Andolana originals

ಶೀಘ್ರದಲ್ಲಿ ಯುವ ಭವನ ಬಳಕೆಗೆ ಲಭ್ಯ!

ಪುನೀತ್ ಮಡಿಕೇರಿ

ನೂತನ ಕಟ್ಟಡಕ್ಕೆ ಮಹಿಳಾ ಕಾಲೇಜು ಸ್ಥಳಾಂತರ; ೧೨ ವರ್ಷಗಳಿಂದ ಬಾಡಿಗೆ ಕಟ್ಟಡದಲ್ಲಿದ್ದ ಯುವ ಒಕ್ಕೂಟ

ಮಡಿಕೇರಿ: ಯುವಜನತೆಯ ಏಳಿಗೆಗೆ ಕಟ್ಟಲಾಗಿರುವ ಜಿಲ್ಲಾ ಯುವ ಭವನ ೧೨ ವರ್ಷಗಳಿಂದ ಬಳಕೆಗೆ ಲಭ್ಯವಾಗದೆ ಪರಿತಪಿಸುತ್ತಿದ್ದ ಜಿಲ್ಲಾ ಯುವ ಒಕ್ಕೂಟಕ್ಕೆ ಕಟ್ಟಡ ಭಾಗ್ಯ ಶೀಘ್ರದಲ್ಲೇ ಸಿಗಲಿದೆ.

೨೦೦೪ರಲ್ಲಿ ಜಿಲ್ಲಾ ಯುವ ಭವನ ಕಟ್ಟಡ ನಿರ್ಮಾಣಕ್ಕಾಗಿ ಆಗಿನ ಜಿಲ್ಲಾಧಿಕಾರಿ ನಗರದ ಕರ್ಣಂಗೇರಿ ಗ್ರಾಮದಲ್ಲಿ ಜಾಗ ಗುರುತು ಮಾಡಿದ್ದರು. ೨೦೦೫ರಲ್ಲಿ ಆಗಿನ ಸಂಸದ ಡಿ. ವಿ. ಸದಾನಂದ ಗೌಡ ೧ ಲಕ್ಷ ರೂ. ಅನುದಾನ ನೀಡಿ ಭೂಮಿ ಪೂಜೆ ನೆರವೇರಿಸಿದ್ದರು. ಆ ನಂತರದಲ್ಲಿ ೨೦೧೩ರಲ್ಲಿ ಕಟ್ಟಡ ನಿರ್ಮಾಣ ಕಾರ್ಯ ಪೂರ್ಣಗೊಂಡು ಹಸ್ತಾಂತರ ಮಾಡುವ ಸಂದರ್ಭದಲ್ಲಿ ಕೊಡಗಿಗೆ ಮಹಿಳಾ ಕಾಲೇಜು ಮಂಜೂರಾದ ಹಿನ್ನೆಲೆಯಲ್ಲಿ ಈ ಕಟ್ಟಡವನ್ನು ತಾತ್ಕಾಲಿಕವಾಗಿ ಕಾಲೇಜಿಗೆ ಬಿಟ್ಟುಕೊಡಲಾಯಿತು. ಈಗ ಇದು ೧೨ ವರ್ಷಗಳನ್ನು ಪೂರೈಸಿದರೂ ಜಿಲ್ಲಾ ಯುವ ಭವನ ಯುವ ಒಕ್ಕೂಟದ ಕೈ ಸೇರದೆ ಮಾಸಿಕ ಸಭೆ, ವಿವಿಧ ಚಟುವಟಿಕೆಗಳನ್ನು ನಡೆಸಲು ಸೂಕ್ತ ಸ್ಥಳವಿಲ್ಲದೆ ಬಾಡಿಗೆ ಕಟ್ಟಡಗಳಲ್ಲಿ ನಡೆಸುವಂತಾಗಿತ್ತು. ಆದರೆ, ಮುಂದಿನ ದಿನಗಳಲ್ಲಿ ಮಹಿಳಾ ಕಾಲೇಜು ಕಟ್ಟಡ ಶೀಘ್ರದಲ್ಲೇ ಪೂರ್ಣಗೊಳ್ಳುವ ಹಿನ್ನೆಲೆಯಲ್ಲಿ ಯುವ ಭವನ ಕಟ್ಟಡ ಲಭ್ಯವಾಗುವ ಲಕ್ಷಣಗಳು ಕಂಡುಬರುತ್ತಿದೆ.

ಹಸ್ತಾಂತರಕ್ಕೆ ಮನವಿ: ಕಟ್ಟಡವನ್ನು ಹಸ್ತಾಂತರಿಸುವಂತೆ ಹಲವು ಬಾರಿ ಜಿಲ್ಲಾಧಿಕಾರಿ, ಶಾಸಕರಿಗೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಪ್ರಸ್ತುತ ಮಹಿಳಾ ಕಾಲೇಜಿನ ಕಟ್ಟಡ ಕಾಮಗಾರಿಗಳು ಶೇ. ೮೦ರಷ್ಟು ಪೂರ್ಣಗೊಂಡಿದ್ದು ಶೀಘ್ರದಲ್ಲಿ ಯುವಭವನ ಕಟ್ಟಡವನ್ನು ಹಸ್ತಾಂತರ ಮಾಡಿಕೊಡಬೇಕು ಎಂದು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ. ಪಿ. ಸುಕುಮಾರ್ ಮನವಿ ಮಾಡಿದ್ದಾರೆ.

೧೨ ವರ್ಷಗಳಿಂದ ಮಹಿಳಾ ಕಾಲೇಜು: ೨೦೧೪-೧೫ನೇ ಸಾಲಿನಲ್ಲಿ ನಗರದಲ್ಲಿ ಹೊಸದಾಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆರಂಭಿಸಲು ಶಿಕ್ಷಣ ಇಲಾಖೆ ಅನುಮತಿ ನೀಡಿತ್ತು. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರು ಕಾಲೇಜು ಸ್ಥಾಪನೆಗೆ ವಿಶೇಷ ಮುತುವರ್ಜಿ ವಹಿಸಿದ್ದರು. ೨೦೧೪-೧೫ನೇ ಸಾಲಿನಲ್ಲಿ ಕಾಲೇಜು ಆರಂಭವಾದರೂ ಜಿಲ್ಲಾ ಯುವ ಒಕ್ಕೂಟಕ್ಕೆ ಸೇರಿದ ಯುವ ಭವನ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಯುವ ಭವನದಲ್ಲಿ ಕಾಲೇಜು ನಡೆಯುತ್ತಿರುವುದರಿಂದ ಯುವ ಒಕ್ಕೂಟದ ಚಟುವಟಿಕೆಗೆ ಸಮಸ್ಯೆ ಉಂಟಾಗಿದೆ. ಯುವ ಒಕ್ಕೂಟವೇ ಬಾಡಿಗೆ ನೀಡಿ ಬೇರೆಡೆ ಸಭೆ, ಸಮಾರಂಭ ನಡೆಸುವ ಇಕ್ಕಟ್ಟಿಗೆ ಸಿಲುಕಿತ್ತು.

ಒಟ್ಟಿನಲ್ಲಿ ಯುವಜನರಿಗಾಗಿ ನಿರ್ಮಾಣ ಮಾಡಲಾದ ಕಟ್ಟಡವನ್ನು ಇನ್ನಾದರೂ ಯುವಜನತೆಗೆ ಮೀಸಲಿಡಬೇಕು ಎಂದು ಯುವಜನತೆ ಒತ್ತಾಯಿಸಿದೆ.

ನಗರದ ಜೂನಿಯರ್ ಕಾಲೇಜು ಆವರಣದಲ್ಲಿ ಸುಮಾರು ೨ ಕೋಟಿ ರೂ. ವೆಚ್ಚದಲ್ಲಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. ಕಟ್ಟಡದ ಕಾಮಗಾರಿಗಳು ಮುಗಿಯುವ ಹಂತಕ್ಕೆ ತಲುಪಿದೆ. ಮುಂದಿನ ತಿಂಗಳಲ್ಲಿ ಕಾಲೇಜಿನ ಕಾಮಗಾರಿ ಪೂರ್ಣಗೊಳ್ಳಲಿದೆ. ಆ ನಂತರ ಯುವ ಭವನವನ್ನು ಬಿಟ್ಟುಕೊಡಲಾಗುವುದು. -ಡಿ. ಜೆ. ಜವರಪ್ಪ, ನಿವೃತ್ತ ಪ್ರಾಂಶುಪಾಲರು, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು

ಮೊದಲ ಏಕೈಕ ಭವನ
ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಕೊಡಗು ಜಿಲ್ಲೆಯಲ್ಲಿ ಯುವ ಭವನವನ್ನು ನಿರ್ಮಾಣ ಮಾಡಲಾಗಿತ್ತು. ಆದರೆ, ಇಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಯುವ ಭವನ ನಿರ್ಮಾಣವಾಗಿ ಕಾರ್ಯನಿರ್ವ ಹಿಸುತ್ತಿದೆ. ನಮಗೆ ಮಾತ್ರ ಇನ್ನು ಬಳಕೆಗೆ ಮೊದಲ ಭವನವೇ ಸಿಗದಿರುವುದು ವಿರ್ಪಯಾಸ. ಸಂಬಂಧಪಟ್ಟವರು ಶೀಘ್ರವಾಗಿ ಯುವ ಭವನವನ್ನು ಬಿಟ್ಟುಕೊಡಬೇಕು ಎಂದು ಸುಕುಮಾರ್ ಮನವಿ ಮಾಡಿದ್ದಾರೆ.

ಮಹಿಳಾ ಕಾಲೇಜಿಗೆ ಯುವ ಭವನ ಬಿಟ್ಟುಕೊಟ್ಟು ೧೨ ವರ್ಷಗಳು ಕಳೆದಿವೆ. ಅಲ್ಲದೆ ಕಟ್ಟಡವನ್ನು ಹಸ್ತಾಂತರಿಸುವಂತೆ ಆಡಳಿತ ಮಂಡಳಿಯೊಂದಿಗೆ ಹಲವು ಬಾರಿ ಮನವಿ ಮಾಡಲಾಗಿದೆ. ಆದರೂ ಇದುವರೆಗೂ ಸೂಕ್ತ ಸ್ಪಂದನೆ ದೊರೆತ್ತಿಲ್ಲ. ಬಾಡಿಗೆ ಪಾವತಿಸಿಕೊಂಡು ಮಾಸಿಕ ಸಭೆ, ವಾರ್ಷಿಕ ಸಭೆಗಳನ್ನು ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನಾದರೂ ಯುವ ಭವನ ಕಟ್ಟಡ ಜಿಲ್ಲಾ ಯುವ ಒಕ್ಕೂಟಕ್ಕೆ ಲಭ್ಯವಾಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದೇವೆ. -ಪಿ. ಪಿ. ಸುಕುಮಾರ್, ಅಧ್ಯಕ್ಷರು, ಜಿಲ್ಲಾ ಯುವ ಒಕ್ಕೂಟ.

ಆಂದೋಲನ ಡೆಸ್ಕ್

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

2 hours ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

2 hours ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

3 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

3 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

4 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

4 hours ago