Andolana originals

ʻಆಂದೋಲನ ಭವನʼ ಉದ್ಘಾಟಿಸಿದ್ದ ಎಸ್‌ಎಂ ಕೃಷ್ಣ

ಮೈಸೂರು: ನಗರದ ವಿಶ್ವೇಶ್ವರ ನಗರದಲ್ಲಿ ನೂತನ ವಾಗಿ ನಿರ್ಮಿಸಿದ್ದ ‘ಆಂದೋಲನ ಭವನ’ ಹಾಗೂ ಮುದ್ರಣ ಯಂತ್ರದ ಉದ್ಘಾಟನೆಯನ್ನು ಮುಖ್ಯಮಂತ್ರಿ ಎಸ್. ಎಂ ಕೃಷ್ಣ ಅವರು ೨೦೦೧ರ ಡಿಸೆಂಬರ್ ೧೮ರಂದು ನೆರವೇರಿಸಿದ್ದರು.

ಅಂದು ಅವರು ಆಡಿದ ಮಾತುಗಳ ಆಯ್ದ ಭಾಗ ಇಲ್ಲಿದೆ. ಒಂದು ಪತ್ರಿಕೆ ಜನ ಸಾಮಾನ್ಯರ ಮನಸ್ಸಿನಲ್ಲಿ ಶಾಶ್ವತವಾದಂಥ ಛಾಪನ್ನು ಮೂಡಿಸಬೇಕಾಗಿದ್ದರೆ ಆ ಪತ್ರಿಕೆಯ ದೃಷ್ಟಿ ಮತ್ತು ಅದನ್ನು ನಡೆಸುವ ಜನಗಳ ಮನೋದೃಷ್ಟಿ ಬಹಳ ಸೂಕ್ಷ್ಮವಾಗಿರುತ್ತದೆ. ‘ಆಂದೋಲನ’ ಸಣ್ಣ ಪತ್ರಿಕೆಯಾಗಿ ಪ್ರಾರಂಭವಾಗಿ ಇದು ಅಂತರ ಜಿಲ್ಲಾ ಮಟ್ಟಕ್ಕೆ ಬೆಳೆದು ಸಣ್ಣ ಅಥವಾ ಪ್ರಾದೇಶಿಕ ಪತ್ರಿಕೆಗಳು ಸಮಾಜಕ್ಕೆ ಬಹುದೊಡ್ಡ ಕೆಲಸವನ್ನು ಮಾಡಬಹುದೆಂದು ತೋರಿಸಿದೆ, ಇಂದು ನಮ್ಮ ನಿಮ್ಮೆಲ್ಲರನ್ನೂ ಒಂದೆಡೆ ತಂದಿರುವ ರಾಜಶೇಖರ ಕೋಟಿ ಮತ್ತು ಆಂದೋಲನ ಬಳಗ.

ಭೂ ಸುಧಾರಣೆ, ಬ್ಯಾಂಕುಗಳ ರಾಷ್ಟ್ರೀಕರಣ ಹಾಗೂ ರಾಜಮಹಾರಾಜರಿಗೆ ನೀಡುತ್ತಿದ್ದ ರಾಜಧನವನ್ನು ರದ್ದುಪಡಿಸುವುದರ ಬಗ್ಗೆ ಅಂದಿನ ಬಹುಪಾಲು ಸಮಾಜವಾದಿಗಳು ಪತ್ರಿಕೆಗಳಲ್ಲಿ ಬರೆಯುತ್ತಿದ್ದರು. ಅಂದಿನ ಸಮಾಜವಾದಿಯ ಪ್ರಮುಖ ರೂವಾರಿಗಳಾದ ಡಾ. ಲೋಹಿಯಾ, ಜೆಪಿ, ಅಶೋಕ್ ಮೆಹ್ರಾ ಇಂಥವರು ಇದಕ್ಕೆ ಬಹು ಗಂಭೀರವಾದ ಚಾಲನೆ ನೀಡಿದರು.

ಸಣ್ಣ ಪತ್ರಿಕೆಯನ್ನು ನಡೆಸಿಕೊಂಡು ಬರುವುದು ಕಷ್ಟ. ಆದರೆ ಅದರಲ್ಲಿ ಯಶಸ್ವಿಯಾಗುವವರು ಜನಾದರಣೆಗೆ ಒಳಗಾಗಲೇಬೇಕು ಎನ್ನುವಾಗ ಪ್ರತ್ಯಕ್ಷ ನಿದರ್ಶನವಾಗಿ ರಾಜಶೇಖರ ಕೋಟಿ ಅವರು ನಮ್ಮ ಮುಂದೆ ಇದ್ದಾರೆ.

ಇಂತಹ ಪತ್ರಿಕೆಗಳು ಸಮರ್ಥವಾದ ರೀತಿಯಲ್ಲಿ ಆ ಪ್ರದೇಶದ ಜನರ ನಿರೀಕ್ಷೆ- ಆಶೋತ್ತರಗಳನ್ನು ಅತ್ಯಂತ ಪ್ರಭಾವಶಾಲಿಯಾಗಿ ಪತ್ರಿಕೋದ್ಯಮ ಜಿಲ್ಲಾ ಮಟ್ಟದಲ್ಲಿ ಒಂದು ಉದ್ಯಮ ಮಾತ್ರವಾಗಿಯಲ್ಲದೆ ಜನಾಭಿಮಾನದ ಸಂಕೇತವೂ ಆಗಿದೆ. ಸಾಹಿತಿ ದೇವನೂರ ಮಹಾದೇವ, ವಿ. ಶ್ರೀನಿವಾಸ ಪ್ರಸಾದ್, ‘ಆಂದೋಲನ’ ದಿನಪತ್ರಿಕೆಯ ಸಂಪಾದಕರಾದ ರಾಜಶೇಖರ ಕೋಟಿ, ನಿರ್ಮಲಾ ಕೋಟಿ ಹಾಜರಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹನೂರು: ಮಹದೇಶ್ವರ ಬೆಟ್ಟದಲ್ಲಿ ಇತಿಹಾಸದಲ್ಲೇ ಮೊಟ್ಟ ಮೊದಲಿಗೆ ದಾಖಲೆ ಹುಂಡಿ ಹಣ ಸಂಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದ ಶ್ರೀ…

7 hours ago

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನೋದ್ಯಮಕ್ಕೆ ಉತ್ತೇಜನ: ಉದ್ಯಮಿಗಳ ಜೊತೆ ಕೇಂದ್ರ ಸಚಿವ ಎಚ್‌ಡಿಕೆ ಚರ್ಚೆ

ಬೆಂಗಳೂರು: ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿ ಹಾಗೂ ಅದಕ್ಕೆ ಪೂರಕ ವ್ಯವಸ್ಥೆಯನ್ನು ಸೃಷ್ಟಿಸುವ ದಿಸೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ…

11 hours ago

ಪವಿತ್ರಾ ಗೌಡಗೆ ಬಿಗ್‌ ಶಾಕ್‌ ಕೊಟ್ಟ ಹೈಕೋರ್ಟ್:‌ ಏನದು ಗೊತ್ತಾ.?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರಿಗೆ ಈಗ ಜೈಲಿನ ಊಟವೇ ಗತಿಯಾಗಿದೆ. ಈ…

11 hours ago

ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗಬಾರದು: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್.11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ…

12 hours ago

ಗುಂಡ್ಲುಪೇಟೆ: ಕಾಡಾನೆ ದಾಳಿ ನಿಯಂತ್ರಿಸುವಂತೆ ಅರಣ್ಯ ಇಲಾಖೆಗೆ ಮನವಿ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿ ಹಾಗೂ ಸವಕನಹಳ್ಳಿ ಪಾಳ್ಯದಲ್ಲಿ ಕಾಡಾನೆಗಳ ದಾಳಿಯಿಂದ ಫಸಲು ನಾಶವಾಗುತ್ತಿದ್ದು,…

12 hours ago

ಗುಂಡ್ಲುಪೇಟೆ: ಪಡಗೂರು ಬಳಿ ಎರಡು ಚಿರತೆ ಮರಿಗಳ ರಕ್ಷಣೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಪಡಗೂರು ಗ್ರಾಮದ ಶಿವಕುಮಾರ್ ಎಂಬುವವರ ಜಮೀನಿನಲ್ಲಿ ಎರಡು ಚಿರತೆ ಮರಿಗಳನ್ನು…

12 hours ago