ಓದುಗರ ಪತ್ರ
ರಾಜಸ್ತಾನ ಸರ್ಕಾರವು ಅಲ್ಲಿನ ಸರ್ಕಾರಿ ಶಾಲೆಗಳ 9ನೇ ತರಗತಿಯ ವಿದ್ಯಾರ್ಥಿನಿಯರಿಗೆ ಉಚಿತವಾಗಿ ನೀಡುವ ಬೈಸಿಕಲ್ಗಳ ಬಣ್ಣವನ್ನು ಕೇಸರಿ ಬಣ್ಣಕ್ಕೆ ಬದಲಾಯಿಸಿದ್ದು, ಇದಕ್ಕಾಗಿ 11 ಕೋಟಿ ರೂ.ಗಳನ್ನು ಖರ್ಚು ಮಾಡಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.
ಈ ಹಿಂದೆ ವಸುಂಧರಾ ರಾಜೆ ಸಿಂದಿಯಾ ಮುಖ್ಯಮಂತ್ರಿ ಯಾಗಿದ ಸಂದರ್ಭದಲ್ಲಿ ಈ ಬೈಸಿಕಲ್ಗಳು ಕೇಸರಿ ಬಣ್ಣದಲ್ಲಿ ದ್ದವು. ತದನಂತರ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಆ ಸೈಕಲ್ಗಳ ಬಣ್ಣವನ್ನು ಕಪ್ಪು ಬಣ್ಣಕ್ಕೆ ಬದಲಾಯಿಸಿತ್ತು. ಈಗ ಮತ್ತೊಮ್ಮೆ ರಾಜಸ್ತಾನದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಬೈಸಿಕಲ್ಗಳ ಬಣ್ಣವನ್ನು ಮತ್ತೇ ಕೇಸರಿ ಬಣ್ಣಕ್ಕೆ ಬದಲಾಯಿಸುತ್ತಿದೆ. ಸದ್ಯ ರಾಜಕೀಯ ಪಕ್ಷಗಳು ಹೀಗೆ ಮಕ್ಕಳಿಗೆ ಕೊಡುವ ಬೈಸಿಕಲ್ ಗಳಲ್ಲಿಯೂ ರಾಜಕೀಯ ಮಾಡುತ್ತಿರುವುದನ್ನು ನೋಡಿದರೆ ಈ ಕುತ್ತಿತ ರಾಜಕೀಯಕ್ಕೆ ಕೊನೆ ಎಂದು? ಎಂಬ ಪ್ರಶ್ನೆ ಮೂಡುತ್ತದೆ. ಆರ್ಥಿಕವಾಗಿ ದುರ್ಬಲವಾಗಿರುವ ಜನರಿಗೆ ಗ್ಯಾರಂಟಿ ಯೋಜನೆಗಳ ಮೂಲಕ ನೆರವು ನೀಡಿದರೆ ದೇಶ ದಿವಾಳಿಯಾಗುತ್ತದೆ ಎನ್ನುವವರು ರಾಜಸ್ತಾನ ಸರ್ಕಾರದ ಈ ದುಂದು ವೆಚ್ಚವನ್ನು ಏಕೆ ಪ್ರಶ್ನಿಸುತ್ತಿಲ್ಲ?
-ರಮಾನಂದ ಶರ್ಮಾ, ಜೆ.ಪಿ.ನಗರ, ಬೆಂಗಳೂರು,
ಸುಂಟಿಕೊಪ್ಪದಲ್ಲಿ ೧೮ ಲಕ್ಷ ರೂ. ವೆಚ್ಚದ ಮಂಟಪ ನಿರ್ಮಾಣ ೩ ದಿನಗಳ ಧಾರ್ಮಿಕ ಕಾರ್ಯಕ್ರಮ ಸುಂಟಿಕೊಪ್ಪ: ಇಲ್ಲಿನ ಶ್ರೀ ಪುರಂ…
ಪಿರಿಯಾಪಟ್ಟಣ: ದೇಸಿ ಬೀಜಗಳನ್ನು ಉಳಿಸಿದರೆ ಮಾತ್ರ ಮುಂದಿನ ಯುವ ಜನಾಂಗಕ್ಕೆ ವಿಷಮುಕ್ತ ಆಹಾರ ನೀಡಲು ಸಾಧ್ಯ ಎಂದು ಸಾವಯವ ರೈತ…
ಮೈಸೂರು: ಕ್ರಿಸ್ಮಸ್ ಆಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರಾಗಿದ್ದರೆ, ಚರ್ಚ್ಗಳ ಅಂಗಳವನ್ನು ವಿದ್ಯುತ್ ದೀಪಗಳಿಂದ ಸಿಂಗರಿಸುವ ಕಾರ್ಯ…
ಕೆ.ಬಿ.ರಮೇಶನಾಯಕ ಟಿಎಚ್ಒ ಹುದ್ದೆಗೆ ಡಿಎಚ್ಒ ವರ್ಗಾವಣೆ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ಮೈಸೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ…
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…