Andolana originals

ಕೋಟೆಗೆ 15ಕ್ಕೂ ಹೆಚ್ಚು ಬಾರಿ ಭೇಟಿ ನೀಡಿದ್ದ ಸಿದ್ದರಾಮಯ್ಯ

ಮಂಜು ಕೋಟೆ

ಮುಖ್ಯಮಂತ್ರಿಯಾಗಿದ್ದ ೮ ವರ್ಷಗಳ ಅವಧಿಯಲ್ಲಿ ಕ್ಷೇತ್ರಕ್ಕೆ ಸಾವಿರಾರು ಕೋಟಿ ರೂ. ಅನುದಾನ ಮಂಜೂರು

ಎಚ್.ಡಿ.ಕೋಟೆ: ರಾಜ್ಯದ ಮತ್ತು ಜಿಲ್ಲೆಯ ಗಡಿ ಭಾಗವಾದ ಎಚ್.ಡಿ.ಕೋಟೆ ತಾಲ್ಲೂಕಿಗೆ ಮುಖ್ಯಮಂತ್ರಿಯಾಗಿದ್ದ ತಮ್ಮ ಎಂಟು ವರ್ಷಗಳ ಅಧಿಕಾರದ ಅವಧಿಯಲ್ಲಿ ಸಿದ್ದರಾಮಯ್ಯ ಅವರು ೧೫ಕ್ಕೂ ಹೆಚ್ಚು ಬಾರಿ ಭೇಟಿ ನೀಡಿ ವಾಸ್ತವ್ಯ ಹೂಡಿ, ೩ ಸಾವಿರ ಕೋಟಿ ರೂ.ಗೂ ಹೆಚ್ಚು ಅನುದಾನ ಮತ್ತು ಯೋಜನೆಗಳನ್ನು ನೀಡಿ ಕೋಟೆ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ ಏಕೈಕ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂಬ ಹೆಗ್ಗಳಿಕೆ ಪಡೆದುಕೊಂಡಿದ್ದಾರೆ

೪ ಜಲಾಶಯಗಳು, ೨ ಅಭಯಾರಣ್ಯ ಪ್ರದೇಶಗಳು, ಸುಂದರ ಪರಿಸರ, ವನ್ಯಜೀವಿ ಸಂಪತ್ತು ಹೊಂದಿದ್ದರೂ ಕ್ಷೇತ್ರದ ಅಭಿವೃದ್ಧಿಗೆ ಬಹಳಷ್ಟು ಮುಖ್ಯಮಂತ್ರಿಗಳು, ಶಾಸಕರು, ಸಚಿವರು ಶ್ರಮಿಸಿದ್ದರೂ ಇಲ್ಲಿ ಹೆಚ್ಚಾಗಿ ಗಿರಿಜನರು, ರೈತರು, ದಲಿತರು, ಜನಸಾಮಾನ್ಯರನ್ನು ಒಳಗೊಂಡಿರುವ ಕ್ಷೇತ್ರದ ಅಭಿವೃದ್ಧಿ ಮಾತ್ರ ಕುಂಟುತ್ತಾ ಸಾಗುತ್ತಿದೆ. ಕ್ಷೇತ್ರದಲ್ಲಿ ೨೦೧೩ರಲ್ಲಿ ಜಾ.ದಳ ಶಾಸಕರಾಗಿದ್ದ ಚಿಕ್ಕಮಾದು ಮತ್ತು ಲೋಕಸಭಾ ಸದಸ್ಯರಾಗಿದ್ದ ಕಾಂಗ್ರೆಸ್ ಪಕ್ಷದ ಆರ್.ಧ್ರುವನಾರಾಯಣ ಅವರ ಕ್ರಿಯಾಶೀಲತೆ, ಕ್ಷೇತ್ರದ ಕುರಿತ ಕಾಳಜಿಯಿಂದಾಗಿ ಅಂದು ಮುಖ್ಯಮಂತ್ರಿಯಾಗಿದ್ದ ಜಿಲ್ಲೆಯವರಾದ ಸಿದ್ದರಾಮಯ್ಯ ಅವರನ್ನು ೪ ಬಾರಿ ತಾಲ್ಲೂಕಿಗೆ ಕರೆಸಿ ಹೊಸ ಸರಗೂರು ತಾಲ್ಲೂಕು ಘೋಷಣೆ, ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ, ಏಕಲವ್ಯ ಶಾಲೆ, ಮೊರಾರ್ಜಿ ಶಾಲೆಗಳ ಸ್ಥಾಪನೆ, ಎಸ್‌ಸಿ, ಎಸ್‌ಟಿ ಸಮುದಾಯದವರ ಗ್ರಾಮಗಳ ಸಿಸಿ ರಸ್ತೆ ಅಭಿವೃದ್ಧಿ, ಆದಿವಾಸಿಗಳಿಗೆ ಮನೆ ನೀಡಿಕೆ, ಪ್ರಮುಖ ರಸ್ತೆಗಳ ಅಭಿವೃದ್ಧಿ ಮುಂತಾದ ಅನೇಕ ಯೋಜನೆಗಳಿಗೆ ಒಂದು ಸಾವಿರ ಕೋಟಿ ರೂ.ಗಳನ್ನು ಕೊಡಿಸಿದ್ದರು.

೨೦೧೮ರಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯರವರು ಆರು ಬಾರಿ ಕ್ಷೇತ್ರಕ್ಕೆ ಭೇಟಿ ನೀಡಿ ಹೈಟೆಕ್ ಕನಕ ಭವನ, ಶಿರಮಳ್ಳಿ, ಮೊಳೆಯೂರು, ಶಿಂಡೇನಹಳ್ಳಿ ಗ್ರಾಮಗಳಲ್ಲಿ ನಡೆದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ಅನೇಕ ಪ್ರಮುಖ ಯೋಜನೆಗಳನ್ನು ಪೂರ್ಣಗೊಳಿಸಲು ವಿರೋಧ ಪಕ್ಷದ ನಾಯಕರಾಗಿ ಅಂದು ಶಾಸಕರಾಗಿದ್ದ ಅನಿಲ್ ಚಿಕ್ಕಮಾದುಗೆ ಬೆಂಬಲವಾಗಿ ನಿಂತಿದ್ದರು.

೨೦೨೩ರಲ್ಲಿ ಶಾಸಕರಾಗಿ ಅನಿಲ್ ಚಿಕ್ಕಮಾದು ಪುನರಾಯ್ಕೆಯಾಗಿ, ರಾಜ್ಯದಲ್ಲಿ ಮತ್ತೆ ಮುಖ್ಯ ಮಂತ್ರಿಯಾಗಿ ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬಂದ ಮೇಲೆ ಜಿಲ್ಲೆಯ ಎಲ್ಲ ತಾಲ್ಲೂಕುಗಳಿಗಿಂತ ಹೆಚ್ಚಾಗಿ ಕೋಟೆ ತಾಲ್ಲೂಕಿಗೆ ಭೇಟಿ ನೀಡಿದ್ದ ಅವರು, ಶಾಸಕ ಅನಿಲ್ ಚಿಕ್ಕಮಾದು ಮತ್ತು ಕ್ಷೇತ್ರದ ಅಭಿವೃದ್ಧಿ ಬಗ್ಗೆ ಕಾಳಜಿ ವಹಿಸಿ ಅಂಬೇಡ್ಕರ್ ಜಯಂತಿ, ವಾಲ್ಮೀಕಿ ಜಯಂತಿ, ಕಬಿನಿಗೆ ಬಾಗಿನ ಅರ್ಪಣೆ, ಗಿರಿಜನ ಹಾಡಿಗಳಿಗೆ ಭೇಟಿ, ಸಂವಾದ, ಶಿರಮಳ್ಳಿ ಗ್ರಾಮದಲ್ಲಿ ದೇವ ಸ್ಥಾನದ ಉದ್ಘಾಟನೆ, ರೆಸಾರ್ಟ್‌ನಲ್ಲಿ ವಾಸ್ತವ್ಯ ಇನ್ನಿತರ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರ ಜತೆಗೆ ಎರಡೂವರೆ ಸಾವಿರ ಕೋಟಿ ರೂ.ಗಳಿಗೂ ಹೆಚ್ಚು ಅನುದಾನವನ್ನು ಕುಡಿಯುವ ನೀರು, ರಸ್ತೆ, ಗಿರಿಜನರಿಗೆ ವಿದ್ಯುತ್, ಮನೆಗಳು, ಆದಿವಾಸಿಗಳ ನಿಗಮ ಸ್ಥಾಪನೆ, ಮೈಸೂರು-ಮಾನಂದವಾಡಿ ಮುಖ್ಯ ರಸ್ತೆ ಅಭಿವೃದ್ಧಿ, ಸರಗೂರಿನ ಆಡಳಿತಸೌಧ, ಆಸ್ಪತ್ರೆ, ಕಾಲೇಜು ಸ್ಥಾಪನೆ ಮುಂತಾದವುಗಳಿಗೆ ನೀಡುವ ಮೂಲಕ ಕ್ಷೇತ್ರದ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದರು.

” ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಮತ್ತು ವಿರೋಧ ಪಕ್ಷ ನಾಯಕರಾಗಿ ಕೆಲಸ ನಿರ್ವಹಿಸಿದ್ದಾಗ ನಮ್ಮ ತಂದೆ ಮತ್ತು ನನ್ನ ಅವಧಿಯಲ್ಲಿ ಎಚ್.ಡಿ.ಕೋಟೆ ಕ್ಷೇತ್ರದ ಅಭಿವೃದ್ಧಿಗೆ ಮತ್ತು ಯೋಜನೆಗಳಿಗೆ ಸಾವಿರಾರು ಕೋಟಿ ರೂ. ಅನುದಾನ, ಸವಲತ್ತುಗಳನ್ನು ನೀಡಿದ್ದಾರೆ. ಇದರಿಂದಾಗಿ ಹಿಂದುಳಿದ ತಾಲ್ಲೂಕು ಅಭಿವೃದ್ಧಿಯತ್ತ ಸಾಗಲು ಸಾಧ್ಯವಾಗಿದೆ. ತಾಲ್ಲೂಕಿನ ಬಗ್ಗೆ ಮತ್ತು ನನ್ನ ಬಗ್ಗೆ ಸಿದ್ದರಾಮಯ್ಯ ಅವರು ಇಟ್ಟಿರುವ ಕಾಳಜಿಗೆ ನಾವೆಂದೂ ಚರಋಣಿಯಾಗಿದ್ದೇವೆ.”

-ಅನಿಲ್ ಚಿಕ್ಕಮಾದು, ಶಾಸಕರು

 

 

ಆಂದೋಲನ ಡೆಸ್ಕ್

Recent Posts

ಅರ್ಧಕ್ಕೆ ನಿಂತ ಕಾಮಗಾರಿ; ಸವಾರರಿಗೆ ಕಿರಿಕಿರಿ

ಮಹೇಶ್ ಕರೋಟಿ ಗುದ್ದಲಿ ಪೂಜೆಗಷ್ಟೇ ಸೀಮಿತವಾದ ರಸ್ತೆ ಕಾಮಗಾರಿ ; ಎಚ್ಚರ ತಪ್ಪಿದಲ್ಲಿ ಅನಾಹುತ; ದುರಸ್ತಿಗೆ ಗ್ರಾಮಸ್ಥರ ಒತ್ತಾಯ ಕಿಕ್ಕೇರಿ:…

5 mins ago

ಜೂ.13ರಂದು ಡೋರ‍್ನಹಳ್ಳಿಯಲ್ಲಿ ಸಂತ ಅಂತೋಣಿ ಜಾತ್ರೆ

ಭೇರ್ಯ ಮಹೇಶ್ ಕೆ.ಆರ್.ನಗರ: ತಾಲ್ಲೂಕು ಆಡಳಿತದಿಂದ ಸಕಲ ಸಿದ್ಧತೆ; ಸಾವಿರಾರು ಮಂದಿ ಸೇರುವ ನಿರೀಕ್ಷೆ ಕೆ.ಆರ್.ನಗರ: ತಾಲ್ಲೂಕಿನ ಡೋರ‍್ನಹಳ್ಳಿಯ ವಿಶ್ವವಿಖ್ಯಾತ…

10 mins ago

ಬುಡಕಟ್ಟು ಜೀವನ ಬಿಚ್ಚಿಡುವ ಮ್ಯೂಸಿಯಂ!

ಮದನ್ ಕೆ.ಪಿ ಸಾಂಪ್ರದಾಯಿಕ ಮನೆಗಳು, ಧರಿಸುವ ಉಡುಪುಗಳು, ಒಡವೆಗಳ ಅನಾವರಣ ಮೈಸೂರು: ನಗರದ ಬೋಗಾದಿಯಲ್ಲಿರುವ ಭಾರತೀಯ ಮಾನವ ವಿಜ್ಞಾನ ಸರ್ವೇಕ್ಷಣಾ…

19 mins ago

ಕಲಾಕೃತಿ ಮೂಲಕ ತ್ಯಾಜ್ಯ ನಿರ್ವಹಣಾ ಜಾಗೃತಿ

ಎಚ್.ಎಸ್.ದಿನೇಶ್‌ಕುಮಾರ್ ಕಸ ಎಸೆಯುವ ಹಾಟ್ ಸ್ಪಾಟ್‌ಗಳಲ್ಲಿ ತ್ಯಾಜ್ಯಗಳಿಂದಲೇ ‘ಕಲಾಕೃತಿ’ ರಚನೆ!; ಜನರಲ್ಲಿ ಅರಿವು ಮೂಡಿಸುತ್ತಿರುವ ಪೌರಕಾರ್ಮಿಕರು ಮೈಸೂರು: ಸಿಕ್ಕಸಿಕ್ಕಲ್ಲಿ ಕಸ…

29 mins ago

ಸೋಮವಾರಪೇಟೆಯಲ್ಲಿ ಗ್ಯಾಸ್ ಸೋರಿಕೆಗೆ ಯುವತಿ ಸಾವು

ಸೋಮವಾರಪೇಟೆ: ಇಲ್ಲಿನ ಹೋಂಸ್ಟೇ ಒಂದರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಗ್ಯಾಸ್‌ ಸೋರಿಕೆಯಿಂದ ಮೈಸೂರಿನ ಯುವತಿ ಮೃತಪಟ್ಟಿದ್ದಾಳೆ. ಮೈಸೂರಿನ ಯರಗನಹಳ್ಳಿಯ ಪಾಪಣ್ಣ…

12 hours ago