Andolana originals

ತಾಯಿಯಿಂದ ಬೇರ್ಪಟ್ಟಿದ್ದ ಮರಿಯಾನೆ ರಕ್ಷಣೆ

ಮಂಜು ಕೋಟೆ

ಕೇರಳದ ಅರಣ್ಯಪ್ರದೇಶದಿಂದ ಕಬಿನಿ ನದಿ ದಾಟಿ ಕೋಟೆ ಗಡಿಭಾಗಕ್ಕೆ ಬಂದ ಮರಿಯಾನೆ 

ಎಚ್.ಡಿ.ಕೋಟೆ: ತಾಯಿ ಆನೆಯಿಂದ ಬೇರ್ಪಟ್ಟು ಮಂಗಳವಾರ ಕೇರಳದ ಶಾಲೆಯೊಂದರ ಆವರಣದಲ್ಲಿ ಕಾಣಿಸಿಕೊಂಡಿದ್ದ ಮರಿಯಾನೆ ಬುಧವಾರ ತಾಲ್ಲೂಕಿನ ಗಡಿ ಭಾಗದ ಗ್ರಾಮದಲ್ಲಿ ಕಾಣಿಸಿ ಕೊಂಡಿದ್ದು, ಮರಿಯಾನೆಯ ಸ್ಥಿತಿ ನೋಡಿ ಪ್ರಾಣಿಪ್ರಿಯರು ಮರುಗಿದ್ದಾರೆ.

ಕಬಿನಿ ನದಿ ಪಕ್ಕದಲ್ಲಿರುವ ಕೇರಳದ ಸುಲ್ತಾನ್ ಬತ್ತೇರಿ, ಪುಲಹಳ್ಳಿ ಗ್ರಾಮಗಳ ಸರ್ಕಾರಿ ಶಾಲೆ ಆವರಣ ದಲ್ಲಿ ಹಾಡ ಹಗಲೇ ಹೆಣ್ಣಾನೆ ಮರಿ ಕಾಣಿಸಿಕೊಂಡಿತ್ತು. ನಂತರ ಅಲ್ಲಿನ ಅರಣ್ಯ ಇಲಾಖೆ ಅಧಿಕಾರಿಗಳು, ನೌಕರರು ಅದನ್ನು ಸೆರೆಹಿಡಿದು ಆಟೋದಲ್ಲಿ ತೆಗೆದುಕೊಂಡು ಹೋಗಿದ್ದರು. ಅದಾದ ಮರುದಿನವೇ, ಕಬಿನಿ ನದಿ ದಾಟಿ ಕರ್ನಾಟಕದ ಗಡಿಗೆ ಬಂದು ಎಚ್. ಡಿ.ಕೋಟೆ ತಾಲ್ಲೂಕಿನ ಬಳ್ಳೆ ಸಮೀಪದ ಒಡಕನಮಾಳ ಕಡೆ ಗದ್ದೆಯಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದೆ.

ಸುಮಾರು ೩ ವರ್ಷದ ಈ ಹೆಣ್ಣಾನೆ ಮರಿ ಎರಡು ದಿನಗಳ ಹಿಂದೆ ತಾಯಿಯಿಂದ ಬೇರ್ಪಟ್ಟು ಕೇರಳದ ಪುಲಹಳ್ಳಿಯ ಸರ್ಕಾರಿ ಶಾಲೆ ಆವರಣದಲ್ಲಿ ವಿದ್ಯಾರ್ಥಿಗಳ ಪಾದರಕ್ಷೆಗಳನ್ನು ಚೆಲ್ಲಾಪಿಲ್ಲಿ ಮಾಡಿ ಆಟ ವಾಡುತ್ತಿದ್ದನ್ನು ಗಮನಿಸಿ ಅಲ್ಲಿನ ಅರಣ್ಯ ಸಿಬ್ಬಂದಿ ಆನೆ ಮರಿಯನ್ನು ರಕ್ಷಿಸಿ, ಅದನ್ನು ತಾಯಿಯ ಮಡಿಲಿಗೆ ಸೇರಿಸಲೆಂದು ಅರಣ್ಯಕ್ಕೆ ಬಿಟ್ಟಿದ್ದರು. ಆದರೆ, ತುಂಬಿ ಹರಿಯುತ್ತಿರುವ ಕಬಿನಿ ನದಿಯನ್ನು ದಾಟಿ ಕರ್ನಾಟಕದ ಗಡಿಭಾಗದ ಗ್ರಾಮಕ್ಕೆ ಬಂದಿರುವುದು ಅನೇಕ ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಕೇರಳ ರಾಜ್ಯದ ಅರಣ್ಯ ಅಧಿಕಾರಿಗಳು ತಾಯಿ ಆನೆ ಜೊತೆ ಮರಿಯನ್ನು ಸೇರಿಸುವ ಕೆಲಸವನ್ನು ಮಾಡದೆ ರಾತ್ರೋರಾತ್ರಿ ಆನೆ ಮರಿಯನ್ನು ತೆಪ್ಪದ ಮೂಲಕ ಕಬಿನಿ ನದಿ ದಾಟಿಸಿ ಕರ್ನಾಟಕ ರಾಜ್ಯದ ಗಡಿಭಾಗಕ್ಕೆ ಬಿಟ್ಟಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಡಿ.ಬಿ.ಕುಪ್ಪೆ ವಲಯದ ಅರಣ್ಯ ಅಧಿಕಾರಿ ಹನುಮಂತರಾಜು ಹಾಗೂ ಸಿಬ್ಬಂದಿ ಆನೆ ಮರಿಯನ್ನು ರಕ್ಷಣೆ ಮಾಡಿ, ಅದರ ತಾಯಿ ಆನೆಯ ಬರುವಿಕೆಗಾಗಿ ಅರಣ್ಯ ಪ್ರದೇಶದಲ್ಲಿ ಮರಿಯೊಂದಿಗೆ ಕಾದಿದ್ದರು. ಆದರೆ ಬುಧವಾರವೂ ಕೇರಳ ಅರಣ್ಯ ಪ್ರದೇಶದಿಂದ ತಾಯಿ ಆನೆ ನದಿ ದಾಟಿ ಬಾರದೇ ಇದ್ದುದರಿಂದ ಮರಿ ಆನೆಯನ್ನು ಪೋಷಣೆ ಮಾಡಿ ಬಳ್ಳೆ ಅರಣ್ಯ ಸಾಕಾನೆ ಕೇಂದ್ರಕ್ಕೆ ಬಿಟ್ಟಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ: ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಸೂಚನೆ

ಮೈಸೂರು: ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ, ಒತ್ತುವರಿ ತೆರವುಗೊಳಿಸುವಂತೆ ಮೈಸೂರು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಅವರು ಅಧಿಕಾರಿಗಳಿಗೆ ಸೂಚನೆ…

6 hours ago

ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾ ಪುನರಾರಂಭಿಸಲು ಕೇಂದ್ರ ಸರ್ಕಾರ ಸಿದ್ಧತೆ

ನವದೆಹಲಿ: ಭಾರತ ಸರ್ಕಾರವು ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾಗಳನ್ನು ಪುನರಾರಂಭಿಸಲು ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಲ್ವಾನ್‌ ಕಣಿವೆಯಲ್ಲಿ…

6 hours ago

ಶರದ್‌ ಪವಾರ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌

ಮುಂಬೈ: ಆರೋಗ್ಯ ಸಮಸ್ಯೆಯಿಂದ ಮುಂಬೈನ್‌ ಆಸ್ಪತ್ರೆಗೆ ದಾಖಲಾಗಿದ್ದ ಶರದ್‌ ಪವಾರ್‌ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ. ಶರದ್‌ ಪವಾರ್‌…

6 hours ago

ಪತ್ನಿ, ತಾಯಿಯನ್ನು ಕೊಂದು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟ ವ್ಯಕ್ತಿ

ಅಮರಾವತಿ: ವ್ಯಕ್ತಿಯೊಬ್ಬ ಪತ್ನಿ ಹಾಗೂ ತಾಯಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ…

8 hours ago

ಚಲುವಾಂಬ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಮರಣೋತ್ತರ ಪರೀಕ್ಷೆಗೆ ಮೃತದೇಹ ರವಾನೆ

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ಮಗು ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು…

8 hours ago

ಹಾಸನ: ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ

ಹಾಸನ: ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಬೇಲೂರು ತಾಲ್ಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

9 hours ago