Andolana originals

ʻಆಂದೋಲನ ಭವನʼ ಉದ್ಘಾಟಿಸಿದ್ದ ಎಸ್‌ಎಂ ಕೃಷ್ಣ

ಮೈಸೂರು: ನಗರದ ವಿಶ್ವೇಶ್ವರ ನಗರದಲ್ಲಿ ನೂತನ ವಾಗಿ ನಿರ್ಮಿಸಿದ್ದ ‘ಆಂದೋಲನ ಭವನ’ ಹಾಗೂ ಮುದ್ರಣ ಯಂತ್ರದ ಉದ್ಘಾಟನೆಯನ್ನು ಮುಖ್ಯಮಂತ್ರಿ ಎಸ್. ಎಂ ಕೃಷ್ಣ ಅವರು ೨೦೦೧ರ ಡಿಸೆಂಬರ್ ೧೮ರಂದು ನೆರವೇರಿಸಿದ್ದರು.

ಅಂದು ಅವರು ಆಡಿದ ಮಾತುಗಳ ಆಯ್ದ ಭಾಗ ಇಲ್ಲಿದೆ. ಒಂದು ಪತ್ರಿಕೆ ಜನ ಸಾಮಾನ್ಯರ ಮನಸ್ಸಿನಲ್ಲಿ ಶಾಶ್ವತವಾದಂಥ ಛಾಪನ್ನು ಮೂಡಿಸಬೇಕಾಗಿದ್ದರೆ ಆ ಪತ್ರಿಕೆಯ ದೃಷ್ಟಿ ಮತ್ತು ಅದನ್ನು ನಡೆಸುವ ಜನಗಳ ಮನೋದೃಷ್ಟಿ ಬಹಳ ಸೂಕ್ಷ್ಮವಾಗಿರುತ್ತದೆ. ‘ಆಂದೋಲನ’ ಸಣ್ಣ ಪತ್ರಿಕೆಯಾಗಿ ಪ್ರಾರಂಭವಾಗಿ ಇದು ಅಂತರ ಜಿಲ್ಲಾ ಮಟ್ಟಕ್ಕೆ ಬೆಳೆದು ಸಣ್ಣ ಅಥವಾ ಪ್ರಾದೇಶಿಕ ಪತ್ರಿಕೆಗಳು ಸಮಾಜಕ್ಕೆ ಬಹುದೊಡ್ಡ ಕೆಲಸವನ್ನು ಮಾಡಬಹುದೆಂದು ತೋರಿಸಿದೆ, ಇಂದು ನಮ್ಮ ನಿಮ್ಮೆಲ್ಲರನ್ನೂ ಒಂದೆಡೆ ತಂದಿರುವ ರಾಜಶೇಖರ ಕೋಟಿ ಮತ್ತು ಆಂದೋಲನ ಬಳಗ.

ಭೂ ಸುಧಾರಣೆ, ಬ್ಯಾಂಕುಗಳ ರಾಷ್ಟ್ರೀಕರಣ ಹಾಗೂ ರಾಜಮಹಾರಾಜರಿಗೆ ನೀಡುತ್ತಿದ್ದ ರಾಜಧನವನ್ನು ರದ್ದುಪಡಿಸುವುದರ ಬಗ್ಗೆ ಅಂದಿನ ಬಹುಪಾಲು ಸಮಾಜವಾದಿಗಳು ಪತ್ರಿಕೆಗಳಲ್ಲಿ ಬರೆಯುತ್ತಿದ್ದರು. ಅಂದಿನ ಸಮಾಜವಾದಿಯ ಪ್ರಮುಖ ರೂವಾರಿಗಳಾದ ಡಾ. ಲೋಹಿಯಾ, ಜೆಪಿ, ಅಶೋಕ್ ಮೆಹ್ರಾ ಇಂಥವರು ಇದಕ್ಕೆ ಬಹು ಗಂಭೀರವಾದ ಚಾಲನೆ ನೀಡಿದರು.

ಸಣ್ಣ ಪತ್ರಿಕೆಯನ್ನು ನಡೆಸಿಕೊಂಡು ಬರುವುದು ಕಷ್ಟ. ಆದರೆ ಅದರಲ್ಲಿ ಯಶಸ್ವಿಯಾಗುವವರು ಜನಾದರಣೆಗೆ ಒಳಗಾಗಲೇಬೇಕು ಎನ್ನುವಾಗ ಪ್ರತ್ಯಕ್ಷ ನಿದರ್ಶನವಾಗಿ ರಾಜಶೇಖರ ಕೋಟಿ ಅವರು ನಮ್ಮ ಮುಂದೆ ಇದ್ದಾರೆ.

ಇಂತಹ ಪತ್ರಿಕೆಗಳು ಸಮರ್ಥವಾದ ರೀತಿಯಲ್ಲಿ ಆ ಪ್ರದೇಶದ ಜನರ ನಿರೀಕ್ಷೆ- ಆಶೋತ್ತರಗಳನ್ನು ಅತ್ಯಂತ ಪ್ರಭಾವಶಾಲಿಯಾಗಿ ಪತ್ರಿಕೋದ್ಯಮ ಜಿಲ್ಲಾ ಮಟ್ಟದಲ್ಲಿ ಒಂದು ಉದ್ಯಮ ಮಾತ್ರವಾಗಿಯಲ್ಲದೆ ಜನಾಭಿಮಾನದ ಸಂಕೇತವೂ ಆಗಿದೆ. ಸಾಹಿತಿ ದೇವನೂರ ಮಹಾದೇವ, ವಿ. ಶ್ರೀನಿವಾಸ ಪ್ರಸಾದ್, ‘ಆಂದೋಲನ’ ದಿನಪತ್ರಿಕೆಯ ಸಂಪಾದಕರಾದ ರಾಜಶೇಖರ ಕೋಟಿ, ನಿರ್ಮಲಾ ಕೋಟಿ ಹಾಜರಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಜನಪ್ರತಿನಿಧಿಗಳಿಂದಲೇ ಕಾನೂನು ಉಲ್ಲಂಘನೆ

ರಾಜಕಾರಣಿಗಳು ಪ್ರತಿನಿತ್ಯ ತಮ್ಮ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವ, ವೈಯಕ್ತಿಕ ಪ್ರಚಾರ ಸಂಬಂಧ ಸಾರ್ವಜನಿಕ ಸ್ಥಳಗಳಲ್ಲಿ ಫ್ಲೆಕ್ಸ್, ಪೋಸ್ಟರ್, ಬ್ಯಾನರ್‌ಗಳನ್ನು ಅಳವಡಿಸಿ…

29 mins ago

ಓದುಗರ ಪತ್ರ: ಗಗನಕ್ಕೇರುತ್ತಿರುವ ಚಿನ್ನ, ಬೆಳ್ಳಿ ಬೆಲೆ

ಕಳೆದ ೨೫ ವರ್ಷಗಳಲ್ಲಿ ಷೇರುಪೇಟೆ ಸೇರಿದಂತೆ ಉಳಿದೆಲ್ಲ ಸ್ಥಿರಾಸ್ತಿಗಳ ಮೇಲಿನ ಹೂಡಿಕೆಗಿಂತ ಚಿನ್ನ ಮತ್ತು ಬೆಳ್ಳಿಯ ಮೇಲಿನ ಹೂಡಿಕೆ ಅತಿ…

32 mins ago

ಓದುಗರ ಪತ್ರ: ಕೆ.ಆರ್.ಆಸ್ಪತ್ರೆ ಆವರಣದಲ್ಲಿ ಕೋತಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಕೆ.ಆರ್. ಆಸ್ಪತ್ರೆಯ ಕಲ್ಲು ಬಿಲ್ಡಿಂಗ್ ಬಳಿ ಕೋತಿಗಳ ಹಾವಳಿ ಮಿತಿ ಮೀರಿದ್ದು, ರೋಗಿಗಳ ಸಂಬಂಧಿಕರು ತರುವ ಊಟ, ತಿಂಡಿ…

35 mins ago

ಓದುಗರ ಪತ್ರ: ಶ್ರೀಕಂಠೇಶ್ವರ ದೇಗುಲದಲ್ಲಿ ಹಿರಿಯ ನಾಗರಿಕರಿಗೆ ಪ್ರತ್ಯೇಕ ಸಾಲು ಇರಲಿ

ದಕ್ಷಿಣಕಾಶಿ ಎಂದೇ ಪ್ರಖ್ಯಾತವಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ದೇಶ ವಿದೇಶಗಳಿಂದ ಭಕ್ತಾದಿಗಳು ಆಗಮಿಸುತ್ತಾರೆ. ಸರ್ಕಾರಿ ರಜಾ ದಿನಗಳಲ್ಲಿ ಭಕ್ತರ ಸಂಖ್ಯೆ…

37 mins ago

ರಾಜಾಸೀಟ್‌ನಲ್ಲಿ ಸ್ಥಾಪನೆಯಾಗಲಿದೆ ಫುಡ್‌ ಕೋರ್ಟ್‌

ನವೀನ್ ಡಿಸೋಜ ಖಾಸಗಿ ಸಹಭಾಗಿತ್ವದಲ್ಲಿ ಆರಂಭಕ್ಕೆ ಸಚಿವ ಸಂಪುಟದಲ್ಲಿ ಒಪ್ಪಿಗೆ; ಟ್ರಾಫಿಕ್ ಕಿರಿಕಿರಿಗೂ ಕಡಿವಾಣ ಮಡಿಕೇರಿ: ನಗರದ ರಾಜಾಸೀಟ್ ಆವರಣದಲ್ಲಿ…

41 mins ago

ಜಲಾಶಯಗಳ ಹಿನ್ನೀರಿನಲ್ಲಿ ರಿವರ್ ಟರ್ನ್ ಪಕ್ಷಿಗಳ ಕಲರವ

ಮಂಜು ಕೋಟೆ ಕೋಟೆ: ಹಿಮಾಲಯ, ಇನ್ನಿತರ ಪ್ರದೇಶಗಳಿಂದ ವಲಸೆ ಬಂದಿರುವ ಹಕ್ಕಿಗಳು; ಪರಿಸರ ಪ್ರಿಯರಲ್ಲಿ ಸಂತ ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿರುವ ಜಲಾಶಯಗಳ…

47 mins ago