Andolana originals

ಕೊಡಗಿನಲ್ಲಿ ಮೂತ್ರಪಿಂಡ ತಜ್ಞ ವೈದ್ಯರ ಕೊರತೆ

ಕಿಡ್ನಿ ಸಮಸ್ಯೆಗೆ ಹೊರಜಿಲ್ಲೆಯ ಆಸ್ಪತ್ರೆಗಳನ್ನೇ ಅವಲಂಬಿಸುವ ಪರಿಸ್ಥಿತಿ;ತಜ್ಞ ವೈದ್ಯರ ನೇಮಕಕ್ಕೆ ಒತ್ತಾಯ

-ನವೀನ್ ಡಿಸೋಜ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಬೇಕು ಎನ್ನುವ ಆಗ್ರಹದ ನಡುವೆ ಮೂತ್ರಪಿಂಡ ತಜ್ಞ ವೈದ್ಯರ ನೇಮಕವಾಗಬೇಕು ಎನ್ನುವ ಒತ್ತಾಯವೂ ಕೇಳಿಬಂದಿದೆ.

ಕೊಡಗು ಜಿಲ್ಲಾಸ್ಪತ್ರೆಯು ಮೆಡಿಕಲ್ ಕಾಲೇಜು ಬೋಧಕ ಆಸ್ಪತ್ರೆಯಾದ ಬಳಿಕ ಹಲವು ಸೇವೆಗಳು ಆರಂಭವಾಗಿವೆಯಾದರೂ ಮೂತ್ರ ಪಿಂಡ ಸಮಸ್ಯೆಗೆ ಇನ್ನೂ ಹೊರಜಿಲ್ಲೆಯ ಆಸ್ಪತ್ರೆಗಳನ್ನೇ ಅವಲಂಬಿಸಬೇಕಾದ ಪರಿಸ್ಥಿತಿ ಇರುವುದರಿಂದ ಜನತೆ ಸಮಸ್ಯೆ ಎದುರಿಸುವಂತಾಗಿದೆ.

ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ಮೂತ್ರಪಿಂಡ ರೋಗಿಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ಮೂತ್ರಪಿಂಡ ತಜ್ಞ ವೈದ್ಯರ ತುರ್ತು ಅಗತ್ಯವಿದೆ. ಇವರ ನೇಮಕಾತಿಗೆ ಪ್ರಯತ್ನಗಳು ನಡೆಯುತ್ತಿದ್ದರೂ, ಇನ್ನೂ ಕೈಗೂಡಿಲ್ಲ.
ಕೋಯಿಮ್ಸ್‌ನಲ್ಲಿ ಹೃದ್ರೋಗ ಘಟಕ ಆರಂಭಕ್ಕೆ ಬಿರುಸಿನ ಪ್ರಯತ್ನಗಳು ನಡೆದಿದ್ದು, ಇದರ ಜೊತೆ ಮೂತ್ರ ಪಿಂಡ ಸಮಸ್ಯೆಗೂ ಚಿಕಿತ್ಸೆ ಸಿಗುವಂತಾಗಬೇಕು ಎಂಬುದು ಜಿಲ್ಲೆಯ ಜನರ ಆಗ್ರಹವಾಗಿದೆ.

ಸದ್ಯ, ಜಿಲ್ಲೆಯಲ್ಲಿ 199 ಮಂದಿ ಸರ್ಕಾರಿ ಆಸ್ಪತ್ರೆಗಳಲ್ಲಿ ಡಯಾಲಿಸಿಸ್‌ಗೆ ನಿಯಮಿತವಾಗಿ ಒಳಗಾಗುತ್ತಿದ್ದಾರೆ. ಇವರ ಪೈಕಿ 138 ಮಂದಿ ಪುರುಷರು, 61 ಮಂದಿ ಮಹಿಳೆಯರು ಇದ್ದಾರೆ. ಇವರಲ್ಲಿ ಕೆಲವರು ಪಕ್ಕದ ಜಿಲ್ಲೆಯ
ವರೂ ಇದ್ದಾರೆ. ಇನ್ನೂ 3 ಮಂದಿ ಡಯಾಲಿಸಿಸ್‌ಗಾಗಿ ಕಾಯುವವರ ಪಟ್ಟಿಯಲ್ಲಿದ್ದು, ಖಾಸಗಿ ಆಸ್ಪತ್ರೆ ಇಲ್ಲವೇ ಹೊರ ಜಿಲ್ಲೆಯ ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಸೇವೆ ಪಡೆಯುತ್ತಿದ್ದಾರೆ.

ಈಗ ಜಿಲ್ಲೆಯಲ್ಲಿ ಮಡಿಕೇರಿಯ ಜಿಲ್ಲಾಸ್ಪತ್ರೆ, ಸೋಮವಾರಪೇಟೆ,ವಿರಾಜಪೇಟೆಯ ತಾಲ್ಲೂಕು ಆಸ್ಪತ್ರೆ ಹಾಗೂ ಕುಶಾಲನಗರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಯಾಲಿಸಿಸ್ ಸೇವೆ ಲಭ್ಯವಿದೆ. ಇಲ್ಲಿ ಒಟ್ಟು 29 ಡಯಾಲಿಸಿಸ್ ಯಂತ್ರಗಳಿವೆ. ದಿನಕ್ಕೆ 3 ಪಾಳಿಯಲ್ಲಿ ಡಯಾಲಿಸಿಸ್ ಸೇವೆ ಒದಗಿಸಲಾಗುತ್ತಿದೆ.

ಟಿಲಿಮೆಡಿಸಿನ್ ಮೂಲಕ ತಜ್ಞ ವೈದ್ಯರ ಸಲಹೆಗಳನ್ನು ರೋಗಿಗಳಿಗೆ ಒದಗಿಸಲಾಗುತ್ತಿದೆ. ಆದರೂ, ಮೊದಲೇ ರೋಗವನ್ನು ಪತ್ತೆ ಹಚ್ಚಬೇಕಾದರೆ ಜಿಲ್ಲೆಗೆ ಒಬ್ಬರು ಮೂತ್ರಪಿಂಡ ತಜ್ಞ ವೈದ್ಯರ ಅಗತ್ಯ ಇದೆ.

ಬಹಳಷ್ಟು ಮಂದಿಗೆ ಕಾಯಿಲೆ ಪತ್ತೆ ಮಾಡುವಲ್ಲಿಯೇ ವಿಳಂಬವಾಗುತ್ತಿರುವುದು ಸಮಸ್ಯೆ ಉಲ್ಬಣಗೊಳ್ಳುವಂತೆ ಮಾಡಿದೆ. ಇಲ್ಲಿಯೇ ತಜ್ಞ ವೈದ್ಯರಿದ್ದರೆ ಕಾಯಿಲೆ ಪತ್ತೆ, ತಪಾಸಣೆ, ಚಿಕಿತ್ಸೆ ಪಡೆಯುವುದು ಸುಲಭ ವಾಗುತ್ತದೆ. ಡಯಾಲಿಸಿಸ್ ಯಂತ್ರಗಳನ್ನು ಸಿಎಸ್‌ಆರ್ ನಿಧಿಯಿಂದ ಪಡೆಯಲು ಅವಕಾಶ ವಿದ್ದು, ಸಂಘ, ಸಂಸ್ಥೆಗಳು, ಸರ್ಕಾರೇತರ ಸಂಸ್ಥೆ ಗಳು ಡಯಾಲಿಸಿಸ್ ಯಂತ್ರವನ್ನು ನೀಡಬಹುದಾಗಿದೆ  ಎಂದು ವೈದ್ಯರು ಹೇಳುತ್ತಾರೆ.

ಅನಿಯಂತ್ರಿತವಾದ ಮಧುಮೇಹ, ರಕ್ತದೊತ್ತಡ, ಅತಿಯಾದ ಮದ್ಯಪಾನ, ಧೂಮಪಾನ, ಮಾದಕವಸ್ತುಗಳ ಸೇವನೆ
ಮೂತ್ರಪಿಂಡ ವೈಫಲ್ಯಕ್ಕೆ ಕಾರಣಗಳಾಗಿವೆ. ಹಾಗಾಗಿ, ಮಧುಮೇಹ, ರಕ್ತದೊತ್ತಡಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು, ಮದ್ಯಪಾನ, ಧೂಮಪಾನ, ತಂಬಾಕು ಸೇವನೆ, ಮಾದಕವಸ್ತುಗಳ ಸೇವನೆಯಿಂದ ದೂರ ಇರುವುದರಿಂದ ಕೇವಲ ಮೂತ್ರಪಿಂಡ ವೈಫಲ್ಯ ಮಾತ್ರವಲ್ಲ, ಇತರ ಅನೇಕ ಕಾಯಿಲೆಗಳಿಂದಲೂ ಪಾರಾಗಬಹುದು ಎಂದು ವೈದ್ಯರು ಸಲಹೆ ನೀಡುತ್ತಾರೆ.

ವೈದ್ಯರ ಸಲಹೆ ಪಡೆಯದೆ ಔಷಧಿ ಸೇವಿಸಬೇಡಿ

ಮುಖ್ಯವಾಗಿ, ಯಾವುದೇ ಅನಾರೋಗ್ಯದ ಲಕ್ಷಣ ಕಂಡು ಬಂದರೂ ನೇರವಾಗಿ ಔಷಧ ಅಂಗಡಿಗೆ ತೆರಳಿ ಅವರ ಸಲಹೆಯ ಮೇರೆಗೆ ಔಷಧ ಸೇವಿಸುವುದು ಅಪಾಯಕಾರಿ. ಅದರಲ್ಲೂ, ನೋವು ನಿವಾರಕಗಳ ಅತಿಯಾದ ಸೇವನೆಯೂ ಮೂತ್ರಪಿಂಡಗಳಿಗೆ ಹಾನಿ ಉಂಟುಮಾಡುತ್ತದೆ. ಹಾಗಾಗಿ, ಯಾವುದೇ ವಿಧವಾದ ಅನಾರೋಗ್ಯ ಉಂಟಾದರೂ ಸಂಬಂಧಿಸಿದ ವೈದ್ಯರ ಸಲಹೆ ಪಡೆಯಲೇಬೇಕು ಎಂದು ಜಿಲ್ಲಾ ಸರ್ವೇಕ್ಷಣಾಕಾರಿ ಡಾ.ಶ್ರೀನಿವಾಸ್ ಸಲಹೆ ನೀಡುತ್ತಾರೆ.

ಕೊಡಗು ಜಿಲ್ಲೆಯಲ್ಲಿ199  ಮಂದಿಗೆ ಡಯಾಲಿಸಿಸ್  ಸೇವೆ ನೀಡಲಾಗುತ್ತಿದೆ. ಮೂತ್ರಪಿಂಡಗಳಿಗೆ ಹಾನಿಯಾಗುವಂತಹ ಔಷಧಿಗಳನ್ನು ವೈದ್ಯರ ಸಲಹೆ ಇಲ್ಲದೆ ಪಡೆಯುವುದು ಅಪಾಯಕಾರಿ. ವರ್ಷದಿಂದ ವರ್ಷಕ್ಕೆ ಮೂತ್ರಪಿಂಡ ಸಮಸ್ಯೆಗಳಿಂದ
ಬಳಲುವವರ ಸಂಖ್ಯೆ ಹೆಚ್ಚಾಗುತ್ತಿದೆ.

-ಡಾ.ಶ್ರೀನಿವಾಸ್, ಜಿಲ್ಲಾ ಸರ್ವೇಕ್ಷಣಾಕಾರಿ.

ಸದ್ಯ ಟೆಲಿಮೆಡಿಸಿನ್ ಮೂಲಕ ಡಯಾಲಿಸಿಸ್ ರೋಗಿಗಳಿಗೆ ಸೇವೆ ನೀಡಲಾಗುತ್ತಿದೆ. ಮೂತ್ರಪಿಂಡ ತಜ್ಞ ವೈದ್ಯರ ನೇಮಕಕ್ಕೆ ಸರ್ಕಾರದ ಮಟ್ಟದಲ್ಲಿ ಪ್ರಯತ್ನಗಳು ನಡೆಯುತ್ತಿವೆ. ವೈದ್ಯರ ನೇಮಕವಾದಲ್ಲಿ ಸಮಸ್ಯೆ ಬಗೆಹರಿಯಲಿದೆ.

-ಡಾ.ಎ.ಜೆ.ಲೋಕೇಶ್, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ಮತ್ತು ನಿರ್ದೇಶಕ.

 

ಆಂದೋಲನ ಡೆಸ್ಕ್

Recent Posts

27ನೇ ಕೊಡವ ಕೌಟುಂಬಿಕ ಹಾಕಿ ಉತ್ಸವಕ್ಕೆ ಅಜ್ಜಿಕುಟ್ಟಿರ ನೇತೃತ್ವ

ಪುನೀತ್ ಮಡಿಕೇರಿ ೨೦೨೭ರ ಏಪ್ರಿಲ್-ಮೇನಲ್ಲಿ ನಡೆಯಲಿರುವ ಹಾಕಿ ಉತ್ಸವಕ್ಕೆ ಸಿದ್ಧತೆ; ಟರ್ಫ್, ಹೊನಲು ಬೆಳಕಿನ ಪಂದ್ಯಾವಳಿಗೆ ಚಿಂತನೆ ಮಡಿಕೇರಿ: ೨೬ನೇ…

2 hours ago

ಕಬಿನಿ ಹಿನ್ನೀರಿಗೆ ಹಿಂಡು ಹಿಂಡಾಗಿ ವನ್ಯಪ್ರಾಣಿಗಳ ಲಗ್ಗೆ

ಮಂಜು ಕೋಟೆ ಮೇವು, ಕುಡಿಯುವ ನೀರಿಗಾಗಿ ಬರುವ ವನ್ಯಪ್ರಾಣಿಗಳನ್ನು ಕಣ್ತುಂಬಿಕೊಳ್ಳುತ್ತಿರುವ ಪ್ರವಾಸಿಗರು ಎಚ್.ಡಿ.ಕೋಟೆ: ಬಿಸಿಲಿನ ತಾಪಮಾನದಿಂದ ಮೇವು ಮತ್ತು ಕುಡಿಯುವ…

2 hours ago

ನೀರಿನ ಪೈಪ್‌ಲೈನ್ ಅಳವಡಿಕೆ ಚುರುಕು

  ೧೦೦ ಕಿ.ಮೀ.ಹೆಚ್‌ಡಿಪಿಇ ಪೈಪ್ ಅಳವಡಿಕೆ ಪ್ರಗತಿಯಲ್ಲಿ; ಕಾವೇರಿ ನೀರು ಪೂರೈಸಲು ನಗರಸಭೆ ಕ್ರಮ ಪ್ರಸಾದ್ ಲಕ್ಕೂರು ಚಾಮರಾಜನಗರ: ನಗರದಲ್ಲಿ…

2 hours ago

ಜೂ.20ರಿಂದ ಎಸ್‌ಐಆರ್; ಮತದಾರರಲ್ಲಿ ಇರಲಿ ಜಾಗ್ರತೆ

ಗಿರೀಶ್ ಹುಣಸೂರು ರಾಜ್ಯದ ೫.೫೫ ಕೋಟಿ ಮತದಾರರ ಪರಿಷ್ಕರಣೆ ನಡೆಸಲಿರುವ ಬಿಎಲ್‌ಒಗಳು ಮೈಸೂರು:ಕಳೆದ ಎಲೆಕ್ಷನ್‌ನಲ್ಲಿ ಇದೇ ಬೂತ್‌ನಲ್ಲಿ ವೋಟ್ ಮಾಡಿದ್ದೆ,…

3 hours ago

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

15 hours ago