Andolana originals

ಸಣ್ಣ ಕಾಲುವೆಗಳನ್ನು ಮುಚ್ಚಿ ಒತ್ತುವರಿ: ಆರೋಪ

ಹನೂರು: ಉಡುತೊರೆ ಹಳ್ಳ ಜಲಾಶಯದಿಂದ ರೈತರ ಜಮೀನುಗಳಿಗೆ ನೀರು ಹರಿಸಲು ನಿರ್ಮಾಣ ಮಾಡಿದ್ದ ಸಣ್ಣ ಸಣ್ಣ ಕಾಲುವೆಗಳನ್ನು ಮುಚ್ಚಿ ಜಮೀನು ಒತ್ತುವರಿ ಮಾಡಿಕೊಂಡಿರುವ ಘಟನೆ ಕಾಂಚಳ್ಳಿ ಸಮೀಪದ ಜಮೀನುಗಳಲ್ಲಿ ನಡೆದಿದೆ.

ತಾಲ್ಲೂಕಿನ ಕಾಂಚಳ್ಳಿ, ಬಸಪ್ಪನದೊಡ್ಡಿ, ಗುಂಡಾಪುರ, ಅಜ್ಜೀಪುರ ಗ್ರಾಮಗಳ ವಿವಿಧೆಡೆ ಕಾಲುವೆಗಳನ್ನು ಮುಚ್ಚಿ ರಸ್ತೆ ನಿರ್ಮಾಣ ಮಾಡಿಕೊಂಡಿರುವ ವಿಚಾರ ತಿಳಿದಿದ್ದರೂ ಸಂಬಂಧಪಟ್ಟ ನೀರಾವರಿ ಇಲಾಖೆಯ ಅಧಿಕಾರಿಗಳು ಮೌನ ವಹಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪ ಮಾಡಿದ್ದಾರೆ.

ಜಲಾಶಯದಿಂದ ಕಾಲುವೆಗಳ ಮೂಲಕ ನೀರು ಸರಾಗವಾಗಿ ಹರಿದು ಕೊನೆಯ ಭಾಗದ ರೈತರ ಜಮೀನುಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕಾಲುವೆಗಳನ್ನು ನಿರ್ಮಾಣಮಾಡಲಾಗಿದೆ. ಆದರೆ ಜಮೀನು ಒತ್ತುವರಿ ಮಾಡಿಕೊಳ್ಳುವ ಉದ್ದೇಶದಿಂದ ನೀರು ಕಾಲುವೆಗಳನ್ನೇ ಮುಚ್ಚಿ ನೀರು ಹೋಗದಂತೆ ತಡೆಗಟ್ಟಿ ಮುಂದಿನ ಜಮೀನುಗಳ ರೈತರಿಗೆ ತೊಂದರೆ ಉಂಟು ಮಾಡಿದ್ದಾರೆ. ಅಲ್ಲದೆ, ಸಿಮೆಂಟ್ ಕಾಲುವೆಗಳನ್ನು ಮುಚ್ಚಿರುವ ಪರಿಣಾಮ ನೀರು ಬಂದರೆ ನೇರವಾಗಿ ರಸ್ತೆಗೆ ಬರುತ್ತದೆ. ನೀರು ಪೋಲಾಗುತ್ತದೆ ಹಾಗಾಗಿ ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳು ಇತ್ತ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕಾಂಚಳ್ಳಿ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ನೀರಾವರಿ ಇಲಾಖೆಯಿಂದ ನಿರ್ಮಿಸಿರುವ ಕಾಲುವೆಯನ್ನು ರೈತರೊಬ್ಬರು ತಮಗೆ ಬೇಕಾದಂತೆ ಮಾರ್ಪಡಿಸಿ ಮಣ್ಣಿನ ಕಾಲುವೆಗಳನ್ನು ರಚನೆ ಮಾಡಿ ನೀರನ್ನು ದಾರಿಗೆ ಬಿಟ್ಟಿದ್ದರೂ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ. ಕಾಲುವೆಗಳನ್ನು ಮುಚ್ಚಿದ್ದರೂ ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳು ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳದೆ ಮೌನ ವಹಿಸಿರುವುದು ಅನೇಕ ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರಜ್ಞಾವಂತ ನಾಗರಿಕರು ಒತ್ತಾಯಿಸಿದ್ದಾರೆ.

” ಕಾಲುವೆಗಳನ್ನು ನಮ್ಮ ಅನುಮತಿ ಇಲ್ಲದೆ ಮುಚ್ಚಿರುವ ವಿಷಯ ಗಮನಕ್ಕೆ ಬಂದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ರೈತರಿಗೆ ಬುದ್ಧಿವಾದ ಹೇಳಿ ತೆರವು ಮಾಡಲು ಸೂಚನೆ ನೀಡಲಾಗಿದೆ.”

-ಕರುಣಾಮಯಿ, ಎಇಇ, ಕಬಿನಿ ಇಲಾಖೆ, ಕೊಳ್ಳೇಗಾಲ

ಆಂದೋಲನ ಡೆಸ್ಕ್

Recent Posts

ಹಾಸನ| ರಸ್ತೆಯಲ್ಲಿ ಹಂಪ್ಸ್‌ ಕಾಣದೇ ದುರಂತ: ಸ್ಕೂಟರ್‌ನಿಂದ ಬಿದ್ದು ಯುವತಿ ಸಾವು

ಹಾಸನ: ರಸ್ತೆಯಲ್ಲಿ ಹಂಪ್ಸ್‌ ಕಾಣದೇ ದುರಂತ ಸಂಭವಿಸಿದ್ದು, ಸ್ಕೂಟರ್‌ನಿಂದ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ…

7 mins ago

ಮಾನನಷ್ಟ ಪ್ರಕರಣಗಳಲ್ಲಿ ಮೂಗುತೂರಿಸುವ ಅಧಿಕಾರ ಪೊಲೀಸರಿಗಿಲ್ಲ!

ಪಿ.ಜೆ.ರಾಘವೇಂದ್ರ, ನ್ಯಾಯವಾದಿ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಬಗ್ಗೆ ಅಪಪ್ರಚಾರ ಮಾಡಿದ್ದಾರೆ ಎಂದು ಹಿರಿಯ ಕೆಎಎಸ್ ಅಧಿಕಾರಿ ಹಾಗೂ ಮುಡಾ ಮಾಜಿ…

3 hours ago

ಸೌಂದರ್ಯ ಹದಗೆಡಿಸುವ ಫ್ಲೆಕ್ಸ್ ಹಾವಳಿ ತಡೆ ಅಗತ್ಯ

ದೇಶ-ವಿದೇಶಗಳ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುವ ಅರಮನೆ ನಗರಿ ಮೈಸೂರಿನ ಸೌಂದರ್ಯವನ್ನು ಹದಗೆಡಿಸುವಂತಹ ಜಾಹೀರಾತು ಫಲಕಗಳು, ಫ್ಲೆಕ್ಸ್‌ಗಳ ಹಾವಳಿ ತಡೆಗಟ್ಟಲು ರೂಪಿಸಿರುವ…

3 hours ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಯಾವ ಚಿಂತೆಯಲ್ಲಿದ್ದಾರೆ?

ಸಿದ್ದರಾಮಯ್ಯರನ್ನು ಸಿಎಂ ಪಟ್ಟದಿಂದ ಕೆಳಗಿಳಿಸಿದರೆ ಪಕ್ಷಕ್ಕೆ ಆಪತ್ತು ಎಂಬ ಆತಂಕ ಇಂತಹದೊಂದು ಪ್ರಶ್ನೆ ಈಗ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಪಾಳೆಯಗಳಲ್ಲಿ…

3 hours ago

ಅಕಾಲಿಕ ಮಳೆ; ೮ ಲಕ್ಷ ರೂ. ಮೌಲ್ಯದ ರಾಗಿ ನಾಶ

ಅವಳಿ ತಾಲ್ಲೂಕುಗಳ ಹಲವೆಡೆ ಅವಾಂತರ; ಕಾವಲು ಹೊಸೂರು ಗ್ರಾಮದಲ್ಲಿ ರಾಗಿ ಬೆಳೆದಿದ್ದ ರೈತರು ಕಂಗಾಲು ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…

4 hours ago

ಶೋಚನೀಯ ಸ್ಥಿತಿಯಲ್ಲಿ ಶತಮಾನ ದಾಟಿದ ಶಾಲೆ

ಎಸ್.ಎಸ್.ಭಟ್ ನಂಜನಗೂಡು: ಮೈಸೂರು ವಿಶ್ವವಿದ್ಯಾನಿಲಯಕ್ಕೆ ಪೂರಕವಾಗಿ ೧೯೨೪ರಲ್ಲೇ ಆರಂಭವಾದ ಈ ಪ್ರೌಢಶಾಲೆ ಪ್ರಸ್ತುತ ಉದುರಿಬೀಳುವ ಹಂತದ ಗೋಡೆ ಹಾಗೂ ಮಳೆ…

4 hours ago