Andolana originals

ತಾಯಿಯಿಂದ ಬೇರ್ಪಟ್ಟಿದ್ದ ಮರಿಯಾನೆ ರಕ್ಷಣೆ

ಮಂಜು ಕೋಟೆ

ಕೇರಳದ ಅರಣ್ಯಪ್ರದೇಶದಿಂದ ಕಬಿನಿ ನದಿ ದಾಟಿ ಕೋಟೆ ಗಡಿಭಾಗಕ್ಕೆ ಬಂದ ಮರಿಯಾನೆ 

ಎಚ್.ಡಿ.ಕೋಟೆ: ತಾಯಿ ಆನೆಯಿಂದ ಬೇರ್ಪಟ್ಟು ಮಂಗಳವಾರ ಕೇರಳದ ಶಾಲೆಯೊಂದರ ಆವರಣದಲ್ಲಿ ಕಾಣಿಸಿಕೊಂಡಿದ್ದ ಮರಿಯಾನೆ ಬುಧವಾರ ತಾಲ್ಲೂಕಿನ ಗಡಿ ಭಾಗದ ಗ್ರಾಮದಲ್ಲಿ ಕಾಣಿಸಿ ಕೊಂಡಿದ್ದು, ಮರಿಯಾನೆಯ ಸ್ಥಿತಿ ನೋಡಿ ಪ್ರಾಣಿಪ್ರಿಯರು ಮರುಗಿದ್ದಾರೆ.

ಕಬಿನಿ ನದಿ ಪಕ್ಕದಲ್ಲಿರುವ ಕೇರಳದ ಸುಲ್ತಾನ್ ಬತ್ತೇರಿ, ಪುಲಹಳ್ಳಿ ಗ್ರಾಮಗಳ ಸರ್ಕಾರಿ ಶಾಲೆ ಆವರಣ ದಲ್ಲಿ ಹಾಡ ಹಗಲೇ ಹೆಣ್ಣಾನೆ ಮರಿ ಕಾಣಿಸಿಕೊಂಡಿತ್ತು. ನಂತರ ಅಲ್ಲಿನ ಅರಣ್ಯ ಇಲಾಖೆ ಅಧಿಕಾರಿಗಳು, ನೌಕರರು ಅದನ್ನು ಸೆರೆಹಿಡಿದು ಆಟೋದಲ್ಲಿ ತೆಗೆದುಕೊಂಡು ಹೋಗಿದ್ದರು. ಅದಾದ ಮರುದಿನವೇ, ಕಬಿನಿ ನದಿ ದಾಟಿ ಕರ್ನಾಟಕದ ಗಡಿಗೆ ಬಂದು ಎಚ್. ಡಿ.ಕೋಟೆ ತಾಲ್ಲೂಕಿನ ಬಳ್ಳೆ ಸಮೀಪದ ಒಡಕನಮಾಳ ಕಡೆ ಗದ್ದೆಯಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದೆ.

ಸುಮಾರು ೩ ವರ್ಷದ ಈ ಹೆಣ್ಣಾನೆ ಮರಿ ಎರಡು ದಿನಗಳ ಹಿಂದೆ ತಾಯಿಯಿಂದ ಬೇರ್ಪಟ್ಟು ಕೇರಳದ ಪುಲಹಳ್ಳಿಯ ಸರ್ಕಾರಿ ಶಾಲೆ ಆವರಣದಲ್ಲಿ ವಿದ್ಯಾರ್ಥಿಗಳ ಪಾದರಕ್ಷೆಗಳನ್ನು ಚೆಲ್ಲಾಪಿಲ್ಲಿ ಮಾಡಿ ಆಟ ವಾಡುತ್ತಿದ್ದನ್ನು ಗಮನಿಸಿ ಅಲ್ಲಿನ ಅರಣ್ಯ ಸಿಬ್ಬಂದಿ ಆನೆ ಮರಿಯನ್ನು ರಕ್ಷಿಸಿ, ಅದನ್ನು ತಾಯಿಯ ಮಡಿಲಿಗೆ ಸೇರಿಸಲೆಂದು ಅರಣ್ಯಕ್ಕೆ ಬಿಟ್ಟಿದ್ದರು. ಆದರೆ, ತುಂಬಿ ಹರಿಯುತ್ತಿರುವ ಕಬಿನಿ ನದಿಯನ್ನು ದಾಟಿ ಕರ್ನಾಟಕದ ಗಡಿಭಾಗದ ಗ್ರಾಮಕ್ಕೆ ಬಂದಿರುವುದು ಅನೇಕ ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಕೇರಳ ರಾಜ್ಯದ ಅರಣ್ಯ ಅಧಿಕಾರಿಗಳು ತಾಯಿ ಆನೆ ಜೊತೆ ಮರಿಯನ್ನು ಸೇರಿಸುವ ಕೆಲಸವನ್ನು ಮಾಡದೆ ರಾತ್ರೋರಾತ್ರಿ ಆನೆ ಮರಿಯನ್ನು ತೆಪ್ಪದ ಮೂಲಕ ಕಬಿನಿ ನದಿ ದಾಟಿಸಿ ಕರ್ನಾಟಕ ರಾಜ್ಯದ ಗಡಿಭಾಗಕ್ಕೆ ಬಿಟ್ಟಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಡಿ.ಬಿ.ಕುಪ್ಪೆ ವಲಯದ ಅರಣ್ಯ ಅಧಿಕಾರಿ ಹನುಮಂತರಾಜು ಹಾಗೂ ಸಿಬ್ಬಂದಿ ಆನೆ ಮರಿಯನ್ನು ರಕ್ಷಣೆ ಮಾಡಿ, ಅದರ ತಾಯಿ ಆನೆಯ ಬರುವಿಕೆಗಾಗಿ ಅರಣ್ಯ ಪ್ರದೇಶದಲ್ಲಿ ಮರಿಯೊಂದಿಗೆ ಕಾದಿದ್ದರು. ಆದರೆ ಬುಧವಾರವೂ ಕೇರಳ ಅರಣ್ಯ ಪ್ರದೇಶದಿಂದ ತಾಯಿ ಆನೆ ನದಿ ದಾಟಿ ಬಾರದೇ ಇದ್ದುದರಿಂದ ಮರಿ ಆನೆಯನ್ನು ಪೋಷಣೆ ಮಾಡಿ ಬಳ್ಳೆ ಅರಣ್ಯ ಸಾಕಾನೆ ಕೇಂದ್ರಕ್ಕೆ ಬಿಟ್ಟಿದ್ದಾರೆ.

ಆಂದೋಲನ ಡೆಸ್ಕ್

Recent Posts

ಪಿರಿಯಾಪಟ್ಟಣ | ವಿಶೇಷಚೇತನರಿಗೆ ವಿತರಣೆಯಾಗದ ಸಾಧನಗಳು

ಫಲಾನುಭವಿಗಳಿಗೆ ವಿತರಿಸಲು ಶಾಸಕರ ದಿನಾಂಕ ಸಿಗದೆ ಕೊಠಡಿಯಲ್ಲಿ ತುಂಬಿ ಬೀಗ ಹಾಕಿದ ಅಧಿಕಾರಿಗಳು ಪಿರಿಯಾಪಟ್ಟಣ : ಕೇಂದ್ರ ಸರ್ಕಾರದ ಅಲಿಂಕೋ…

2 hours ago

3 ತಿಂಗಳಿಂದ ಬಾರದ ಮಾಸಾಶನ ; ಬಡಜನರು ಕಂಗಾಲು

ವೃದ್ಧರು, ವಿಧವೆಯರು, ಅಂಗವಿಕಲರಿಗೆ ಬಾರದ ಮಾಸಿಕ ಹಣ ; ಕಚೇರಿಗಳಿಗೆ ನಿತ್ಯ ಅಲೆದಾಟ ಎಚ್.ಡಿ.ಕೋಟೆ : ವೃದ್ಧರು, ವಿಧವೆಯರು, ಅಂಗವಿಕಲರೂ…

2 hours ago

ಗ್ರಾಪಂನಲ್ಲೇ ವಾಸಸ್ಥಳ ದೃಢೀಕರಣ ಪತ್ರ ; ಇನ್ನು ಹೋಬಳಿ ಕೇಂದ್ರಗಳಿಗೆ ಅಲೆಯುವಂತಿಲ್ಲ: ಸರ್ಕಾರದ ತೀರ್ಮಾನ

ಬೆಂಗಳೂರು : ಗ್ರಾಮೀಣ ಜನರಿಗೆ ರಾಜ್ಯ ಸರ್ಕಾರ ಮಹತ್ವದ ರಿಲೀಫ್ ನೀಡಿದ್ದು, ಇನ್ನು ಮುಂದೆ ವಾಸಸ್ಥಳ ದೃಢೀಕರಣ ಪತ್ರವನ್ನು ತಮ್ಮ…

3 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ : ರಾಜ್ಯ ಕಾಂಗ್ರೆಸ್‌ನಲ್ಲಿ ಒಗ್ಗಟ್ಟು : ಬಿಜೆಪಿ -ಜಾ.ದಳ ನಾಯಕರಿಗೆ ಆಘಾತ

ಪರಿಷತ್ ಚುನಾವಣೆ ಫಲಿತಾಂಶದ ಮೂಲಕ ಭಿನ್ನಮತೀಯರು, ಮೈತ್ರಿ ಕೂಟಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ ಡಿಕೆಶಿ ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು…

5 hours ago

ಆಂದೋಲನ ಸಂಪಾದಕೀಯ | ಅಡ್ಡ ಮತದಾನ : ರಾಜಕಾರಣದ ನೈತಿಕ ದಿವಾಳಿತನ

ಅಡ್ಡ ಮತದಾನ ಮಾಡಿ ‘ಆತ್ಮ ಸಾಕ್ಷಿ’ಯೆಂಬ ತಡೆಗೋಡೆಯ ರಕ್ಷಣೆ ಪಡೆದಿರುವ ಶಾಸಕರ ಪತ್ತೆಗೆ ‘ಸತ್ಯಶೋಧನೆ’, ‘ಆಣೆ-ಪ್ರಮಾಣ’ಗಳೆಲ್ಲವೂ ಗುಡ್ಡ ಅಗೆದು ಇಲಿ…

6 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 22 ಸೋಮವಾರ

6 hours ago