ಮೈಸೂರಿನ ಕುವೆಂಪುನಗರದ ಕೆ.ಎಚ್.ಬಿ.ಕಾಲೋನಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ನೀರುಗಂಟಿಗಳು ತಮಗಿಷ್ಟ ಬಂದ ಸಮಯಕ್ಕೆ ನೀರು ಬಿಡುತ್ತಿರುವುದರಿಂದ ಸಾರ್ವಜನಿಕರಿಗೆ ನೀರಿನ ಸಮಸ್ಯೆ ಉದ್ಭವಿಸಿದೆ.
ಇಲ್ಲಿನ ನಿವಾಸಿಗಳು ಬೆಳಿಗ್ಗೆ 10 ಗಂಟೆಯ ನಂತರ ಕೆಲಸಕ್ಕೆಂದು ತೆರಳಿ ಬಿಡುತ್ತಾರೆ. ಅಷ್ಟರಲ್ಲಿಯೇ ಮನೆಗೆಲಸಗಳನ್ನು ಮಾಡಿ ಮುಗಿಸಬೇಕು. ಇಲ್ಲವೇ ಸಂಜೆ ಬಂದು ಮಾಡಬೇಕು. ಆದರೆ ನೀರುಗಂಟಿಗಳ ತಮಗಿಷ್ಟ ಬಂದಸಮಯದಲ್ಲಿ ನೀರುಬಿಡುವುದರಿಂದಸಮಯಹೊಂದಿಸಿಕೊಂಡು ನೀರು ತುಂಬಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅಲ್ಲದೆ, ಯಾವ ಸಮಯಕ್ಕೆ ನೀರು ಬರಬಹುದು ಎಂಬ ಗೊಂದಲ ಜನರಲ್ಲಿ ಉಂಟಾಗಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಕಟವಾದ ಬಳಿಕ ಒಂದೆರಡು ದಿನಗಳು ಸರಿಯಾದ ಸಮಯಕ್ಕೆ ನೀರು ಬಿಡುತ್ತಾರೆ ಅಷ್ಟೇ. ಇನ್ನು ಈ ಬಡಾವಣೆಯಲ್ಲಿ ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದ್ದು, ಇಲ್ಲಿನ ಪಾರ್ಕ್ಗಳ ವಾತಾವರಣವೇ ಹಾಳಾಗಿದೆ. ಅಲ್ಲದೆ ಸರಿಯಾದ ಬೀದಿ ದೀಪಗಳ ವ್ಯವಸ್ಥೆ ಇಲ್ಲದೆ ಸಾರ್ವಜನಿಕರು ಸಂಜೆಯಾಗುತ್ತಲೇ ರಸ್ತೆಯಲ್ಲಿ ಓಡಾಡುವುದೇ ಕಷ್ಟವಾಗಿದೆ. ಆದ್ದರಿಂದ ಸಂಬಂಧಪಟ್ಟವರು ನಮ್ಮ ಬಡಾವಣೆಯತ್ತ ಗಮನಹರಿಸಿ ಇಲ್ಲಿನ ಸಮಸ್ಯೆಗಳನ್ನು ಬಗೆಹರಿಸಬೇಕಿದೆ.
-ಶಶಿಕುಮಾರ್, ಕುವೆಂಪುನಗರ, ಮೈಸೂರು
ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…
ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…