Andolana originals

ಜಂಬೂ ಸವಾರಿ ಮಾರ್ಗದಲ್ಲಿ ಸಣ್ಣ ಬದಲಾವಣೆ

ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು ಎಂಬ ಉದ್ದೇಶದಿಂದ ಮಾರ್ಗದಲ್ಲಿ ಸಣ್ಣ ಬದಲಾವಣೆ ಮಾಡಲಾಗಿದ್ದು, ನೂತನ ಮಾರ್ಗದಲ್ಲೇ ಅಭಿಮನ್ಯು ನೇತೃತ್ವದ ಗಜಪಡೆಗೆ ತಾಲೀಮು ಕೂಡ ಆರಂಭಿಸಲಾಗಿದೆ.

ಪ್ರತಿ ಬಾರಿ ಅಂಬಾರಿ ಆನೆಯನ್ನು ಅರಮನೆಯ ಶ್ರೀ ಕೋಡಿ ಸೋಮೇಶ್ವರ ದೇವಾಲಯ ಆವರಣದಿಂದ ಬಲರಾಮ ದ್ವಾರದ ಸಮೀಪದಲ್ಲಿರುವ ರಾಜವಂಶಸ್ಥರ ನಿವಾಸದ ಆವರಣಕ್ಕೆ ಕರೆತಂದು ಅಲ್ಲಿ ಅಂಬಾರಿ ಕಟ್ಟಲಾಗುತ್ತಿತ್ತು. ನಂತರ ಆನೆಯನ್ನು ಅರಮನೆ ಮುಂಭಾಗಕ್ಕೆ ಕರೆತಂದು ಪುಷ್ಪಾರ್ಚನೆ ನೆರವೇರಿಸಲಾಗುತ್ತುತ್ತು. ಆ ನಂತರ ಜಂಬೂಸವಾರಿ ಮೆರವಣಿಗೆಯು ಅರಮನೆ ಆವರಣದಿಂದ ಬನ್ನಿಮಂಟಪದವರೆಗೆ ನಡೆಯುತ್ತಿತ್ತು.

ಆದರೆ, ಈ ಬಾರಿ ಅಂಬಾರಿ ಕಟ್ಟಿದ ನಂತರ ಆನೆಯು ದಕ್ಷಿಣ ಭಾಗದಲ್ಲಿರುವ ಶ್ರೀ ಶ್ವೇತ ವರಾಹಸ್ವಾಮಿ ದೇವಸ್ಥಾನ ಬಳಿಯ ಮಾರ್ಗದ ಮೂಲಕ ಅರಮನೆಯ ಮುಖ್ಯದ್ವಾರವಾದ ಜಯ ಮಾರ್ತಾಂಡ ದ್ವಾರದ ಬಳಿಗೆ ಆಗಮಿಸಿ ಬಳಿಕ ಪುಷ್ಪಾರ್ಚನೆ ಜಾಗಕ್ಕೆ ಆಗಮಿಸಲಿದೆ. ಬಳಿಕ ಬನ್ನಿಮಂಟಪದತ್ತ ಹೆಜ್ಜೆ ಹಾಕಲಿದೆ. ಇದರಿಂದ ಜಂಬೂ ಸವಾರಿ ವೀಕ್ಷಿಸಲು ಆಗಮಿಸುವ ಎಲ್ಲರಿಗೂ ಅಂಬಾರಿಯ ದರ್ಶನ ದೊರೆಯಲಿದೆ.

ಜಂಬೂ ಸವಾರಿ ವೀಕ್ಷಿಸಲು ಬಂದ ಎಲ್ಲರಿಗೂ ಅಂಬಾರಿ ಕಾಣಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್. ಸಿ. ಮಹದೇವಪ್ಪ ಅವರು ಸೂಚನೆ ನೀಡಿದ್ದಾರೆ. ಅವರ ಸೂಚನೆಯ ಮೇರೆಗೆ ಮಾರ್ಗದಲ್ಲಿ ಸಣ್ಣ ಬದಲಾವಣೆ ಮಾಡಲಾಗಿದೆ. ನೂತನ ಮಾರ್ಗದಲ್ಲೇ ಅಭಿಮನ್ಯು ನೇತೃತ್ವದ ಗಜಪಡೆಗೆ ತಾಲೀಮು ನಡೆಸಲಾಗುತ್ತಿದೆ. – ಡಾ. ಐ. ಬಿ. ಪ್ರಭುಗೌಡ, ಡಿಸಿಎಫ್.

andolana

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

4 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

5 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

5 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

6 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

7 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

7 hours ago