Andolana originals

ಹೂವಿನ ಭಾಗ್ಯಮ್ಮ ಮತ್ತು ಹಿರಳೇಕಾಯಿಯ ಮಾದೇವಮ್ಮ

• ಮನಸ್ವಿನಿ

ಮೈಸೂರಿನ ಚಿಕ್ಕ ಗಡಿಯಾರದ ಬಳಿ ಸಂಜೆ ಹೊತ್ತಿ ನಲ್ಲಿ ತರಕಾರಿ ಕೊಳ್ಳುವ ಸಲುವಾಗಿ ಹೋಗಿದ್ದೆ. ತರಕಾರಿ ಮಾರುವವರ ತಂತ್ರವನ್ನು ಕಂಡು ಎಷ್ಟೋ ಸಲ ಬೆರಗಾಗಿದ್ದಿದೆ. ತಲೆಯಾಡಿಸುತ್ತಾ, ಹೇಳಿದಷ್ಟು ದುಡ್ಡನ್ನು ಕೊಟ್ಟು ಬಂದವರ ತಲೆಯ ಮೇಲೆ ಟೋಪಿ ಬಿತ್ತೆಂದೇ ಲೆಕ್ಕ. ಮಾತಿಗೆಂದು ನಿಂತು, ವ್ಯವಹಾರ ಗೊತ್ತಿದೆಯೆಂದು ತೋರಿಸಿದವರು ಮಾತ್ರ ಗೆದ್ದರೆಂದೇ ಅರ್ಥ ತರಕಾರಿಗಳನ್ನೆಲ್ಲ ಟಾರ್ಪಲ್ ಮೇಲೆ ಹಾಕಿಕೊಂಡಿದ್ದ ಒಬ್ಬರೆದುರು ಈ ತರಕಾರಿ ಕೆಜಿಗೆಷ್ಟು ಎಂದು ಕೇಳಬಹುದು. ಆದರೆ, ಪಕ್ಕದಲ್ಲಿದ್ದವರ ಹತ್ತಿರವೂ ಅದೇ ತರಕಾರಿ ಇದ್ದು, ದುಡ್ಡೆಷ್ಟು ಅಂತ ನಾನು ಕೇಳಿ, ಅಪ್ಪಿತಪ್ಪಿ ಅವರೆಲ್ಲಾದರೂ ಬೆಲೆ ಹೇಳಿದರೆ ರವಿಚಂದ್ರನ್ ಸಿನೆಮಾದ ಥರ ‘ಎಲ್ಲಾ ಪೀಸ್ ಪೀಸ್’ ಆದಂತೆಯೇ ಸರಿ.

ಹಾಗೇ ಕಣ್ಣಿಗೆ ಕಂಡಿದ್ದು, ಹೆಂಗಸರ ಗುಂಪು, ಕೆಲ ದಿನಗಳಿಂದ ಹಿರಳೇಕಾಯಿಗಾಗಿ ಹುಡುಕಾಡುತ್ತಿದ್ದೆ. ಹೆಂಗಸೊಬ್ಬರು ಮಾರುತ್ತಿದ್ದರು. ಸರಿ, ಒಂದಕ್ಕೆಷ್ಟು ಎಂದೆ. ಮೂವತ್ತಕ್ಕೆರಡು ಎಂದರು. ಆಶ್ಚರ್ಯದಿಂದ ನಾನು ಮೂವತ್ತಾ!’ ಎಂದೆ. ಅದಕ್ಕಿವರು ‘ಹೂಂ, ಹೇಗೆ ತರ್ತೀವಿ ಗೊತ್ತಾ?’ ಎಂಬ ಮರು ಪ್ರಶ್ನೆವಿತ್ತರು. ಹೇಗೆ ಎನ್ನುತ್ತಾ ಕತೆ ಕೇಳಲು ಶುರುವಿಟ್ಟೆ.

ಉದ್ದೂರು ಹತ್ತಿರದ ಟೀಕಾಟುವಿನಲ್ಲಿ ಮಾದೇವಿ ಅವರ ಮನೆ. ಚಿಕ್ಕವಯಸ್ಸಿನಲ್ಲಿ ಮದುವೆಯಾಯಿತು. ಆದರೆ, ಸ್ವಾಭಿಮಾನದಿಂದ ಬದುಕುವ ಈ ಛಲ ಗಾರ್ತಿ ಮನೆಯನ್ನು ನಿಭಾಯಿಸ ಬೇಕೆಂದು ಹೊಲದ ಮನೆ ಕೆಲಸಕ್ಕೆ ಹೋದರು. ಕಳೆ ಕೀಳುತ್ತಾ, ಬಂದ ಆದಾಯದಿಂದ ಬದುಕು ಕಟ್ಟಿಕೊಂಡರು. ಮಗಳ ಮದುವೆಯ ಜವಾಬ್ದಾರಿಯನ್ನು ಪೂರೈಸಿ ದರು. ತರಕಾರಿ ಮಾರುವ ಕೆಲಸವಿಡಿದು ನಾಲ್ಕು ವರ್ಷಗಳಾಯಿತು.

ಮಧ್ಯಾಹ್ನ ಹನ್ನೆರಡಕ್ಕೆ ಮನೆಯಿಂದ ಹೊರಟು, ಎರಡು ಗಂಟೆಯ ಹೊತ್ತಿಗೆ ಇಲ್ಲಿಗೆ ಸೇರುತ್ತಾರೆ. ‘ನಮಗೇನೂ ಟಿಕೆಟ್ ಇಲ್ಲ. ಹಾಕಿಕೊಂಡು ಬಂದ ಸಾಮಾನಿಗೆ ಒಂದು ಆಳಿನ ಲೆಕ್ಕ ಟಿಕೇಟ್ ತೆಗೀತಾರೆ’ ಎನ್ನುವ ಸಂಕಟ ಬೇರೆ. ಒಂದು ವೇಳೆ ಇಪ್ಪತ್ತು ರೂಪಾಯಿ ಉಳಿಸಿದರೆಂದು ಇಟ್ಟುಕೊಳ್ಳಿ, ಅಕಸ್ಮಾತಾಗಿ ಚೆಕ್ಕಿಂಗ್ ಆಫೀಸರ್‌ ಬಂದರೆ ವಸೂಲಿ ಯಾಗುತ್ತಿದ್ದದ್ದು, ಬರೋಬ್ಬರಿ ಇನ್ನೂರು ರೂಪಾಯಿ! ಲಾಭದ ಆಸೆ ಆವತ್ತು ಕೈಬಿಟ್ಟಂತೆಯೇ.

ಮಧ್ಯಾಹ್ನದ ಊಟ ಮುಗಿಸಿ ಹೊರಟರೆ ಮತ್ತೆ ಮನೆಗೆ ಬರುವ ತನಕ ಹೊಟ್ಟೆಗೇನೂ ಇಲ್ಲ. ‘ಏನೂ ಬೇಕೆನಿಸಲ್ಲ ಕಣವ್ವಾ’ ಎಂದು ಸುಮ್ಮನೆ ನಗು ತ್ತಾರೆ. ಊರಿನ ಕತೆ ಹೇಳುವಷ್ಟರಲ್ಲಿ ಗಿರಾಕಿಯೊಬ್ಬರು ಬದನೆ ಕಾಯಿ ಎಷ್ಟು? ಎಂದು ಕೇಳಿದರು. ಮಾದೇವಮ್ಮ “ಪಾಲಿಗಿಪ್ಪತ್ತು ಎನ್ನುತ್ತಿದ್ದಾಗ, ಪಕ್ಕದಲ್ಲಿ ಹೂ ಮಾರುತ್ತಿದ್ದಾಕೆಯಲ್ಲಿ, ‘ಮ್ಯೋ, ಇವತ್ ಯಾಪಾರ ಆದಂಗೆಯಾ’ ಎಂದು ಸಿಡಿಮಿಡಿಯನ್ನು ತಮ್ಮ ಮಾತಿನಲ್ಲೇ ಕಾಣಿಸಿದರು. ಭಾಗ್ಯಮ್ಮ ಈ ಮಾದೇವಮ್ಮನಿಗೆ ಪ್ರೀತಿಯಿಂದ ಇಟ್ಟ ಅಡ್ಡ ಹೆಸರೇ, ‘ಮೋ’.

ತಮ್ಮ ಕುಟುಂಬ ಪುರಾಣಗಳನ್ನು ಹೇಳಬೇಕೆಂದಿದ್ದ ಮಾತೆಲ್ಲವೂ ಮಾದೇವಮ್ಮನ ಬಾಯಿಯ ತುದಿಯಲ್ಲೇ ಉಳಿದು ಹೋಯಿತು. ಮತ್ತೆ ಇವರನ್ನು ಒತ್ತಾಯಿಸದೆ, ಬೈದವರ ಮನವೊಲಿಸಲು ಹೋದೆ. ಹಿಂದುಗಡೆಯಲ್ಲಿ ಕೂತು, ನಿಮ್ಮ ಊರಲ್ಲಿ, ಎಷ್ಟೊತ್ತಿಗೆ ಬರ್ತೀರಿ… ಹೀಗೆ ಮಾತು ಬೆಳೆಯುತ್ತಲೇ ಹೋಯಿತು. ಹತ್ತಿರ ಬಂದ ತಕ್ಷಣವೇ ಅದೇನು ಖುಷಿ, ಮಾತು ಮುಗಿಯುವ ತನಕವೂ ಚಂದದ ನಗುವಿತ್ತು! ಚೆಂಡು ಹೂ, ಕಾಕಡ, ಮಲ್ಲಿಗೆ ಹೂ ಮಾರುವ ಭಾಗ್ಯಮ್ಮನದು ಹೂವಿನಂಥ ಮೃದು ಮನಸ್ಸು. ಜೀವದ ಮಗಳೀಗ ಬೆಂಗಳೂರಿನಲ್ಲಿ ಕೆಲಸಕ್ಕೆ ಸೇರಿದ್ದಾಳೆ. ಮಗಳ ತಿಂಗಳ ಸಂಬಳ ಆಕೆಯ ಖರ್ಚಿಗೆ ಸಾಲುತ್ತದೆ. ಇವರ ಹೊಟ್ಟೆಯ ಹಸಿವನ್ನು ತಣಿಸುವುದಕ್ಕೆ ಹೂಗಳೇ ಬೇಕು. ಹೂ ಮಾರುವ ಕೆಲಸದಲ್ಲಿ ಹತ್ತು ವರ್ಷಗಳ ಅನುಭವವಿರುವ ಭಾಗ್ಯಮ್ಮನಿಗೆ ತಾಪತ್ರಯ ಶುರುವಾಗಿದ್ದು, ಬೆಲೆ ಏರಿಕೆ ಯಿಂದ ಬಂದ ಗಿರಾಕಿಗಳು ದುಡ್ಡು ಕೇಳುತ್ತಿದ್ದಂತೆ ಮುಂದೆ ಹೋಗುತ್ತಾರೆ. ಏನಾದರೂ, ದೇವರು ಇರುವ ತನಕ ಹಿಟ್ಟಾಗುತ್ತದೆಂಬ ನಂಬಿಕೆಯಲ್ಲೇ ಇದ್ದಾರೆ. ಮಧ್ಯಾಹ್ನದ ಉರಿಬಿಸಿಲಿರಲಿ, ಗಾಳಿ, ಮಳೆಯಿರಲಿ ಜಗ್ಗದ ಗಟ್ಟಿಗಿತ್ತಿ ಯರ ಬಳಗವೇ ಅಲ್ಲಿದೆ. ಒಂಭತ್ತು ಗಂಟೆಯವರೆಗೆ ಕತೆಯಾಡುತ್ತಾ, ನಗುತ್ತಾ, ಅರ್ಧಗಂಟೆಗೊಮ್ಮೆ ಜಗಳ ವಾಡುತ್ತಾ ಬದುಕು ಕಟ್ಟಿಕೊಳ್ಳುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಸ್ಥಗಿತ : ಕಾರಣ ಬಿಚ್ಚಿಟ್ಟ ಸಂಸದ ಯದುವೀರ್‌

ಮೈಸೂರು : ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಸ್ಥಗಿತವಾಗಿದೆ, ಯೋಜನೆಗೆ ಅಗತ್ಯವಿರುವ ಭೂಮಿಯನ್ನು ರಾಜ್ಯ ಸರ್ಕಾರ ಹಸ್ತಾಂತರ ಮಾಡಿಲ್ಲ. ಈ ಬಗ್ಗೆ…

1 min ago

ಶಾರ್ಟ್‌ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಟಿವಿ ; ದಾಖಲಾತಿಗಳು ಭಸ್ಮ

ಹನೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಟಿವಿ ಸೇರಿದಂತೆ ಅತ್ಯಮೂಲ್ಯ ದಾಖಲಾತಿಗಳು ಸುಟ್ಟು ಕರಕಲಾದ ಘಟನೆ ಹನೂರು ತಾಲೂಕಿನ ಬಂಡಳ್ಳಿಯಲ್ಲಿ…

46 mins ago

ಹನೂರು| ರಾಜ್ಯ ಸರ್ಕಾರದ ವಿರುದ್ಧ ಅಂಡೆ ಕುರುಬನದೊಡ್ಡಿ ಗ್ರಾಮಸ್ಥರಿಂದ ಪ್ರತಿಭಟನೆ

ಮಹಾದೇಶ್‌ ಎಂ ಗೌಡ  ಹನೂರು: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂಡೆ ಕುರುಬನ ದೊಡ್ಡಿ ಗ್ರಾಮದ ಡಾಂಬರು ರಸ್ತೆ ಅಭಿವೃದ್ಧಿಗೆ…

2 hours ago

ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್‌ ಅಮಾನತಿಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರನ್ನು ತಡೆದ ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್‌ ಅವರನ್ನು ಅಮಾನತು ಮಾಡುವಂತೆ ಆಗ್ರಹಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.…

2 hours ago

ಮೈಸೂರು ಪಾಲಿಕೆಯಲ್ಲಿ ಅಕ್ರಮಗಳ ಸಂಖ್ಯೆ ಏರಿಕೆ: ಸಂಸದ ಯದುವೀರ್‌ ಆರೋಪ

ಮೈಸೂರು: ಮೈಸೂರು ನಗರ ಪಾಲಿಕೆ ಈಗ ಅವ್ಯವಸ್ಥೆಗಳ ಆಗರವಾಗಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ…

2 hours ago

ನಮ್ಮ ಪಕ್ಷವನ್ನು ಯಾರೂ ನಾಶ ಮಾಡಲು ಸಾಧ್ಯವಿಲ್ಲ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಜೆಡಿಎಸ್‌ ರೈತರಿಂದ ಬೆಳೆದ ಪಕ್ಷ, ನಾಶ ಮಾಡಲು ಸಾಧ್ಯವೇ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಹಾಸನ…

3 hours ago