Andolana originals

ದೊಡ್ಡಹೆಜ್ಜೂರು ಆಸ್ಪತ್ರೆಯಲ್ಲಿ ಆರೋಗ್ಯ ಸಿಬ್ಬಂದಿ ಕೊರತೆ; ರೋಗಿಗಳ ಪರದಾಟ

ದಾ.ರಾ.ಮಹೇಶ್

ಗಿರಿಜನ ಹಾಡಿ ವ್ಯಾಪ್ತಿಯ ಆಸ್ಪತ್ರೆಯಲ್ಲಿ ಹುದ್ದೆಗಳು ಖಾಲಿ; ಇರುವ ಸಿಬ್ಬಂದಿ ಮೇಲೆ ಕಾರ್ಯದೊತ್ತಡ 

ವೀರನಹೊಸಹಳ್ಳಿ: ಸಮೀಪದ ದೊಡ್ಡ ಹೆಜ್ಜೂರು ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅನೇಕ ಹುದ್ದೆಗಳು ಖಾಲಿ ಇದ್ದು, ರೋಗಿಗಳಿಗೆ ಸೂಕ್ತ ವೈದ್ಯಕೀಯ ಸೌಲಭ್ಯ ದೊರೆಯದೆ ತೊಂದರೆಯಾಗಿದೆ.

ಈ ಭಾಗದಲ್ಲಿ ಅತಿ ಹೆಚ್ಚು ಗಿರಿಜನ ಹಾಡಿಗಳಿವೆ. ಆದರೆ, ಸಿಬ್ಬಂದಿ ಕೊರತೆಯಿಂದ ನಲುಗುತ್ತಿರುವ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಆರೋಗ್ಯ ಸೇವೆ ದೊರೆಯುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ಸಮಸ್ಯೆಯನ್ನು ಸಂಬಂಧಿಸಿದ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಗಂಭೀರವಾಗಿ ಪರಿಗಣಿಸಿಲ್ಲ. ಹೀಗಾಗಿ, ಜನರು ತೊಂದರೆ ಅನುಭವಿಸುವುದು ಅಥವಾ ದುಬಾರಿ ಹಣ ತೆತ್ತು ಖಾಸಗಿ ಆಸ್ಪತ್ರೆಗಳತ್ತ ಹೋಗುವುದು ಅನಿವಾರ್ಯವಾಗಿದೆ. ಆರೋಗ್ಯ ಕೇಂದ್ರಗಳನ್ನು ಆರಂಭಿಸಿದ ಸರ್ಕಾರವು ಮಂಜೂರಾದ ಹುದ್ದೆಗಳ ಭರ್ತಿಗೆ ಕ್ರಮಕೈಗೊಂಡಿಲ್ಲ ಎನ್ನುವುದು ಸ್ಥಳೀಯರ ದೂರು.

ಆಸ್ಪತ್ರೆಯಲ್ಲಿ ವೈದ್ಯಕೀಯ, ಅರೆ ವೈದ್ಯಕೀಯ ಹಾಗೂ ಇತರ ಸಿಬ್ಬಂದಿಗಳ ಹುದ್ದೆಗಳು ಖಾಲಿ ಇವೆ. ಸಾಂಕ್ರಾಮಿಕ ಕಾಯಿಲೆಗಳು, ಡೆಂಗ್ಯು, ಚಿಕುನ್‌ಗುನ್ಯಾ ಮೊದಲಾದ ರೋಗಗಳು ಕಾಡುತ್ತಿರುವ ಈ ಸಂದರ್ಭದಲ್ಲಿ ಆರೋಗ್ಯ ಸಿಬ್ಬಂದಿ ಕೊರತೆಯು ಇಲಾಖೆಯ ಕಾರ್ಯ ಕ್ರಮಗಳ ಅನುಷ್ಠಾನಗಳ ಮೇಲೆ ಪರಿಣಾಮ ಬೀರುತ್ತಿದೆ.

ಯಾವ್ಯಾವ ಹುದ್ದೆ ಖಾಲಿ?: ಆರೋಗ್ಯ ಇಲಾಖೆಯ ಮೂಲಗಳ ಪ್ರಕಾರ, ಫಾರ್ಮಾಸಿಸ್ಟ್‌ಗಳು, ಸ್ಟಾಫ್ ನರ್ಸ್, ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷತಾ ಅಧಿಕಾರಿ, ಕಿರಿಯ ಪ್ರಯೋಗಾಲಯ ಸಹಾಯಕರು (ತಂತ್ರಜ್ಞರು) ತಂತ್ರಜ್ಞರು, ಫಾರ್ಮಾಸಿಸ್ಟ್ ಹುದ್ದೆಗಳು ಖಾಲಿ ಇವೆ. ಹೀಗಾಗಿ ವೈದ್ಯರಿಗೆ ಹೆಚ್ಚುವರಿ ಕಾರ್ಯಭಾರ ವಹಿಸಲಾಗಿದೆ. ಈ ‘ಪ್ರಭಾರ’ ವ್ಯವಸ್ಥೆಯು ಎಲ್ಲ ಕೇಂದ್ರಗಳಲ್ಲೂ ವ್ಯವಸ್ಥಿತವಾಗಿ ನಡೆಯುತ್ತಿಲ್ಲ. ಕೆಲವೆಡೆ, ಸಿಬ್ಬಂದಿ ಮೇಲೆ ಅಧಿಕ ಕಾರ್ಯದ ಒತ್ತಡ ಬೀಳುತ್ತಿದೆ. ಸಮರ್ಪಕ ನಿರ್ವಹಣೆಯ ಕೊರತೆಯೂ ಕಂಡುಬರುತ್ತಿದೆ.

” ಆಸ್ಪತ್ರೆಯಲ್ಲಿ ಹುದ್ದೆಗಳು ಖಾಲಿ ಇರುವ ಬಗ್ಗೆ ಸಭೆಗಳಲ್ಲಿ ಪ್ರಸ್ತಾಪಿಸಲಾಗುತ್ತಿದೆ. ಲಭ್ಯ ಸಿಬ್ಬಂದಿಗೆ ಹೆಚ್ಚುವರಿ ಕೆಲಸ ವಹಿಸಿ ನಿರ್ವಹಿಸಲಾಗುತ್ತಿದೆ. ಗ್ರಾಮೀಣ ಪ್ರದೇಶದ ಆಸ್ಪತ್ರೆಗಳಲ್ಲಿ ಕೆಲಸ ಮಾಡಲು ಸಿಬ್ಬಂದಿ ಕೊರತೆ ಜೊತೆಗೆ ಮೂಲಸೌಕರ್ಯ ಕೊರತೆ ಇರುವ ಕುರಿತು ನನ್ನ ಗಮನಕ್ಕೆ ಬಂದಿದೆ. ಇದೆಲ್ಲವನ್ನೂ ನಾನು ಆರೋಗ್ಯ ಸಚಿವರ ಜೊತೆಗೆ ಚರ್ಚಿಸಿದ್ದೇನೆ. ಶೀಘ್ರದಲ್ಲಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ.”

-ಜಿ.ಡಿ.ಹರೀಶ್ ಗೌಡ, ಶಾಸಕ

” ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಹಲವುಹುದ್ದೆಗಳು ಖಾಲಿ ಇವೆ. ಹೀಗಾಗಿ ಖಾಲಿ ಇರುವ ಕಡೆಗೆ ಸಿಬ್ಬಂದಿ ನಿಯೋಜನೆ ಮಾಡಲು ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದರೆ, ಹುದ್ದೆಗಳ ಭರ್ತಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.”

-ಡಾ.ದರ್ಶನ್, ಟಿಎಚ್‌ಒ

ಆಂದೋಲನ ಡೆಸ್ಕ್

Recent Posts

ರಾಜ್ಯಕ್ಕೆ ಮತ್ತೆ ಕಾವೇರಿ ಆಘಾತ ; ತಮಿಳುನಾಡಿಗೆ 9,000 ಕ್ಯುಸೆಕ್‌ ನೀರು ಹರಿಸಲು ಆದೇಶ

ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…

7 mins ago

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

2 hours ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

7 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

7 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

9 hours ago

ಅಧಿಕಾರಿಗಳಿಗೆ ಚೆಲ್ಲಾಟ; ಅಲೆಮಾರಿಗಳ ಅಲೆದಾಟ

ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…

9 hours ago