Andolana originals

ಎಸ್‌ಐಆರ್: ಶೇ.64.09ರಷ್ಟು ನಮೂನೆಗಳ ವಿತರಣೆ

ನವೀನ್ ಡಿಸೋಜ

ಕೊಡಗಿನಲ್ಲಿ ಒಟ್ಟು ೪,೬೮,೬೫೭ ಮತದಾರರ ಪೈಕಿ ೩,೦೦,೩೬೯ ಮಂದಿಗೆ ನಮೂನೆ ವಿತರಣೆ; ೯,೧೨೫ ನಮೂನೆಗಳ ಡಿಜಿಟಲೀಕರಣ

ಮಡಿಕೇರಿ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಕಾರ್ಯ ಚುರುಕುಗೊಂಡಿದ್ದು, ಜಿಲ್ಲೆಯಲ್ಲಿ ಶೇ.೬೪.೦೯ರಷ್ಟು ನಮೂನೆಗಳನ್ನು ವಿತರಿಸಲಾಗಿದೆ.

ಮತದಾರರ ಪಟ್ಟಿಯನ್ನು ಹೆಚ್ಚು ನಿಖರ ಹಾಗೂ ದೋಷರಹಿತಗೊಳಿಸುವ ಉದ್ದೇಶದಿಂದ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ತೆರಳಿ ಗಣತಿ ನಮೂನೆಗಳನ್ನು ವಿತರಿಸುತ್ತಿದ್ದು, ಇದುವರೆಗೆ ಜಿಲ್ಲೆಯಲ್ಲಿ ಒಟ್ಟು ೪,೬೮,೬೫೭ ಮತದಾರರ ಪೈಕಿ ೩,೦೦,೩೬೯ ಮಂದಿಗೆ ನಮೂನೆಗಳನ್ನು ವಿತರಿಸಲಾಗಿದೆ.

ಜೊತೆಗೆ ೯,೧೨೫ ನಮೂನೆಗಳನ್ನು ಡಿಜಿಟಲೀಕರಣ ಮಾಡಲಾಗಿದ್ದು, ಇದು ಒಟ್ಟು ಮತದಾರರ ಶೇ.೧.೯೫ ರಷ್ಟಾಗಿದೆ. ಜೂ.೩೦ರಿಂದ ಆರಂಭಗೊಂಡಿರುವ ಈ ವಿಶೇಷ ಅಭಿಯಾನ ಜು.೨೯ರವರೆಗೆ ಮುಂದುವರಿಯಲಿದೆ. ಜಿಲ್ಲೆಯ ಮಡಿಕೇರಿ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ೫೫೨ ಮತಗಟ್ಟೆಗಳಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಮತದಾರರ ವಿವರಗಳನ್ನು ಪರಿಶೀಲಿಸುವುದರೊಂದಿಗೆ ಗಣತಿ ನಮೂನೆಗಳನ್ನು ವಿತರಿಸುತ್ತಿದ್ದಾರೆ.

ಮತದಾರರು ನಮೂನೆಗಳನ್ನು ಭರ್ತಿಮಾಡಿ ಸಲ್ಲಿಸಲು ಹಾಗೂ ಆನ್‌ಲೈನ್ ನಲ್ಲಿಯೂ ಮಾಹಿತಿಯನ್ನು ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳ ಪೈಕಿ ಮಡಿಕೇರಿ ಕ್ಷೇತ್ರದಲ್ಲಿ ೨,೩೮,೪೪೭ ಮತದಾರರಿದ್ದು, ೧,೫೯,೨೨೦ ಮಂದಿಗೆ (ಶೇ.೬೬.೭೭) ನಮೂನೆ ವಿತರಿಸಲಾಗಿದೆ. ಈ ಕ್ಷೇತ್ರದಲ್ಲಿ ಈಗಾಗಲೇ ೬,೬೬೨ ನಮೂನೆಗಳನ್ನು ಡಿಜಿಟಲೀಕರಣ ಮಾಡಲಾಗಿದೆ. ವಿರಾಜಪೇಟೆ ಕ್ಷೇತ್ರದಲ್ಲಿ ೨,೩೦,೨೧೦ ಮತದಾರರಿದ್ದು, ೧,೪೧,೧೪೯ ಮಂದಿಗೆ (ಶೇ.೬೧.೩೧) ನಮೂನೆ ವಿತರಿಸಲಾಗಿದ್ದು, ೨,೪೬೩ ನಮೂನೆಗಳನ್ನು ಡಿಜಿಟಲೀಕರಣ ಮಾಡಲಾಗಿದೆ. ಎರಡು ಕ್ಷೇತ್ರಗಳಲ್ಲೂ ಸಮಾನ ಪ್ರಮಾಣದಲ್ಲಿ ಕಾರ್ಯ ಪ್ರಗತಿಯಲ್ಲಿದೆ.

ತಾಲ್ಲೂಕುವಾರು ಪ್ರಗತಿಯನ್ನು ಗಮನಿಸಿದರೆ, ಸೋಮವಾರಪೇಟೆ ತಾಲ್ಲೂಕಿನಲ್ಲಿ ಶೇ.೬೯.೫೬ ರಷ್ಟು ನಮೂನೆ ವಿತರಣೆಯೊಂದಿಗೆ ಮೊದಲ ಸ್ಥಾನದಲ್ಲಿದೆ. ಉಳಿದಂತೆ ಕುಶಾಲನಗರ ತಾಲ್ಲೂಕಿನಲ್ಲಿ ಶೇ.೬೮.೯೭, ಮಡಿಕೇರಿ ತಾಲ್ಲೂಕಿನಲ್ಲಿ ಶೇ.೫೮.೭೨ರಷ್ಟು ನಮೂನೆ ವಿತರಿಸಲಾಗಿದೆ.

ಮಡಿಕೇರಿ ತಾಲ್ಲೂಕಿಗೆ ಸಂಬಂಧಿಸಿದಂತೆ ಮಡಿಕೇರಿ ತಾಲ್ಲೂಕು ವ್ಯಾಪ್ತಿಯಲ್ಲಿ ಶೇ.೬೫.೨೨, ವಿರಾಜಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಶೇ.೬೬.೦೬, ಪೊನ್ನಂಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಶೇ. ೫೩.೬೬ರಷ್ಟು ನಮೂನೆ ವಿತರಿಸಲಾಗಿದೆ. ಕೆಲವು ಗ್ರಾಮೀಣ ಹಾಗೂ ದುರ್ಗಮ ಪ್ರದೇಶಗಳಲ್ಲಿಯೂ ಅಧಿಕಾರಿಗಳು ಮನೆ ಮನೆಗೆ ತೆರಳಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇದುವರೆಗೆ ನಡೆದ ಪರಿಶೀಲನೆಯಲ್ಲಿ ೪೯ ಮಂದಿ ಮತದಾರರು ಸ್ಥಳಾಂತರಗೊಂಡಿರುವುದು, ೧೭೯ ಮಂದಿ ಮೃತಪಟ್ಟಿರುವುದು, ೧೮ ನಕಲಿ ಮತದಾರರ ನೋಂದಣಿಗಳು ಹಾಗೂ ೨ ಇತರೆ ಪ್ರಕರಣ ಪತ್ತೆಯಾಗಿದೆ. ಈ ಮಾಹಿತಿಗಳನ್ನು ದಾಖಲಿಸಿ ಮುಂದಿನ ಪರಿಶೀಲನೆಗೆ ಕಳುಹಿಸಲಾಗಿದೆ. ಪರಿಷ್ಕರಣೆ ಪೂರ್ಣಗೊಂಡ ಬಳಿಕ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸುವ ಪ್ರಕ್ರಿಯೆ ನಡೆಯಲಿದೆ.

” ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವನ್ನು ಕೈಗೊಳ್ಳಲಾಗಿದೆ. ಮೊದಲೆರಡು ದಿನಗಳು ಸ್ವಲ್ಪ ನಿಧಾನವಾಗಿ ಸಾಗಿದ್ದ ಎಸ್‌ಐಆರ್ ಪ್ರಕ್ರಿಯೆ ಈಗ ಚುರುಕುಗೊಂಡಿದೆ. ಇಲ್ಲಿಯವರೆಗೆ ಜಿಲ್ಲೆಯಲ್ಲಿ ಶೇ.೬೪.೦೯ರಷ್ಟು ನಮೂನೆಗಳನ್ನು ವಿತರಿಸಲಾಗಿದೆ. ಬಿಎಲ್‌ಒಗಳು ಮನೆ ಮನೆಗೆ ತೆರಳಿ ನಮೂನೆ ವಿತರಣೆಯಲ್ಲಿ ತೊಡಗಿದ್ದಾರೆ. ಸಾರ್ವಜನಿಕರು ಅಗತ್ಯ ಸಹಕಾರ ನೀಡಬೇಕು.”

ಕೆ.-ಎಸ್.ಜೆ.ಸೋಮಶೇಖರ್, ಜಿಲ್ಲಾಧಿಕಾರಿ, ಕೊಡಗು

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಾಣಿಕೆ ದುರುಪಯೋಗ ತಡೆಗೆ ಸರ್ಕಾರ ಮುಂದಾಗಲಿ

ಅಯೋಧ್ಯೆಯ ರಾಮ ಮಂದಿರವೂ ಸೇರಿದಂತೆ ದೇಶದ ವಿವಿಧ ದೇವಾಲಯಗಳಲ್ಲಿ ಕಾಣಿಕೆ ಹಣ, ದೇವರಿಗೆ ಭಕ್ತರು ಕಾಣಿಕೆ ರೂಪದಲ್ಲಿ ಸಲ್ಲಿಸುವ ಚಿನ್ನಾಭರಣಗಳು…

25 seconds ago

ಓದುಗರ ಪತ್ರ: ಮರದ ಕೆಳಗಿರುವ ವಿದ್ಯುತ್ ಕೇಬಲ್ ತೆರವುಗೊಳಿಸಿ

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದವರು ಮೈಸೂರು ನಗರದ ವಿವಿಧೆಡೆ ಭೂಗತ ಕೇಬಲ್‌ಗಳನ್ನು ಅಳವಡಿಸುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಸೆಸ್ಕ್ ಯುಜಿ ಕೇಬಲ್…

2 mins ago

ಝೆನ್‌ ಕತೆಗಳು: ಸೀಜೋಳ ನಿಜವಾದ ಆತ್ಮ ಯಾವುದು?

ಸಂಗ್ರಹ ಮತ್ತು ಅನುವಾದ ಚೇತನಾ ತೀರ್ಥಹಳ್ಳಿ  ಚೋಕನ್ ಎಂಬವನಿಗೆ ಸೀಜೋ ಎಂಬ ಸುಂದರ ಮಗಳಿದ್ದಳು. ಚೋಕನ್ ತನ್ನ ದೂರದ ಸಂಬಂಧಿಯಾದ…

5 mins ago

ಸಾರಿಗೆ ಬಸ್ ಸೇವೆ ಕಡಿತ; ಪ್ರಯಾಣಿಕರ ಆಕ್ರೋಶ

ದಾಸೇಗೌಡ ಸರಗೂರು ಸರಗೂರಿಗೆ ಹೆಚ್ಚಿನ ಬಸ್‌ಗಳ ಸೌಕರ್ಯ ಕಲ್ಪಿಸಲು ಸಾರ್ವಜನಿಕರ ಆಗ್ರಹ ಸರಗೂರು: ಎಚ್.ಡಿ.ಕೋಟೆಯಲ್ಲಿರುವ ಕೆಎಸ್‌ಆರ್‌ಟಿಸಿ ಘಟಕದಿಂದ ಇತ್ತೀಚಿನವರೆಗೂ ಸರಗೂರು-ಹೆಚ್.ಡಿ…

18 mins ago

ಮಡಿಕೇರಿ: ವಿದ್ಯುತ್ ತಂತಿ ಮೇಲೆ ಮರ ಬೀಳಿಸಿ ಕಾಡಾನೆಗಳ ಪುಂಡಾಟ

ಮಡಿಕೇರಿ: ಕೊಡಗಿನಲ್ಲಿ ವನ್ಯಜೀವಿ–ಮಾನವ ಸಂಘರ್ಷ ಮತ್ತೆ ಮುಂದುವರಿದಿದೆ. ಈ ಬಾರಿ ಕಾಡಾನೆಗಳ ಬುದ್ಧಿವಂತಿಕೆ ಹಾಗೂ ಉಪಾಯದಿಂದ ನಡೆದ ಘಟನೆ ಗ್ರಾಮಸ್ಥರಲ್ಲಿ…

13 hours ago

ಶ್ರೀಲಂಕಾ ಜೈಲಿನಲ್ಲಿ ಗ್ಯಾಂಗ್‌ ವಾರ್:‌ 25 ಕೈದಿಗಳು ಸಾವು

ಕೊಲಂಬೊ: ಶ್ರೀಲಂಕಾದ ಜೈಲಿನಲ್ಲಿ ಕೈದಿಗಳ ಎರಡು ಗುಂಪಿನ ಮಧ್ಯೆ ಗಲಾಟೆ ನಡೆದ ಪರಿಣಾಮ 25 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು…

14 hours ago