Andolana originals

ರಾಜಕಾಲುವೆ ಒತ್ತುವರಿ ಸಮಸ್ಯೆಗೆ ಪರಿಹಾರವೆಂದು?

ರಸ್ತೆಯಲ್ಲೇ ಹರಿಯುವ ಮಳೆ ನೀರು ; ಪುರಸಭೆ ಕೃ ಸೇರಿದ ಸರ್ವೆ ವರದಿ: ದಿಟ್ಟ ಕ್ರಮದ ನಿರೀಕ್ಷೆ

ಕಾಂಗೀರ ಬೋಪಣ್ಣ
ವಿರಾಜಪೇಟೆ: ರಾಜಕಾಲುವೆ ಒತ್ತುವರಿಯಿಂದ ಮಳೆಗಾಲದಲ್ಲಿ ಪಟ್ಟಣದ ನಿವಾಸಿಗಳು ಇನ್ನಿಲ್ಲದ ಸಮಸ್ಯೆ ಎದುರಿಸುತ್ತಿದ್ದು, ಪುರಸಭೆ ಸೂಕ್ತ ಕ್ರಮ ತೆಗೆದುಕೊಳ್ಳುವ ನಿರೀಕ್ಷೆಯಲ್ಲಿ ಸ್ಥಳೀಯ ನಿವಾಸಿಗಳಿದ್ದಾರೆ.

ಈ ರಾಜಕಾಲುವೆ ಮಗ್ಗುಲ ಗ್ರಾಮದಿಂದ ಪಟ್ಟಣದ ಮೊಗೆರಾಗಲ್ಲಿ ವಿಜಯನಗರ ಮೂಲಕ ಹರಿದು ಕದನೂರು ನದಿಗೆ ಸೇರಿ ನಂತರ ಕಾವೇರಿ ಒಡಲು ಸೇರುತ್ತದೆ. ಈ ಮುಖ್ಯ ಕಾಲುವೆಯನ್ನು ಕೆಲವು ಕಡೆ ಒತ್ತುವರಿ ಮಾಡಿಕೊಂಡು ಮಳಿಗೆ ನಿರ್ಮಿಸಿದ್ದಾರೆ. ಇದರಿಂದಾಗಿ ಭಾರಿ ಮಳೆಯಾದಾಗ ಮನೆಗಳಿಗೆ ನೀರು ನುಗ್ಗುತ್ತದೆ. ಜೊತೆಗೆ ಪಟ್ಟಣದ ಮಾಂಸ ಮಾರುಕಟ್ಟೆ ಜಂಕ್ಷನ್ ಬಳಿ ನೀರು ಉಕ್ಕಿ ರಸ್ತೆಗೆ ಹರಿದು ವಾಹನ ಸಂಚಾರದಲ್ಲಿ ಅಸ್ತವ್ಯಸ್ತವಾಗುತ್ತದೆ.

ಪಟ್ಟಣದ ರಾಜ ಕಾಲುವೆ ಒತ್ತುವರಿಯಿಂದ ನೀರು ಸರಾಗವಾಗಿ ಹರಿಯದೆ ಸಮಸ್ಯೆ ಸೃಷ್ಟಿಯಾಗುತ್ತಿದೆ. ಹಲವು ವರ್ಷಗಳಿಂದ ಕೊಂಚ ಜಾಸ್ತಿ ಮಳೆ ಬಂದರೂ ರಸ್ತೆಯಲ್ಲಿಯೇ ನೀರು ಹರಿಯಲು ಆರಂಭವಾಗುತ್ತದೆ. ಇದರೊಂದಿಗೆ ಮಾಂಸ ಮಾರುಕಟ್ಟೆ ಬಳಿಯ ತೋಡು ಉಕ್ಕಿ ಹರಿಯುವ ಕಾರಣ ರಸ್ತೆ ಸಂಚಾರಕ್ಕೆ ತೊಡಕುಂಟಾಗುತ್ತಿದೆ. ಈ ತೋಡಿಗೆ ಕೆಲವು ಕಡೆ ನೇರವಾಗಿ ಶೌಚ ತ್ಯಾಜ್ಯವನ್ನು ಬಿಡಲಾಗುತ್ತಿದೆ. ಇದರಿಂದಲೂ ಸಮಸ್ಯೆ ಉಂಟಾಗುತ್ತಿದೆ. ರಾಜಕಾಲುವೆ ಒತ್ತುವರಿ ಬಗ್ಗೆ ಹಿಂದಿನಿಂದಲೂ ಚರ್ಚೆಯಾಗುತ್ತಿತ್ತು. ಈ ಸಂಬಂಧ ಸೇವ್ ಕಾವೇರಿ ಸಂಘಟನೆ ಹಿಂದಿನ ತಹಸಿಲ್ದಾರ್ ಮತ್ತು ಪುರಸಭೆಗೆ ದೂರು ನೀಡಿದ ಹಿನ್ನೆಲೆಯಲ್ಲಿ ರಾಜಕಾಲುವೆ ಒತ್ತುವರಿ ಸಂಬಂಧ ಸರ್ವೆಗೆ ಆದೇಶ ನೀಡಲಾಗಿತ್ತು.

ತ್ಯಾಜ್ಯ ನೀರು ಕಾವೇರಿ ಒಡಲು ಸೇರುತ್ತಿರುವ ಬಗ್ಗೆ ತಹಸಿಲ್ದಾರ್ ಮತ್ತು ಪುರಸಭೆಗೂ ಮಾಹಿತಿ ನೀಡಿ ಕ್ರಮಕ್ಕೆ ಆಗ್ರಹಿಸಿದ ಹಿನ್ನೆಲೆಯಲ್ಲಿ ಅಂದಿನ ತಹಸಿಲ್ದಾರ್ ರಾಮಚಂದ್ರ ಆಸಕ್ತಿ ವಹಿಸಿ ಅಡೆತಡೆಗಳ ಮಧ್ಯೆಯೂ ಸರ್ವೆ ಆರಂಭಿಸಿದ್ದರು. ಈ ಕುರಿತು ಚರ್ಚಿಸಲು ಪುರಸಭೆ ಕರೆದಿದ್ದ ಸಭೆಯಲ್ಲಿ ಆಗ ನೂತನವಾಗಿ ನೇಮಕವಾಗಿದ್ದ ಸ್ಥಳೀಯರೇ ಅದ ಸರ್ವೆ ಇಲಾಖೆಯ ಅಧಿಕಾರಿಯೊಬ್ಬರು ಈ ಸರ್ವೆ ನಡೆಸಲು ಬಿಡುವುದಿಲ್ಲ ಎಂಬ ಮಾತನ್ನೂ ಆಡಿದ್ದರು. ಇವೆಲ್ಲದರ ನಡುವೆ ಈಗ ಸರ್ವೆ ಮುಗಿದು ವರದಿ ಪುರಸಭೆಗೆ ಸೇರಿದೆ.

ಮೇ ೨೬ರಂದು ಕೆಲವು ಬ್ಲಾಕ್‌ಗಳ ಒತ್ತುವರಿಯಾಗಿರುವ ಸ್ಥಳಗಳನ್ನು ಸರ್ವೆಯಲ್ಲಿ ಗುರುತಿಸಿ ವರದಿ ನೀಡಲಾಗಿದೆ. ಪುರಸಭೆ ಮುಂದೆ ಯಾವ ಕ್ರಮ ಕೈಗೊಳ್ಳುತ್ತದೆ ಎಂಬುದು ಸದ್ಯ ಎಲ್ಲರ ಕುತೂಹಲವಾಗಿದೆ. ಪುರಸಭೆ ದಿಟ್ಟ ಕ್ರಮ ಕೈಗೊಳ್ಳುವ ಮೂಲಕ ಮುಂದೆಯೂ ಪಟ್ಟಣದಲ್ಲಿ ಯಾವುದೇ ಸಮಸ್ಯೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆನ್ನುವುದು ಪ್ರಜ್ಞಾವಂತ ನಾಗರಿಕರ ಒತ್ತಾಯವಾಗಿದೆ.

ರಾಜಕಾಲುವೆ ಒತ್ತುವರಿಯಾಗಿರುವುದು ಸರ್ವೆಯಿಂದ ದೃಢಪಟ್ಟಿದೆ. ವರದಿಯಂತೆ ಪುರಸಭೆ ಯಾವ ಕ್ರಮ ಕೈಗೊಳ್ಳುತ್ತದೆ ಎಂದು ಕಾದು ನೋಡುತ್ತೇವೆ. ಮುಂದೆ ಸೂಕ್ತ ಕ್ರಮ ಕೈಗೊಳ್ಳದೆ ಹೋದರೆ ಕಾನೂನು ಹೋರಾಟ ಮಾಡಬೇಕಾಗುತ್ತದೆ. ರಾಜಕಾಲುವೆ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುವವರೆಗೆ ಹೋರಾಟ ಮುಂದುರಿಯಲಿದೆ. -ಚೆಟ್ಟೋಳಿರ ಸೋಮಣ್ಣ, ಅಧ್ಯಕ್ಷರು, ಕಾವೇರಿ ಸೇವ್ ಸಂಘಟನೆ

ರಾಜಕಾಲುವೆ ಒತ್ತುವರಿ ಸಂಬಂಧ ಸರ್ವೆ ವರದಿ ಬಂದಿದ್ದು, ಸರ್ವೆ ಇಲ್ಲಿಯವರೆಗೆ ಆಗಿರುವ ಕುರಿತು ನಕ್ಷೆ ನೀಡಿದ್ದಾರೆ. ಅದರ ಪರಿಶೀಲನೆ ಇನ್ನು ಮಾಡಿಲ್ಲ. ಈ ಕುರಿತು ಸರ್ವೆ ಇಲಾಖೆ ಜೊತೆ ಚರ್ಚೆ ನಡೆಸಿ ವರದಿಯ ಕುರಿತು ಸಮಗ್ರ ಮಾಹಿತಿ ಪಡೆಯಬೇಕಿದೆ. ನಂತರ ಈ ಕುರಿತು ಸ್ವಷ್ಟ ಮಾಹಿತಿ ನೀಡಲು ಸಾಧ್ಯ. -ಪಿ. ಕೆ. ನಾಚಪ್ಪ, ಪುರಸಭೆ ಮುಖ್ಯಾಧಿಕಾರಿ

ಆಂದೋಲನ ಡೆಸ್ಕ್

Recent Posts

ಎಚ್‌ಡಿಕೆಯನ್ನು ಸಿಎಂ ಮಾಡ್ತೀವಿ ಎಂದು ವಿಜಯೇಂದ್ರ, ಅಶೋಕ್‌ ಹೇಳಲಿ: ದಿನೇಶ್‌ ಗುಂಡೂರಾವ್‌ ಸವಾಲು

ಬೆಂಗಳೂರು: ನಾವು ಮುಂದಿನ ದಿನಗಳಲ್ಲಿ ಅಧಿಕಾರಕ್ಕೆ ಬಂದರೆ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುತ್ತೇವೆ ಎಂದು ವಿಜಯೇಂದ್ರ ಹಾಗೂ ಆರ್.‌ಅಶೋಕ್‌ ಹೇಳಲಿ…

2 hours ago

ಮನರೇಗಾ ಹೆಸರು ಬದಲಾವಣೆ ಖಂಡಿಸಿ ನಾಳೆ ಬೃಹತ್‌ ಧರಣಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮನರೇಗಾ ಯೋಜನೆಯ ಹೆಸರನ್ನು ವಿಬಿ ಜೀ ರಾಮ್‌ ಜೀ ಎಂದು ಬದಲಾವಣೆ ಮಾಡಿದ ಕೇಂದ್ರ ಸರ್ಕಾರದ ನಡೆ ವಿರುದ್ಧ…

2 hours ago

ರಾಜ್ಯಪಾಲರ ವಿರುದ್ಧ ರಾಜ್ಯ ಸರ್ಕಾರ ನಡೆದುಕೊಂಡ ಕ್ರಮ ಸರಿಯಲ್ಲ: ಮಾಜಿ ಮೇಯರ್‌ ಶಿವಕುಮಾರ್‌

ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದ ದಿನದಂದು ರಾಜ್ಯಪಾಲರ ವಿರುದ್ಧ ರಾಜ್ಯ ಕಾಂಗ್ರೆಸ್‌ ಸರ್ಕಾರ ನಡೆದುಕೊಂಡ ಕ್ರಮ ಕರ್ನಾಟಕದ ಇತಿಹಾಸದಲ್ಲೇ ನಡೆದ…

2 hours ago

ಮ್ಯಾನ್ಮಾರ್‌ನಲ್ಲಿ ಶೌರ್ಯ ಘರ್ಜನೆ: 9 ಮಂದಿ ಉಗ್ರರ ಸಂಹಾರ

ಮ್ಯಾನ್ಮಾರ್‌ ಗಡಿಯಲ್ಲಿ ಭಾರತೀಯ ಸೇನೆ ನಡೆಸಿದ ಅತ್ಯಂತ ಸಾಹಸಮಯ ಕೋವರ್ಟ್‌ ಆಪರೇಷನ್‌ ವಿವರಗಳು ಈಗ ಬೆಳಕಿಗೆ ಬಂದಿವೆ. ಕಳೆದ ವರ್ಷ…

2 hours ago

ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ವ್ಯಕ್ತಿಯ ಸಜೀವ ದಹನ

ಡಾಕಾ: ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಜೀವಂತವಾಗಿ ಸುಟ್ಟು ಹಾಕಲಾಗಿದೆ. ಕುಟುಂಬವು ಇದನ್ನು ಯೋಜಿತ ಕೊಲೆ ಎಂದು ಆರೋಪಿಸಿದೆ. ಬಾಂಗ್ಲಾದೇಶದ…

2 hours ago

ಕೌಟುಂಬಿಕ ಕಲಹ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಶರಣು

ಮೈಸೂರು: ಕೌಟುಂಬಿಕ ಕಲಹದಿಂದ ಬೇಸತ್ತು ಇಬ್ಬರು ಮಕ್ಕಳನ್ನು ತಾಯಿ ಹತ್ಯೆ ಮಾಡಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು…

2 hours ago