Andolana originals

ಸಿದ್ಧಲಿಂಗಪುರ ; ಎಲ್ಲೆ ಮೀರಿದ ಸಂಭ್ರಮ

ಗಿರೀಶ್ ಹುಣಸೂರು

ವರ್ಷವಿಡೀ ಬೆವರು ಸುರಿಸಿ ದುಡಿದು ಬೆಳೆದ ದವಸ ಧಾನ್ಯಗಳನ್ನು ಮನೆತುಂಬಿಸಿಕೊಂಡ ಸಂಭ್ರಮದಲ್ಲಿ ಆಚರಿಸುವ ವರ್ಷದ ಮೊದಲ ಹಬ್ಬವೇ ಸಂಕ್ರಾಂತಿ. ಈ ಸುಗ್ಗಿಹಬ್ಬವನ್ನು ಬೇರೆ ಬೇರೆ ಕಡೆಗಳಲ್ಲಿ ವಿಭಿನ್ನವಾಗಿ ಆಚರಿಸಿದರೂ ಸಂಭ್ರಮ, ಸಡಗರ, ಉತ್ಸಾಹದಲ್ಲೇನು ಭಿನ್ನತೆ ಕಾಣುವುದಿಲ್ಲ.

ಪ್ರತಿ ವರ್ಷ ಜನವರಿ ೧೪ ಅಥವಾ ೧೫ರಂದು ಸಂಕ್ರಾಂತಿ ಹಬ್ಬವನ್ನು ಪ್ರಮುಖ ಹಬ್ಬವಾಗಿ ಆಚರಿಸಲಾಗುತ್ತದೆ. ಸಂಕ್ರಾಂತಿ ಹಬ್ಬದ ದಿನ ‘ಎಳ್ಳು-ಬೆಲ್ಲ ತಿಂದು ಒಳ್ಳೆ ಮಾತಾಡಿ’ ಎಂಬ ನಾಣ್ಣುಡಿಯೂ ಪ್ರಚಲಿತದಲ್ಲಿದೆ.

ರಾಜ್ಯದಲ್ಲಿ ಸಂಕ್ರಾಂತಿ ಹಬ್ಬವನ್ನು ಅನ್ನದಾತೆಯಾದ ಭೂಮಿ ತಾಯಿಗೆ ಕೃತಜ್ಞತೆ ಸಲ್ಲಿಸುವ ದಿನವಾಗಿ ರೈತಾಪಿ ವರ್ಗ ಆಚರಿಸುತ್ತದೆ. ಹೊಸ ಬಟ್ಟೆ ಧರಿಸಿ, ಮನೆಮಂದಿಯೆಲ್ಲಾ ಸೇರಿ ಹಬ್ಬದ ಅಡುಗೆ ತಯಾರಿಸಿ ಊಟ ಮಾಡುವುದು ಈ ಹಬ್ಬದ ವಾಡಿಕೆ.

ಸಂಕ್ರಾಂತಿ ಹಬ್ಬದ ದಿನ ರೈತಾಪಿ ವರ್ಗದವರು ತಮ್ಮ ಜಮೀನಿನಲ್ಲಿ ಉತ್ತಮ -ಸಲು ಬೆಳೆಯಲು ಕಾರಣವಾದ ಸೂರ್ಯ ದೇವನಿಗೆ ಪೂಜೆ ಸಲ್ಲಿಸುವ ಮೂಲಕ ಕೃತಜ್ಞತೆ ಸಲ್ಲಿಸುತ್ತಾರೆ. ಕೆಲವೆಡೆ ಹಬ್ಬಕ್ಕೂ ಮುನ್ನ ಮನೆಗಳಿಗೆ ಸುಣ್ಣ-ಬಣ್ಣ ಬಳಿದು, ಬಾಗಿಲಿಗೆ ಮಾವಿನ ತೋರಣ ಕಟ್ಟಿ, ಬಣ್ಣ ಬಣ್ಣದ ರಂಗೋಲಿ ಬಿಟ್ಟು ಸಂಭ್ರಮಿಸುತ್ತಾರೆ. ಕೆಲವರ ಮನೆಗಳಲ್ಲಿ ಸಸ್ಯಾಹಾರದ ಊಟವಾದರೆ, ಇನ್ನು ಕೆಲವರು ಮಾಂಸಾಹಾರದ ಭರ್ಜರಿ ಭೋಜನ ಸವಿಯುತ್ತಾರೆ. ಹೆಣ್ಣು ಮಕ್ಕಳು, ಮಹಿಳೆಯರು ಹೊಸ ಬಟ್ಟೆ ಉಟ್ಟು ನೆರೆ ಹೊರೆಯವರಿಗೆ ಎಳ್ಳು-ಬೆಲ್ಲ ಹಂಚಿ ಸಂಭ್ರಮಿಸುತ್ತಾರೆ. ಇದಕ್ಕೆ ನಿದರ್ಶನವೆಂದರೆ ಬೆಂಗಳೂರು ಹೆದ್ದಾರಿಯಲ್ಲಿರುವ ಮೈಸೂರು ತಾಲ್ಲೂಕಿನ ಸಿದ್ಧಲಿಂಗಪುರ ಗ್ರಾಮ.

ಈ ಊರಿನಲ್ಲಿ ಸಂಕ್ರಾಂತಿಯಂದು ರಾಸುಗಳ ಕಿಚ್ಚು ಹಾಯಿಸುವುದನ್ನುನೋಡುವುದೇ ಹಬ್ಬ. ಮೈಸೂರು ಜಿಲ್ಲಾದ್ಯಂತ ಜನತೆಗೆ ‘ಕಿಚ್ಚು ಹಾಯಿಸುವುದು’ ಎಂದರೆ ಸಿದ್ಧಲಿಂಗಪುರವೇ ಕಣ್ಣುಗಳ ಮುಂದೆ ಪ್ರತ್ಯಕ್ಷವಾಗುತ್ತದೆ.

ರಾಸುಗಳನ್ನು ಅಲಂಕರಿಸಿ, ಗ್ರಾಮದಲ್ಲಿ ಮೆರವಣಿಗೆ ಮಾಡಿ ಕಿಚ್ಚು ಹಾಯಿಸುವ ರೋಮಾಂಚನಕಾರಿ ದೃಶ್ಯವನ್ನು ಕಣ್ತುಂಬಿಕೊಳ್ಳುವ ಸಲುವಾಗಿಯೇ ಸ್ಥಳೀಯರು ಮಾತ್ರವಲ್ಲ, ಪ್ರವಾಸಿಗರೂ ರಸ್ತೆಯ ಇಕ್ಕೆಲಗಳಲ್ಲಿ ಕಾದುಕುಳಿತುಕೊಳ್ಳುವ ದೃಶ್ಯ ಇಲ್ಲಿ ಸಾಮಾನ್ಯ.

ಮೈಸೂರು ನಗರ ಪ್ರದೇಶದಲ್ಲಿ ಕಾಣಸಿಗುವ ಹಬ್ಬದ ಸಡಗರವೇ ಬೇರೆ. ಮನೆ ಮಂದಿಯೆಲ್ಲ ಹೊಸಬಟ್ಟೆ ತೊಟ್ಟು, ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿ ಬಂದು ನೆರೆಹೊರೆಯವರಿಗೆ ಎಳ್ಳು-ಬೆಲ್ಲ ಬೀರಿ, ಹಬ್ಬದ ಅಡುಗೆ ಮಾಡಿ ಊಟ ಮಾಡುತ್ತಾರೆ. ಇದೊಂದು ರೀತಿಯಲ್ಲಿ ಯಾಂತ್ರಿಕ ಅನಿಸುತ್ತದೆ.

 

ಆಂದೋಲನ ಡೆಸ್ಕ್

Recent Posts

ವೈಯಕ್ತಿಕ ದ್ವೇಷ: ಕಾರ್ಮಿಕನನ್ನು ಕೊಲೆಗೈಯ್ದು ಶರಣಾದ ಆರೋಪಿ

ಚೆಟ್ಟಳ್ಳಿ: ಕಾಫಿ ತೋಟದ ಲೈನ್ ಮನೆಯಲ್ಲಿ ವಾಸವಿದ್ದ ಕಾರ್ಮಿಕನೊಬ್ಬ ಮತ್ತೊಬ್ಬ ಕಾರ್ಮಿಕನನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ…

4 seconds ago

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೇ ಈಗ ರಾಜ್ಯಸಭೆ ಅಭ್ಯರ್ಥಿ

ನವದೆಹಲಿ: ರಾಜ್ಯಸಭೆ ಚುನಾವಣೆಗೆ ಬಿಜೆಪಿ 9 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ಅವರು ಬಿಹಾರದಿಂದ…

6 mins ago

ದುಬೈನಲ್ಲಿ ಸಿಲುಕಿರುವ ಕನ್ನಡಿಗರಿಗೆ ವಿಡಿಯೋ ಕಾಲ್‌ ಮಾಡಿ ಧೈರ್ಯ ಹೇಳಿದ ವಿಜಯೇಂದ್ರ

ಬೆಂಗಳೂರು: ಅಮೇರಿಕಾ, ಇಸ್ರೇಲ್‌-ಇರಾನ್‌ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ದುಬೈನಲ್ಲಿ ಸಿಲುಕಿ ಆತಂಕದಲ್ಲಿರುವ ಕನ್ನಡಿಗರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ…

26 mins ago

ಬೂದಬಾಳು ಗ್ರಾಮದ ಕೆರೆಗೆ ಬಾಗಿನ ಸಮರ್ಪಿಸಿದ ಶಾಸಕ ಎಂ.ಆರ್.ಮಂಜುನಾಥ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬರಪೀಡಿತ ಪ್ರದೇಶಗಳಲ್ಲಿ ಒಂದಾದ ಬೂದಬಾಳು ಕೆರೆಗೆ ಕಾವೇರಿ ನದಿ ಮೂಲದಿಂದ…

38 mins ago

ಸರ್ಕಾರದಿಂದ ಸಿಗುವ ಸೌಲಭ್ಯವನ್ನು ಪ್ರತಿಯೊಬ್ಬ ರೈತರಿಗೂ ದೊರಕಿಸಿ: ಬಿಜೆಪಿ ಜಿಲ್ಲಾಧ್ಯಕ್ಷ ನಿರಂಜನ್ ಕುಮಾರ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಷೇರುದಾರರು ನಿಮ್ಮ ಮೇಲೆ ವಿಶ್ವಾಸವಿಟ್ಟು ಕೃಷಿ ಪತ್ತಿನ ಸಹಕಾರ ಸಂಘದ…

1 hour ago

ಹಾರ್ಮುಜ್‌ ಜನಸಂಧಿಯನ್ನು ಮುಚ್ಚಿದ ಇರಾನ್: ತೈಲ ಬೆಲೆಯಲ್ಲಿ ಭಾರೀ ಏರಿಕೆ

ಟೆಹರಾನ್:‌ ಅಮೇರಿಕಾ ಹಾಗೂ ಇಸ್ರೇಲ್‌ ದೇಶಗಳು ಇರಾನ್‌ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ…

1 hour ago