ಹನೂರು: ಉಡುತೊರೆ ಹಳ್ಳ ಜಲಾಶಯದಿಂದ ರೈತರ ಜಮೀನುಗಳಿಗೆ ನೀರು ಹರಿಸಲು ನಿರ್ಮಾಣ ಮಾಡಿದ್ದ ಸಣ್ಣ ಸಣ್ಣ ಕಾಲುವೆಗಳನ್ನು ಮುಚ್ಚಿ ಜಮೀನು ಒತ್ತುವರಿ ಮಾಡಿಕೊಂಡಿರುವ ಘಟನೆ ಕಾಂಚಳ್ಳಿ ಸಮೀಪದ ಜಮೀನುಗಳಲ್ಲಿ ನಡೆದಿದೆ.
ತಾಲ್ಲೂಕಿನ ಕಾಂಚಳ್ಳಿ, ಬಸಪ್ಪನದೊಡ್ಡಿ, ಗುಂಡಾಪುರ, ಅಜ್ಜೀಪುರ ಗ್ರಾಮಗಳ ವಿವಿಧೆಡೆ ಕಾಲುವೆಗಳನ್ನು ಮುಚ್ಚಿ ರಸ್ತೆ ನಿರ್ಮಾಣ ಮಾಡಿಕೊಂಡಿರುವ ವಿಚಾರ ತಿಳಿದಿದ್ದರೂ ಸಂಬಂಧಪಟ್ಟ ನೀರಾವರಿ ಇಲಾಖೆಯ ಅಧಿಕಾರಿಗಳು ಮೌನ ವಹಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪ ಮಾಡಿದ್ದಾರೆ.
ಜಲಾಶಯದಿಂದ ಕಾಲುವೆಗಳ ಮೂಲಕ ನೀರು ಸರಾಗವಾಗಿ ಹರಿದು ಕೊನೆಯ ಭಾಗದ ರೈತರ ಜಮೀನುಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕಾಲುವೆಗಳನ್ನು ನಿರ್ಮಾಣಮಾಡಲಾಗಿದೆ. ಆದರೆ ಜಮೀನು ಒತ್ತುವರಿ ಮಾಡಿಕೊಳ್ಳುವ ಉದ್ದೇಶದಿಂದ ನೀರು ಕಾಲುವೆಗಳನ್ನೇ ಮುಚ್ಚಿ ನೀರು ಹೋಗದಂತೆ ತಡೆಗಟ್ಟಿ ಮುಂದಿನ ಜಮೀನುಗಳ ರೈತರಿಗೆ ತೊಂದರೆ ಉಂಟು ಮಾಡಿದ್ದಾರೆ. ಅಲ್ಲದೆ, ಸಿಮೆಂಟ್ ಕಾಲುವೆಗಳನ್ನು ಮುಚ್ಚಿರುವ ಪರಿಣಾಮ ನೀರು ಬಂದರೆ ನೇರವಾಗಿ ರಸ್ತೆಗೆ ಬರುತ್ತದೆ. ನೀರು ಪೋಲಾಗುತ್ತದೆ ಹಾಗಾಗಿ ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳು ಇತ್ತ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕಾಂಚಳ್ಳಿ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ನೀರಾವರಿ ಇಲಾಖೆಯಿಂದ ನಿರ್ಮಿಸಿರುವ ಕಾಲುವೆಯನ್ನು ರೈತರೊಬ್ಬರು ತಮಗೆ ಬೇಕಾದಂತೆ ಮಾರ್ಪಡಿಸಿ ಮಣ್ಣಿನ ಕಾಲುವೆಗಳನ್ನು ರಚನೆ ಮಾಡಿ ನೀರನ್ನು ದಾರಿಗೆ ಬಿಟ್ಟಿದ್ದರೂ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ. ಕಾಲುವೆಗಳನ್ನು ಮುಚ್ಚಿದ್ದರೂ ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳು ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳದೆ ಮೌನ ವಹಿಸಿರುವುದು ಅನೇಕ ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರಜ್ಞಾವಂತ ನಾಗರಿಕರು ಒತ್ತಾಯಿಸಿದ್ದಾರೆ.
” ಕಾಲುವೆಗಳನ್ನು ನಮ್ಮ ಅನುಮತಿ ಇಲ್ಲದೆ ಮುಚ್ಚಿರುವ ವಿಷಯ ಗಮನಕ್ಕೆ ಬಂದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ರೈತರಿಗೆ ಬುದ್ಧಿವಾದ ಹೇಳಿ ತೆರವು ಮಾಡಲು ಸೂಚನೆ ನೀಡಲಾಗಿದೆ.”
-ಕರುಣಾಮಯಿ, ಎಇಇ, ಕಬಿನಿ ಇಲಾಖೆ, ಕೊಳ್ಳೇಗಾಲ
ಇದು ಮಾಹಿತಿ ತಂತ್ರಜ್ಞಾನದ ಕ್ರಾಂತಿಯ ಯುಗ. ಅರವತ್ತರ ದಶಕದಲ್ಲಿ ಕೃಷಿ ಕ್ಷೇತ್ರದಲ್ಲಿ ಜಾರಿಗೆ ತಂದ ಜಪಾನ್ ಮಾದರಿಯ ನಾಟಿ, ಕಳೆಕೀಳುವ…
ನವೀನ್ ಡಿಸೋಜ ಮಡಿಕೇರಿ: ಫೆ.೨೮ರಿಂದ ಮಾ.೧೭ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಜಿಲ್ಲೆಯ ೧೮ ಪರೀಕ್ಷಾ ಕೇಂದ್ರಗಳಲ್ಲಿ ೫,೨೫೫ ವಿದ್ಯಾರ್ಥಿಗಳು…
ಎಸ್.ನಾಗಸುಂದರ್ ೫೦ ಸಾವಿರ ರೂ.ಗಳಿಂದ ೧೫ ಲಕ್ಷ ರೂ.ವರೆಗೆ ಬೆಲೆಬಾಳುವ ರಾಸುಗಳ ಪ್ರದರ್ಶನ ಪಾಂಡವಪುರ: ತಾಲ್ಲೂಕಿನ ಬೇಬಿಬೆಟ್ಟದಲ್ಲಿ ನಡೆಯುತ್ತಿರುವ ಭಾರೀ…
ಭಾರತಿ ಬಿ.ವಿ. ಕದ್ದುಮುಚ್ಚಿ ನಮ್ಮ ಮನೆಯ ಗರಾಜಿಗೆ ಅಂಟಿದಂತಿದ್ದ ಕೋಣೆಯಲ್ಲಿ ಮರಿ ಹಾಕಿ ಬೀಡುಬಿಟ್ಟ ಮೊದಲಲ್ಲಿ ನಮಗೆ ಹೆದರುತ್ತಿದ್ದ ಬೆಕ್ಕು…
ಅಜಯ್ ಕುಮಾರ್ ಎಂ.ಗುಂಬಳ್ಳಿ ಮಾರಿಹಬ್ಬವೆಂದರೆ ಎಲ್ಲಾ ಕೋಮಿನ ಜನ ಸೇರಿ ನಡೆಸುತ್ತಾರೆ. ಅವರವರೇ ದೇವರ ಕೈಂಕರ್ಯಗಳನ್ನು ವಿಭಾಗಿಸಿಕೊಂಡು ಹಬ್ಬ ಮಾಡುತ್ತಾರೆ…
ಅಕ್ಷತಾ ಏಕಲವ್ಯ ದ್ರೋಣರನ್ನು ಗುರುಗಳೆಂದು ಒಪ್ಪಿ, ಮರೆಯಲ್ಲೇ ನಿಂತು ಬಿಲ್ವಿದ್ಯೆ ಪ್ರವೀಣನಾದರೂ ದ್ರೋಣರು ಒಪ್ಪಿಕೊಂಡದ್ದು ಅರ್ಜುನನ ಮೇಲಿನ ಶಿಷ್ಯ ಪ್ರೀತಿಯನ್ನು!…