Andolana originals

ಜಂಬೂ ಸವಾರಿ ಮಾರ್ಗದಲ್ಲಿ ಸಣ್ಣ ಬದಲಾವಣೆ

ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು ಎಂಬ ಉದ್ದೇಶದಿಂದ ಮಾರ್ಗದಲ್ಲಿ ಸಣ್ಣ ಬದಲಾವಣೆ ಮಾಡಲಾಗಿದ್ದು, ನೂತನ ಮಾರ್ಗದಲ್ಲೇ ಅಭಿಮನ್ಯು ನೇತೃತ್ವದ ಗಜಪಡೆಗೆ ತಾಲೀಮು ಕೂಡ ಆರಂಭಿಸಲಾಗಿದೆ.

ಪ್ರತಿ ಬಾರಿ ಅಂಬಾರಿ ಆನೆಯನ್ನು ಅರಮನೆಯ ಶ್ರೀ ಕೋಡಿ ಸೋಮೇಶ್ವರ ದೇವಾಲಯ ಆವರಣದಿಂದ ಬಲರಾಮ ದ್ವಾರದ ಸಮೀಪದಲ್ಲಿರುವ ರಾಜವಂಶಸ್ಥರ ನಿವಾಸದ ಆವರಣಕ್ಕೆ ಕರೆತಂದು ಅಲ್ಲಿ ಅಂಬಾರಿ ಕಟ್ಟಲಾಗುತ್ತಿತ್ತು. ನಂತರ ಆನೆಯನ್ನು ಅರಮನೆ ಮುಂಭಾಗಕ್ಕೆ ಕರೆತಂದು ಪುಷ್ಪಾರ್ಚನೆ ನೆರವೇರಿಸಲಾಗುತ್ತುತ್ತು. ಆ ನಂತರ ಜಂಬೂಸವಾರಿ ಮೆರವಣಿಗೆಯು ಅರಮನೆ ಆವರಣದಿಂದ ಬನ್ನಿಮಂಟಪದವರೆಗೆ ನಡೆಯುತ್ತಿತ್ತು.

ಆದರೆ, ಈ ಬಾರಿ ಅಂಬಾರಿ ಕಟ್ಟಿದ ನಂತರ ಆನೆಯು ದಕ್ಷಿಣ ಭಾಗದಲ್ಲಿರುವ ಶ್ರೀ ಶ್ವೇತ ವರಾಹಸ್ವಾಮಿ ದೇವಸ್ಥಾನ ಬಳಿಯ ಮಾರ್ಗದ ಮೂಲಕ ಅರಮನೆಯ ಮುಖ್ಯದ್ವಾರವಾದ ಜಯ ಮಾರ್ತಾಂಡ ದ್ವಾರದ ಬಳಿಗೆ ಆಗಮಿಸಿ ಬಳಿಕ ಪುಷ್ಪಾರ್ಚನೆ ಜಾಗಕ್ಕೆ ಆಗಮಿಸಲಿದೆ. ಬಳಿಕ ಬನ್ನಿಮಂಟಪದತ್ತ ಹೆಜ್ಜೆ ಹಾಕಲಿದೆ. ಇದರಿಂದ ಜಂಬೂ ಸವಾರಿ ವೀಕ್ಷಿಸಲು ಆಗಮಿಸುವ ಎಲ್ಲರಿಗೂ ಅಂಬಾರಿಯ ದರ್ಶನ ದೊರೆಯಲಿದೆ.

ಜಂಬೂ ಸವಾರಿ ವೀಕ್ಷಿಸಲು ಬಂದ ಎಲ್ಲರಿಗೂ ಅಂಬಾರಿ ಕಾಣಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್. ಸಿ. ಮಹದೇವಪ್ಪ ಅವರು ಸೂಚನೆ ನೀಡಿದ್ದಾರೆ. ಅವರ ಸೂಚನೆಯ ಮೇರೆಗೆ ಮಾರ್ಗದಲ್ಲಿ ಸಣ್ಣ ಬದಲಾವಣೆ ಮಾಡಲಾಗಿದೆ. ನೂತನ ಮಾರ್ಗದಲ್ಲೇ ಅಭಿಮನ್ಯು ನೇತೃತ್ವದ ಗಜಪಡೆಗೆ ತಾಲೀಮು ನಡೆಸಲಾಗುತ್ತಿದೆ. – ಡಾ. ಐ. ಬಿ. ಪ್ರಭುಗೌಡ, ಡಿಸಿಎಫ್.

andolana

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

5 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

8 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

8 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

9 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

11 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

12 hours ago