Andolana originals

ಜಂಬೂ ಸವಾರಿ ಮಾರ್ಗದಲ್ಲಿ ಸಣ್ಣ ಬದಲಾವಣೆ

ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು ಎಂಬ ಉದ್ದೇಶದಿಂದ ಮಾರ್ಗದಲ್ಲಿ ಸಣ್ಣ ಬದಲಾವಣೆ ಮಾಡಲಾಗಿದ್ದು, ನೂತನ ಮಾರ್ಗದಲ್ಲೇ ಅಭಿಮನ್ಯು ನೇತೃತ್ವದ ಗಜಪಡೆಗೆ ತಾಲೀಮು ಕೂಡ ಆರಂಭಿಸಲಾಗಿದೆ.

ಪ್ರತಿ ಬಾರಿ ಅಂಬಾರಿ ಆನೆಯನ್ನು ಅರಮನೆಯ ಶ್ರೀ ಕೋಡಿ ಸೋಮೇಶ್ವರ ದೇವಾಲಯ ಆವರಣದಿಂದ ಬಲರಾಮ ದ್ವಾರದ ಸಮೀಪದಲ್ಲಿರುವ ರಾಜವಂಶಸ್ಥರ ನಿವಾಸದ ಆವರಣಕ್ಕೆ ಕರೆತಂದು ಅಲ್ಲಿ ಅಂಬಾರಿ ಕಟ್ಟಲಾಗುತ್ತಿತ್ತು. ನಂತರ ಆನೆಯನ್ನು ಅರಮನೆ ಮುಂಭಾಗಕ್ಕೆ ಕರೆತಂದು ಪುಷ್ಪಾರ್ಚನೆ ನೆರವೇರಿಸಲಾಗುತ್ತುತ್ತು. ಆ ನಂತರ ಜಂಬೂಸವಾರಿ ಮೆರವಣಿಗೆಯು ಅರಮನೆ ಆವರಣದಿಂದ ಬನ್ನಿಮಂಟಪದವರೆಗೆ ನಡೆಯುತ್ತಿತ್ತು.

ಆದರೆ, ಈ ಬಾರಿ ಅಂಬಾರಿ ಕಟ್ಟಿದ ನಂತರ ಆನೆಯು ದಕ್ಷಿಣ ಭಾಗದಲ್ಲಿರುವ ಶ್ರೀ ಶ್ವೇತ ವರಾಹಸ್ವಾಮಿ ದೇವಸ್ಥಾನ ಬಳಿಯ ಮಾರ್ಗದ ಮೂಲಕ ಅರಮನೆಯ ಮುಖ್ಯದ್ವಾರವಾದ ಜಯ ಮಾರ್ತಾಂಡ ದ್ವಾರದ ಬಳಿಗೆ ಆಗಮಿಸಿ ಬಳಿಕ ಪುಷ್ಪಾರ್ಚನೆ ಜಾಗಕ್ಕೆ ಆಗಮಿಸಲಿದೆ. ಬಳಿಕ ಬನ್ನಿಮಂಟಪದತ್ತ ಹೆಜ್ಜೆ ಹಾಕಲಿದೆ. ಇದರಿಂದ ಜಂಬೂ ಸವಾರಿ ವೀಕ್ಷಿಸಲು ಆಗಮಿಸುವ ಎಲ್ಲರಿಗೂ ಅಂಬಾರಿಯ ದರ್ಶನ ದೊರೆಯಲಿದೆ.

ಜಂಬೂ ಸವಾರಿ ವೀಕ್ಷಿಸಲು ಬಂದ ಎಲ್ಲರಿಗೂ ಅಂಬಾರಿ ಕಾಣಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್. ಸಿ. ಮಹದೇವಪ್ಪ ಅವರು ಸೂಚನೆ ನೀಡಿದ್ದಾರೆ. ಅವರ ಸೂಚನೆಯ ಮೇರೆಗೆ ಮಾರ್ಗದಲ್ಲಿ ಸಣ್ಣ ಬದಲಾವಣೆ ಮಾಡಲಾಗಿದೆ. ನೂತನ ಮಾರ್ಗದಲ್ಲೇ ಅಭಿಮನ್ಯು ನೇತೃತ್ವದ ಗಜಪಡೆಗೆ ತಾಲೀಮು ನಡೆಸಲಾಗುತ್ತಿದೆ. – ಡಾ. ಐ. ಬಿ. ಪ್ರಭುಗೌಡ, ಡಿಸಿಎಫ್.

andolana

Recent Posts

ರಾಮನಗರ: ಲಾರಿಗೆ ಕಾರು ಡಿಕ್ಕಿ: ಮೂವರು ದುರ್ಮರಣ

ರಾಮನಗರ: ಲಾರಿ ಹಾಗೂ ಕಾರಿನ ನಡುವೆ ಭೀಖರ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು-ಕನಕಪುರ…

2 mins ago

ಕುವೈತ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಇರಾನ್‌ ದಾಳಿ

ಕುವೈತ್‌ ಅಂತಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಇರಾನ್‌ ದಾಳಿ ಮಾಡಿದೆ. ಕೊಲ್ಲಿಯಾದ್ಯಂತ ಇರಾನ್‌ ತನ್ನ ದಾಳಿಯನ್ನು ಹೆಚ್ಚಿಸುತ್ತಿದ್ದು, ಕುವೈತ್‌ ಅಂತರಾಷ್ಟ್ರೀಯ…

12 mins ago

ಪಕ್ಕದ ಊರಿಗೆ ಪೂಜೆಗೆ ಹೋಗಿದ್ದ ಅರ್ಚಕ ನಿಗೂಢವಾಗಿ ಶವವಾಗಿ ಪತ್ತೆ

ಮಂಡ್ಯ: ಪಕ್ಕದ ಊರಿಗೆ ಪೂಜೆಗೆಂದು ಹೋದ ಅರ್ಚಕ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಶ್ರೀರಂಗಪಟ್ಟಣದ ಮರಳಗಾಲ ಗ್ರಾಮದಲ್ಲಿ…

22 mins ago

ಓದುಗರ ಪತ್ರ: ಬೀದಿ ನಾಯಿಗಳ ಹಾವಳಿ ತಪ್ಪಿಸಿ

ಮೈಸೂರು ನಗರದ ರಿಂಗ್ ರಸ್ತೆಯಲ್ಲಿರುವ ಹಂಚ್ಯಾ-ಸಾತಗಳ್ಳಿ ‘ಬಿ’ ವಲಯದಲ್ಲಿ (ವಿಟಿಯು ಕಾಲೇಜು ಬಳಿ) ಬೀದಿ ನಾಯಿಗಳ ಹಾವಳಿ ವಿಪರೀತವಾಗಿದ್ದು, ಸ್ಥಳೀಯ…

1 hour ago

ಓದುಗರ ಪತ್ರ: ತಾಣ..ಬಾಣ !

ತಾಣ..ಬಾಣ ! ಬೇಕಿದ್ದರೆ ಬಿಟ್ಟೇವು ಒಂದಲ್ಲ, ಎರಡು ದಿನ.. ಶಾಲಾ ತಾಣ! ಬಿಟ್ಟಿರುವುದು ಹೇಗೆ ? ಸಾಮಾಜಿಕ ಜಾಲತಾಣ ಎಂಬುದು…

1 hour ago

ಓದುಗರ ಪತ್ರ: ಬೋಗಾದಿ- ಗದ್ದಿಗೆ ಜೋಡಿ ರಸ್ತೆಯಲ್ಲಿ ಬ್ಯಾರಿಕೇಡ್ ಅಳವಡಿಸಿ

ಮೈಸೂರಿನ ಬೋಗಾದಿ -ಗದ್ದಿಗೆ ಜೋಡಿ ರಸ್ತೆಯಲ್ಲಿ ವಾಹನಗಳ ಸಂಚಾರ ಹೆಚ್ಚಾಗಿದ್ದರಿಂದ ದಾಸನಕೊಪ್ಪಲು ಬಸ್ ನಿಲ್ದಾಣದ ಬಳಿ ಎರಡು ಕಡೆಯೂ ಒಂದು…

2 hours ago