Andolana originals

ಜಂಬೂ ಸವಾರಿ ಮಾರ್ಗದಲ್ಲಿ ಸಣ್ಣ ಬದಲಾವಣೆ

ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು ಎಂಬ ಉದ್ದೇಶದಿಂದ ಮಾರ್ಗದಲ್ಲಿ ಸಣ್ಣ ಬದಲಾವಣೆ ಮಾಡಲಾಗಿದ್ದು, ನೂತನ ಮಾರ್ಗದಲ್ಲೇ ಅಭಿಮನ್ಯು ನೇತೃತ್ವದ ಗಜಪಡೆಗೆ ತಾಲೀಮು ಕೂಡ ಆರಂಭಿಸಲಾಗಿದೆ.

ಪ್ರತಿ ಬಾರಿ ಅಂಬಾರಿ ಆನೆಯನ್ನು ಅರಮನೆಯ ಶ್ರೀ ಕೋಡಿ ಸೋಮೇಶ್ವರ ದೇವಾಲಯ ಆವರಣದಿಂದ ಬಲರಾಮ ದ್ವಾರದ ಸಮೀಪದಲ್ಲಿರುವ ರಾಜವಂಶಸ್ಥರ ನಿವಾಸದ ಆವರಣಕ್ಕೆ ಕರೆತಂದು ಅಲ್ಲಿ ಅಂಬಾರಿ ಕಟ್ಟಲಾಗುತ್ತಿತ್ತು. ನಂತರ ಆನೆಯನ್ನು ಅರಮನೆ ಮುಂಭಾಗಕ್ಕೆ ಕರೆತಂದು ಪುಷ್ಪಾರ್ಚನೆ ನೆರವೇರಿಸಲಾಗುತ್ತುತ್ತು. ಆ ನಂತರ ಜಂಬೂಸವಾರಿ ಮೆರವಣಿಗೆಯು ಅರಮನೆ ಆವರಣದಿಂದ ಬನ್ನಿಮಂಟಪದವರೆಗೆ ನಡೆಯುತ್ತಿತ್ತು.

ಆದರೆ, ಈ ಬಾರಿ ಅಂಬಾರಿ ಕಟ್ಟಿದ ನಂತರ ಆನೆಯು ದಕ್ಷಿಣ ಭಾಗದಲ್ಲಿರುವ ಶ್ರೀ ಶ್ವೇತ ವರಾಹಸ್ವಾಮಿ ದೇವಸ್ಥಾನ ಬಳಿಯ ಮಾರ್ಗದ ಮೂಲಕ ಅರಮನೆಯ ಮುಖ್ಯದ್ವಾರವಾದ ಜಯ ಮಾರ್ತಾಂಡ ದ್ವಾರದ ಬಳಿಗೆ ಆಗಮಿಸಿ ಬಳಿಕ ಪುಷ್ಪಾರ್ಚನೆ ಜಾಗಕ್ಕೆ ಆಗಮಿಸಲಿದೆ. ಬಳಿಕ ಬನ್ನಿಮಂಟಪದತ್ತ ಹೆಜ್ಜೆ ಹಾಕಲಿದೆ. ಇದರಿಂದ ಜಂಬೂ ಸವಾರಿ ವೀಕ್ಷಿಸಲು ಆಗಮಿಸುವ ಎಲ್ಲರಿಗೂ ಅಂಬಾರಿಯ ದರ್ಶನ ದೊರೆಯಲಿದೆ.

ಜಂಬೂ ಸವಾರಿ ವೀಕ್ಷಿಸಲು ಬಂದ ಎಲ್ಲರಿಗೂ ಅಂಬಾರಿ ಕಾಣಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್. ಸಿ. ಮಹದೇವಪ್ಪ ಅವರು ಸೂಚನೆ ನೀಡಿದ್ದಾರೆ. ಅವರ ಸೂಚನೆಯ ಮೇರೆಗೆ ಮಾರ್ಗದಲ್ಲಿ ಸಣ್ಣ ಬದಲಾವಣೆ ಮಾಡಲಾಗಿದೆ. ನೂತನ ಮಾರ್ಗದಲ್ಲೇ ಅಭಿಮನ್ಯು ನೇತೃತ್ವದ ಗಜಪಡೆಗೆ ತಾಲೀಮು ನಡೆಸಲಾಗುತ್ತಿದೆ. – ಡಾ. ಐ. ಬಿ. ಪ್ರಭುಗೌಡ, ಡಿಸಿಎಫ್.

andolana

Recent Posts

ಮೈಸೂರು ಸೇರಿದಂತೆ 4ಜಿಲ್ಲೆಗಳಲ್ಲಿ ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮೂನ್ಸೂಚನೆ

ಮೈಸೂರು : ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಡಿ.31ರಿಂದ ಎರಡು ದಿನ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ…

5 hours ago

ಕೇಂದ್ರ ಬಜೆಟ್‌ | ನಾಳೆ ಆರ್ಥಿಕ ತಜ್ಞರ ಭೇಟಿ ಮಾಡಲಿರುವ ಮೋದಿ

ಹೊಸದಿಲ್ಲಿ : ಮುಂಬರುವ ಕೇಂದ್ರ ಬಜೆಟ್ ಕುರಿತು ಸಂವಾದ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಆರ್ಥಿಕ ತಜ್ಞರು…

6 hours ago

ಗಗನಚುಕ್ಕಿ | ಕಾಡಾನೆ ದಾಳಿಗೆ ಸ್ಟೀಲ್‌ ಕಂಬಿಗಳು ನಾಶ

ಮಳವಳ್ಳಿ : ತಾಲ್ಲೂಕಿನ ಗಗನಚುಕ್ಕಿ ಜಲಪಾತದ ಆವರಣಕ್ಕೆ ನುಗ್ಗಿದ್ದ ಕಾಡಾನೆಗಳು ಪ್ರವಾಸಿಗರು ಜಲಪಾತ ವೀಕ್ಷಣೆಗೆ ಇಳಿಯುವ ಎರಡು ಕಡೆಗಳಲ್ಲೂ ಹಾಕಲಾಗಿದ್ದ…

6 hours ago

ಮೈಸೂರು | ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಪ್ರಕಟ ; ಬೆಟ್ಟಕ್ಕಿಲ್ಲ ಪ್ರವೇಶ?

ಮೈಸೂರು : ಇನ್ನೇನು ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇದೆ. ಆದ್ದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಮೈಸೂರು ನಗರ ಪೊಲೀಸ್‌…

6 hours ago

ಕೋಗಿಲು ಕಲಹ | ಅರ್ಹರಿಗೆ ಪರ್ಯಾಯ ಮನೆ ಹಂಚಿಕೆ ; ಸಿಎಂ ಘೋಷಣೆ

ಬೆಂಗಳೂರು : ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ.…

7 hours ago

ಚಾಮರಾಜನಗರ ಹೇಮಂತ್‌ಗೆ ಮಿಸ್ಟರ್‌ ಇಂಡಿಯಾ ಕಿರೀಟ!

ಚಾಮರಾಜನಗರ : ರಾಷ್ಟ್ರ ಮಟ್ಟದ ಪುರುಷರ ಮೈಕಟ್ಟು ಸ್ಪರ್ಧೆಯಲ್ಲಿ ವಿಜೇತರಾಗುವ ಮೂಲಕ ತಾಲ್ಲೂಕಿನ ಕೋಡಿಮೋಳೆ ಬಸವನಪುರ ಬಿ.ಆರ್.ಹೇಮಂತ್ ಅವರು ಮಿಸ್ಟರ್…

7 hours ago