Andolana originals

ʻಆಂದೋಲನ ಭವನʼ ಉದ್ಘಾಟಿಸಿದ್ದ ಎಸ್‌ಎಂ ಕೃಷ್ಣ

ಮೈಸೂರು: ನಗರದ ವಿಶ್ವೇಶ್ವರ ನಗರದಲ್ಲಿ ನೂತನ ವಾಗಿ ನಿರ್ಮಿಸಿದ್ದ ‘ಆಂದೋಲನ ಭವನ’ ಹಾಗೂ ಮುದ್ರಣ ಯಂತ್ರದ ಉದ್ಘಾಟನೆಯನ್ನು ಮುಖ್ಯಮಂತ್ರಿ ಎಸ್. ಎಂ ಕೃಷ್ಣ ಅವರು ೨೦೦೧ರ ಡಿಸೆಂಬರ್ ೧೮ರಂದು ನೆರವೇರಿಸಿದ್ದರು.

ಅಂದು ಅವರು ಆಡಿದ ಮಾತುಗಳ ಆಯ್ದ ಭಾಗ ಇಲ್ಲಿದೆ. ಒಂದು ಪತ್ರಿಕೆ ಜನ ಸಾಮಾನ್ಯರ ಮನಸ್ಸಿನಲ್ಲಿ ಶಾಶ್ವತವಾದಂಥ ಛಾಪನ್ನು ಮೂಡಿಸಬೇಕಾಗಿದ್ದರೆ ಆ ಪತ್ರಿಕೆಯ ದೃಷ್ಟಿ ಮತ್ತು ಅದನ್ನು ನಡೆಸುವ ಜನಗಳ ಮನೋದೃಷ್ಟಿ ಬಹಳ ಸೂಕ್ಷ್ಮವಾಗಿರುತ್ತದೆ. ‘ಆಂದೋಲನ’ ಸಣ್ಣ ಪತ್ರಿಕೆಯಾಗಿ ಪ್ರಾರಂಭವಾಗಿ ಇದು ಅಂತರ ಜಿಲ್ಲಾ ಮಟ್ಟಕ್ಕೆ ಬೆಳೆದು ಸಣ್ಣ ಅಥವಾ ಪ್ರಾದೇಶಿಕ ಪತ್ರಿಕೆಗಳು ಸಮಾಜಕ್ಕೆ ಬಹುದೊಡ್ಡ ಕೆಲಸವನ್ನು ಮಾಡಬಹುದೆಂದು ತೋರಿಸಿದೆ, ಇಂದು ನಮ್ಮ ನಿಮ್ಮೆಲ್ಲರನ್ನೂ ಒಂದೆಡೆ ತಂದಿರುವ ರಾಜಶೇಖರ ಕೋಟಿ ಮತ್ತು ಆಂದೋಲನ ಬಳಗ.

ಭೂ ಸುಧಾರಣೆ, ಬ್ಯಾಂಕುಗಳ ರಾಷ್ಟ್ರೀಕರಣ ಹಾಗೂ ರಾಜಮಹಾರಾಜರಿಗೆ ನೀಡುತ್ತಿದ್ದ ರಾಜಧನವನ್ನು ರದ್ದುಪಡಿಸುವುದರ ಬಗ್ಗೆ ಅಂದಿನ ಬಹುಪಾಲು ಸಮಾಜವಾದಿಗಳು ಪತ್ರಿಕೆಗಳಲ್ಲಿ ಬರೆಯುತ್ತಿದ್ದರು. ಅಂದಿನ ಸಮಾಜವಾದಿಯ ಪ್ರಮುಖ ರೂವಾರಿಗಳಾದ ಡಾ. ಲೋಹಿಯಾ, ಜೆಪಿ, ಅಶೋಕ್ ಮೆಹ್ರಾ ಇಂಥವರು ಇದಕ್ಕೆ ಬಹು ಗಂಭೀರವಾದ ಚಾಲನೆ ನೀಡಿದರು.

ಸಣ್ಣ ಪತ್ರಿಕೆಯನ್ನು ನಡೆಸಿಕೊಂಡು ಬರುವುದು ಕಷ್ಟ. ಆದರೆ ಅದರಲ್ಲಿ ಯಶಸ್ವಿಯಾಗುವವರು ಜನಾದರಣೆಗೆ ಒಳಗಾಗಲೇಬೇಕು ಎನ್ನುವಾಗ ಪ್ರತ್ಯಕ್ಷ ನಿದರ್ಶನವಾಗಿ ರಾಜಶೇಖರ ಕೋಟಿ ಅವರು ನಮ್ಮ ಮುಂದೆ ಇದ್ದಾರೆ.

ಇಂತಹ ಪತ್ರಿಕೆಗಳು ಸಮರ್ಥವಾದ ರೀತಿಯಲ್ಲಿ ಆ ಪ್ರದೇಶದ ಜನರ ನಿರೀಕ್ಷೆ- ಆಶೋತ್ತರಗಳನ್ನು ಅತ್ಯಂತ ಪ್ರಭಾವಶಾಲಿಯಾಗಿ ಪತ್ರಿಕೋದ್ಯಮ ಜಿಲ್ಲಾ ಮಟ್ಟದಲ್ಲಿ ಒಂದು ಉದ್ಯಮ ಮಾತ್ರವಾಗಿಯಲ್ಲದೆ ಜನಾಭಿಮಾನದ ಸಂಕೇತವೂ ಆಗಿದೆ. ಸಾಹಿತಿ ದೇವನೂರ ಮಹಾದೇವ, ವಿ. ಶ್ರೀನಿವಾಸ ಪ್ರಸಾದ್, ‘ಆಂದೋಲನ’ ದಿನಪತ್ರಿಕೆಯ ಸಂಪಾದಕರಾದ ರಾಜಶೇಖರ ಕೋಟಿ, ನಿರ್ಮಲಾ ಕೋಟಿ ಹಾಜರಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

3 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

3 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

3 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

3 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

3 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

3 hours ago