Andolana originals

ʻಆಂದೋಲನ ಭವನʼ ಉದ್ಘಾಟಿಸಿದ್ದ ಎಸ್‌ಎಂ ಕೃಷ್ಣ

ಮೈಸೂರು: ನಗರದ ವಿಶ್ವೇಶ್ವರ ನಗರದಲ್ಲಿ ನೂತನ ವಾಗಿ ನಿರ್ಮಿಸಿದ್ದ ‘ಆಂದೋಲನ ಭವನ’ ಹಾಗೂ ಮುದ್ರಣ ಯಂತ್ರದ ಉದ್ಘಾಟನೆಯನ್ನು ಮುಖ್ಯಮಂತ್ರಿ ಎಸ್. ಎಂ ಕೃಷ್ಣ ಅವರು ೨೦೦೧ರ ಡಿಸೆಂಬರ್ ೧೮ರಂದು ನೆರವೇರಿಸಿದ್ದರು.

ಅಂದು ಅವರು ಆಡಿದ ಮಾತುಗಳ ಆಯ್ದ ಭಾಗ ಇಲ್ಲಿದೆ. ಒಂದು ಪತ್ರಿಕೆ ಜನ ಸಾಮಾನ್ಯರ ಮನಸ್ಸಿನಲ್ಲಿ ಶಾಶ್ವತವಾದಂಥ ಛಾಪನ್ನು ಮೂಡಿಸಬೇಕಾಗಿದ್ದರೆ ಆ ಪತ್ರಿಕೆಯ ದೃಷ್ಟಿ ಮತ್ತು ಅದನ್ನು ನಡೆಸುವ ಜನಗಳ ಮನೋದೃಷ್ಟಿ ಬಹಳ ಸೂಕ್ಷ್ಮವಾಗಿರುತ್ತದೆ. ‘ಆಂದೋಲನ’ ಸಣ್ಣ ಪತ್ರಿಕೆಯಾಗಿ ಪ್ರಾರಂಭವಾಗಿ ಇದು ಅಂತರ ಜಿಲ್ಲಾ ಮಟ್ಟಕ್ಕೆ ಬೆಳೆದು ಸಣ್ಣ ಅಥವಾ ಪ್ರಾದೇಶಿಕ ಪತ್ರಿಕೆಗಳು ಸಮಾಜಕ್ಕೆ ಬಹುದೊಡ್ಡ ಕೆಲಸವನ್ನು ಮಾಡಬಹುದೆಂದು ತೋರಿಸಿದೆ, ಇಂದು ನಮ್ಮ ನಿಮ್ಮೆಲ್ಲರನ್ನೂ ಒಂದೆಡೆ ತಂದಿರುವ ರಾಜಶೇಖರ ಕೋಟಿ ಮತ್ತು ಆಂದೋಲನ ಬಳಗ.

ಭೂ ಸುಧಾರಣೆ, ಬ್ಯಾಂಕುಗಳ ರಾಷ್ಟ್ರೀಕರಣ ಹಾಗೂ ರಾಜಮಹಾರಾಜರಿಗೆ ನೀಡುತ್ತಿದ್ದ ರಾಜಧನವನ್ನು ರದ್ದುಪಡಿಸುವುದರ ಬಗ್ಗೆ ಅಂದಿನ ಬಹುಪಾಲು ಸಮಾಜವಾದಿಗಳು ಪತ್ರಿಕೆಗಳಲ್ಲಿ ಬರೆಯುತ್ತಿದ್ದರು. ಅಂದಿನ ಸಮಾಜವಾದಿಯ ಪ್ರಮುಖ ರೂವಾರಿಗಳಾದ ಡಾ. ಲೋಹಿಯಾ, ಜೆಪಿ, ಅಶೋಕ್ ಮೆಹ್ರಾ ಇಂಥವರು ಇದಕ್ಕೆ ಬಹು ಗಂಭೀರವಾದ ಚಾಲನೆ ನೀಡಿದರು.

ಸಣ್ಣ ಪತ್ರಿಕೆಯನ್ನು ನಡೆಸಿಕೊಂಡು ಬರುವುದು ಕಷ್ಟ. ಆದರೆ ಅದರಲ್ಲಿ ಯಶಸ್ವಿಯಾಗುವವರು ಜನಾದರಣೆಗೆ ಒಳಗಾಗಲೇಬೇಕು ಎನ್ನುವಾಗ ಪ್ರತ್ಯಕ್ಷ ನಿದರ್ಶನವಾಗಿ ರಾಜಶೇಖರ ಕೋಟಿ ಅವರು ನಮ್ಮ ಮುಂದೆ ಇದ್ದಾರೆ.

ಇಂತಹ ಪತ್ರಿಕೆಗಳು ಸಮರ್ಥವಾದ ರೀತಿಯಲ್ಲಿ ಆ ಪ್ರದೇಶದ ಜನರ ನಿರೀಕ್ಷೆ- ಆಶೋತ್ತರಗಳನ್ನು ಅತ್ಯಂತ ಪ್ರಭಾವಶಾಲಿಯಾಗಿ ಪತ್ರಿಕೋದ್ಯಮ ಜಿಲ್ಲಾ ಮಟ್ಟದಲ್ಲಿ ಒಂದು ಉದ್ಯಮ ಮಾತ್ರವಾಗಿಯಲ್ಲದೆ ಜನಾಭಿಮಾನದ ಸಂಕೇತವೂ ಆಗಿದೆ. ಸಾಹಿತಿ ದೇವನೂರ ಮಹಾದೇವ, ವಿ. ಶ್ರೀನಿವಾಸ ಪ್ರಸಾದ್, ‘ಆಂದೋಲನ’ ದಿನಪತ್ರಿಕೆಯ ಸಂಪಾದಕರಾದ ರಾಜಶೇಖರ ಕೋಟಿ, ನಿರ್ಮಲಾ ಕೋಟಿ ಹಾಜರಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಮನಗರ: ಲಾರಿಗೆ ಕಾರು ಡಿಕ್ಕಿ: ಮೂವರು ದುರ್ಮರಣ

ರಾಮನಗರ: ಲಾರಿ ಹಾಗೂ ಕಾರಿನ ನಡುವೆ ಭೀಖರ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು-ಕನಕಪುರ…

30 mins ago

ಕುವೈತ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಇರಾನ್‌ ದಾಳಿ

ಕುವೈತ್‌ ಅಂತಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಇರಾನ್‌ ದಾಳಿ ಮಾಡಿದೆ. ಕೊಲ್ಲಿಯಾದ್ಯಂತ ಇರಾನ್‌ ತನ್ನ ದಾಳಿಯನ್ನು ಹೆಚ್ಚಿಸುತ್ತಿದ್ದು, ಕುವೈತ್‌ ಅಂತರಾಷ್ಟ್ರೀಯ…

40 mins ago

ಪಕ್ಕದ ಊರಿಗೆ ಪೂಜೆಗೆ ಹೋಗಿದ್ದ ಅರ್ಚಕ ನಿಗೂಢವಾಗಿ ಶವವಾಗಿ ಪತ್ತೆ

ಮಂಡ್ಯ: ಪಕ್ಕದ ಊರಿಗೆ ಪೂಜೆಗೆಂದು ಹೋದ ಅರ್ಚಕ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಶ್ರೀರಂಗಪಟ್ಟಣದ ಮರಳಗಾಲ ಗ್ರಾಮದಲ್ಲಿ…

49 mins ago

ಓದುಗರ ಪತ್ರ: ಬೀದಿ ನಾಯಿಗಳ ಹಾವಳಿ ತಪ್ಪಿಸಿ

ಮೈಸೂರು ನಗರದ ರಿಂಗ್ ರಸ್ತೆಯಲ್ಲಿರುವ ಹಂಚ್ಯಾ-ಸಾತಗಳ್ಳಿ ‘ಬಿ’ ವಲಯದಲ್ಲಿ (ವಿಟಿಯು ಕಾಲೇಜು ಬಳಿ) ಬೀದಿ ನಾಯಿಗಳ ಹಾವಳಿ ವಿಪರೀತವಾಗಿದ್ದು, ಸ್ಥಳೀಯ…

2 hours ago

ಓದುಗರ ಪತ್ರ: ತಾಣ..ಬಾಣ !

ತಾಣ..ಬಾಣ ! ಬೇಕಿದ್ದರೆ ಬಿಟ್ಟೇವು ಒಂದಲ್ಲ, ಎರಡು ದಿನ.. ಶಾಲಾ ತಾಣ! ಬಿಟ್ಟಿರುವುದು ಹೇಗೆ ? ಸಾಮಾಜಿಕ ಜಾಲತಾಣ ಎಂಬುದು…

2 hours ago

ಓದುಗರ ಪತ್ರ: ಬೋಗಾದಿ- ಗದ್ದಿಗೆ ಜೋಡಿ ರಸ್ತೆಯಲ್ಲಿ ಬ್ಯಾರಿಕೇಡ್ ಅಳವಡಿಸಿ

ಮೈಸೂರಿನ ಬೋಗಾದಿ -ಗದ್ದಿಗೆ ಜೋಡಿ ರಸ್ತೆಯಲ್ಲಿ ವಾಹನಗಳ ಸಂಚಾರ ಹೆಚ್ಚಾಗಿದ್ದರಿಂದ ದಾಸನಕೊಪ್ಪಲು ಬಸ್ ನಿಲ್ದಾಣದ ಬಳಿ ಎರಡು ಕಡೆಯೂ ಒಂದು…

2 hours ago