Andolana originals

ಕೆಟ್ಟುನಿಂತ ಸಿಗ್ನಲ್ ಲೈಟ್: ಸವಾರರಿಗೆ ಸಂಚಕಾರ

ಪ್ರಶಾಂತ್ ಎಸ್.

ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುತ್ತಿರುವ ಪಾದಚಾರಿಗಳು; ಸಿಗ್ನಲ್ ಲೈಟ್ ದುರಸ್ತಿಪಡಿಸಲು ಆಗ್ರಹ

ಮೈಸೂರು: ಸಂಚಾರ ದಟ್ಟಣೆ ಹೋಗಲಾಡಿಸಿ ಸುಗಮ ಸಂಚಾರ ವ್ಯವಸ್ಥೆಗಾಗಿ ನಗರದ ಪ್ರಮುಖ ವೃತ್ತಗಳಲ್ಲಿ ಅಳವಡಿಸಿರುವ ಸಿಗ್ನಲ್ ಲೈಟ್‌ಗಳು ಹಲವೆಡೆ ಕೆಟ್ಟು ನಿಂತ ಪರಿಣಾಮವಾಗಿ ವಾಹನ ಸವಾರರು ಪರ ದಾಡ ಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ಸಂಚಾರ ಬೂತ್ಗಳಲ್ಲಿ ಪೊಲೀಸರು ಇಲ್ಲದೇ ಇಲ್ಲದಿರುವು ದರಿಂದ ವಾಹನಗಳು ಬೇಕಾಬಿಟ್ಟಿಯಾಗಿ ಸಂಚರಿಸುತ್ತಿದ್ದು, ರಸ್ತೆಯಲ್ಲಿ ಸಾಗುವ ಪಾದಚಾರಿಗಳು ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವಂತಾಗಿದೆ.

ಕಳೆದ ೧೫ ದಿನಗಳಿಂದ ನಗರದ ಪ್ರಮುಖ ವೃತ್ತಗಳಲ್ಲಿ ಸಿಗ್ನಲ್ ದೀಪಗಳ ಸಮಸ್ಯೆಯಾಗಿದ್ದು, ಸಂಬಂಧಪಟ್ಟವರು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಿಗ್ನಲ್ ಲೈಟ್ ಸ್ಥಗಿತ: ವಿಜಯನಗರ ಎರಡನೇ ಹಂತ ಹಾಗೂ ನಾಲ್ಕನೇ ಹಂತದ ಸಮೀಪವಿರುವ ವೃತ್ತಗಳಲ್ಲಿ ಐದು ರಸ್ತೆಗಳು ಸಂಪರ್ಕಿಸುತ್ತವೆ. ಒಂದು ರಸ್ತೆ ಹುಣಸೂರಿಗೆ, ಮತ್ತೊಂದು ಹೆಬ್ಬಾಳ ಕೈಗಾರಿಕಾ ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವುದರಿಂದ ವಾಹನಗಳ ಸಂಚಾರ ಅಧಿಕವಾಗಿದ್ದು, ಸಂಜೆ ೫ ಗಂಟೆಯ ನಂತರ ಮತ್ತು ಬೆಳಿಗ್ಗೆ ೮ ಗಂಟೆ ಬಳಿಕ ವಾಹನಗಳ ಸಂಚಾರ ಹೆಚ್ಚಿರುತ್ತದೆ. ಆದರೆ, ಇಲ್ಲಿನ ಸಿಗ್ನಲ್ ಲೈಟ್‌ಗಳು ಕೆಟ್ಟು ನಿಂತಿರುವುದರಿಂದ ಏಕಕಾಲಕ್ಕೆ ವಾಹನಗಳು ನುಗ್ಗುವುದರಿಂದ ಅಪಘಾತಗಳಾಗುತ್ತಿವೆ.

ಹಲವೆಡೆ ಸಿಗ್ನಲ್ ಲೈಟ್ ಸಮಸ್ಯೆ: ಜಲಪುರಿಯ ಎಸ್‌ಪಿ ಕಚೇರಿ, ಗಾಯತ್ರಿಪುರಂ, ದಟ್ಟಗಳ್ಳಿಯ ನೇತಾಜಿ ವೃತ್ತ, ನಾಚನಹಳ್ಳಿ ಪಾಳ್ಯ ಸಮೀಪವಿರುವ ಟೋಲ ಗೇಟ್ ವೃತ್ತ.. ಹೀಗೆ ಹಲವು ಕಡೆಗಳಲ್ಲಿ ಇದೇ ರೀತಿಯ ಸಮಸ್ಯೆಗಳಾಗಿವೆ. ಕೆಲವೆಡೆ ಸಂಚಾರ ದಟ್ಟಣೆ ನಿಯಂತ್ರಣಕ್ಕಾಗಿ ಸಂಚಾರ ಪೊಲೀಸರನ್ನೂ ನಿಯೋಜಿಸಿಲ್ಲ. ಇದರಿಂದ ಪಾದಚಾರಿಗಳು ರಸ್ತೆ ದಾಟಲು ತೊಂದರೆ ಅನುಭವಿಸು ವಂತಾಗಿದೆ.

” ನಗರದ ಹಲವೆಡೆ ಸಿಗ್ನಲ್ ದೀಪಗಳು ಚಾಲ್ತಿಯಲ್ಲಿದ್ದು, ಎಲ್ಲೆಲ್ಲಿ ಕೆಟ್ಟುನಿಂತಿವೆ ಹಾಗೂ ಇನ್ನೂ ಯಾವ ಭಾಗದಲ್ಲಿ ಸಿಗ್ನಲ್ ದೀಪಗಳ ಅವಶ್ಯಕತೆ ಇದೆ ಎಂಬುದನ್ನು ಪರಿಶೀಲಿಸಿ ಸರಿಪಡಿ ಸುವ ಮೂಲಕ ಸಾರ್ವಜನಿಕರು ಹಾಗೂ ವಾಹನ ಸವಾರರು ಸುಗಮವಾಗಿ ಸಂಚರಿಸಲು ಅನುವು ಮಾಡಿಕೊಡಲಾಗುವುದು.”

-ಕೆ.ಎಸ್.ಸುಂದರ್‌ರಾಜ್, ಡಿಸಿಪಿ ನಗರ ಪೊಲೀಸ್ ಅಪರಾಧ ಮತ್ತು ಸಂಚಾರ ವಿಭಾಗ 

” ಸಿಗ್ನಲ್ ಲೈಟ್‌ಗಳು ಯಾವಾಗ ಬೇಕಾದರೂ ಹೋಗುತ್ತದೆ, ಯಾವಾಗ ಬೇಕಾದರೂ ಬರುತ್ತದೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಬೈಕ್ ಓಡಿಸುವಾಗಲೂ ಟ್ರಾಫಿಕ್ ಸಮಸ್ಯೆಯಾಗಿ ಅಪಘಾತಗಳು ಸಂಭವಿಸಿವೆ. ಹಾಗಾಗಿ ಪೊಲೀಸ್ ಇಲಾಖೆ ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಿದರೆ ತೊಂದರೆಗಳನ್ನು ತಪ್ಪಿಸಬಹುದು.”

-ಆದರ್ಶ್, ಬೈಕ್ ಸವಾರ

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

5 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

6 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

6 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

7 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

12 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

12 hours ago