Andolana originals

ಹದಗೆಟ್ಟ ಸೋಮವಾರಪೇಟೆ-ಕೂತಿ ರಸ್ತೆ, ಸಂಚಾರ ದುಸ್ತರ

ಲಕ್ಷ್ಮೀಕಾಂತ್ ಕೊಮಾರಪ್ಪ

ರಸ್ತೆಯಲ್ಲಿ ಗುಂಡಿಗಳದ್ದೇ ದರ್ಬಾರ್; ಇಲಾಖೆಯ ವಿರುದ್ಧ ಸ್ಥಳೀಯರ ಅಸಮಾಧಾನ, ಕ್ರಮಕ್ಕೆ ಆಗ್ರಹ 

ಸೋಮವಾರಪೇಟೆ: ಪಟ್ಟಣದಿಂದ ಆಲೇಕಟ್ಟೆ-ಕೂಡುರಸ್ತೆ-ಕಲ್ಕಂದೂರು-ಹೊಸಬೀಡು-ತೋಳೂರುಶೆಟ್ಟಳ್ಳಿಮಾರ್ಗವಾಗಿ ಇನಕನಳ್ಳಿಯವರೆಗಿನ ರಸ್ತೆಯಲ್ಲಿ ಸಾಗುವ ಬಹುತೇಕ ಮಂದಿ ಸರ್ಕಾರ ಹಾಗೂ ಲೋಕೋಪಯೋಗಿ ಇಲಾಖೆ, ಗುತ್ತಿಗೆದಾರರಿಗೆ ಹಿಡಿಶಾಪ ಹಾಕುತ್ತಿದ್ದಾರೆ.ಈ ಈ ರಸ್ತೆಯಲ್ಲಿ ನೂರಾರು ಗುಂಡಿಗಳು ನಿರ್ಮಾಣವಾಗಿ ಡಾಂಬರು ರಸ್ತೆಯನ್ನು ಹುಡುಕುವಂತಹ ಸ್ಥಿತಿ ನಿರ್ಮಾಣವಾಗಿದೆ.

ಆಲೇಕಟ್ಟೆಯ ಸಿದ್ದೇಶ್ವರ ಟಯರ್ ವಕ್ಸ್‌ರ್ನಿಂದ ಕೂಡುರಸ್ತೆ ಜಂಕ್ಷನ್‌ವರೆಗೆ ರಸ್ತೆಯ ದುಸ್ಥಿತಿ ಹೇಳತೀರದ್ದಾಗಿದೆ. ಪ್ರಸಕ್ತ ಸಾಲಿನ ಮಳೆಗಾಲ ಇನ್ನೂ ನಿಂತಿಲ್ಲ, ರಸ್ತೆಯ ಗುಂಡಿಗಳೂ ಮುಚ್ಚುತ್ತಿಲ್ಲ ಎಂಬಂತಹ ಸ್ಥಿತಿಯಿದೆ. ಲೋಕೋಪಯೋಗಿ ಇಲಾಖೆ ಸಚಿವರು ಜ.೧೧ರಂದು ರಸ್ತೆ ಕಾಮಗಾರಿಗೆ ತೋಳೂರು ಶೆಟ್ಟಳ್ಳಿಯಲ್ಲಿ ಭೂಮಿ ಪೂಜೆ ನೆರವೇರಿಸಿದ್ದರು. ತಕ್ಷಣದಿಂದಲೇ ಕಾಮಗಾರಿ ಆರಂಭಿಸಿದ್ದರೆ ಇಷ್ಟರಲ್ಲಾಗಲೇ ಬಹುಪಾಲು ಕೆಲಸ ಪೂರ್ಣಗೊಳ್ಳುತ್ತಿತ್ತು. ಆದರೆ, ಕಾಮಗಾರಿ ಪೂರ್ಣಗೊಳ್ಳದೆ ಸಾರ್ವಜನಿಕರು ಸಮಸ್ಯೆ ಎದುರಿಸುವಂತಾಗಿದೆ.

ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ವತಿಯಿಂದ ಸೋಮವಾರಪೇಟೆ ಪಟ್ಟಣದಿಂದ ತೋಳೂರುಶೆಟ್ಟಳ್ಳಿ ಮಾರ್ಗವಾಗಿಕೂತಿ ಮೂಲಕ ಹಾಸನ ಜಿಲ್ಲೆ ಸಂಪರ್ಕಿಸುವ ರಸ್ತೆ ಅಭಿವೃದ್ಧಿಗೆ ೨೦ ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು,ಕಾಮಗಾರಿ ಸೂಕ್ತವಲ್ಲದ ಸಮಯದಲ್ಲಿ ಆರಂಭಿಸಿದ್ದಕ್ಕೆ ಈ ಭಾಗದ ಜನರು ಸಂಚಾರದ ಸಮಸ್ಯೆ ಎದುರಿಸುವಂತಾಗಿದೆ.

ಹೆಚ್‌ಎಸ್‌ಡಿಪಿ ಯೋಜನೆಯಡಿ ಬೆಂಗಳೂರು-ಜಾಲ್ಸೂರು ರಾಜ್ಯ ಹೆದ್ದಾರಿ ೮೫ಕ್ಕೆ ಒಳಪಡುವ ಸೋಮವಾರಪೇಟೆ-ತೋಳೂರು ಶೆಟ್ಟಳ್ಳಿ-ಕೂತಿ ರಸ್ತೆಯನ್ನು ಈಗಾಗಲೇ ಕೆಲ ಭಾಗದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಪಟ್ಟಣದ ವಿವೇಕಾನಂದ ವೃತ್ತದಿಂದ ಆಲೇಕಟ್ಟೆವರೆಗೆ ೪ ವರ್ಷಗಳ ಹಿಂದೆ ಸಿಮೆಂಟ್ ರಸ್ತೆ ನಿರ್ಮಿಸಿದ್ದು, ಮುಂದುವರಿದ ೭.೨೪ ಕಿ.ಮೀ. ರಸ್ತೆಯನ್ನು ಮೇಲ್ದರ್ಜೆಗೇರಿಸಲು ೨೦ ಕೋಟಿ ರೂ. ಅನುದಾನ ಒದಗಿಸಲಾಗಿದ್ದರೂ ಕಾಮಗಾರಿ ಮಾತ್ರ ನಿರೀಕ್ಷಿತ ಮಟ್ಟದಲ್ಲಿ ಸಾಗುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಹೊಸಬೀಡು ಗ್ರಾಮದ ಬಳಿ ಕೆಲಭಾಗ ಕಾಂಕ್ರೀಟ್ ರಸ್ತೆ ನಿರ್ಮಿಸಲಾಗಿದೆ. ಮೋರಿಗಳಿಗೆ ಪೈಪ್‌ಗಳನ್ನು ಅಳವಡಿಸಿದ್ದು, ಅಲ್ಲಲ್ಲಿ ವೆಟ್‌ಮಿಕ್ಸ್ ದಾಸ್ತಾನಿರಿಸಲಾಗಿದೆ. ಜನವರಿ ಎಡರನೇ ವಾರದಿಂದಲೇ ಕಾಮಗಾರಿ ಆರಂಭಗೊಂಡಿದ್ದರೆ, ಮಳೆಗಾಲದೊಳಗೆ ಪೂರ್ಣಗೊಳ್ಳುತ್ತಿತ್ತು. ಆದರೆ ಗುತ್ತಿಗೆದಾರರ ನಿರ್ಲಕ್ಷ್ಯ, ಲೋಕೋಪಯೋಗಿ ಇಲಾಖಾ ಅಭಿ ಯಂತರರ ಬೇಜವಾಬ್ದಾರಿಯಿಂದ ತಡವಾಗಿ ಕಾಮಗಾರಿ ಆರಂಭಗೊಂಡಿದೆ. ಇದೀಗ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾಮಗಾರಿ ಸ್ಥಗಿತಗೊಂಡಿದೆ. ಕೂಡಲೇ ಸಂಬಂಧಪಟ್ಟವರು ಈ ಬಗ್ಗೆ ಕ್ರಮ ಕೈಗೊಳ್ಲಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

” ರಸ್ತೆಯ ಗುಂಡಿಗಳಿಗೆ ತಾತ್ಕಾಲಿಕವಾಗಿ ಮುಕ್ತಿ ನೀಡುವ ಕಾರ್ಯಲೋಕೋಪಯೋಗಿ ಇಲಾಖೆಯಿಂದ ಆಗಿಲ್ಲ. ಸಂಬಂಧಿಸಿದ ಗುತ್ತಿಗೆದಾರರೂ ಯಾವುದೇ ಕ್ರಮ ಕೈಗೊಂಡಿಲ್ಲ.ರಸ್ತೆಯಲ್ಲಿನ ಗುಂಡಿ ಗಳಿಂದ ಜನಸಾಮಾನ್ಯರು ತೊಂದರೆ ಅನುಭವಿಸುತ್ತಿದ್ದರೂ ಅಭಿಯಂತರರು ಕುರುಡುತನ ಪ್ರದರ್ಶಿಸುತ್ತಿದ್ದಾರೆ. ತಕ್ಷಣ ರಸ್ತೆಯ ಗುಂಡಿಗಳನ್ನು ತಾತ್ಕಾಲಿಕವಾಗಿ ಮುಚ್ಚಿಸಲು ಇಂಜಿನಿಯರ್ ಕ್ರಮ ಕೈಗೊಳ್ಳಬೇಕು.”

-ದಿವಾಕರ್, ಕೃಷಿಕ, ಕೂತಿ ಗ್ರಾಮ

” ಪ್ರತಿದಿನ ಈ ರಸ್ತೆಯಲ್ಲಿ ಶಾಲಾ ವಾಹನಗಳು, ಖಾಸಗಿ ಹಾಗೂ ಸರ್ಕಾರಿ ಬಸ್‌ಗಳು, ಖಾಸಗಿ ವಾಹನಗಳು ಸಾವಿರಾರು ಸಂಖ್ಯೆಯಲ್ಲಿ ಸಂಚರಿಸುತ್ತಿರುತ್ತವೆ. ರಸ್ತೆಯಲ್ಲಿನ ಗುಂಡಿಗಳನ್ನು ತಪ್ಪಿಸಲು ಹೋಗಿ ಅವಘಡಗಳೂ ಸಂಭವಿಸಿವೆ. ಅನಾಹುತ ಸಂಭವಿಸುವ ಮುನ್ನ ಸಂಬಂಧಪಟ್ಟವರು ಎಚ್ಚೆತ್ತುಕೊಂಡು ಸೂಕ್ತ ಕ್ರಮ ಕೈಗೊಳ್ಳಬೇಕು.”

-ಗೌಶಿತ್ ಗೌಡ, ಯಡದಂಟೆ ಗ್ರಾಮ

” ಈ ಹಿಂದೆ ಇದ್ದ ರಸ್ತೆಯನ್ನು ಕೆಲವೆಡೆ ಅಗೆದು ವೆಟ್‌ಮಿಕ್ಸ್ ಹಾಕಿದ್ದು, ಮಳೆಗೆಭಾರೀ ಪ್ರಮಾಣದ ಗುಂಡಿಗಳು ನಿರ್ಮಾಣವಾಗಿವೆ. ಚರಂಡಿಗಳು ಮುಚ್ಚಿರುವುದರಿಂದ ಮಳೆ ನೀರು ರಸ್ತೆಯ ಮೇಲೆಯೇ ನಿಲುಗಡೆಯಾಗುತ್ತಿದೆ. ಈ ಹಿಂದೆ ಇದ್ದ ಸಣ್ಣಪುಟ್ಟ ಗುಂಡಿಗಳು ಇದೀಗ ದೊಡ್ಡ ಹೊಂಡಗಳಾಗಿ ಪರಿವರ್ತನೆಯಾಗಿವೆ. ಕೂಡಲೇ ಪೂರ್ಣ ಪ್ರಮಾಣದಲ್ಲಿ ರಸ್ತೆ ದುರಸ್ತಿ ಕಾರ್ಯ ನಡೆಸಬೇಕು.”

-ವಿನೋದ್ ಕುಮಾರ್, ಕೂತಿ ಗ್ರಾಮ

ಆಂದೋಲನ ಡೆಸ್ಕ್

Recent Posts

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಕಾಂಗ್ರೆಸ್‌ನಲ್ಲಿ ನಿರ್ಣಾಯಕ ಘಟ್ಟಕ್ಕೆ ತಲುಪಿದ ಅಧಿಕಾರ ಹಂಚಿಕೆ

ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಅಧಿಕಾರ ಹಂಚಿಕೆಯ ಕಚ್ಚಾಟ ನಿರ್ಣಾಯಕ ಘಟ್ಟಕ್ಕೆ ತಲುಪಿದಂತೆ ಕಾಣುತ್ತಿದೆ. ಕಾರಣ ಅಧಿಕಾರ ಹಂಚಿಕೆಯ ಮಾತು ಉಳಿದುಕೊಂಡಿದೆ…

4 mins ago

‘ಕೈಗೂಡಿದ ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆಯ ಕನಸು’

ನವೀನ್ ಡಿಸೋಜ ದೀರ್ಘಕಾಲದ ಬೇಡಿಕೆಗೆ ಸರ್ಕಾರದ ಸ್ಪಂದನೆ; ಕೊಡವರ ಶ್ರೇಯೋಭಿವೃದ್ಧಿಗೆ ಅನುಕೂಲ ಮಡಿಕೇರಿ:ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ…

10 mins ago

ನಗರಸಭೆಗೆ ಗೆಜ್ಜಲಗೆರೆ-ಗೊರವನಹಳ್ಳಿ ಸೇರ್ಪಡೆಗೆ ವಿರೋಧ

ಹೇಮಂತ್‌ ಕುಮಾರ್‌  ಮಂಡ್ಯ: ಪುರಸಭೆಯಾಗಿದ್ದ ಮದ್ದೂರು ಟೌನ್ ಆಡಳಿತ ನಗರಸಭೆಯಾಗಿ ಪರಿವರ್ತನೆ ಗೊಂಡಿದೆ. ಈ ನಗರಸಭೆಗೆ ಅಕ್ಕಪಕ್ಕದ ಗೆಜ್ಜಲಗೆರೆ ಗ್ರಾಮ…

14 mins ago

ಮಧ್ಯಾಹ್ನದ ಬಿಸಿಯೂಟಕ್ಕೂ ತಟ್ಟಲಿದೆ ಗ್ಯಾಸ್ ಬಿಸಿ?

ಗಿರೀಶ್ ಹುಣಸೂರು ಸಿಲಿಂಡರ್ ರೀಫಿಲ್ಲಿಂಗ್‌ಗೆ ೨೫ ದಿನಗಳ ಅವಧಿ ನಿಗದಿ; ವಸತಿ ಶಾಲೆಗಳು, ಹಾಸ್ಟೆಲ್‌ಗಳಿಗೆ ಬಿಸಿ ತಟ್ಟುವ ಸಂಭವ ಮೈಸೂರು: ಮಧ್ಯಪ್ರಾಚ್ಯದಲ್ಲಿ…

20 mins ago

ಶತಮಾನದ ಶಾಲೆ; ಆರದ ಅಕ್ಷರ ದೀಪಮಾಲೆ

ಮಹಾದೇಶ್ ಎಂ ಗೌಡ ಹನೂರು: ಇದು ಶತೋತ್ತರ ದಶಮಾನೋತ್ಸವ ದಾಟಿ ಮುಂದೆ ಸಾಗಿರುವ ಶಾಲೆ. ಕಾಲ ಕಾಲಕ್ಕೆ ಅಭಿವೃದ್ಧಿಗೊಂಡು, ಪ್ರಸ್ತುತ…

25 mins ago

ʼದಳಪತಿʼ ವಿಜಯ್‌ ಸೆಳೆಯಲು ಬಿಜೆಪಿ ತಂತ್ರ : ಡಿಸಿಎಂ ಸ್ಥಾನದ ಜತೆಗೆ 80 ಸ್ಥಾನದ ಆಫರ್‌!

ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್‌ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…

10 hours ago