Andolana originals

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಕೊಡಗಿನಲ್ಲಿ ಶೇ.87 ಸಾಧನೆ

೧,೧೩೧ ಬ್ಲಾಕ್‌ಗಳಲ್ಲಿ ೧,೩೪,೩೯೬ ಕುಟುಂಬಗಳ ಗುರಿ; ೧,೪೭,೮೩೧ ಕುಟುಂಬಗಳ ಸಮೀಕ್ಷೆ ಪೂರ್ಣ 

ಮಡಿಕೇರಿ: ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಕುರಿತು ನಿಖರವಾದ ಮಾಹಿತಿ ಸಂಗ್ರಹಿಸುವ ಸಮೀಕ್ಷಾ ಕಾರ್ಯವು ಕೊಡಗು ಜಿಲ್ಲೆಯಾದ್ಯಂತ ಪ್ರಗತಿಯಲ್ಲಿದ್ದು, ಜಿಲ್ಲೆಯಲ್ಲಿ ಶೇ.೮೭ ಸಾಧನೆ ಮಾಡಲಾಗಿದೆ.

ಜಿಲ್ಲೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಂಬಂಧಿಸಿದಂತೆ ೧,೧೩೧ ಬ್ಲಾಕ್‌ಗಳಿವೆ. ಇದರಲ್ಲಿ ೧,೩೪,೩೯೬ ಕುಟುಂಬಗಳ ಗುರಿಯಲ್ಲಿ ಈಗಾಗಲೇ ೧,೪೭,೮೩೧ ಕುಟುಂಬಗಳ ಸಮೀಕ್ಷೆ ಮುಗಿದಿದೆ. ಜಿಲ್ಲೆಯಾದ್ಯಂತ ಅಂದಾಜಿಸಲಾಗಿರುವ ಒಟ್ಟು ೫ ಲಕ್ಷ ೬೨ ಸಾವಿರ ೯೬೯ ಜನಸಂಖ್ಯೆಯಲ್ಲಿ ಒಟ್ಟು ೪ ಲಕ್ಷ ೯೨ ಸಾವಿರ ೫೨೨ ಮಂದಿಯ ಸಮೀಕ್ಷೆ ಪೂರ್ಣಗೊಂಡಿದೆ. ಈ ಮೂಲಕ ಶೇ.೮೭.೪೬ ಸಾಧನೆ ಆಗಿದೆ. ಅಕ್ಟೋಬರ್ ೩೧ರವರೆಗೆ ಸಮೀಕ್ಷೆ ನಡೆಯಲಿದೆ.

ಕುಶಾಲನಗರ ತಾಲ್ಲೂಕಿನಲ್ಲಿ ೩೧,೩೪೯ ಮನೆಗಳ ೧,೦೮,೫೯೭ ಮಂದಿಯ ಸಮೀಕ್ಷೆ ನಡೆಸಲಾಗಿದೆ. ಮಡಿಕೇರಿ ತಾಲ್ಲೂಕಿನಲ್ಲಿ ೩೬,೦೭೬ ಮನೆಗಳ ೧,೨೭,೯೫೬ ಮಂದಿ, ಪೊನ್ನಂಪೇಟೆ ತಾಲ್ಲೂಕಿನ ೨೧,೩೩೩ ಮನೆಗಳ ೬೪,೧೧೦ ಮಂದಿ, ಸೋಮವಾರಪೇಟೆ ತಾಲ್ಲೂಕಿನ ೨೯,೯೪೦ ಮನೆಗಳ ೯೮,೬೩೮ ಮಂದಿ ಹಾಗೂ ವಿರಾಜಪೇಟೆ ತಾಲ್ಲೂಕಿನ ೨೯,೧೩೩ ಮನೆಗಳ ೯೩,೨೨೧ ಜನರ ಸಮೀಕ್ಷೆಯನ್ನು ಪೂರೈಸಲಾಗಿದೆ. ಒಟ್ಟು ಜಿಲ್ಲೆಯ ೧,೪೭,೮೩೧ ನಿವಾಸಗಳ ೪,೯೨,೫೨೨ ಸಾರ್ವಜನಿಕರ ಸಮೀಕ್ಷೆಯನ್ನು ಇದುವರೆಗೆ ಪೂರ್ಣಗೊಳಿಸಲಾಗಿದೆ.

ಕುಶಾಲನಗರ ತಾಲ್ಲೂಕಿನ ೩೦೪ ಬ್ಲಾಕ್‌ಗಳಲ್ಲಿ ೩೪,೬೩೭ ಕುಟುಂಬಗಳ ಪೈಕಿ ೩೧,೩೪೯ ಕುಟುಂಬಗಳ ಸಮೀಕ್ಷೆ ಆಗಿದೆ. ಮಡಿಕೇರಿ ತಾಲ್ಲೂಕಿನ ೨೬೪ ಬ್ಲಾಕ್‌ಗಳಲ್ಲಿ ೩೫,೧೨೭ ಕುಟುಂಬಗಳ ಗುರಿಯಲ್ಲಿ ೩೬,೦೭೬ ಕುಟುಂಬಗಳ ಸಮೀಕ್ಷೆ ಮುಗಿದಿದೆ. ಪೊನ್ನಂಪೇಟೆ ತಾಲ್ಲೂಕಿನಲ್ಲಿ ೮೭ ಬ್ಲಾಕ್‌ಗಳಲ್ಲಿ ೧೦,೩೩೭ ಕುಟುಂಬಗಳಲ್ಲಿ ೨೧,೩೩೩ ಕುಟುಂಬಗಳ ಸಮೀಕ್ಷೆ ಆಗಿದೆ. ಸೋಮವಾರಪೇಟೆ ತಾಲ್ಲೂಕಿನಲ್ಲಿ ೨೬೬ ಬ್ಲಾಕ್‌ಗಳಲ್ಲಿ ೨೯,೪೦೨ ಕುಟುಂಬಗಳ ಗುರಿಯಲ್ಲಿ ೨೯,೯೪೦ ಕುಟುಂಬಗಳ ಸಮೀಕ್ಷೆ ಆಗಿದೆ. ಹಾಗೆಯೇ ವಿರಾಜಪೇಟೆ ತಾಲ್ಲೂಕಿನಲ್ಲಿ ೨೧೦ ಬ್ಲಾಕ್‌ಗಳಲ್ಲಿ ೨೪,೮೯೩ ಕುಟುಂಬಗಳ ಗುರಿಯಲ್ಲಿ ೨೯,೧೩೩ ಕುಟುಂಬಗಳ ಸರ್ವೆ ಆಗಿದೆ.

ಇದನ್ನು ಓದಿ: ತುಂಬಿದ ಕೆರೆ ಕಟ್ಟೆಗಳೇ ಮಕ್ಕಳ ಪಾಲಿಗೆ ಕಂಟಕ

ಈಗಾಗಲೇ ಗುರುತಿಸಲಾಗಿರುವ ಎಲ್ಲಾ ಮನೆಗಳಿಗೆ ಗಣತಿದಾರರು ಭೇಟಿ ನೀಡಿ, ಗಣತಿ ಕಾರ್ಯ ನಡೆಸುತ್ತಿದ್ದು, ಸಾರ್ವಜನಿಕರು ಕೂಡ ತಮ್ಮ ಮನೆಯ ಗಣತಿ ಮಾಡಿಕೊಳ್ಳಲು ಅನುಕೂಲವಾಗುವಂತೆ ಸೌಲಭ್ಯ ಒದಗಿಸಲಾಗಿದೆ. ಸಾರ್ವಜನಿಕರು ವೆಬ್‌ಸೈಟ್‌ನಲ್ಲಿ ಸ್ವಯಂ ಮಾಹಿತಿ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ.

ಸಮೀಕ್ಷೆಗೆ ದಾಖಲೆಗಳ ಮಾಹಿತಿ ನೀಡುವ ಅವಶ್ಯಕತೆ ಇರುವುದರಿಂದ ತಮ್ಮ ಕುಟುಂಬದ ಸದಸ್ಯರ ಪಡಿತರ ಚೀಟಿ, ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ವಿಕಲಚೇತನರಾಗಿದ್ದರೆ ಯುಐಡಿ ಕಾರ್ಡ್ ಅಥವಾ ಅಂಗವಿಕಲ ಪ್ರಮಾಣ ಪತ್ರದ ದಾಖಲೆಗಳನ್ನು ಇರಿಸಿಕೊಂಡು ಸುಲಭವಾಗಿ ಈ ಸಮೀಕ್ಷೆ ಕಾರ್ಯದಲ್ಲಿ ಭಾಗವಹಿಸಬಹುದಾಗಿದೆ.

೮೦೫೦೭೭೦೦೦೪ಕ್ಕೆ ಕರೆ ಮಾಡಿ:  ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ಅತ್ಯಂತ ಮಹತ್ವದ್ದಾಗಿದೆ. ಸಂಗ್ರಹವಾಗುವ ದತ್ತಾಂಶದಿಂದ ನೂತನ ಕಾರ್ಯ ಕ್ರಮಗಳು,ಯೋಜನೆಗಳನ್ನು ರೂಪಿಸಲು ರಾಜ್ಯ ಸರ್ಕಾರಕ್ಕೆ ಅನುಕೂಲವಾಗಲಿದೆ. ಮನೆಗೆ ಭೇಟಿ ನೀಡುವಸಮೀಕ್ಷಾದಾರರಿಗೆ ನಿಮ್ಮ ಕುಟುಂಬದ ಕುರಿತಾದ ನಿಖರ ಮಾಹಿತಿ ನೀಡಿ. ಮುಂದಿನ ಪೀಳಿಗೆಗೆ ಶಿಕ್ಷಣ ಮತ್ತು ಉದ್ಯೋಗ ಭದ್ರತೆಗಾಗಿ ಸಹಕರಿಸಿ. ಸಮೀಕ್ಷೆಯಲ್ಲಿ ನಿಮ್ಮ ಮನೆ ಬಿಟ್ಟು ಹೋಗಿದ್ದರೆ ಕೂಡಲೇ ೮೦೫೦೭೭೦೦೦೪ಕ್ಕೆ ಕರೆ ಮಾಡಿ ಸಮೀಕ್ಷೆಯನ್ನು ಯಶಸ್ವಿಗೊಳಿಸುವಂತೆ ರಾಜ್ಯ ಸರ್ಕಾರ ಮನವಿ ಮಾಡಿದೆ.

” ಕೊಡಗು ಜಿಲ್ಲೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಪ್ರಗತಿ ಸಾಧಿಸಲಾಗುತ್ತಿದೆ.ಗಣತಿದಾರರು ತಮ್ಮ ಮನೆಗೆ ಬರುವವರೆಗೆ ಕಾಯದೇ ಸಾರ್ವಜನಿಕರು ತಮಗೆ ಅನುಕೂಲವಾದ ಅವಧಿಯಲ್ಲಿ ಯಾವುದೇ ಪ್ರದೇಶದಿಂದ ಸಮೀಕ್ಷೆಯಲ್ಲಿ ಭಾಗವಹಿಸಬಹುದಾಗಿದೆ. ತಾವೇ ತಮ್ಮ ಮಾಹಿತಿಯನ್ನು ದಾಖಲು ಮಾಡುವುದರಿಂದ, ನಿಖರವಾಗಿ ತಮ್ಮ ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿಗತಿಯನ್ನು ಸಮೀಕ್ಷೆಯಲ್ಲಿ ತಿಳಿಸಲು ಸಾಧ್ಯವಾಗಲಿದೆ.”

-ಎ.ಎಸ್. ದೀಪಕ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ

ನವೀನ್ ಡಿಸೋಜ

ಆಂದೋಲನ ಡೆಸ್ಕ್

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

11 hours ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

12 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

14 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

15 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

16 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

16 hours ago