Andolana originals

ನಂಜನಗೂಡು: ಸೋರುತಿಹುದು ಕಲಾ ಮಂಟಪ

• ಶ್ರೀಧರ್ ಆರ್.ಭಟ್

ನಂಜನಗೂಡು: ಲಕ್ಷಾಂತರ ರೂ. ವೆಚ್ಚದಲ್ಲಿ ನಿರ್ಮಿಸಿ ಉದ್ಘಾಟನೆಗಾಗಿ ಕಾದಿರುವ ಸರ್ಕಾರಿ ಶಾಲೆಯ ಕಲಾಮಂಟಪದ ಕಾಮಗಾರಿಯ ಬಣ್ಣವನ್ನು ಆಷಾಢದ ಸೋನೆ ಮಳೆ ಬಟ್ಟಬಯಲಾಗಿಸಿದೆ.

ಒಂದು ಶತಮಾನದ ಇತಿಹಾಸ ಹೊಂದಿರುವ ನಂಜನಗೂಡು ನಗರದ ಮಹಾತ್ಮ ಗಾಂಧಿ ರಸ್ತೆಯ ರಥ ಬೀದಿಯಲ್ಲಿರುವ ದಳವಾಯಿ ಶಾಲಾ ಆವರಣದಲ್ಲಿ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರದರ್ಶನಕ್ಕಾಗಿ ನಿರ್ಮಿಸಿರುವ ಕಲಾ ಮಂಟಪ ಉದ್ಘಾಟನೆಗೂ ಮುನ್ನವೇ ಸೋರಲಾರಂಭಿಸಿದೆ.

ನಗರದ ದಿಗ್ಗಜರು ವ್ಯಾಸಂಗ ಮಾಡಿದ ಈ ಶಾಲಾ ಆವರಣದಲ್ಲಿ ಕಲಾ ಮಂಟಪ ಎನ್ನುವ ಬಹುದಿನಗಳ ಬೇಡಿಕೆಯನ್ನು ನಗರಸಭೆಯ 14ನೇ ಹಣಕಾಸು ನಿಧಿಯಲ್ಲಿ ಪೂರೈಸಬೇಕು ಎಂಬ ಅಭಿಲಾಷೆಯೊಂದಿಗೆ ಕಳೆದ ವರ್ಷ 10 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲು ಟೆಂಡರ್ ಕರೆಯಲಾಗಿತ್ತು. ಟೆಂಡರ್‌ನಲ್ಲಿ ಹಠಕ್ಕೆ ಬಿದ್ದ ಮಹಾನುಭಾವರೊಬ್ಬರು ಬರೋಬ್ಬರಿ 3.50 ಲಕ್ಷ ರೂ. ರಿಯಾಯಿತಿ ಘೋಷಿಸಿ ಗುತ್ತಿಗೆಗೆ ಪಡೆದುಕೊಂಡಿದ್ದರು. ಈ ಕಾಮಗಾರಿ ಪಡೆದ ಗುತ್ತಿಗೆದಾರರು 6 ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕಿದ್ದ ಕಾಮಗಾರಿಗೆ ಒಂದು ವರ್ಷ ಸಮಯ ತೆಗೆದುಕೊಂಡು ಸುಂದರವಾದ ಕಲಾ ಮಂಟಪವನ್ನು ನಿರ್ಮಿಸಿ ಅದಕ್ಕೆ ಸುಣ್ಣ-ಬಣ್ಣ ಬಳಿದು ಇನ್ನೇನು ಲೋಕಾರ್ಪಣೆಗೊಳಿಸಲು ಸಿದ್ಧತೆ ನಡೆಸಿದ್ದರು.

ಆ ವೇಳೆಗೆ ಚುನಾವಣೆ ಘೋಷಣೆಯಾಯಿತು. ಉದ್ಘಾಟನೆಯ ದಿನಾಂಕ ನನೆಗುದಿಗೆ ಬಿದ್ದು ಮುಂದಕ್ಕೆ ಹೋಯಿತು. ಲೋಕಾರ್ಪಣೆಯಾಗುವ ಮೊದಲೇ ಆಷಾಢದ ಸೋನೆ ಮಳೆ ಆರಂಭವಾಗಿ, ಮಳೆಗೆ ಸಿಲುಕಿದ ಕಟ್ಟಡದಿಂದ ಮಳೆ ನೀರು ಸೋರಲಾರಂಭಿಸಿ 3.50 ಲಕ್ಷ ರೂ. ಬಿಟ್ಟು ಗುತ್ತಿಗೆ ಪಡೆದ ಕಾಮಗಾರಿಯ ನಿಜ ಬಣ್ಣ ಬಯಲು ಮಾಡಿತು.

ನೂತನ ಕಲಾಮಂಟಪ ಸೋರುತ್ತಿರುವುದನ್ನು ಕಂಡ ಶಿಕ್ಷಕರು ಹಾಗೂ ಮಕ್ಕಳು ವಿಚಲಿತರಾಗಿ ನಗರಸಭೆಯತ್ತ ದೌಡಾಯಿಸಿ ಮಂಟಪದ ಸ್ಥಿತಿಯನ್ನು ಅಲ್ಲಿನ ಅಧಿಕಾರಿಗಳಿಗೆ ವಿವರಿಸಿದರು.

ಕೋಟ್ಸ್‌))

ಶೇ.35ರಷ್ಟನ್ನು ಬಿಟ್ಟು ಪಡೆದ 10 ಲಕ್ಷ ರೂ. ಟೆಂಡರ್‌ನಲ್ಲಿ ಶೇ.40ರಷ್ಟು ಲಂಚದ ವ್ಯವಹಾರ ನಡೆದಿದೆ ಎಂದು ತಿಳಿದರೂ ಶೇ.25ರಷ್ಟು ಹಣದಲ್ಲಿ ಕಾಮಗಾರಿ ಮಾಡಿದರೆ ಆ ಕಾಮಗಾರಿಯ ಗುಣಮಟ್ಟ ಹೇಗಿರಲು ಸಾಧ್ಯ ಎಂಬುದಕ್ಕೆ ದಳವಾಯಿ ಶಾಲೆಯ ಕಲಾಮಂಟಪವೇ ಸಾಕ್ಷಿಯಾಗಿದೆ. ನಮ್ಮ ಆಡಳಿತದ ಭ್ರಷ್ಟಾಚಾರ ಶಾಲೆಯನ್ನೂ ಬಿಡದಿರುವುದು ವಿಷಾದನೀಯ.
-ಚಂದ್ರಶೇಖರ್, ಶಾಲೆಯ ಹಳೆಯ ವಿದ್ಯಾರ್ಥಿ, ಯುವ ಬ್ರಿಗೇಡ್ ನಾಯಕ

ಕಟ್ಟಡ ಸೋರುತ್ತಿರುವ ವಿಷಯ ಬೆಳಕಿಗೆ ಬಂದ ತಕ್ಷಣ ಅದನ್ನು ದುರಸ್ತಿಪಡಿಸಲು ಗುತ್ತಿಗೆದಾರರಿಗೆ ಈಗಾಗಲೆ ಸೂಚಿಸಲಾಗಿದೆ. ಕಟ್ಟಡ ಸೋರುವುದನ್ನು ಸರಿಪಡಿಸಿದ ನಂತರವೇ ಕಲಾ ಮಂಟಪವನ್ನು ಲೋಕಾರ್ಪಣೆ ಮಾಡಲಾಗುತ್ತದೆ. ಆವರೆಗೂ ಉದ್ಘಾಟನೆಯೂ ಇಲ್ಲ ಎಂದು ಹೇಳಲಾಗಿದ್ದು, ಅವರು ವಾರದಲ್ಲಿ ದುರಸ್ತಿ ಕಾರ್ಯ ಆರಂಭಿಸಿ ಪೂರ್ಣಗೊಳಿಸಿದ ನಂತರ ಮತ್ತೆ ನೀರು ಸುರಿಯುತ್ತಿದೆಯೇ ಎಂಬುದನ್ನು ಪರೀಕ್ಷಿಸಿದ ನಂತರವೇ ಬಿಲ್ ಪಾವತಿ ಮಾಡಲಾಗುತ್ತದೆ.
-ಕುಮಾರ್‌, ಇಂಜಿನಿಯರ್‌, ನಗರಸಭೆ

ಸೋರುತ್ತಿರುವ ಕಲಾಮಂಟಪದ ಕುರಿತು ಈಗಾಗಲೇ ನಗರಸಭೆ ಆಯುಕ್ತ ನಂಜುಂಡಸ್ವಾಮಿಯವರಿಗೆ ತಿಳಿಸಿ, ಕಾಮಗಾರಿಯ ಹಣ ತಡೆಹಿಡಿಯುವಂತೆ ಲಿಖಿತವಾಗಿ ದೂರು ನೀಡಲಾಗಿದೆ.
-ಯೋಗಿ, ನಗರಸಭಾ ಸದಸ್ಯ

ಶ್ರೀಧರ್ ಆರ್ ಭಟ್

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವನಾದ ನಾನು ನಂಜನಗೂಡು ನಗರದಲ್ಲಿ ವಾಸವಾಗಿದ್ದು 1982ರ ಮಾರ್ಚ್ ತಿಂಗಳಿಂದ‌, 42 ವರ್ಷಗಳಿಂದ ಆಂದೋಲನ ದಿನ ಪತ್ರಿಕೆಯಲ್ಲಿ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಮೊಬೈಲ್‌ ಸಂಖ್ಯೆ: 9448425325

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

36 mins ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

3 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

3 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

4 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

7 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

7 hours ago