Andolana originals

ನಿಶ್ಯಬ್ದವಾಗಿ ಸಾಗಲು ಸಜ್ಜಾಗುತ್ತಿವೆ ಸ್ತಬ್ಧಚಿತ್ರಗಳು!

ಬಂಡೀಪಾಳ್ಯ ಎಪಿಎಂಸಿಯಲ್ಲಿ ಸ್ತಬ್ಧಚಿತ್ರಗಳ ನಿರ್ಮಾಣ; 31 ಜಿಲ್ಲೆಗಳ ಸ್ತಬ್ಧಚಿತ್ರಗಳ ಅನಾವರಣಕ್ಕೆ ಸಿದ್ಧತೆ
ಕೆ.ಬಿ.ರಮೇಶ ನಾಯಕ

ಮೈಸೂರು: ದಸರಾ ಮಹೋತ್ಸವದ ಕೇಂದ್ರ ಬಿಂದುವಾದ ಜಂಬೂಸವಾರಿ ಮೆರವಣಿಗೆಗೆ ಸ್ತಬ್ಧಚಿತ್ರಗಳು ಮೆರುಗು ನೀಡಲಿದ್ದು, ಪ್ರತಿ ವರ್ಷದಂತೆ ಈ ವರ್ಷವೂ ವಿನೂತನ ವಿಶೇಷ ರೀತಿಯಲ್ಲಿ ಸ್ತಬ್ಧಚಿತ್ರಗಳನ್ನು ನಿರ್ಮಾಣ ಮಾಡಲಾಗುತ್ತಿದೆ.

ಮೊದಲ ಬಾರಿಗೆ ಭಾರತೀಯ ರೈಲ್ವೆ, ಕೇಂದ್ರೀಯ ಆಹಾರ ಸಂಶೋಧನಾ ಸಂಸ್ಥೆ (ಸಿಎಫ್‌ಟಿಆರ್ಐ ) ಸಾಧನೆಗಳ ಜತೆಗೆ ಸ್ವಾತಂತ್ರ್ಯಪೂರ್ವ-ನಂತರದಲ್ಲಿ ಸಾಧಿಸಿರುವ ಪ್ರಗತಿಯ ಕುರಿತ ಸ್ತಬ್ಧಚಿತ್ರಗಳು ಈ ಬಾರಿ ಗಮನ ಸೆಳೆಯಲಿವೆ.

ಅ.12ರಂದು ಅರಮನೆಯಿಂದ ಬನ್ನಿಮಂಟಪ ಮೈದಾನದ ತನಕ ಸಾಗಲಿರುವ ಜಂಬೂ ಸವಾರಿ ಮೆರವಣಿಗೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಕಳೆದ ತಿಂಗಳು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ವಿಶ್ವದಾಖಲೆಯ ಮಾನವ ಸರಪಳಿ ನಿರ್ಮಾಣ ಕಾರವನ್ನು ಈ ಬಾರಿ ತೆರೆದಿಡಲಾಗುತ್ತದೆ.

ಈಗಾಗಲೇ ಬಂಡೀಪಾಳ್ಯದ ಎಪಿಎಂಸಿ ಯಾರ್ಡ್‌ ಆವರಣದಲ್ಲಿ ಸ್ತಬ್ಧಚಿತ್ರಗಳ ತಯಾರಿ ಆರಂಭವಾಗಿದ್ದು, ಕಾರ್ಮಿಕರು ಹಗಲಿರುಳು ಶ್ರಮಿಸುತ್ತಿದ್ದಾರೆ. ಭಾರತೀಯ ರೈಲ್ವೆ ಆರಂಭವಾದಾಗ ಮೀಟರ್‌ಗೇಜ್, ಬ್ರಾಡ್‌ ಗೇಜ್ ರೈಲಿನಿಂದ ವಂದೇ ಭಾರತ್ ರೈಲಿನ ತನಕ ಆಗಿರುವ ಪ್ರಗತಿ, ರೈಲ್ವೆಯು ಸಾಧಿಸಿರುವ ಪ್ರಗತಿ ಕುರಿತು ಮೊಟ್ಟ ಮೊದಲ ಬಾರಿಗೆ ರೈಲ್ವೆ ಇಲಾಖೆಯ ಸ್ತಬ್ಧಚಿತ್ರವು ಸಾಗಲಿದೆ.

ಹೊಸ ಸಂಶೋಧನೆಗಳ ಮೂಲಕ ಆಹಾರ, ಪೌಷ್ಟಿಕಾಂಶದ ಆಹಾರ, ತಂತ್ರಜ್ಞಾನಗಳನ್ನು ಪರಿಚಯಿಸುತ್ತಿರುವ ಕೇಂದ್ರೀಯ ಆಹಾರ ಸಂಶೋಧನಾ ಸಂಸ್ಥೆ(ಸಿಎಫ್‌ಟಿಆರ್ ಐ) ಸಾಧನೆಗಳ ಮಾಹಿತಿಯನು ಅನಾವರಣಗೊಳಿಸಲಿದೆ. ದೇಶ-ವಿದೇಶಗಳ ಜನರನ್ನು ಆಕರ್ಷಿಸುತ್ತಿರುವ ಮೈಸೂರು ರೇಷ್ಮೆ ಸೀರೆಗಳನ್ನು ಉತ್ಪಾದನೆ ಮಾಡುವಂತಹ ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ(ಕೆಎಸ್‌ಐಸಿ)ದಿಂದ ಹೊರ ತರುತ್ತಿರುವ ಅಪ್ಪಟ ಜರಿ ಸೀರೆಗಳ ನೋಟವನ್ನು ಸೆರೆದಿಡುವಂತಹ
ಸ್ತಬ್ಧಚಿತ್ರ.

ಶ್ರೀಗಂಧದ ಮೂಲಕವೇ ಸುವಾಸನೆ ಬೀರುವಂತಹ ಮೈಸೂರು ಸಾಮೂನು ಮತ್ತು ಮಾರ್ಜಕ ನಿಗಮ(ಕೆಎಸ್ ಐಡಿಎಲ್ ) ದ ಸ್ಯಾಂಡಲ್ ಸೋಪ್, ಗಂಧದಕಡ್ಡಿ ಕಲಾ ಕೃತಿಗಳನ್ನು ಬಿಂಬಿಸುವಂತಹ ಸ್ತಬ್ಧಚಿತ್ರ ಪ್ರದರ್ಶನವಾಗಲಿದೆ.
ರೈತರ ಪಾಲಿಗೆ ಸಂಜೀವಿನಿಯಾಗಿರುವ ಕರ್ನಾಟಕ ಹಾಲು ಒಕ್ಕೂಟದ ಸಾಧನೆಯ ಜತೆಗೆ ಕರ್ನಾಟಕದಿಂದ ಹೊಸದಿಲ್ಲಿಯ ಹೊರಗಿನ ಸಿಂಗಾಪುರ, ದುಬೈಗೆ ಮೈಸೂರು ಪಾಕ್, ನಂದಿನಿ ಹಾಲು, ಉತ್ಪನ್ನಗಳು ಸರಬರಾಜು ಆಗುತ್ತಿರುವ ಕುರಿತು ನಿರ್ಮಿಸುತ್ತಿರುವ ಈ ಸ್ತಬ್ಧಚಿತ್ರ ನೋಡುಗರ ಮನಮುಟ್ಟುವಂತೆ ಮಾಡಲಿದೆ.

ಇನ್ನು ಪ್ರವಾಸೋದ್ಯಮ ಇಲಾಖೆ ರಾಜ್ಯದಲ್ಲಿರುವ ಪ್ರವಾಸಿ ತಾಣಗಳನ್ನು ಜನರೆದುರು ತೆರೆದಿಡಲಿದೆ. ಕರ್ನಾಟಕ ರಾಜ್ಯ ಪೊಲೀಸ್ ವತಿಯಿಂದ ಜನಸ್ನೇಹಿ ಪೊಲೀಸ್, ಸೈಬರ್ ಕೈಂ ಮೊದಲಾದ ವಿಚಾರಗಳ ಕುರಿತು ತಯಾರಿಸುತ್ತಿರುವ ಸ್ತಬ್ಧಚಿತ್ರವು ಸಾರ್ವಜನಿಕರಲ್ಲಿ ಅಪರಾಧ ಪ್ರಕರಣಗಳನ್ನು ತಡೆಗಟ್ಟುವ ಬಗ್ಗೆ ಜಾಗೃತಿ ಮೂಡಿಸಲಿದೆ.

ಉಳಿದಂತೆ ರಾಜ್ಯದ 31ಜಿಲ್ಲೆಗಳಿಂದಲೂ ಸ್ತಬ್ಧಚಿತ್ರಗಳು ಜಂಬೂಸವಾರಿ ಮೆರವಣಿಗೆ ಯಲ್ಲಿ ಸಾಸಸಗಲಿದ್ದು, ಕೋಲಾರದ ಕೋಟೆಲಿಂಗೇ ಶ್ವರ ದೇವಸ್ಥಾನ, ಹಾಸನ ಜಿಲ್ಲೆಯ ಬೇಲೂರು ಚೆನ್ನಕೇಶವ ದೇವಾಲಯ, ಹಳೇಬೀಡು ಹೊಯ್ಸಳೇಶ್ವರ ದೇವಾಲಯ, ಕೊಪ್ಪಳದ ಹುಲಿಗೆಮ್ಮ ದೇವಿ ದೇವಸ್ಥಾನ, ಬೀದರ್ ಜಿಲ್ಲೆಯ ಚೆನ್ನಬಸವಪಟ್ಟದೇವರು, ಚಾಮರಾಜನಗರ ಜಿಲ್ಲೆಯ ಸೋಲಿಗರ ಸೊಗಡು, ಕೊಡಗು ಜಿಲ್ಲೆಯ ಹಾರಂಗಿ ಜಲಾಶಯ ಸ್ತಬ್ಧಚಿತ್ರಗಳು ನೋಡುಗರ ಕಣ್ಮನ ಸೆಳೆಯಲಿವೆ.

ಮುಖ್ಯಮಂತ್ರಿ ತವರು ಜಿಲ್ಲೆಯಾದ ಮೈಸೂರಿನಿಂದ ‘ಮನುಷ್ಯ ಜಾತಿ ತಾನೊಂದೆ ವಲಂ ಸಂಸತ್ ಭವನ, ಅನುಭವ ಮಂಟಪ, ಬುದ್ಧ, ಬಸವ, ಅಂಬೇಡ್ಕರ್ ಅವರ ಮಾದರಿಗಳು, ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರ ದೇವಸ್ಥಾನ ಹಾಗೂ ಶಿವನ ಸ್ತಬ್ದಚಿತ್ರಗಳು ಈ ಬಾರಿಯ ಆಕರ್ಷಣೆಯ ಕೇಂದ್ರವಾಗಲಿವೆ.

ಜಂಬೂಸವಾರಿ ಮೆರವಣಿಗೆಯಲ್ಲಿ ಈ ಬಾರಿ ನಾಡು, ನುಡಿಯ ಕಲೆಗಳು, ಪ್ರವಾಸಿ ತಾಣಗಳು, ಐತಿಹಾಸಿಕ ಸ್ಥಳಗಳನ್ನು ಬಿಂಬಿಸುವಂತಹ ಆಯಾಯ ಜಿಲ್ಲೆಗಳ ಸ್ತಬ್ಧಚಿತ್ರಗಳು ಗಮನ ಸೆಳೆಯಲಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವರ ನಿರ್ದೇಶನದಂತೆ ವಿಷಯಗಳನ್ನು ಆಯ್ಕೆ ಮಾಡಿಕೊಂಡು ಅದೇ ರೀತಿಯಲ್ಲಿ ನಿರ್ಮಿಸುವ ಕೆಲಸ ಮಾಡಿದ್ದೇವೆ. -ಎ.ಎಸ್‌.ರಂಜಿತ್‌ ಕುಮಾರ್, ಕಾರ್ಯಾಧ್ಯಕ್ಷರು, ದಸರಾ ಸ್ತಬ್ಧಚಿತ್ರ ಉಪ ಸಮಿತಿ

ಆಂದೋಲನ ಡೆಸ್ಕ್

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

9 mins ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

37 mins ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

2 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

2 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

3 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

4 hours ago