Andolana originals

ಜಂಬೂ ಸವಾರಿ ವೀಕ್ಷಣೆ ವೇಳೆ 6 ಮಂದಿ ಅಸ್ವಸ್ಥ

ನೂಕು ನುಗ್ಗಲಿಗೆ ಸಿಲುಕಿದ ಮಹಿಳೆಯರು, ಮಕ್ಕಳು; ತಕ್ಷಣವೇ ಅಸ್ವಸ್ಥರು ಆಸ್ಪತ್ರೆಗೆ ದಾಖಲು
ಎಸ್.ಪ್ರಶಾಂತ್
ಮೈಸೂರು: ದಸರಾ ಜಂಬೂಸವಾರಿ ಮೆರವಣಿಗೆ ಸಂದರ್ಭದಲ್ಲಿ ವಿವಿಧ ಕಡೆಗಳಲ್ಲಿ ನಡೆದ ನೂಕು ನುಗ್ಗಲಿಗೆ ಸಿಲುಕಿ ಅರು ಮಂದಿ ಅಸ್ವಸ್ಥಗೊಂಡರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಂಬ್ಯುಲೆನ್ಸ್ ಚಾಲಕ ಹಾಗೂ ಸಿಬ್ಬಂದಿ ತಕ್ಷಣವೇ ಪ್ರಥಮ ಚಿಕಿತ್ಸೆ ನೀಡಿ ನಂತರ ಕೆ.ಆರ್.ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕರೆದೋಯ್ದರು.

ಮಹಿಳೆಯರು ಮತ್ತು ಮಕ್ಕಳ ರಕ್ಷಣೆ: ಕೆ.ಆರ್.ವೃತ್ತ, ಸರ್ಕಾರಿ ಆಯುರ್ವೇದ ಆಸ್ಪತ್ರೆ ಮತ್ತು ಜಾಮರಾಜೇಂದ್ರ ವೃತ್ತ, ಚಿಕ್ಕಗಡಿಯಾರ ವೃತ್ತ, ನಗರ ಬಸ್ ನಿಲ್ದಾಣದ ಕಾಂಪೌಂಡ್ ಸುತ್ತಮುತ್ತ ನೂಕು ನುಗ್ಗಲಿನಲ್ಲಿ ಸಿಲುಕಿದ ಮಹಿಳೆಯರು ಮತ್ತು ಮಕ್ಕಳನ್ನು ಪೊಲೀಸರು ಮತ್ತು ಗೃಹರಕ್ಷಕ ದಳದವರು ರಕ್ಷಿಸಿ ಬ್ಯಾರಿಕೇಡ್‌ನ ಮುಂಭಾಗ ಕೂರಿಸಿ ಮೆರವಣಿಗೆ ವೀಕ್ಷಿಸಲು ಅನುವು ಮಾಡಿಕೊಟ್ಟರು.

ತಳ್ಳಾಡಿದವರಿಗೆ ಲಾಠಿ ರುಚಿ: ಕೆ.ಆರ್.ವೃತ್ತ, ಕೋಟೆ, ಅಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ, ಚಿಕ್ಕ ಗಡಿಯಾರದ ಬಳಿ ನೂಕಾಟ ಕಂಡುಬಂತು. ಇದರಿಂದ ಮಹಿಳೆಯರು, ಹಿರಿಯರು ಹಾಗೂ ಮಕ್ಕಳು ಸಮಸ್ಯೆಗೆ ಸಿಲುಕಿದರು. ತಕ್ಷಣ ಸ್ಥಳದಲ್ಲಿದ್ದ ಪೊಲೀಸರು ಲಾಠಿ ಬೀಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು.

ಗುಂಪಿನಲ್ಲಿ ಅಲ್ಲಲ್ಲಿ ಸುಖಾ ಸುಮ್ಮನೆ ನೂಕುನುಗ್ಗಲು ಉಂಟು ಮಾಡಿ ಮಹಿಳೆಯರನ್ನು ಚುಡಾಯಿಸುತ್ತಿದ್ದ ಯುವಕರ ಗುಂಪಿಗೆ ಪೊಲೀಸರು ಲಾಠಿ ರುಚಿ ತೋರಿಸಿದರು.

ಜನ ಜಂಗುಲಿ ನಿಯಂತ್ರಿಸಲು ಪೊಲೀಸರು ಆಗಾಗ ಲಾಠಿಯನ್ನು ಬೀಸಿ ಬೆದರಿಸುತ್ತಿದ್ದ ದೃಶ್ಯ ಕಂಡುಬಂದಿತು.

ತುರ್ತು ಸಂದರ್ಭದಲ್ಲಿ ಯಾವುದೇ ಸಮಸ್ಯೆ ಆಗಬಾರದೆಂದು ಡಿಎಚ್‌ಒ ಅವರು ಮುನ್ನೆಚ್ಚರಿಕೆ ವಹಿಸಿದ್ದು, ಜಂಬೂಸವಾರಿ ನೋಡುವ ಸಂದರ್ಭದಲ್ಲಿ ಅಸ್ವಸ್ಥರಾದ 6 ಮಂದಿಗೆ ಸ್ಥಳದಲ್ಲಿಯೇ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಕೆ.ಆರ್.ಆಸ್ಪತ್ರೆಗೆ ದಾಖಲಿಸಿದ್ದೇವೆ.

-ವಿನೋದ್‌ ಕುಮಾರ್, ಆಂಬ್ಯುಲೆನ್ಸ್‌ ಚಾಲಕ

ಆಂದೋಲನ ಡೆಸ್ಕ್

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

2 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago