ಹನೂರು: ಉಡುತೊರೆ ಹಳ್ಳ ಜಲಾಶಯದಿಂದ ರೈತರ ಜಮೀನುಗಳಿಗೆ ನೀರು ಹರಿಸಲು ನಿರ್ಮಾಣ ಮಾಡಿದ್ದ ಸಣ್ಣ ಸಣ್ಣ ಕಾಲುವೆಗಳನ್ನು ಮುಚ್ಚಿ ಜಮೀನು ಒತ್ತುವರಿ ಮಾಡಿಕೊಂಡಿರುವ ಘಟನೆ ಕಾಂಚಳ್ಳಿ ಸಮೀಪದ ಜಮೀನುಗಳಲ್ಲಿ ನಡೆದಿದೆ.
ತಾಲ್ಲೂಕಿನ ಕಾಂಚಳ್ಳಿ, ಬಸಪ್ಪನದೊಡ್ಡಿ, ಗುಂಡಾಪುರ, ಅಜ್ಜೀಪುರ ಗ್ರಾಮಗಳ ವಿವಿಧೆಡೆ ಕಾಲುವೆಗಳನ್ನು ಮುಚ್ಚಿ ರಸ್ತೆ ನಿರ್ಮಾಣ ಮಾಡಿಕೊಂಡಿರುವ ವಿಚಾರ ತಿಳಿದಿದ್ದರೂ ಸಂಬಂಧಪಟ್ಟ ನೀರಾವರಿ ಇಲಾಖೆಯ ಅಧಿಕಾರಿಗಳು ಮೌನ ವಹಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪ ಮಾಡಿದ್ದಾರೆ.
ಜಲಾಶಯದಿಂದ ಕಾಲುವೆಗಳ ಮೂಲಕ ನೀರು ಸರಾಗವಾಗಿ ಹರಿದು ಕೊನೆಯ ಭಾಗದ ರೈತರ ಜಮೀನುಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕಾಲುವೆಗಳನ್ನು ನಿರ್ಮಾಣಮಾಡಲಾಗಿದೆ. ಆದರೆ ಜಮೀನು ಒತ್ತುವರಿ ಮಾಡಿಕೊಳ್ಳುವ ಉದ್ದೇಶದಿಂದ ನೀರು ಕಾಲುವೆಗಳನ್ನೇ ಮುಚ್ಚಿ ನೀರು ಹೋಗದಂತೆ ತಡೆಗಟ್ಟಿ ಮುಂದಿನ ಜಮೀನುಗಳ ರೈತರಿಗೆ ತೊಂದರೆ ಉಂಟು ಮಾಡಿದ್ದಾರೆ. ಅಲ್ಲದೆ, ಸಿಮೆಂಟ್ ಕಾಲುವೆಗಳನ್ನು ಮುಚ್ಚಿರುವ ಪರಿಣಾಮ ನೀರು ಬಂದರೆ ನೇರವಾಗಿ ರಸ್ತೆಗೆ ಬರುತ್ತದೆ. ನೀರು ಪೋಲಾಗುತ್ತದೆ ಹಾಗಾಗಿ ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳು ಇತ್ತ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕಾಂಚಳ್ಳಿ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ನೀರಾವರಿ ಇಲಾಖೆಯಿಂದ ನಿರ್ಮಿಸಿರುವ ಕಾಲುವೆಯನ್ನು ರೈತರೊಬ್ಬರು ತಮಗೆ ಬೇಕಾದಂತೆ ಮಾರ್ಪಡಿಸಿ ಮಣ್ಣಿನ ಕಾಲುವೆಗಳನ್ನು ರಚನೆ ಮಾಡಿ ನೀರನ್ನು ದಾರಿಗೆ ಬಿಟ್ಟಿದ್ದರೂ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ. ಕಾಲುವೆಗಳನ್ನು ಮುಚ್ಚಿದ್ದರೂ ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳು ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳದೆ ಮೌನ ವಹಿಸಿರುವುದು ಅನೇಕ ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರಜ್ಞಾವಂತ ನಾಗರಿಕರು ಒತ್ತಾಯಿಸಿದ್ದಾರೆ.
” ಕಾಲುವೆಗಳನ್ನು ನಮ್ಮ ಅನುಮತಿ ಇಲ್ಲದೆ ಮುಚ್ಚಿರುವ ವಿಷಯ ಗಮನಕ್ಕೆ ಬಂದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ರೈತರಿಗೆ ಬುದ್ಧಿವಾದ ಹೇಳಿ ತೆರವು ಮಾಡಲು ಸೂಚನೆ ನೀಡಲಾಗಿದೆ.”
-ಕರುಣಾಮಯಿ, ಎಇಇ, ಕಬಿನಿ ಇಲಾಖೆ, ಕೊಳ್ಳೇಗಾಲ
ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…
ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…
ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…
ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…
ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ.…