Andolana originals

ಭಾಗ್ಯವಿಧಾತ’ ಕೃತಿ ಬಿಡುಗಡೆ ಮಾಡಿದ ಯು.ಟಿ.ಖಾದರ್

‘ಆಂದೋಲನ’ ದಿನಪತ್ರಿಕೆ ವರದಿಗಾರ ಸಿಂಧುವಳ್ಳಿ ಸುಧೀರ್ ರಚಿಸಿದ ಪುಸ್ತಕ

ಮೈಸೂರು: ಸಿದ್ದರಾಮಯ್ಯನವರ ರಾಜಕೀಯ ಜೀವಮಾನ ಸಾಧನೆ ಕುರಿತು ‘ಆಂದೋಲನ’ ದಿನಪತ್ರಿಕೆ ವರದಿಗಾರ ಸಿಂಧುವಳ್ಳಿ ಸುಧೀರ್ ಅವರು ರಚಿಸಿರುವ ‘ಭಾಗ್ಯವಿಧಾತ’ ಕೃತಿಯನ್ನು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಲೋಕಾರ್ಪಣೆ ಮಾಡಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಹಾಗೂ ಮೈಸೂರು ವಿಶ್ವವಿದ್ಯಾನಿಲಯದ ಹಿರಿಯ ವಿದ್ಯಾರ್ಥಿಗಳ ಒಕ್ಕೂಟದ ವತಿಯಿಂದ ನಗರದ ಪತ್ರಕರ್ತರ ಭವನದಲ್ಲಿ ಬುಧವಾರ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕೃತಿ ಬಿಡುಗಡೆ ಮಾಡಿ,ನಂತರ ಮಾತನಾಡಿದ ಖಾದರ್ ಅವರು, ಜನರು ಸ್ವಾಭಿಮಾನದಿಂದ ಬದುಕಲು ಏನೆಲ್ಲಾ ಅವಶ್ಯ ಇದೆಯೋ, ಅದೆಲ್ಲವುಗಳ ಜಾರಿಗೆ ಸೂಕ್ತವಾದ ಕಾರ್ಯಕ್ರಮಗಳನ್ನು ನೀಡುವ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ್ದಾರೆ ಎಂದು ಹೇಳಿದರು.

ಬಡ ಮಕ್ಕಳಿಗೂ ಪೌಷ್ಟಿಕಾಂಶ ದೊರಕಬೇಕು ಎಂಬ ಉದ್ದೇಶದಿಂದ ಜಾರಿಗೆ ತಂದ ಕ್ಷೀರಭಾಗ್ಯ ಯೋಜನೆ ಸಿದ್ದರಾಮಯ್ಯ ಮಾನವೀಯ ಕಾರ್ಯಗಳಿಗೆ ಒಂದು ಉತ್ತಮ ಉದಾಹರಣೆಯಾಗಿದೆ. ಅವರು ಕುಗ್ರಾಮದಲ್ಲಿ ಹುಟ್ಟಿದರೂ, ತಮ್ಮ ಪ್ರಾಮಾಣಿಕತೆ, ಕಾಳಜಿ, ಸಾಮಾಜಿಕ ಬದ್ಧತೆ ಹಾಗೂ ಛಲದಿಂದ ಹಂತಹಂತವಾಗಿ ಉನ್ನತ ಸ್ಥಾನಕ್ಕೆ ಏರಿದ್ದಾರೆ. ಶಿಕ್ಷಣ, ಸಂವಿಧಾನದ ಮೂಲಕ ಸಾಕಷ್ಟು ಬದಲಾವಣೆ ಕಾಣಲು ಸಾಧ್ಯ ಎಂಬುದನ್ನು ಸಿದ್ದರಾಮಯ್ಯ ಸಾಽಸಿ ತೋರಿಸಿದ್ದಾರೆ ಎಂದರು. ಸಂವಿಧಾನದಲ್ಲಿ ಲಭ್ಯವಿರುವ ಅವಕಾಶವನ್ನು ಸಮರ್ಥವಾಗಿ ಬಳಸಿಕೊಂಡರೆ ಯಾರಾದರೂ ಉತ್ತಮ ಸಾಧನೆ ಮಾಡ ಬಹುದು ಎಂಬುದಕ್ಕೆ ಸಿ ದ್ದರಾಮಯ್ಯ ಅವರೇ ಸಾಕ್ಷಿಯಾಗಿದ್ದಾರೆ ಎಂದು ಖಾದರ್ ಹೇಳಿದರು.

ಆಹಾರ ಭದ್ರತಾ ಕಾಯ್ದೆ ರಾಷ್ಟ್ರದಲ್ಲಿ ಜಾರಿಗೆ ಬರುವ ಮೊದಲೇ ನಮ್ಮಲ್ಲಿ ಸಿದ್ದರಾಮಯ್ಯ ಅವರು ಅನ್ನಭಾಗ್ಯ ತಂದರು. ಆ ಮೂಲಕ ಬಡಜನತೆಯ ಸ್ವಾಭಿಮಾನದ ಬದುಕಿಗೆ ಅನುಕೂಲ ಕಲ್ಪಿಸಿದ್ದಾರೆ ಎಂದರು.

ಕೃತಿ ಕುರಿತು ಮಾತನಾಡಿದ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್ ಅವರು, ಸಿದ್ದರಾಮಯ್ಯ ಅವರ ಬಹು ದೊಡ್ಡ ವ್ಯಕ್ತಿತ್ವವನ್ನು ಇತರರಿಗೂ ತಿಳಿಸಬೇಕಾದ ಅಗತ್ಯವಿದೆ. ಈ ರೀತಿ ಮಾಡಿದಲ್ಲಿ ಯುವ ಪೀಳಿಗೆ ತಮ್ಮ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ.

ಈ ಕೆಲಸವನ್ನು ಸಿಂಧುವಳ್ಳಿ ಸುಧೀರ್ ಅವರ ‘ಭಾಗ್ಯವಿಧಾತ’ ಪುಸ್ತಕ ಮಾಡುತ್ತದೆ ಎಂಬ ನಂಬಿಕೆ ಇದೆ ಎಂದರು. ಸಿದ್ಧರಾಮಯ್ಯ ಅವರು ಎದುರಿಸಿದ ಸಂಕಷ್ಟ, ಏಳು ಬೀಳು, ರಾಜಕಾರಣದಲ್ಲಿ ಎದುರಿಸಿದ ಸವಾಲುಗಳನ್ನು ಈ ಕೃತಿಯಲ್ಲಿ ಅತ್ಯಂತ ಸೊಗಸಾಗಿ ನಿರೂಪಿಸಲಾಗಿದೆ ಎಂದು ಅವರು ತಿಳಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯ್‌ಕುಮಾರ್ ಹಾಗೂ ಕೃತಿ ಕರ್ತೃ ಸಿಂಧುವಳ್ಳಿ ಸುಧೀರ ಮಾತನಾಡಿದರು. ಸಂಘದ ಪ್ರಧಾನ ಕಾರ್ಯದರ್ಶಿ ಧರ್ಮಾಪುರ ನಾರಾಯಣ ಹಾಜರಿದ್ದರು.

” ಅತ್ಯಂತ ಬಡ ಕುಟುಂಬದಿಂದ ಬಂದಿರುವ ಸುಧೀರ್ ಅವರು ತಮ್ಮ ತಾಯಿ ಕ್ಯಾನ್ಸರ್ ಪೀಡಿತರಾಗಿ ಹಾಸಿಗೆ ಹಿಡಿದು ಮಲಗಿದ್ದಾಗ ಅವರನ್ನು ಉಪಚರಿಸುವ ವೇಳೆ ಸಿಕ್ಕ ಬಿಡುವಿನಲ್ಲಿ ಈ ಕೃತಿ ರಚಿಸಿದ್ದಾರೆ ಎಂಬುದು ಗಮನಾರ್ಹ. ಸಿದ್ದರಾಮಯ್ಯ ಅವರು ಶೋಷಿತ ಸಮುದಾಯದ ಕಷ್ಟ ಸಂಕೋಲೆಗಳನ್ನು ಗಮನಿಸಿ ಕೊಡುಗೆಗಳನ್ನು ನೀಡಿದ ಪರಿಯ ಬಗ್ಗೆ ಕೃತಿ ರಚನೆ ಮಾಡುವ ಸಾಹಸಕ್ಕೆ ಕೈ ಹಾಕಿದ ರೀತಿ ಶ್ಲಾಘನೀಯ.”

-ಡಾ.ಬಿ.ಜೆ.ವಿಜಯಕುಮಾರ್, ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್.

ಆಂದೋಲನ ಡೆಸ್ಕ್

Recent Posts

ವೈಯಕ್ತಿಕ ದ್ವೇಷ: ಕಾರ್ಮಿಕನನ್ನು ಕೊಲೆಗೈಯ್ದು ಶರಣಾದ ಆರೋಪಿ

ಚೆಟ್ಟಳ್ಳಿ: ಕಾಫಿ ತೋಟದ ಲೈನ್ ಮನೆಯಲ್ಲಿ ವಾಸವಿದ್ದ ಕಾರ್ಮಿಕನೊಬ್ಬ ಮತ್ತೊಬ್ಬ ಕಾರ್ಮಿಕನನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ…

5 hours ago

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೇ ಈಗ ರಾಜ್ಯಸಭೆ ಅಭ್ಯರ್ಥಿ

ನವದೆಹಲಿ: ರಾಜ್ಯಸಭೆ ಚುನಾವಣೆಗೆ ಬಿಜೆಪಿ 9 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ಅವರು ಬಿಹಾರದಿಂದ…

6 hours ago

ದುಬೈನಲ್ಲಿ ಸಿಲುಕಿರುವ ಕನ್ನಡಿಗರಿಗೆ ವಿಡಿಯೋ ಕಾಲ್‌ ಮಾಡಿ ಧೈರ್ಯ ಹೇಳಿದ ವಿಜಯೇಂದ್ರ

ಬೆಂಗಳೂರು: ಅಮೇರಿಕಾ, ಇಸ್ರೇಲ್‌-ಇರಾನ್‌ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ದುಬೈನಲ್ಲಿ ಸಿಲುಕಿ ಆತಂಕದಲ್ಲಿರುವ ಕನ್ನಡಿಗರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ…

6 hours ago

ಬೂದಬಾಳು ಗ್ರಾಮದ ಕೆರೆಗೆ ಬಾಗಿನ ಸಮರ್ಪಿಸಿದ ಶಾಸಕ ಎಂ.ಆರ್.ಮಂಜುನಾಥ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬರಪೀಡಿತ ಪ್ರದೇಶಗಳಲ್ಲಿ ಒಂದಾದ ಬೂದಬಾಳು ಕೆರೆಗೆ ಕಾವೇರಿ ನದಿ ಮೂಲದಿಂದ…

6 hours ago

ಸರ್ಕಾರದಿಂದ ಸಿಗುವ ಸೌಲಭ್ಯವನ್ನು ಪ್ರತಿಯೊಬ್ಬ ರೈತರಿಗೂ ದೊರಕಿಸಿ: ಬಿಜೆಪಿ ಜಿಲ್ಲಾಧ್ಯಕ್ಷ ನಿರಂಜನ್ ಕುಮಾರ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಷೇರುದಾರರು ನಿಮ್ಮ ಮೇಲೆ ವಿಶ್ವಾಸವಿಟ್ಟು ಕೃಷಿ ಪತ್ತಿನ ಸಹಕಾರ ಸಂಘದ…

6 hours ago

ಹಾರ್ಮುಜ್‌ ಜನಸಂಧಿಯನ್ನು ಮುಚ್ಚಿದ ಇರಾನ್: ತೈಲ ಬೆಲೆಯಲ್ಲಿ ಭಾರೀ ಏರಿಕೆ

ಟೆಹರಾನ್:‌ ಅಮೇರಿಕಾ ಹಾಗೂ ಇಸ್ರೇಲ್‌ ದೇಶಗಳು ಇರಾನ್‌ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ…

7 hours ago