Andolana originals

ಸಿದ್ಧಲಿಂಗಪುರ ; ಎಲ್ಲೆ ಮೀರಿದ ಸಂಭ್ರಮ

ಗಿರೀಶ್ ಹುಣಸೂರು

ವರ್ಷವಿಡೀ ಬೆವರು ಸುರಿಸಿ ದುಡಿದು ಬೆಳೆದ ದವಸ ಧಾನ್ಯಗಳನ್ನು ಮನೆತುಂಬಿಸಿಕೊಂಡ ಸಂಭ್ರಮದಲ್ಲಿ ಆಚರಿಸುವ ವರ್ಷದ ಮೊದಲ ಹಬ್ಬವೇ ಸಂಕ್ರಾಂತಿ. ಈ ಸುಗ್ಗಿಹಬ್ಬವನ್ನು ಬೇರೆ ಬೇರೆ ಕಡೆಗಳಲ್ಲಿ ವಿಭಿನ್ನವಾಗಿ ಆಚರಿಸಿದರೂ ಸಂಭ್ರಮ, ಸಡಗರ, ಉತ್ಸಾಹದಲ್ಲೇನು ಭಿನ್ನತೆ ಕಾಣುವುದಿಲ್ಲ.

ಪ್ರತಿ ವರ್ಷ ಜನವರಿ ೧೪ ಅಥವಾ ೧೫ರಂದು ಸಂಕ್ರಾಂತಿ ಹಬ್ಬವನ್ನು ಪ್ರಮುಖ ಹಬ್ಬವಾಗಿ ಆಚರಿಸಲಾಗುತ್ತದೆ. ಸಂಕ್ರಾಂತಿ ಹಬ್ಬದ ದಿನ ‘ಎಳ್ಳು-ಬೆಲ್ಲ ತಿಂದು ಒಳ್ಳೆ ಮಾತಾಡಿ’ ಎಂಬ ನಾಣ್ಣುಡಿಯೂ ಪ್ರಚಲಿತದಲ್ಲಿದೆ.

ರಾಜ್ಯದಲ್ಲಿ ಸಂಕ್ರಾಂತಿ ಹಬ್ಬವನ್ನು ಅನ್ನದಾತೆಯಾದ ಭೂಮಿ ತಾಯಿಗೆ ಕೃತಜ್ಞತೆ ಸಲ್ಲಿಸುವ ದಿನವಾಗಿ ರೈತಾಪಿ ವರ್ಗ ಆಚರಿಸುತ್ತದೆ. ಹೊಸ ಬಟ್ಟೆ ಧರಿಸಿ, ಮನೆಮಂದಿಯೆಲ್ಲಾ ಸೇರಿ ಹಬ್ಬದ ಅಡುಗೆ ತಯಾರಿಸಿ ಊಟ ಮಾಡುವುದು ಈ ಹಬ್ಬದ ವಾಡಿಕೆ.

ಸಂಕ್ರಾಂತಿ ಹಬ್ಬದ ದಿನ ರೈತಾಪಿ ವರ್ಗದವರು ತಮ್ಮ ಜಮೀನಿನಲ್ಲಿ ಉತ್ತಮ -ಸಲು ಬೆಳೆಯಲು ಕಾರಣವಾದ ಸೂರ್ಯ ದೇವನಿಗೆ ಪೂಜೆ ಸಲ್ಲಿಸುವ ಮೂಲಕ ಕೃತಜ್ಞತೆ ಸಲ್ಲಿಸುತ್ತಾರೆ. ಕೆಲವೆಡೆ ಹಬ್ಬಕ್ಕೂ ಮುನ್ನ ಮನೆಗಳಿಗೆ ಸುಣ್ಣ-ಬಣ್ಣ ಬಳಿದು, ಬಾಗಿಲಿಗೆ ಮಾವಿನ ತೋರಣ ಕಟ್ಟಿ, ಬಣ್ಣ ಬಣ್ಣದ ರಂಗೋಲಿ ಬಿಟ್ಟು ಸಂಭ್ರಮಿಸುತ್ತಾರೆ. ಕೆಲವರ ಮನೆಗಳಲ್ಲಿ ಸಸ್ಯಾಹಾರದ ಊಟವಾದರೆ, ಇನ್ನು ಕೆಲವರು ಮಾಂಸಾಹಾರದ ಭರ್ಜರಿ ಭೋಜನ ಸವಿಯುತ್ತಾರೆ. ಹೆಣ್ಣು ಮಕ್ಕಳು, ಮಹಿಳೆಯರು ಹೊಸ ಬಟ್ಟೆ ಉಟ್ಟು ನೆರೆ ಹೊರೆಯವರಿಗೆ ಎಳ್ಳು-ಬೆಲ್ಲ ಹಂಚಿ ಸಂಭ್ರಮಿಸುತ್ತಾರೆ. ಇದಕ್ಕೆ ನಿದರ್ಶನವೆಂದರೆ ಬೆಂಗಳೂರು ಹೆದ್ದಾರಿಯಲ್ಲಿರುವ ಮೈಸೂರು ತಾಲ್ಲೂಕಿನ ಸಿದ್ಧಲಿಂಗಪುರ ಗ್ರಾಮ.

ಈ ಊರಿನಲ್ಲಿ ಸಂಕ್ರಾಂತಿಯಂದು ರಾಸುಗಳ ಕಿಚ್ಚು ಹಾಯಿಸುವುದನ್ನುನೋಡುವುದೇ ಹಬ್ಬ. ಮೈಸೂರು ಜಿಲ್ಲಾದ್ಯಂತ ಜನತೆಗೆ ‘ಕಿಚ್ಚು ಹಾಯಿಸುವುದು’ ಎಂದರೆ ಸಿದ್ಧಲಿಂಗಪುರವೇ ಕಣ್ಣುಗಳ ಮುಂದೆ ಪ್ರತ್ಯಕ್ಷವಾಗುತ್ತದೆ.

ರಾಸುಗಳನ್ನು ಅಲಂಕರಿಸಿ, ಗ್ರಾಮದಲ್ಲಿ ಮೆರವಣಿಗೆ ಮಾಡಿ ಕಿಚ್ಚು ಹಾಯಿಸುವ ರೋಮಾಂಚನಕಾರಿ ದೃಶ್ಯವನ್ನು ಕಣ್ತುಂಬಿಕೊಳ್ಳುವ ಸಲುವಾಗಿಯೇ ಸ್ಥಳೀಯರು ಮಾತ್ರವಲ್ಲ, ಪ್ರವಾಸಿಗರೂ ರಸ್ತೆಯ ಇಕ್ಕೆಲಗಳಲ್ಲಿ ಕಾದುಕುಳಿತುಕೊಳ್ಳುವ ದೃಶ್ಯ ಇಲ್ಲಿ ಸಾಮಾನ್ಯ.

ಮೈಸೂರು ನಗರ ಪ್ರದೇಶದಲ್ಲಿ ಕಾಣಸಿಗುವ ಹಬ್ಬದ ಸಡಗರವೇ ಬೇರೆ. ಮನೆ ಮಂದಿಯೆಲ್ಲ ಹೊಸಬಟ್ಟೆ ತೊಟ್ಟು, ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿ ಬಂದು ನೆರೆಹೊರೆಯವರಿಗೆ ಎಳ್ಳು-ಬೆಲ್ಲ ಬೀರಿ, ಹಬ್ಬದ ಅಡುಗೆ ಮಾಡಿ ಊಟ ಮಾಡುತ್ತಾರೆ. ಇದೊಂದು ರೀತಿಯಲ್ಲಿ ಯಾಂತ್ರಿಕ ಅನಿಸುತ್ತದೆ.

 

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ : ಚಾಮರಾಜನಗರ ಸೀಮೆಯಲ್ಲಿ ಗಾಂಧಿಯ ಪ್ರಭಾವ

ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…

1 hour ago

ಇಂದು ಮೈಸೂರಿಗೆ ಮೋದಿ ಆಗಮನ : ವಿವೇಕ ಸ್ಮಾರಕ ಲೋಕಾರ್ಪಣೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…

1 hour ago

ಗಾಂಧಿ ಅಭಿಯಾನ ಅರಿವಿನ ಯಾನ | ಹೊರದೇಶದ ಭಾಷೆಗಳನ್ನು ಕಲಿತೆ

ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…

1 hour ago

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

16 hours ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

17 hours ago

ಮುಂದುವರಿದ ಕಾವೇರಿ ಕಿಚ್ಚು: ಆಗಸ್ಟ್.‌13ರಂದು ಕರ್ನಾಟಕ ಬಂದ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…

17 hours ago