ಓದುಗರ ಪತ್ರ
ರಾಜಸ್ತಾನ ಸರ್ಕಾರವು ಅಲ್ಲಿನ ಸರ್ಕಾರಿ ಶಾಲೆಗಳ 9ನೇ ತರಗತಿಯ ವಿದ್ಯಾರ್ಥಿನಿಯರಿಗೆ ಉಚಿತವಾಗಿ ನೀಡುವ ಬೈಸಿಕಲ್ಗಳ ಬಣ್ಣವನ್ನು ಕೇಸರಿ ಬಣ್ಣಕ್ಕೆ ಬದಲಾಯಿಸಿದ್ದು, ಇದಕ್ಕಾಗಿ 11 ಕೋಟಿ ರೂ.ಗಳನ್ನು ಖರ್ಚು ಮಾಡಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.
ಈ ಹಿಂದೆ ವಸುಂಧರಾ ರಾಜೆ ಸಿಂದಿಯಾ ಮುಖ್ಯಮಂತ್ರಿ ಯಾಗಿದ ಸಂದರ್ಭದಲ್ಲಿ ಈ ಬೈಸಿಕಲ್ಗಳು ಕೇಸರಿ ಬಣ್ಣದಲ್ಲಿ ದ್ದವು. ತದನಂತರ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಆ ಸೈಕಲ್ಗಳ ಬಣ್ಣವನ್ನು ಕಪ್ಪು ಬಣ್ಣಕ್ಕೆ ಬದಲಾಯಿಸಿತ್ತು. ಈಗ ಮತ್ತೊಮ್ಮೆ ರಾಜಸ್ತಾನದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಬೈಸಿಕಲ್ಗಳ ಬಣ್ಣವನ್ನು ಮತ್ತೇ ಕೇಸರಿ ಬಣ್ಣಕ್ಕೆ ಬದಲಾಯಿಸುತ್ತಿದೆ. ಸದ್ಯ ರಾಜಕೀಯ ಪಕ್ಷಗಳು ಹೀಗೆ ಮಕ್ಕಳಿಗೆ ಕೊಡುವ ಬೈಸಿಕಲ್ ಗಳಲ್ಲಿಯೂ ರಾಜಕೀಯ ಮಾಡುತ್ತಿರುವುದನ್ನು ನೋಡಿದರೆ ಈ ಕುತ್ತಿತ ರಾಜಕೀಯಕ್ಕೆ ಕೊನೆ ಎಂದು? ಎಂಬ ಪ್ರಶ್ನೆ ಮೂಡುತ್ತದೆ. ಆರ್ಥಿಕವಾಗಿ ದುರ್ಬಲವಾಗಿರುವ ಜನರಿಗೆ ಗ್ಯಾರಂಟಿ ಯೋಜನೆಗಳ ಮೂಲಕ ನೆರವು ನೀಡಿದರೆ ದೇಶ ದಿವಾಳಿಯಾಗುತ್ತದೆ ಎನ್ನುವವರು ರಾಜಸ್ತಾನ ಸರ್ಕಾರದ ಈ ದುಂದು ವೆಚ್ಚವನ್ನು ಏಕೆ ಪ್ರಶ್ನಿಸುತ್ತಿಲ್ಲ?
-ರಮಾನಂದ ಶರ್ಮಾ, ಜೆ.ಪಿ.ನಗರ, ಬೆಂಗಳೂರು,
ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್ ಹೈಕೋರ್ಟ್ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…
ಮಂಡ್ಯ : ಬೋರ್ವೆಲ್, ಪಂಪ್ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…
ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…
ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…
ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…