Andolana originals

ಶಾಲೆ ಆರಂಭದಲ್ಲೇ ಮಕ್ಕಳಿಗೆ ಸಮವಸ್ತ್ರ ಭಾಗ್ಯ?

ಗಿರೀಶ್ ಹುಣಸೂರು

ಮೈಸೂರು: ಮುಂಬರುವ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಮೊದಲ ದಿನವೇ ಅಥವಾ ಒಂದೆರಡು ದಿನಗಳಲ್ಲಿ ಹೊಸ ಸಮವಸ ಧರಿಸಿ ತರಗತಿಗೆ ಹಾಜರಾಗಬಹುದು. ಅದಕ್ಕೆ ಪೂರಕವಾದ ಯೋಜನೆಯನ್ನು ರಾಜ್ಯ ಸರ್ಕಾರ ರೂಪಿಸಿದೆ.

ಶೈಕ್ಷಣಿಕ ವರ್ಷ ಆರಂಭವಾಗಿ ತಿಂಗಳುಗಳೇ ಕಳೆದರೂ ಸಮವಸ್ತ್ರ ನೀಡಿಲ್ಲ ಎಂಬ ಪೋಷಕರು ಮತ್ತು ಮಕ್ಕಳ ಕೊರಗನ್ನು ಮುಂಬರುವ ೨೦೨೬-೨೭ನೇ ಶೈಕ್ಷಣಿಕ ಸಾಲಿನಲ್ಲಿ ನಿವಾರಿಸಲು ರಾಜ್ಯ ಸರ್ಕಾರ ಮುಂದಾಗಿದೆ.

೨೦೨೬-೨೭ನೇ ಶೈಕ್ಷಣಿಕ ಸಾಲಿಗೆ ವಿದ್ಯಾವಿಕಾಸ ಯೋಜನೆಯಡಿ ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಒಂದರಿಂದ ಹತ್ತನೇ ತರಗತಿವರೆಗೆ ವ್ಯಾಸಂಗ ಮಾಡಲಿರುವ ಸುಮಾರು ೩೮.೨೨ ಲಕ್ಷ ವಿದ್ಯಾರ್ಥಿಗಳಿಗೆ ಎರಡು ಜೊತೆ ಉಚಿತ ಸಮವಸ್ತ್ರ ಗಳನ್ನು ವಿತರಿಸಲು ಶಾಲಾ ಶಿಕ್ಷಣ ಇಲಾಖೆ ಈಗಾಗಲೇ ಪ್ರಕ್ರಿಯೆ ಆರಂಭಿಸಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಶಾಲೆ ಆರಂಭದಲ್ಲೇ ವಿದ್ಯಾರ್ಥಿಗಳಿಗೆ ಸಮವಸ ಕೈ ಸೇರುವ ಸಾಧ್ಯತೆ ಇದೆ.

ಸಮವಸಗಳನ್ನು ಶಾಲೆ ಆರಂಭದಲ್ಲೇ ಒದಗಿಸುವ ನಿಟ್ಟಿನಲ್ಲಿ ಇಲಾಖೆ ಆಯುಕ್ತರು ೨೦೨೫ರ ನವೆಂಬರ್ – ಡಿಸೆಂಬರ್‌ನಲ್ಲೇ ಸರ್ಕಾರದ ಜೊತೆಗೆ ಪತ್ರ ವ್ಯವಹಾರ ನಡೆಸಿದ್ದಾರೆ. ಮೊದಲ ಜೊತೆ ಸಮವಸ ಸರಬರಾಜಿಗೆ ಬೆಂಗಳೂರಿನ ಮೆ.ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ಮತ್ತು ಮೈಸೂರು ವಿಭಾಗದ ಎಲ್ಲಾ ಜಿಲ್ಲೆಗಳ ೧ರಿಂದ ೭ನೇ ತರಗತಿವರೆಗಿನ ಗಂಡು ಮಕ್ಕಳು ಹಾಗೂ ೧ ರಿಂದ ೫ನೇ ತರಗತಿವರೆಗಿನ ಹೆಣ್ಣು ಮಕ್ಕಳಿಗೆ ಒಟ್ಟು ೧೯.೮೪ ಲಕ್ಷ ಮೀಟರ್ ಸಮವಸದ ಬಟ್ಟೆ ಸರಬರಾಜಿಗೆ ೧೪.೬೮ ಕೋಟಿ ರೂ. ಮತ್ತು ಇ-ಟೆಂಡರ್ ಮೂಲಕ ಧಾರವಾಡ ಮತ್ತು ಕಲಬುರಗಿ ವಿಭಾಗದ ಜಿಲ್ಲೆಗಳ ೧ರಿಂದ ಹತ್ತನೇ ತರಗತಿವರೆಗಿನ ಎಲ್ಲಾ ವಿದ್ಯಾರ್ಥಿಗಳಿಗೆ ಮತ್ತು ಮೈಸೂರು ವಿಭಾಗದ ಎಲ್ಲಾ ಜಿಲ್ಲೆಗಳ ೮ ರಿಂದ ಹತ್ತನೇ ತರಗತಿವರೆಗಿನ ಹೆಣ್ಣು ಮಕ್ಕಳಿಗೆ ಚೂಡಿದಾರ್ ಒಳಗೊಂಡಂತೆ ಒಟ್ಟು ೪೮.೪೦ ಲಕ್ಷ ಮೀಟರ್ ಬಟ್ಟೆ ಸರಬರಾಜಿಗೆ ೬೪.೬೩ ಕೋಟಿ ರೂ. ಅನುದಾನದ ಅವಶ್ಯಕತೆ ಇರುತ್ತದೆ.

೨೦೨೬-೨೭ನೇ ಸಾಲಿಗೆ ಎರಡನೇ ಜೊತೆ ಸಮವಸ್ತ್ರ ಸರಬರಾಜು ಸಂಬಂಧ ಪಿಎಬಿ ಯಿಂದ ೨೦೨೬-೨೭ನೇ ಸಾಲಿಗೆ ಮಂಜೂರಾಗುವ ಅನುದಾನದಿಂದ ಅಗತ್ಯವಿರುವ ಒಟ್ಟು ೬೮.೨೪ ಲಕ್ಷ ಮೀಟರ್ ಸಮವಸ ಬಟ್ಟೆಯನ್ನು ಇ-ಟೆಂಡರ್ ಮೂಲಕ ಅಂದಾಜು ಶೇ.೫ರಷ್ಟು ಹೆಚ್ಚುವರಿ ಮೊತ್ತ ಒಳಗೊಂಡಂತೆ ೮೦.೨೦ ಕೋಟಿ ರೂ. ಅನುದಾನದ ಅವಶ್ಯಕತೆ ಇರುತ್ತದೆ.

೨೦೨೬-೨೭ನೇ ಸಾಲಿಗೆ ಒಂದರಿಂದ ಹತ್ತನೇ ತರಗತಿವರೆಗಿನ ಎಲ್ಲಾ ಸರ್ಕಾರಿ ಶಾಲಾ ಮಕ್ಕಳಿಗೆ ಮೊದಲನೇ ಜೊತೆಗೆ ಒಟ್ಟು ಅಂದಾಜು ೮೩ ಕೋಟಿ ರೂ. ಹಾಗೂ ಎರಡನೇ ಜೊತೆಗೆ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ಮಂಜೂರಾಗುವ ೮೦.೨೦ ಕೋಟಿ ರೂ. ಸೇರಿದಂತೆ ಒಟ್ಟು ೧೬೩.೨೦ ಕೋಟಿ ರೂ. ಅನುದಾನದಲ್ಲಿ ಸರಬರಾಜು ಮಾಡಲು ಅನುಮೋದನೆ ಕೋರಲಾಗಿದೆ.

ಶಾಲಾ ಶಿಕ್ಷಣ ಇಲಾಖೆ ಆಯುಕ್ತರ ಪತ್ರಕ್ಕೆ ಹಲವು ಷರತ್ತುಗಳೊಂದಿಗೆ ಆಡಳಿತಾತ್ಮಕ ಅನುಮೋದನೆ ನೀಡಿರುವ ಸರ್ಕಾರ, ಸಮವಸ ಸರಬರಾಜಿಗೆ ಒದಗಿಸಲಾಗಿರುವ ೧೬೩.೨೦ ಕೋಟಿ ರೂ. ಅನುದಾನದ ಮಿತಿಯೊಳಗೆ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುವಂತೆ ಹೇಳಿದೆ.

ಸರಬರಾಜು ಸಂಸ್ಥೆಗಳೊಂದಿಗೆ ಸಮವಸದ ಬಟ್ಟೆಯ ಪ್ರಮಾಣ ಮತ್ತು ದರಗಳಿಗೆ ಸಂಬಂಧಿಸಿದಂತೆ ಕಟ್ಟುನಿಟ್ಟಾದ ಷರತ್ತುಗಳನ್ನು ವಿಧಿಸಿ ಒಡಂಬಡಿಕೆ ಮಾಡಿಕೊಳ್ಳಬೇಕು. ಸಮವಸ್ತ್ರ ಸರಬರಾಜಾದ ಒಂದು ತಿಂಗಳ ಅವಧಿಯೊಳಗೆ ಅದರ ಗುಣಮಟ್ಟದ ವರದಿಯನ್ನು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಿಂದ ಪಡೆಯಬೇಕು. ಸಮವಸದ ಗುಣಮಟ್ಟ ಖಾತರಿಪಡಿಸಿಕೊಂಡ ನಂತರ ಸರ್ಕಾರದ ಅನುಮತಿ ಪಡೆದು ಸರಬರಾಜು ಸಂಸ್ಥೆಗಳಿಗೆ ಬಾಕಿ ಮೊತ್ತವನ್ನು ಪಾವತಿಸಬೇಕು ಎಂದು ನಿರ್ದೇಶಿಸಲಾಗಿದೆ.

ʼ ಹಿಂದಿನ ಶೈಕ್ಷಣಿಕ ವರ್ಷಗಳಲ್ಲಿ ಶಾಲಾವಾರು ವಿತರಣೆಯಾಗದೆ ಉಳಿದಿರುವ ಸಮವಸ್ತ್ರ ಗಳ ಸಂಖ್ಯೆಯನ್ನು ಹೊರತುಪಡಿಸಿ, ಬೇಡಿಕೆಯ ಪಟ್ಟಿಯನ್ನು ಪಡೆಯಬೇಕು. ಈ ಸಂಬಂಧ ಯಾವುದೇ ನಿರ್ಲಕ್ಷ್ಯತೆ ಮತ್ತು ಬೇಜವಾಬ್ದಾರಿತನ ತೋರದೆ ಕ್ರಮವಹಿಸಲು ಶಿಕ್ಷಣ ಇಲಾಖೆಗೆ ರಾಜ್ಯ ಸರ್ಕಾರ ಸೂಚಿಸಿದೆ.”

” ಸರ್ಕಾರಿ ಶಾಲೆಗಳ ಒಂದರಿಂದ ಹತ್ತನೇ ತರಗತಿವರೆಗಿನ ಮಕ್ಕಳಿಗೆ ಎರಡು ಜೊತೆ ಸಮವಸಗಳನ್ನು ಅಂದಾಜು ೧೬೩.೨೦ ಕೋಟಿ ರೂ. ಅನುದಾನ ದಲ್ಲಿ ಮೆ.ಕೆಎಚ್‌ಡಿಸಿ ಹಾಗೂ ಇ- ಟೆಂಡರ್ ಮೂಲಕ ಖರೀದಿಸಿ ಸರಬರಾಜು ಮಾಡಲು ಹಲವು ಷರತ್ತುಗಳಿಗೆ ಒಳಪಟ್ಟು ಖರೀದಿಸಿ ವಿತರಿಸಲು ಶಾಲಾ ಶಿಕ್ಷಣ ಇಲಾಖೆ ಆಯುಕ್ತರಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.”

-ಆರ್.ವಿ.ಶುಭಮಂಗಳ, ಸರ್ಕಾರದ ಅಧಿನ ಕಾರ್ಯದರ್ಶಿ (ಯೋಜನೆ), ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ

ಆಂದೋಲನ ಡೆಸ್ಕ್

Recent Posts

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

4 hours ago

ಓದುಗರ ಪತ್ರ: ನೆಮ್ಮದಿ ಕೇಂದ್ರಕ್ಕೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…

4 hours ago

ಓದುಗರ ಪತ್ರ: ಆಹಾರ ಸರಬರಾಜಿಗೆ ಕಪ್ಪು ಪ್ಲಾಸ್ಟಿಕ್ ಡಬ್ಬಿಗಳನ್ನು ನಿಷೇಧಿಸಿ

ನಗರ ಪ್ರದೇಶಗಳ ಹೋಟೆಲ್‌ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್‌ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…

4 hours ago

ಓದುಗರ ಪತ್ರ: ಅಧಿಕಾರಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಯಾಶೀಲವಾಗಲಿ

ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…

4 hours ago

ಓದುಗರ ಪತ್ರ: ಎಸ್‌ಐಆರ್: ಸಂಪೂರ್ಣ ಮಾಹಿತಿ ನೀಡಿ

ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…

4 hours ago

ಅನನ್ಯಾಳ ಬದುಕು ಬದಲಾಯಿಸಿದ 20 ರೂಪಾಯಿ ನೋಟು

ಪಂಜು ಗಂಗೊಳ್ಳಿ  ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…

4 hours ago