Andolana originals

ಸಿದ್ಧಲಿಂಗಪುರ ; ಎಲ್ಲೆ ಮೀರಿದ ಸಂಭ್ರಮ

ಗಿರೀಶ್ ಹುಣಸೂರು

ವರ್ಷವಿಡೀ ಬೆವರು ಸುರಿಸಿ ದುಡಿದು ಬೆಳೆದ ದವಸ ಧಾನ್ಯಗಳನ್ನು ಮನೆತುಂಬಿಸಿಕೊಂಡ ಸಂಭ್ರಮದಲ್ಲಿ ಆಚರಿಸುವ ವರ್ಷದ ಮೊದಲ ಹಬ್ಬವೇ ಸಂಕ್ರಾಂತಿ. ಈ ಸುಗ್ಗಿಹಬ್ಬವನ್ನು ಬೇರೆ ಬೇರೆ ಕಡೆಗಳಲ್ಲಿ ವಿಭಿನ್ನವಾಗಿ ಆಚರಿಸಿದರೂ ಸಂಭ್ರಮ, ಸಡಗರ, ಉತ್ಸಾಹದಲ್ಲೇನು ಭಿನ್ನತೆ ಕಾಣುವುದಿಲ್ಲ.

ಪ್ರತಿ ವರ್ಷ ಜನವರಿ ೧೪ ಅಥವಾ ೧೫ರಂದು ಸಂಕ್ರಾಂತಿ ಹಬ್ಬವನ್ನು ಪ್ರಮುಖ ಹಬ್ಬವಾಗಿ ಆಚರಿಸಲಾಗುತ್ತದೆ. ಸಂಕ್ರಾಂತಿ ಹಬ್ಬದ ದಿನ ‘ಎಳ್ಳು-ಬೆಲ್ಲ ತಿಂದು ಒಳ್ಳೆ ಮಾತಾಡಿ’ ಎಂಬ ನಾಣ್ಣುಡಿಯೂ ಪ್ರಚಲಿತದಲ್ಲಿದೆ.

ರಾಜ್ಯದಲ್ಲಿ ಸಂಕ್ರಾಂತಿ ಹಬ್ಬವನ್ನು ಅನ್ನದಾತೆಯಾದ ಭೂಮಿ ತಾಯಿಗೆ ಕೃತಜ್ಞತೆ ಸಲ್ಲಿಸುವ ದಿನವಾಗಿ ರೈತಾಪಿ ವರ್ಗ ಆಚರಿಸುತ್ತದೆ. ಹೊಸ ಬಟ್ಟೆ ಧರಿಸಿ, ಮನೆಮಂದಿಯೆಲ್ಲಾ ಸೇರಿ ಹಬ್ಬದ ಅಡುಗೆ ತಯಾರಿಸಿ ಊಟ ಮಾಡುವುದು ಈ ಹಬ್ಬದ ವಾಡಿಕೆ.

ಸಂಕ್ರಾಂತಿ ಹಬ್ಬದ ದಿನ ರೈತಾಪಿ ವರ್ಗದವರು ತಮ್ಮ ಜಮೀನಿನಲ್ಲಿ ಉತ್ತಮ -ಸಲು ಬೆಳೆಯಲು ಕಾರಣವಾದ ಸೂರ್ಯ ದೇವನಿಗೆ ಪೂಜೆ ಸಲ್ಲಿಸುವ ಮೂಲಕ ಕೃತಜ್ಞತೆ ಸಲ್ಲಿಸುತ್ತಾರೆ. ಕೆಲವೆಡೆ ಹಬ್ಬಕ್ಕೂ ಮುನ್ನ ಮನೆಗಳಿಗೆ ಸುಣ್ಣ-ಬಣ್ಣ ಬಳಿದು, ಬಾಗಿಲಿಗೆ ಮಾವಿನ ತೋರಣ ಕಟ್ಟಿ, ಬಣ್ಣ ಬಣ್ಣದ ರಂಗೋಲಿ ಬಿಟ್ಟು ಸಂಭ್ರಮಿಸುತ್ತಾರೆ. ಕೆಲವರ ಮನೆಗಳಲ್ಲಿ ಸಸ್ಯಾಹಾರದ ಊಟವಾದರೆ, ಇನ್ನು ಕೆಲವರು ಮಾಂಸಾಹಾರದ ಭರ್ಜರಿ ಭೋಜನ ಸವಿಯುತ್ತಾರೆ. ಹೆಣ್ಣು ಮಕ್ಕಳು, ಮಹಿಳೆಯರು ಹೊಸ ಬಟ್ಟೆ ಉಟ್ಟು ನೆರೆ ಹೊರೆಯವರಿಗೆ ಎಳ್ಳು-ಬೆಲ್ಲ ಹಂಚಿ ಸಂಭ್ರಮಿಸುತ್ತಾರೆ. ಇದಕ್ಕೆ ನಿದರ್ಶನವೆಂದರೆ ಬೆಂಗಳೂರು ಹೆದ್ದಾರಿಯಲ್ಲಿರುವ ಮೈಸೂರು ತಾಲ್ಲೂಕಿನ ಸಿದ್ಧಲಿಂಗಪುರ ಗ್ರಾಮ.

ಈ ಊರಿನಲ್ಲಿ ಸಂಕ್ರಾಂತಿಯಂದು ರಾಸುಗಳ ಕಿಚ್ಚು ಹಾಯಿಸುವುದನ್ನುನೋಡುವುದೇ ಹಬ್ಬ. ಮೈಸೂರು ಜಿಲ್ಲಾದ್ಯಂತ ಜನತೆಗೆ ‘ಕಿಚ್ಚು ಹಾಯಿಸುವುದು’ ಎಂದರೆ ಸಿದ್ಧಲಿಂಗಪುರವೇ ಕಣ್ಣುಗಳ ಮುಂದೆ ಪ್ರತ್ಯಕ್ಷವಾಗುತ್ತದೆ.

ರಾಸುಗಳನ್ನು ಅಲಂಕರಿಸಿ, ಗ್ರಾಮದಲ್ಲಿ ಮೆರವಣಿಗೆ ಮಾಡಿ ಕಿಚ್ಚು ಹಾಯಿಸುವ ರೋಮಾಂಚನಕಾರಿ ದೃಶ್ಯವನ್ನು ಕಣ್ತುಂಬಿಕೊಳ್ಳುವ ಸಲುವಾಗಿಯೇ ಸ್ಥಳೀಯರು ಮಾತ್ರವಲ್ಲ, ಪ್ರವಾಸಿಗರೂ ರಸ್ತೆಯ ಇಕ್ಕೆಲಗಳಲ್ಲಿ ಕಾದುಕುಳಿತುಕೊಳ್ಳುವ ದೃಶ್ಯ ಇಲ್ಲಿ ಸಾಮಾನ್ಯ.

ಮೈಸೂರು ನಗರ ಪ್ರದೇಶದಲ್ಲಿ ಕಾಣಸಿಗುವ ಹಬ್ಬದ ಸಡಗರವೇ ಬೇರೆ. ಮನೆ ಮಂದಿಯೆಲ್ಲ ಹೊಸಬಟ್ಟೆ ತೊಟ್ಟು, ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿ ಬಂದು ನೆರೆಹೊರೆಯವರಿಗೆ ಎಳ್ಳು-ಬೆಲ್ಲ ಬೀರಿ, ಹಬ್ಬದ ಅಡುಗೆ ಮಾಡಿ ಊಟ ಮಾಡುತ್ತಾರೆ. ಇದೊಂದು ರೀತಿಯಲ್ಲಿ ಯಾಂತ್ರಿಕ ಅನಿಸುತ್ತದೆ.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

4 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

4 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

4 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

4 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

4 hours ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

4 hours ago