ಓದುಗರ ಪತ್ರ
ರಾಜಸ್ತಾನ ಸರ್ಕಾರವು ಅಲ್ಲಿನ ಸರ್ಕಾರಿ ಶಾಲೆಗಳ 9ನೇ ತರಗತಿಯ ವಿದ್ಯಾರ್ಥಿನಿಯರಿಗೆ ಉಚಿತವಾಗಿ ನೀಡುವ ಬೈಸಿಕಲ್ಗಳ ಬಣ್ಣವನ್ನು ಕೇಸರಿ ಬಣ್ಣಕ್ಕೆ ಬದಲಾಯಿಸಿದ್ದು, ಇದಕ್ಕಾಗಿ 11 ಕೋಟಿ ರೂ.ಗಳನ್ನು ಖರ್ಚು ಮಾಡಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.
ಈ ಹಿಂದೆ ವಸುಂಧರಾ ರಾಜೆ ಸಿಂದಿಯಾ ಮುಖ್ಯಮಂತ್ರಿ ಯಾಗಿದ ಸಂದರ್ಭದಲ್ಲಿ ಈ ಬೈಸಿಕಲ್ಗಳು ಕೇಸರಿ ಬಣ್ಣದಲ್ಲಿ ದ್ದವು. ತದನಂತರ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಆ ಸೈಕಲ್ಗಳ ಬಣ್ಣವನ್ನು ಕಪ್ಪು ಬಣ್ಣಕ್ಕೆ ಬದಲಾಯಿಸಿತ್ತು. ಈಗ ಮತ್ತೊಮ್ಮೆ ರಾಜಸ್ತಾನದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಬೈಸಿಕಲ್ಗಳ ಬಣ್ಣವನ್ನು ಮತ್ತೇ ಕೇಸರಿ ಬಣ್ಣಕ್ಕೆ ಬದಲಾಯಿಸುತ್ತಿದೆ. ಸದ್ಯ ರಾಜಕೀಯ ಪಕ್ಷಗಳು ಹೀಗೆ ಮಕ್ಕಳಿಗೆ ಕೊಡುವ ಬೈಸಿಕಲ್ ಗಳಲ್ಲಿಯೂ ರಾಜಕೀಯ ಮಾಡುತ್ತಿರುವುದನ್ನು ನೋಡಿದರೆ ಈ ಕುತ್ತಿತ ರಾಜಕೀಯಕ್ಕೆ ಕೊನೆ ಎಂದು? ಎಂಬ ಪ್ರಶ್ನೆ ಮೂಡುತ್ತದೆ. ಆರ್ಥಿಕವಾಗಿ ದುರ್ಬಲವಾಗಿರುವ ಜನರಿಗೆ ಗ್ಯಾರಂಟಿ ಯೋಜನೆಗಳ ಮೂಲಕ ನೆರವು ನೀಡಿದರೆ ದೇಶ ದಿವಾಳಿಯಾಗುತ್ತದೆ ಎನ್ನುವವರು ರಾಜಸ್ತಾನ ಸರ್ಕಾರದ ಈ ದುಂದು ವೆಚ್ಚವನ್ನು ಏಕೆ ಪ್ರಶ್ನಿಸುತ್ತಿಲ್ಲ?
-ರಮಾನಂದ ಶರ್ಮಾ, ಜೆ.ಪಿ.ನಗರ, ಬೆಂಗಳೂರು,
ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…
ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…