ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…

8 hours ago

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

11 hours ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

11 hours ago

ತೊಟ್ಟಿಲುಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದಲ್ಲಿ ತಾರಾ, ಶಶಿಕುಮಾರ್ ಭಾಗಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…

11 hours ago

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

12 hours ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

13 hours ago