Andolana originals

ಸರ್ಕಾರಿ ಕಾರ್ಯಕ್ರಮಗಳಲ್ಲಿ ಸ್ಮರಣಿಕೆ, ಟ್ರೋಫಿ

ಪರಿಸರಕ್ಕೆ ಪೂರಕವಾದ ವಸ್ತುಗಳನ್ನು ನೀಡಲು ಸಲಹೆ;

ಸ್ಮರಣಿಕೆ, ಟ್ರೋಫಿ ಬದಲು ಸಸಿ, ಪುಸ್ತಕ ವಿತರಿಸಲು ಸುತ್ತೋಲೆ

ಮೈಸೂರು: ರಾಜ್ಯ ಸರ್ಕಾರ ಮತ್ತು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ನಡೆಸುವ ಸಭೆ- ಸಮಾರಂಭಗಳಲ್ಲಿ ಗಣ್ಯರಿಗೆ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ಇತ್ಯಾದಿ ನೆನಪಿನ ಕಾಣಿಕೆಗಳನ್ನು ನೀಡುವ ಬದಲಿಗೆ ಕನ್ನಡ ಪುಸ್ತಕಗಳನ್ನು ನೀಡಬಹುದೆಂದು ಸರ್ಕಾರವೇ ಹೊರಡಿಸಿದ್ದ ಸುತ್ತೋಲೆ ನಿಜವಾಗಿ ಅನುಷ್ಠಾನಕ್ಕೆ ಬಂದಿದೆಯೇ ಎನ್ನುವ ಪ್ರಶ್ನೆ ಮೂಡಿರುವ ಬೆನ್ನಲ್ಲೇ ಸರ್ಕಾರ ಹಳೆ ಸುತ್ತೋಲೆಗೆ ಮತ್ತಷ್ಟು ಅಂಶಗಳನ್ನು ಸೇರ್ಪಡೆ ಮಾಡಿದೆ.

ಸ್ಮರಣಿಕೆ, ಟ್ರೋಫಿ ಮತ್ತಿತರೆ ಪರಿಸರಕ್ಕೆ ಮಾರಕವಾದ ಹಾಗೂ ಅನಗತ್ಯವಾಗಿ ದುಂದುವೆಚ್ಚಕ್ಕೆ ಕಾರಣವಾಗುವ ಸ್ಮರಣಾರ್ಥ ವಸ್ತುಗಳನ್ನು ಗಣ್ಯರಿಗೆ ನೀಡೋದ್ಯಾಕೆ? ಕೊಡಲೇ ಬೇಕು ಅಂತಿದ್ದರೆ ಸಸಿಗಳು, ಪುಸ್ತಕ ಗಳಂತಹ ಪರಿಸರ ಸ್ನೇಹಿ ಆಯ್ಕೆಗಳನ್ನು ಮಾಡಿ ಎಂದು ಸರ್ಕಾರ ಹೇಳಿದೆ. ಸರ್ಕಾರಿ ಪ್ರಾಯೋಜಿತ ಕಾರ್ಯಕ್ರಮ ಗಳಲ್ಲಿ ಸ್ಮರಣಿಕೆ ಮತ್ತು ಟ್ರೋಫಿಗಳನ್ನು ಕಡ್ಡಾಯವಾಗಿ ನಿಷೇಧಿಸಿ ಸರ್ಕಾರ ಇತ್ತೀಚೆಗೆ ಸುತ್ತೋಲೆ ಹೊರಡಿಸಿದೆ.

ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಗಣ್ಯರಿಗೆ ಸ್ಮರಣಿಕೆ, ಟ್ರೋಫಿ ಮತ್ತು ಇನ್ನಿತರೆ ಸ್ಮರಣಾರ್ಥ ವಸ್ತುಗಳನ್ನು ನೀಡುವುದು ನಿಯಮಿತ ಅಭ್ಯಾಸವಾಗಿದೆ. ಈ ಪದ್ಧತಿಯು ಆರಂಭದಲ್ಲಿ ಸದ್ಭಾವನೆ ಮತ್ತು ಮೆಚ್ಚುಗೆಯ ಸಂಕೇತದ ಉದ್ದೇಶವಾಗಿದ್ದರೂ ಗಣ್ಯರನ್ನು ಸನ್ಮಾನಿಸುವಂತಹ ಅಭ್ಯಾಸವು ಆರ್ಥಿಕ ಮಿತ ವ್ಯಯ, ಪರಿಸರ ಸುಸ್ಥಿರತೆ ಮತ್ತು ಸಾಗಣೆ ಬಗ್ಗೆ ಹೆಚ್ಚುತ್ತಿರುವ ಕಳವಳಗಳಿಗೆ ಕಾರಣವಾಗಿದೆ ಎಂದು ಹೇಳಲಾಗಿದೆ.

ಪರಿಸರಕ್ಕೆ ಮಾರಕ: ಜೈವಿಕವಾಗಿ ವಿಘಟನೆಯಲ್ಲದ (ನಾನ್ ಬಯೋಡಿಗ್ರೇಡಿಬಲ್) ಲ್ಯಾಮಿನೇಟೆಡ್ ಮರ, ಪ್ಲಾಸ್ಟಿಕ್, ಲೋಹ ಮತ್ತು ಗಾಜಿನಂತಹ ಮರುಬಳಕೆ ಮಾಡಲಾಗದ ವಸ್ತುಗಳಿಂದ ತಯಾರಿಸಲ್ಪಟ್ಟ ವಸ್ತುಗಳಿಂದ ಸುತ್ತಮುತ್ತಲಿನ ನೈಸರ್ಗಿಕ ಪರಿಸರದ ಅವನತಿಗೆ ಮತ್ತಷ್ಟು ಉತ್ತೇಜನ ನೀಡುತ್ತದೆ. ಈ ವಸ್ತುಗಳನ್ನು ಬೇರ್ಪಡಿಸುವುದು ಅಥವಾ ಮರುಬಳಕೆ ಮಾಡುವುದು ಕಷ್ಟಕರವಾಗಿದ್ದು, ಹೀಗೆ ನಿರಂತರವಾಗಿ ಶೇಖರಣೆಗೊಳ್ಳುವ ತ್ಯಾಜ್ಯವು ರಾಜ್ಯದ ಘನತ್ಯಾಜ್ಯ ನಿರ್ವಹಣಾ ಹೊರೆಯನ್ನು ಹೆಚ್ಚಿಸುವುದರೊಂದಿಗೆ ಸುಸ್ಥಿರ ಅಭ್ಯಾಸಗಳನ್ನು ಉತ್ತೇಜಿಸಲು ಮತ್ತು ಅನಿವಾರ್ಯವಲ್ಲದ ತ್ಯಾಜ್ಯವನ್ನು ಕಡಿಮೆ ಮಾಡುವ ರಾಜ್ಯ ಸರ್ಕಾರದ ಪ್ರಯತ್ನಗಳಿಗೆ ತದ್ವಿರುದ್ಧವಾಗುವುದಲ್ಲದೇ ಪರಿಸರ ಕಾಳಜಿಯ ಉದ್ದೇಶಗಳನ್ನು ಈಡೇರಿಸುವಲ್ಲಿ ವಿಫಲವಾಗಿರುತ್ತದೆ.

ಅನಗತ್ಯ ದುಂದುವೆಚ್ಚ: ವಿವಿಧ ಇಲಾಖೆಗಳು, ನಿಗಮ-ಮಂಡಳಿಗಳು ಸ್ಮರಣಿಕೆ ಮತ್ತು ಟ್ರೋಫಿಗಳ ಖರೀದಿಗೆ ವಾರ್ಷಿಕವಾಗಿ ಭಾರೀ ಮೊತ್ತವನ್ನು ಖರ್ಚು ಮಾಡುತ್ತಿದ್ದು, ಆರ್ಥಿಕ ದೃಷ್ಟಿಕೋನದಿಂದ ಅಭಿವೃದ್ಧಿಯೇತರ ಮುಖ್ಯಸ್ಥರ ಅಡಿಯಲ್ಲಿನ ಸಂಚಿತ ವೆಚ್ಚವನ್ನುಉತ್ಪಾದಕ ಮತ್ತು ಕಲ್ಯಾಣ ಆಧಾರಿತ ಚಟುವಟಿಕೆಗಳಿಗೆ ಬಳಸಿಕೊಳ್ಳಬಹುದಾಗಿದೆ. ಅಲ್ಲದೆ, ಗಣ್ಯರ ಅಥವಾ ಇಲಾಖಾ ಕಾರ್ಯಕ್ರಮಗಳ ಸಂದರ್ಭದಲ್ಲಿ ಅತ್ಯಂತ ಕಡಿಮೆ ಸಮಯದಲ್ಲಿ ಮಾಡಲಾಗುವ ಇಂತಹ ಅನಗತ್ಯ ಕಳಪೆ ವಸ್ತುಗಳ ಪುನರಾವರ್ತಿತ ಖರೀದಿ ಯಿಂದ ಅವುಗಳ ಸಂಗ್ರಹಣೆ, ನಿರ್ವಹಣೆ ಹಾಗೂ ವಿಲೇವಾರಿಯು ಕಠಿಣ ಸವಾಲಾಗಿ ಪರಿಣಮಿಸುತ್ತದೆ. ಪರಿಸರ ಕಾಳಜಿ, ಆರ್ಥಿಕತೆ, ಸರಳತೆ, ಸಂಪನ್ಮೂಲ ಸಂರಕ್ಷಣೆ ಹಾಗೂ ಸಾರ್ವಜನಿಕ ಹೊಣೆಗಾರಿಕೆಯ ಮನವರಿಕೆಯನ್ನು ಒತ್ತಿ ಹೇಳುವ ಸಾಮಾಜಿಕ ಮತ್ತು ಆಡಳಿತಾತ್ಮಕ ಮೌಲ್ಯಗಳಿಗೆ ಪ್ರಸಕ್ತ ಪದ್ಧತಿಯು ಹೊಂದಾಣಿಕೆಯಾಗುವುದಿಲ್ಲ. ಈ ಹಿನ್ನೆಲೆ ಯಲ್ಲಿ ಸರ್ಕಾರಿ ಪ್ರಾಯೋಜಿತ ಅಥವಾ ಅನುದಾನಿತ ಕಾರ್ಯ ಕ್ರಮಗಳ ಸಂದರ್ಭದಲ್ಲಿ ಸ್ಮರಣಿಕೆ, ಟ್ರೋಫಿ ಮತ್ತು ಅಂತಹ ವಸ್ತುಗಳ ಖರೀದಿ ಮತ್ತು ಪ್ರಸ್ತುತಿಯನ್ನು ನಿಷೇಧಿಸುವಂತೆ ಎಲ್ಲಾ ಇಲಾಖೆ, ನಿಗಮ-ಮಂಡಳಿ ಹಾಗೂ ಜಿಲ್ಲಾಡಳಿತಗಳಿಗೆ ಸೂಚಿಸಿದೆ.

ಇದನ್ನು ಓದಿ: ಡಿ.26ರಿಂದ ಕೊಡವ ಹಾಕಿ ಚಾಂಪಿಯನ್ ಟ್ರೋಫಿ

ಪರಿಸರ ಸ್ನೇಹಿ ಆಯ್ಕೆಗಳು: ಸ್ಮರಣಿಕೆ, ಟ್ರೋಫಿಗಳ ಬದಲಿಗೆ ಪರಿಸರ ಸ್ನೇಹಿ ಪರ್ಯಾಯಗಳನ್ನು ಅಳವಡಿಸಿಕೊಳ್ಳಲು ತಿಳಿಸಲಾಗಿದೆ

೧. ಪರಿಸರ ಕಾಳಜಿ, ಸಾರ್ವಜನಿಕ ಹೊಣೆಗಾರಿಕೆ ಹಾಗೂ ಆಡಳಿತಾತ್ಮಕ ಮೌಲ್ಯಗಳನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಕೆಲ ಷರತ್ತುಗಳನ್ನು ವಿಧಿಸಲಾಗಿದೆ
೨. ಯಾವುದೇ ಇಲಾಖೆ, ನಿಗಮ-ಮಂಡಳಿಯು ಸ್ಮರಣಿಕೆ ಅಥವಾ ಟ್ರೋಫಿ ಖರೀದಿಯಲ್ಲಿ ಯಾವುದೇ ಹೊಸ ಟೆಂಡರ್ ಪ್ರಕ್ರಿಯೆ ಪ್ರಾರಂಭಿಸುವಂತಿಲ್ಲ
೩. ಪ್ರಸ್ತುತವಿರುವ ಸ್ಮರಣಿಕೆಗಳ ದಾಸ್ತಾನನ್ನು ಅಧಿಕೃತ ಮರುಬಳಕೆ ಏಜೆನ್ಸಿಗಳು ಅಥವಾ ಸಮಾಜ ಕಲ್ಯಾಣ ಸಂಸ್ಥೆಗಳ ಮೂಲಕ ಸಂಬಂಧಿತ ಇಲಾಖಾ ಮುಖ್ಯಸ್ಥರ ಅನುಮತಿಯೊಂದಿಗೆ ತ್ಯಜಿಸಬಹುದು ಅಥವಾ ದಾನ ಮಾಡಬಹುದು.

ಶಿಲಾನ್ಯಾಸಗಳು, ಉದ್ಘಾಟನೆಗಳು, ಸಮ್ಮೇಳನಗಳು, ಕಾರ್ಯಾಗಾರಗಳು, ಸನ್ಮಾನ ಕಾರ್ಯಕ್ರಮಗಳು, ಸಾರ್ವಜನಿಕ ಸಭೆ-ಸಮಾರಂಭಗಳು ಮತ್ತು ರಾಜ್ಯ ಭೇಟಿಗಳಂತಹ ಎಲ್ಲಾ ಅಽಕೃತ ಚಟುವಟಿಕೆಗಳಿಗೆ ಅನ್ವಯವಾಗುತ್ತದೆ. ಅಽಕೃತ ರಾಜ್ಯ ಕ್ರೀಡಾ ಪ್ರೋತ್ಸಾಹ ಕಾರ್ಯಕ್ರಮಗಳಲ್ಲಿ ಕ್ರೀಡಾಪಟುಗಳಿಗೆ ನೀಡುವ ಪ್ಲಾಸ್ಟಿಕ್ ಮುಕ್ತ ಟ್ರೋಫಿಗಳನ್ನು ಇದರಿಂದ ಹೊರತುಪಡಿಸಲಾಗಿದೆ.

” ಸರ್ಕಾರಿ ಕಾರ್ಯಕ್ರಮಗಳಲ್ಲಿ ಸ್ಮರಣಿಕೆ, ಟ್ರೋಫಿ ಕೊಡಬಾರದು ಎಂದು ಸರ್ಕಾರ ಸುತ್ತೋಲೆ ಹೊರಡಿಸಿರುವುದು ಸರಿ. ಆದರೆ, ಹಿಂದಿನಿಂದ ನಡೆದು ಬಂದ ಪದ್ಧತಿಯಂತೆ ಸನ್ಮಾನಿತರು, ಕ್ರೀಡಾ ವಿಜೇತರಿಗೆ ಸ್ಮರಣಿಕೆ, ಟ್ರೋಫಿ ಕೊಡಲೇಬೇಕಾದ ಅನಿವಾರ್ಯತೆ ಇದೆ. ಇಲ್ಲದಿದ್ದರೆ ಜನ ಒಪ್ಪಲ್ಲ. ಹೀಗಾಗಿ ಸುತ್ತೋಲೆಯ ಕಡ್ಡಾಯ ಜಾರಿಗೆ ಮುಂದಾಗಬೇಕು.”
– ಜೆ. ಗೋವಿಂದರಾಜು, ಜಿಲ್ಲಾಧ್ಯಕ್ಷರು, ರಾಜ್ಯ ಸರ್ಕಾರಿ ನೌಕರರ ಸಂಘ

ಗಿರೀಶ್ ಹುಣಸೂರು

ಆಂದೋಲನ ಡೆಸ್ಕ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

10 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

10 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

11 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

12 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

17 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

17 hours ago