Categories: Andolana originals

ಸ್ವಚ್ಛತೆಗೆ ಹೆಚ್ಚಿನ ಒತ್ತು ಕೇಳುತ್ತಿರುವ ಸಿದ್ದಲಿಂಗಪುರ; ಕಾಲರಾ ತಗ್ಗಿದ್ದರೂ ಗ್ರಾಮದಲ್ಲಿ ಆವರಿಸಿದ ಭೀತಿ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಅನತಿ ದೂರದಲ್ಲಿರುವ ಮೈಸೂರು- ಬೆಂಗಳೂರು ಹೆದ್ದಾರಿಯಲ್ಲಿರುವ ಸಿದ್ದಲಿಂಗಪುರ ಗ್ರಾಮದಲ್ಲಿ ಕಾಣಿಸಿಕೊಂಡಿದ್ದ ಕಾಲರಾ ಪ್ರಕರಣಗಳು ತಗ್ಗಿದ್ದರೂ ಗ್ರಾಮಸ್ಥರಲ್ಲಿ ಭೀತಿ ಆವರಿಸಿದೆ.

ಗ್ರಾಮದ ಇಬ್ಬರಿಗೆ ಕಾಲರಾ ಸೋಂಕು ದೃಢಪಟ್ಟಿದ್ದು ಕೆಆರ್‌ಎಸ್‌ ರಸ್ತೆಯಲ್ಲಿರುವ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ವೈದ್ಯರು, ಸಿಬ್ಬಂದಿ ಗ್ರಾಮದಲ್ಲಿ ಮೊಕ್ಕಂ ಹೂಡಿ ಪ್ರತಿಯೊಬ್ಬರನ್ನು ತಪಾಸಣೆ ಮಾಡುತ್ತಿದ್ದಾರೆ.

ಸಿದ್ದಲಿಂಗಪುರ ಗ್ರಾಮದಲ್ಲಿ ವಾಂತಿ-ಭೇದಿ ಪ್ರಕರಣಗಳು ಕಾಣಿಸಿಕೊಂಡು ಕಾಲರಾ ಭೀತಿ ಹರಡುತ್ತಿದ್ದಂತೆ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿ, ಎಲ್ಲರನ್ನೂ ಸಾಮೂಹಿಕ ತಪಾಸಣೆಗೆ ಒಳಪಡಿಸಿದ್ದಾರೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಪಿ.ಸಿ.ಕುಮಾರಸ್ವಾಮಿ ಅವರು ಕೂಡ ಶನಿವಾರ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ವಾಂತಿ, ಭೇದಿ ಕಾಣಿಸಿಕೊಳ್ಳದೆ ಇದ್ದರೂ ನಿಶ್ಯಕ್ತಿಗೆ ಸಿಲುಕದಂತೆ ಓಆರ್‌ಎಸ್ ಪ್ಯಾಕೆಟ್‌ಗಳನ್ನು ಗ್ರಾಮದಲ್ಲಿ ವಿತರಿಸಲಾಗಿದೆ.

ಟ್ಯಾಂಕರ್ ನೀರು ಪೂರೈಕೆ: ಕಲುಷಿತ ನೀರು ಸೇರಿರುವ ಬೋರ್‌ವೆಲ್‌ಗಳನ್ನು ಬಂದ್ ಮಾಡಿ ಟ್ಯಾಂಕರ್ ನೀರು ಪೂರೈಸಲಾಗಿದೆ. ಕೆಲವು ಬೋರ್‌ವೆಲ್‌ಗಳ ನೀರು ಸರಿಯಾಗಿದ್ದರೆ, ಹಲವು ಸರಿಯಾಗಿಲ್ಲ. ವಾಣಿವಿಲಾಸ ನೀರು ಸರಬರಾಜು ಕೇಂದ್ರದಿಂದ ಕೆಲವು ಪ್ರದೇಶಗಳಿಗೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಈ ನೀರಿನಲ್ಲಿ ಯಾವುದೇ ಸಮಸ್ಯೆ ಇಲ್ಲ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರ ಎ.ಎಸ್‌. ರಂಜಿತ್ ಕುಮಾರ್ ಭೇಟಿ ನೀಡಿ ನೀರು ಸರಬರಾಜು ಆಗುವ ಪಾಯಿಂಟ್‌ಗಳನ್ನು ಪರಿಶೀಲಿಸಿದರು. ಗ್ರಾಮದಲ್ಲಿ ಕಾಲರಾ ಪ್ರಕರಣ ಕಾಣಿಸಿಕೊಂಡ ಮೇಲೆ ತಪಾಸಣೆ ಮಾಡುತ್ತಿದ್ದೇವೆ. ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುತ್ತಿದ್ದೇವೆ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಸವರಾಜು ಹೇಳಿದರು.

ಗ್ರಾಮದಲ್ಲಿ ಏನೇನು ಸಮಸ್ಯೆ?:
ಸಿದ್ದಲಿಂಗಪುರ ಪ್ರಮುಖ ಗ್ರಾಮವಾದರೂ ಹಲವಾರು ಸಮಸ್ಯೆಗಳು ಕಾಡುತ್ತಿದೆ. ಮನೆಗಳ ತ್ಯಾಜ್ಯ ನೀರು ಹರಿದು ಹೋಗಲು ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದಿರುವುದು ಸಮಸ್ಯೆಗೆ ಮೂಲ ಕಾರಣವಾಗಿದೆ. ಚರಂಡಿ ನೀರು ಸರಾಗವಾಗಿ ಹರಿದು ಹೋಗದ ಕಾರಣ ನಿಂತ ನೀರಿನಿಂದ ಆರೋಗ್ಯ ಸಮಸ್ಯೆ ಬಾಧಿಸುತ್ತಿದೆ. ಸಂಜೆಯಾಗುತ್ತಿದ್ದಂತೆ ಸೊಳ್ಳೆಗಳ ಕಾಟ ವಿಪರೀತವಾಗಿದೆ. ಓಣಿಯ ತುಂಬೆಲ್ಲ ದುರ್ಗಂಧ ಸೂಸುತ್ತಿರುವುದರಿಂದ ಹಲವು ಬಡಾವಣೆ ನಿವಾಸಿಗಳು ವಾಂತಿ, ಭೇದಿ, ಸಾಂಕ್ರಾಮಿಕ ರೋಗಗಳಿಗೆ ತುತ್ತಾಗಿದ್ದಾರೆ.

ಗ್ರಾಪಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸ್ವಚ್ಛತೆಗೆ ಗ್ರಹಣ ಹಿಡಿದಿದೆ. ರಸ್ತೆಯ ಬದಿಯಲ್ಲಿ ಕಸಕಡ್ಡಿಗಳ ರಾಶಿ ರಾರಾಜಿಸುತ್ತಿದ್ದರೂ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಮತ್ತು ಅಧಿಕಾರಿಗಳು ಸ್ವಚ್ಛಗೊಳಿಸುವ ಗೋಜಿಗೆ ಹೋಗುತ್ತಿಲ್ಲವೆಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಿದ್ದಲಿಂಗಪುರ ಗ್ರಾಮದ ಸಮಸ್ಯೆಗೆ ಸಂಬಂಧಪಟ್ಟಂತೆ ಈಗಾಗಲೇ ಇಲಾಖೆ ಸಿಬ್ಬಂದಿ ಜಾಗೃತರಾಗಿದ್ದಾರೆ. ಯಾರೂ ಆತಂಕ ಪಡುವ ಅವಶ್ಯಕತೆ ಇಲ್ಲ, ಪ್ರತಿದಿನ ಮನೆ ಮನೆಗೆ ಭೇಟಿ ನೀಡಿ ತಪಾಸಣೆ ಮಾಡುವಂತಹ ಕೆಲಸ ನಡೆಯುತ್ತಿದೆ. ಯಾರಿಗಾದರೂ ರೋಗ ಲಕ್ಷಣಗಳು ಕಂಡುಬಂದಲ್ಲಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆಗೆ ವ್ಯವಸ್ಥೆ ಮಾಡುತ್ತೇವೆ.
-ಡಾ ಪಿ.ಸಿ.ಕುಮಾರಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ.

ಜಿಲ್ಲೆಯ ಕೆಲವೆಡೆ ಕಲುಷಿತ ನೀರು ಸೇವಿಸಿ ಜನರು ಅಸ್ವಸ್ಥರಾಗಿದ್ದ ಘಟನೆಗಳು ಜರುಗಿವೆ. ಇಂಥ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸಬೇಕು. ಇಲ್ಲದಿದ್ದರೆ ಮುಂದಿನ ಅನಾಹುತಕ್ಕೆ ಅಧಿಕಾರಿಗಳೇ ಹೊಣೆಯಾಗಬೇಕಾಗುತ್ತದೆ.
-ರಾಮಕೃಷ್ಣ, ಸಿದ್ದಲಿಂಗಪುರ ಗ್ರಾಮಸ್ಥ

ಮಳೆಗಾಲ ಶುರುವಾಗಿರುವುದರಿಂದ ಮಳೆ ನೀರಿನೊಂದಿಗೆ ಹೂಳು ಸೇರಿಕೊಂಡು ಚರಂಡಿಗಳಲ್ಲಿ ಹೂಳು ತುಂಬಿದೆ. ಹೀಗಾಗಿ ತ್ಯಾಜ್ಯ ನೀರು ರಸ್ತೆಯ ಮೇಲೆ ಹರಿಯುತ್ತಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಇದೆ. ತಕ್ಷಣವೇ ಅಧಿಕಾರಿಗಳು ಚರಂಡಿಗಳನ್ನು ಸ್ವಚ್ಛಗೊಳಿಸಬೇಕು.
-ಕೆ.ರಾಮಕೃಷ್ಣ, ಸಿದ್ದಲಿಂಗಪುರ ಗ್ರಾಮಸ್ಥ

ಸಿದ್ದಲಿಂಗಪುರ ಗ್ರಾಮದಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವುದರೊಂದಿಗೆ ಜಾಗೃತಿ ಮೂಡಿಸುವ ಕೆಲಸದೊಂದಿಗೆ ಸ್ವಚ್ಛತಾ ಕಾರ್ಯವನ್ನು ಮಾಡುತ್ತಿದ್ದೇವೆ. ಸಭೆ ಕರೆದು ಗ್ರಾಪಂ ವ್ಯಾಪ್ತಿಯ ಎಲ್ಲ ಗ್ರಾಮಗಳ ಸ್ವಚ್ಛತೆಗೆ ಕ್ರಮ ಜರುಗಿಸಲಾಗುತ್ತದೆ.
-ಬಸವರಾಜು, ಸಿದ್ದಲಿಂಗಪುರ ಗ್ರಾಪಂ ಪಿಡಿಒ

ಪ್ರಶಾಂತ್‌ ಎಸ್

ಮೈಸೂರಿನವನಾದ ನಾನು ಪದವಿಯಲ್ಲಿ ಪತ್ರಿಕೋದ್ಯಮ ‌ಮಾಡಿದ್ದು 2015ರಿಂದ ನ್ಯೂಸ್ 1 ಕನ್ನಡದಿಂದ(ಟಿವಿ) ಪ್ರಾರಂಭಿಸಿ ,ಯಶ್ ಟೆಲ್ (ಟಿವಿ) ಇಂಡಿಯನ್ (ಟಿ ವಿ) ಪ್ರಜಾನುಡಿ ಪತ್ರಿಕೆ, ಪ್ರತಿನಿಧಿ ಪತ್ರಿಕೆ ಸಂಸ್ಥೆಯಲ್ಲಿ ವರದಿಗಾರನಾಗಿ ಕೆಲಸ ನಿರ್ವಹಿಸಿದ್ದೇನೆ. ಕಳೆದ ಎರಡು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ನನಗೆ ಹಾಡುಗಳನ್ನು ಕೇಳುವುದು, ಅರಣ್ಯಗಳನ್ನು ಸುತ್ತುವುದು ಹಾಗೂ ಅರ್ಥಶಾಸ್ತ್ರದ ಕಡೆ ಹೆಚ್ಚು ಒಲವು ಇದ್ದು ಪತ್ರಿಕಾ ರಂಗದಲ್ಲಿ ಅರಣ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದೇನೆ.

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

10 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

15 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

19 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

19 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

19 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

22 hours ago