Andolana originals

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಶೇ.77.86 ಪ್ರಗತಿ

ನವೀನ್ ಡಿಸೋಜ

ಮಡಿಕೇರಿ: ಜಿಲ್ಲೆಯ ಜನರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಕುರಿತು ನಿಖರವಾದ ಮಾಹಿತಿಸಂಗ್ರಹಿಸುವ ಸಮೀಕ್ಷಾ ಕಾರ್ಯ ನಡೆಯುತ್ತಿದ್ದು, ಜಿಲ್ಲೆಯಲ್ಲಿ ಶೇ.೭೭.೮೬ ಪ್ರಗತಿ ಸಾಧಿಸಲಾಗಿದೆ.

ಜಿಲ್ಲೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸಂಬಂಧಿಸಿದಂತೆ ೧,೧೩೧ ಬ್ಲಾಕ್‌ಗಳಿವೆ. ಒಟ್ಟು ೧,೩೪,೩೯೬ ಕುಟುಂಬಗಳ ಸಮೀಕ್ಷೆಯ ಗುರಿ ಇರಿಸಿಕೊಳ್ಳಲಾಗಿದ್ದು, ಈಗಾಗಲೇ ೧,೦೪,೬೪೪ ಕುಟುಂಬಗಳ ಸಮೀಕ್ಷೆ ಪೂರ್ಣಗೊಂಡಿದೆ. ಆ ಮೂಲಕ ಶೇ.೭೭.೮೬ ಸಮೀಕ್ಷೆ ನಡೆದಿದೆ. ಕುಶಾಲನಗರ ತಾಲ್ಲೂಕಿನಲ್ಲಿ ೩೦೪ ಬ್ಲಾಕ್‌ಗಳಲ್ಲಿನ ೩೪,೬೩೭ ಕುಟುಂಬಗಳ ಪೈಕಿ ೨೬,೮೧೯ ಕುಟುಂಬಗಳ ಸಮೀಕ್ಷೆ ಮುಗಿದಿದೆ. ಮಡಿಕೇರಿ ತಾಲ್ಲೂಕಿನಲ್ಲಿ ೨೬೪ ಬ್ಲಾಕ್‌ಗಳಲ್ಲಿನ ೩೫,೧೨೭ ಕುಟುಂಬಗಳ ಪೈಕಿ ೨೫,೬೧೦ ಕುಟುಂಬಗಳ ಸಮೀಕ್ಷೆ ಪೂರ್ಣಗೊಂಡಿದೆ.

ಪೊನ್ನಂಪೇಟೆ ತಾಲ್ಲೂಕಿನ ೮೭ ಬ್ಲಾಕ್‌ಗಳಲ್ಲಿ ೧೦,೩೩೭ ಕುಟುಂಬಗಳ ಪೈಕಿ ೮,೭೪೩ ಕುಟುಂಬಗಳ ಸಮೀಕ್ಷೆ ಮುಗಿದಿದೆ. ಸೋಮವಾರಪೇಟೆ ತಾಲ್ಲೂಕಿನ ೨೬೬ ಬ್ಲಾಕ್‌ಗಳಲ್ಲಿ ೨೯,೪೦೨ ಕುಟುಂಬಗಳ ಗುರಿಯಲ್ಲಿ ೨೪,೪೨೮ ಕುಟುಂಬಗಳ ಸಮೀಕ್ಷೆ ಆಗಿದೆ. ಹಾಗೆಯೇ ವಿರಾಜಪೇಟೆ ತಾಲ್ಲೂಕಿನ ೨೧೦ ಬ್ಲಾಕ್‌ಗಳಲ್ಲಿ ೨೪,೮೯೩ ಕುಟುಂಬಗಳ ಗುರಿಯಲ್ಲಿ ೧೯,೦೪೪ ಕುಟುಂಬಗಳ ಸರ್ವೇ ಪೂರ್ಣಗೊಂಡಿದೆ.

ಈಗಾಗಲೇ ಗುರುತಿಸಲಾಗಿರುವ ಎಲ್ಲಾ ಮನೆಗಳಿಗೆ ಗಣತಿದಾರರು ಭೇಟಿ ನೀಡಿ, ಗಣತಿ ಕಾರ್ಯ ನಡೆಸುತ್ತಿದ್ದು, ಸಾರ್ವಜನಿಕರು ಕೂಡ ತಮ್ಮ ಮನೆಯ ಗಣತಿ ಮಾಡಿಕೊಳ್ಳಲು ಅನುಕೂಲವಾಗುವಂತೆ ಸೌಲಭ್ಯ ಸಿದ್ಧಪಡಿಸ ಲಾಗಿದೆ. ಸಾರ್ವಜನಿಕರು  https://kscbcselfdeclaration.karnataka.gov.in ನಲ್ಲಿ ಸ್ವಯಂ  ಮಾಹಿತಿ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ.

ಸಮೀಕ್ಷೆಗೆ ದಾಖಲೆಗಳ ಮಾಹಿತಿ ನೀಡುವಅವಶ್ಯವಿರುವುದರಿಂದ ತಮ್ಮ ಕುಟುಂಬದ ಸದಸ್ಯರ ರೇಷನ್ ಕಾರ್ಡ್, ಆಧಾರ್ ಕಾರ್ಡ್ ಮತದಾರರ ಗುರುತಿನ ಚೀಟಿ, ವಿಕಲಚೇತನರಾಗಿದ್ದರೆ ಯುಐಡಿ ಕಾರ್ಡ್ ಅಥವಾ ಅಂಗವಿಕಲ ಪ್ರಮಾಣ ಪತ್ರದ ದಾಖಲೆಗಳನ್ನು ತೆಗೆದಿರಿಸಿಕೊಂಡು ಸುಲಭವಾಗಿ ಈ ಸಮೀಕ್ಷೆ ಕಾರ್ಯದಲ್ಲಿ ಭಾಗವಹಿಸಬಹುದಾಗಿದೆ.

ಕಾಡಾನೆ ದಾಳಿ ಭೀತಿ..!: 

ವನ್ಯಮೃಗಗಳ ಹಾವಳಿ ಹೆಚ್ಚಿರುವ ಕೊಡಗು ಜಿಲ್ಲೆಯಲ್ಲಿ ಸಮೀಕ್ಷೆ ಸಂದರ್ಭದಲ್ಲಿ ಕಾಡಾನೆ ದಾಳಿ ಭೀತಿ ಎದುರಾಗಿದೆ. ಇತ್ತೀಚೆಗೆ ಗೋಣಿಕೊಪ್ಪದ ಶಿಕ್ಷಕರೊಬ್ಬರು ಸಮೀಕ್ಷೆಗೆ ತೆರಳುತ್ತಿದ್ದ ವೇಳೆ ರಸ್ತೆ ಬದಿ ಕಾಡಾನೆ ನಿಂತಿರುವುದನ್ನು ಕಂಡು ಬೈಕ್‌ನಿಂದ ಬಿದ್ದು ಗಾಯಗೊಂಡಿದ್ದರು. ಮತ್ತೊಂದೆಡೆ ಅತ್ತೂರು ಶಾಲೆಯ ಶಿಕ್ಷಕಿಯೊಬ್ಬರು ಸಮೀಕ್ಷೆಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕಾಫಿ ತೋಟವೊಂದರಲ್ಲಿ ಆನೆ ಪ್ರತ್ಯಕ್ಷವಾಗಿದ್ದು, ಕಾರು ಚಲಾಯಿಸುತ್ತಿದ್ದ ಪತಿಯ ಸಮಯಪ್ರಜ್ಞೆಯಿಂದ ಅಪಾಯದಿಂದ ಪಾರಾಗಿದ್ದಾರೆ. ಈ ರೀತಿ ಕಾಡಾನೆ ದಾಳಿ ಭೀತಿಯ ನಡುವೆಯೂ ಶಿಕ್ಷಕರು ಸಮೀಕ್ಷಾ ಕಾರ್ಯವನ್ನು ಚುರುಕುಗೊಳಿಸಿದ್ದು, ಕೆಲವೆಡೆ ಅಧಿಕಾರಿಗಳು ಕೂಡ ಸಮೀಕ್ಷಾ ಕಾರ್ಯದಲ್ಲಿ ಭಾಗಿಯಾಗಿದ್ದಾರೆ.

ಹಲವು ಸವಾಲುಗಳ ನಡುವೆ ಸಮೀಕ್ಷೆ..!: 

ಸಮೀಕ್ಷೆ ಸಂದರ್ಭದಲ್ಲಿ ಕೆಲವೆಡೆ ಸಾರ್ವಜನಿಕರಿಂದ ಅಸಹಕಾರವೂ ಕಂಡುಬಂದಿದೆ. ಈ ಬಗ್ಗೆ ಮಾಹಿತಿ ನೀಡಿದ ಶಿಕ್ಷಕಿಯೊಬ್ಬರು, ಸರ್ವರ್ ಸ್ಲೋ ಇದೆ. ನೀರು ಕುಡಿದು ಬರುತ್ತೇವೆ ಎಂದು ತಿಳಿಸಿದರೆ ನೀವು ಸುಮ್ನೆ ಶೋಕಿ ಮಾಡ್ಕೊಂಡು ತಿರುಗುತ್ತಿದ್ದೀರಾ ಎಂದು ಅಸಹಕಾರ ತೋರಿದ್ದಾರೆ. ಮತ್ತೊಂದು ಮನೆಯವರು ಸಂಘದಲ್ಲಿ ನಾವು ಸಾಲ ತೆಗೆದುಕೊಂಡಿದ್ದೇವೆ. ಈವರೆಗೆ ಕಟ್ಟಿಲ್ಲ; ನೀವು ಸಾಲದ ಹಣವನ್ನು ಕಟ್ಟಿಕೊಟ್ಟರೆ ನಾವು ಸಮೀಕ್ಷೆಗೆ ಬೇಕಾದ ಮಾಹಿತಿ ನೀಡುತ್ತೇವೆ ಎಂದು ತಿಳಿಸಿದ್ದಾರೆ ಎಂದು ಅನುಭವವನ್ನು ಹಂಚಿಕೊಂಡಿದ್ದಾರೆ. ಈ ನಡುವೆ ಸಮೀಕ್ಷೆಗಾಗಿ ಶಿಕ್ಷಕರಿಗೆ ರಜೆ ವಿಸ್ತರಿಸಿರುವುದರಿಂದ ಮಕ್ಕಳ ಶೈಕ್ಷಣಿಕ ಕಲಿಕೆಯ ಮೇಲೂ ವ್ಯತಿರಿಕ್ತ ಪರಿಣಾಮ ಬೀರಲಿದೆ ಎನ್ನಲಾಗುತ್ತಿದೆ.

” ಕೊಡಗು ಜಿಲ್ಲೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಶೇ.೭೭.೮೬ರಷ್ಟು ಪ್ರಗತಿ ಸಾಧಿಸಲಾಗಿದೆ. ಗಣತಿದಾರರು ತಮ್ಮ ಮನೆಗೆ ಬರುವವರೆಗೆ ಕಾಯದೇ ಸಾರ್ವಜನಿಕರು ತಮಗೆ ಅನುಕೂಲವಾದ ಅವಧಿಯಲ್ಲಿ ಯಾವುದೇ ಪ್ರದೇಶದಿಂದ ಸಮೀಕ್ಷೆಯಲ್ಲಿ ಭಾಗವಹಿಸಬಹುದಾಗಿದೆ. ತಾವೇ ತಮ್ಮ ಮಾಹಿತಿಯನ್ನು ದಾಖಲು ಮಾಡುವುದರಿಂದ, ಗೊಂದಲಗಳಿಲ್ಲದೆ ನಿಖರವಾಗಿ ತಮ್ಮ ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿಗತಿಯನ್ನು ಸಮೀಕ್ಷೆಯಲ್ಲಿ ತಿಳಿಸಲು ಸಾಧ್ಯವಾಗಲಿದೆ.”

-ಎ.ಎಸ್. ದೀಪಕ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ

ಆಂದೋಲನ ಡೆಸ್ಕ್

Recent Posts

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

2 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

10 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

10 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

10 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

10 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

10 hours ago