Andolana originals

ಫೆ.೫ರಂದು ಶ್ರೀ ಶಂಭುಲಿಂಗೇಶ್ವರ ದೇವಾಲಯ ಲೋಕಾರ್ಪಣೆ

ಹೇಮಂತ್ ಕುಮಾರ್

ಕಾಶಿ ನಂತರ ಸ್ಮಶಾನವಾಸಿ ಶಿವನ ದೇವಸ್ಥಾನವೆಂಬ ಹೆಗ್ಗಳಿಕೆ 

ಮಂಡ್ಯ: ದೇಶದಲ್ಲೇ ಭಸ್ಮೋದ್ಧಾರಿಯಾದ ಶಿವ ಸ್ಮಶಾನವಾಸಿಯಾಗಿರುವ ದೇವಾಲಯ ಕಾಶಿ ಕ್ಷೇತ್ರದಲ್ಲಿದೆ. ಅದನ್ನು ಹೊರತುಪಡಿಸಿದರೆ ದಕ್ಷಿಣದಲ್ಲಿರುವ ಏಕೈಕ ದೇವಾಲಯ ಸಾತನೂರಿನಲ್ಲಿರುವುದು ಬಹುತೇಕರಿಗೆ ತಿಳಿದಿಲ್ಲ.

ಈ ದೇವಾಲಯದ ವಿಶೇಷವೆಂದರೆ ಮುಂಭಾಗ ಸಾರ್ವಜನಿಕ ಸ್ಮಶಾನ, ಪಕ್ಕದಲ್ಲೇ ಹರಿಯುವ ಕಾವೇರಿ ತೊರೆ, ಮಧ್ಯ ಅಶ್ವತ್ಥ ವೃಕ್ಷವಿದೆ. ಇಂತಹ ಪ್ರಶಾಂತವಾದ ಸ್ಥಳದಲ್ಲಿರುವ ಶ್ರೀ ಶಂಭುಲಿಂಗೇಶ್ವರಸ್ವಾಮಿಯ ದೇವಾಲಯ ಇದೀಗ ಲೋಕಾರ್ಪಣೆ ಹಾಗೂ ಕುಂಭಾಭಿಷೇಕ ಮಹೋತ್ಸವಕ್ಕೆ ಸಿದ್ಧಗೊಂಡಿದೆ.

ಗ್ರಾಮದ ಸ್ಮಶಾನದ ಆವರಣದಲ್ಲಿ ಶಿಥಿಲಗೊಂಡಿದ್ದ ಪುರಾತನವಾದ ಶ್ರೀ ಶಂಭುಲಿಂಗೇಶ್ವರ ದೇವಾಲಯವನ್ನು ನೆಲಸಮಗೊಳಿಸಿ, ನೂತನವಾಗಿ ಸುಮಾರು ೧ ಕೋಟಿ ರೂ.ಗೂ ಹೆಚ್ಚಿನ ವೆಚ್ಚದಲ್ಲಿ ವಾಸ್ತುಶಿಲ್ಪ ಶಾಸ್ತ್ರ ಪ್ರಕಾರ ಶಿಲಾಮಯವಾಗಿ ನಿರ್ಮಾಣಗೊಳಿಸಿದ್ದಾರೆ.

ಈ ದೇವರ ಒಕ್ಕಲಿನವರು, ಭಕ್ತಾದಿಗಳು ವಿವಿಧೆಡೆ ನೆಲೆಸಿದ್ದಾರೆ. ಪ್ರತಿ ವರ್ಷ ದೀಪಾವಳಿ ಹಾಗೂ ಶಿವರಾತ್ರಿ ಹಬ್ಬದಂದು ಕುಟುಂಬ ಸಮೇತರಾಗಿ ಆಗಮಿಸಿ, ವಸ್ತ್ರ, ಬೆಲ್ಲ, ಅಕ್ಕಿ ಸೇರಿದಂತೆ ಪಡಿ ಅರ್ಪಿಸಿ ದೇವರ ದರ್ಶನ ಪಡೆಯುವುದು ಇಲ್ಲಿನ ವಾಡಿಕೆ. ಈಗ ಅವರೆಲ್ಲರ ಸಹಕಾರ ಪಡೆದು ಶ್ರೀ ಶಂಭುಲಿಂಗೇಶ್ವರ ಸೇವಾ ಟ್ರಸ್ಟ್ ನೂತನ ದೇವಾಲಯ ನಿರ್ಮಿಸಿ, ಇದೀಗ ಲೋಕಾರ್ಪಣೆಗೆ ಸಿದ್ಧಗೊಳಿಸಿದೆ.

ನೂತನ ದೇವಾಲಯದ ಲೋಕಾರ್ಪಣೆ ಹಾಗೂ ಕುಂಭಾಭಿಷೇಕ ಮಹೋತ್ಸವ ಫೆ.೫ ಮತ್ತು ೬ರಂದು ವಿಜೃಂಭಣೆಯಿಂದ ನಡೆಸಲು ಗ್ರಾಮಸ್ಥರು ಸಜ್ಜಾಗಿದ್ದು, ಫೆ.೫ರ ಗುರುವಾರ ಸಂಜೆ ೫.೩೦ಕ್ಕೆ ಚುಂಚಶ್ರೀ ಡಾ.ನಿರ್ಮಲಾ ನಂದನಾಥ ಸ್ವಾಮೀಜಿ ಹಾಗೂ ವಿಶ್ವಮಾನವ ಕ್ಷೇತ್ರದ ಡಾ.ಪುರುಷೋತ್ತಮಾನಂದನಾಥ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ಕುಂಭಾಭಿಷೇಕ ನೆರವೇರಲಿದೆ.

ಫೆ.೬ರ ಶುಕ್ರವಾರ ಮಧ್ಯಾಹ್ನ ೧೨ ಗಂಟೆಗೆ ವಿಶ್ವ ಒಕ್ಕಲಿಗರ ಮಠದ ಡಾ.ನಿಶ್ಚಲಾನಂದನಾಥ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಉದ್ಘಾಟನೆ ನೆರವೇರಿಸುವರು. ಜಾ.ದಳ ಮುಖಂಡ ಬಿ.ಆರ್.ರಾಮಚಂದ್ರು ಅಧ್ಯಕ್ಷತೆಯಲ್ಲಿ ಶಾಸಕ ಪಿ.ರವಿಕುಮಾರ್ ಗಣಿಗ, ಮಾಜಿ ಶಾಸಕ ಎಂ.ಶ್ರೀನಿವಾಸ್, ಎಂ.ಎಸ್. ಆತ್ಮಾನಂದ, ಜಾ.ದಳ ಯುವ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಮಾಜಿ ಸಚಿವ ಸಾ.ರಾ.ಮಹೇಶ್ ಹಾಗೂ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆಂದು ಶ್ರೀ ಶಂಭುಲಿಂಗೇಶ್ವರ ಸೇವಾ ಟ್ರಸ್ಟ್ ತಿಳಿಸಿದೆ.

ಆಂದೋಲನ ಡೆಸ್ಕ್

Recent Posts

ಎರಡನೇ ಆಷಾಢ ಶುಕ್ರವಾರದ ಸಂಭ್ರಮ: ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ತಾಯಿ ಚಾಮುಂಡೇಶ್ವರಿ

ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ.…

13 hours ago

ಓದುಗರ ಪತ್ರ: ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ಖಂಡನೀಯ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ದಿಲ್ಲಿಯಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ವೇಳೆ ಕೇಂದ್ರ ಸರ್ಕಾರದ ಕುಮ್ಮಕ್ಕು ಹಾಗೂ ಪೊಲೀಸರ…

16 hours ago

ಓದುಗರ ಪತ್ರ: ಗ್ರಂಥಪಾಲಕರಿಲ್ಲದ ಗ್ರಂಥಾಲಯಗಳು

ಕಳೆದ ೨೫ ವರ್ಷಗಳಿಂದ ರಾಜ್ಯದಲ್ಲಿ ೧೦ ಸಾವಿರ ಗ್ರಂಥಪಾಲಕ ಹುದ್ದೆಗಳನ್ನು ಭರ್ತಿ ಮಾಡದಿರುವುದು ಸರ್ಕಾರದ ಅಕ್ಷಮ್ಯ ನಿರ್ಲಕ್ಷ್ಯ. ೧,೨೦೦ ಸರ್ಕಾರಿ…

16 hours ago

ಓದುಗರ ಪತ್ರ: ಮುಚ್ಚಿರುವ ಪಿಎಚ್‌ಸಿ ಕೇಂದ್ರ ತೆರೆಯುವುದು ಎಂದು?

ಮೈಸೂರಿನ ಕುವೆಂಪು ನಗರದ ಎಂ ಬ್ಲಾಕ್‌ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರವು, ಕಳೆದ ಮೂರು ತಿಂಗಳಿಂದ ಮುಚ್ಚಿದೆ. ಇದಕ್ಕೆ ಕಾರಣ ತಿಳಿದಿಲ್ಲ.…

16 hours ago

ಇದು ನಮಿತ್ ಮಲ್ಹೋತ್ರ ‘ರಾಮಾಯಣ’ ದರ್ಶನ

 ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ  ‘ತಿಣಿಕಿದನು -ಣಿರಾಯ ರಾಮಾಯಣದ ಕವಿಗಳ ಭಾರದಲಿ ತಿಂ ತಿಣೀಯ ರಘುವರ ಚರಿತೆಯಲಿ ಕಾಲಿಡಲು ತೆರಪಿಲ್ಲ’ ಎಂದು…

16 hours ago

ಮಡಿಕೇರಿಯಲ್ಲಿ ಬಳಂಜಿಗಿಲ್ಲ ಬೇಡಿಕೆ

ಪುನೀತ್ ಜಿಲ್ಲೆಯಲ್ಲಿ ಕ್ಷೀಣಿಸಿದ ಮಳೆಯಿಂದ ಬೇಡಿಕೆ ಕುಸಿತ; ಕುಲಕಸುಬಿಗೆ ಹೊಡೆತ  ಮಡಿಕೇರಿ: ಜಿಲ್ಲೆಯಲ್ಲಿ ಧಾರಾಕಾರ ಮಳೆಯ ವಾತಾವರಣ ಇಲ್ಲದ ಕಾರಣ…

16 hours ago