Andolana originals

ಹೂವಿನ ಭಾಗ್ಯಮ್ಮ ಮತ್ತು ಹಿರಳೇಕಾಯಿಯ ಮಾದೇವಮ್ಮ

• ಮನಸ್ವಿನಿ

ಮೈಸೂರಿನ ಚಿಕ್ಕ ಗಡಿಯಾರದ ಬಳಿ ಸಂಜೆ ಹೊತ್ತಿ ನಲ್ಲಿ ತರಕಾರಿ ಕೊಳ್ಳುವ ಸಲುವಾಗಿ ಹೋಗಿದ್ದೆ. ತರಕಾರಿ ಮಾರುವವರ ತಂತ್ರವನ್ನು ಕಂಡು ಎಷ್ಟೋ ಸಲ ಬೆರಗಾಗಿದ್ದಿದೆ. ತಲೆಯಾಡಿಸುತ್ತಾ, ಹೇಳಿದಷ್ಟು ದುಡ್ಡನ್ನು ಕೊಟ್ಟು ಬಂದವರ ತಲೆಯ ಮೇಲೆ ಟೋಪಿ ಬಿತ್ತೆಂದೇ ಲೆಕ್ಕ. ಮಾತಿಗೆಂದು ನಿಂತು, ವ್ಯವಹಾರ ಗೊತ್ತಿದೆಯೆಂದು ತೋರಿಸಿದವರು ಮಾತ್ರ ಗೆದ್ದರೆಂದೇ ಅರ್ಥ ತರಕಾರಿಗಳನ್ನೆಲ್ಲ ಟಾರ್ಪಲ್ ಮೇಲೆ ಹಾಕಿಕೊಂಡಿದ್ದ ಒಬ್ಬರೆದುರು ಈ ತರಕಾರಿ ಕೆಜಿಗೆಷ್ಟು ಎಂದು ಕೇಳಬಹುದು. ಆದರೆ, ಪಕ್ಕದಲ್ಲಿದ್ದವರ ಹತ್ತಿರವೂ ಅದೇ ತರಕಾರಿ ಇದ್ದು, ದುಡ್ಡೆಷ್ಟು ಅಂತ ನಾನು ಕೇಳಿ, ಅಪ್ಪಿತಪ್ಪಿ ಅವರೆಲ್ಲಾದರೂ ಬೆಲೆ ಹೇಳಿದರೆ ರವಿಚಂದ್ರನ್ ಸಿನೆಮಾದ ಥರ ‘ಎಲ್ಲಾ ಪೀಸ್ ಪೀಸ್’ ಆದಂತೆಯೇ ಸರಿ.

ಹಾಗೇ ಕಣ್ಣಿಗೆ ಕಂಡಿದ್ದು, ಹೆಂಗಸರ ಗುಂಪು, ಕೆಲ ದಿನಗಳಿಂದ ಹಿರಳೇಕಾಯಿಗಾಗಿ ಹುಡುಕಾಡುತ್ತಿದ್ದೆ. ಹೆಂಗಸೊಬ್ಬರು ಮಾರುತ್ತಿದ್ದರು. ಸರಿ, ಒಂದಕ್ಕೆಷ್ಟು ಎಂದೆ. ಮೂವತ್ತಕ್ಕೆರಡು ಎಂದರು. ಆಶ್ಚರ್ಯದಿಂದ ನಾನು ಮೂವತ್ತಾ!’ ಎಂದೆ. ಅದಕ್ಕಿವರು ‘ಹೂಂ, ಹೇಗೆ ತರ್ತೀವಿ ಗೊತ್ತಾ?’ ಎಂಬ ಮರು ಪ್ರಶ್ನೆವಿತ್ತರು. ಹೇಗೆ ಎನ್ನುತ್ತಾ ಕತೆ ಕೇಳಲು ಶುರುವಿಟ್ಟೆ.

ಉದ್ದೂರು ಹತ್ತಿರದ ಟೀಕಾಟುವಿನಲ್ಲಿ ಮಾದೇವಿ ಅವರ ಮನೆ. ಚಿಕ್ಕವಯಸ್ಸಿನಲ್ಲಿ ಮದುವೆಯಾಯಿತು. ಆದರೆ, ಸ್ವಾಭಿಮಾನದಿಂದ ಬದುಕುವ ಈ ಛಲ ಗಾರ್ತಿ ಮನೆಯನ್ನು ನಿಭಾಯಿಸ ಬೇಕೆಂದು ಹೊಲದ ಮನೆ ಕೆಲಸಕ್ಕೆ ಹೋದರು. ಕಳೆ ಕೀಳುತ್ತಾ, ಬಂದ ಆದಾಯದಿಂದ ಬದುಕು ಕಟ್ಟಿಕೊಂಡರು. ಮಗಳ ಮದುವೆಯ ಜವಾಬ್ದಾರಿಯನ್ನು ಪೂರೈಸಿ ದರು. ತರಕಾರಿ ಮಾರುವ ಕೆಲಸವಿಡಿದು ನಾಲ್ಕು ವರ್ಷಗಳಾಯಿತು.

ಮಧ್ಯಾಹ್ನ ಹನ್ನೆರಡಕ್ಕೆ ಮನೆಯಿಂದ ಹೊರಟು, ಎರಡು ಗಂಟೆಯ ಹೊತ್ತಿಗೆ ಇಲ್ಲಿಗೆ ಸೇರುತ್ತಾರೆ. ‘ನಮಗೇನೂ ಟಿಕೆಟ್ ಇಲ್ಲ. ಹಾಕಿಕೊಂಡು ಬಂದ ಸಾಮಾನಿಗೆ ಒಂದು ಆಳಿನ ಲೆಕ್ಕ ಟಿಕೇಟ್ ತೆಗೀತಾರೆ’ ಎನ್ನುವ ಸಂಕಟ ಬೇರೆ. ಒಂದು ವೇಳೆ ಇಪ್ಪತ್ತು ರೂಪಾಯಿ ಉಳಿಸಿದರೆಂದು ಇಟ್ಟುಕೊಳ್ಳಿ, ಅಕಸ್ಮಾತಾಗಿ ಚೆಕ್ಕಿಂಗ್ ಆಫೀಸರ್‌ ಬಂದರೆ ವಸೂಲಿ ಯಾಗುತ್ತಿದ್ದದ್ದು, ಬರೋಬ್ಬರಿ ಇನ್ನೂರು ರೂಪಾಯಿ! ಲಾಭದ ಆಸೆ ಆವತ್ತು ಕೈಬಿಟ್ಟಂತೆಯೇ.

ಮಧ್ಯಾಹ್ನದ ಊಟ ಮುಗಿಸಿ ಹೊರಟರೆ ಮತ್ತೆ ಮನೆಗೆ ಬರುವ ತನಕ ಹೊಟ್ಟೆಗೇನೂ ಇಲ್ಲ. ‘ಏನೂ ಬೇಕೆನಿಸಲ್ಲ ಕಣವ್ವಾ’ ಎಂದು ಸುಮ್ಮನೆ ನಗು ತ್ತಾರೆ. ಊರಿನ ಕತೆ ಹೇಳುವಷ್ಟರಲ್ಲಿ ಗಿರಾಕಿಯೊಬ್ಬರು ಬದನೆ ಕಾಯಿ ಎಷ್ಟು? ಎಂದು ಕೇಳಿದರು. ಮಾದೇವಮ್ಮ “ಪಾಲಿಗಿಪ್ಪತ್ತು ಎನ್ನುತ್ತಿದ್ದಾಗ, ಪಕ್ಕದಲ್ಲಿ ಹೂ ಮಾರುತ್ತಿದ್ದಾಕೆಯಲ್ಲಿ, ‘ಮ್ಯೋ, ಇವತ್ ಯಾಪಾರ ಆದಂಗೆಯಾ’ ಎಂದು ಸಿಡಿಮಿಡಿಯನ್ನು ತಮ್ಮ ಮಾತಿನಲ್ಲೇ ಕಾಣಿಸಿದರು. ಭಾಗ್ಯಮ್ಮ ಈ ಮಾದೇವಮ್ಮನಿಗೆ ಪ್ರೀತಿಯಿಂದ ಇಟ್ಟ ಅಡ್ಡ ಹೆಸರೇ, ‘ಮೋ’.

ತಮ್ಮ ಕುಟುಂಬ ಪುರಾಣಗಳನ್ನು ಹೇಳಬೇಕೆಂದಿದ್ದ ಮಾತೆಲ್ಲವೂ ಮಾದೇವಮ್ಮನ ಬಾಯಿಯ ತುದಿಯಲ್ಲೇ ಉಳಿದು ಹೋಯಿತು. ಮತ್ತೆ ಇವರನ್ನು ಒತ್ತಾಯಿಸದೆ, ಬೈದವರ ಮನವೊಲಿಸಲು ಹೋದೆ. ಹಿಂದುಗಡೆಯಲ್ಲಿ ಕೂತು, ನಿಮ್ಮ ಊರಲ್ಲಿ, ಎಷ್ಟೊತ್ತಿಗೆ ಬರ್ತೀರಿ… ಹೀಗೆ ಮಾತು ಬೆಳೆಯುತ್ತಲೇ ಹೋಯಿತು. ಹತ್ತಿರ ಬಂದ ತಕ್ಷಣವೇ ಅದೇನು ಖುಷಿ, ಮಾತು ಮುಗಿಯುವ ತನಕವೂ ಚಂದದ ನಗುವಿತ್ತು! ಚೆಂಡು ಹೂ, ಕಾಕಡ, ಮಲ್ಲಿಗೆ ಹೂ ಮಾರುವ ಭಾಗ್ಯಮ್ಮನದು ಹೂವಿನಂಥ ಮೃದು ಮನಸ್ಸು. ಜೀವದ ಮಗಳೀಗ ಬೆಂಗಳೂರಿನಲ್ಲಿ ಕೆಲಸಕ್ಕೆ ಸೇರಿದ್ದಾಳೆ. ಮಗಳ ತಿಂಗಳ ಸಂಬಳ ಆಕೆಯ ಖರ್ಚಿಗೆ ಸಾಲುತ್ತದೆ. ಇವರ ಹೊಟ್ಟೆಯ ಹಸಿವನ್ನು ತಣಿಸುವುದಕ್ಕೆ ಹೂಗಳೇ ಬೇಕು. ಹೂ ಮಾರುವ ಕೆಲಸದಲ್ಲಿ ಹತ್ತು ವರ್ಷಗಳ ಅನುಭವವಿರುವ ಭಾಗ್ಯಮ್ಮನಿಗೆ ತಾಪತ್ರಯ ಶುರುವಾಗಿದ್ದು, ಬೆಲೆ ಏರಿಕೆ ಯಿಂದ ಬಂದ ಗಿರಾಕಿಗಳು ದುಡ್ಡು ಕೇಳುತ್ತಿದ್ದಂತೆ ಮುಂದೆ ಹೋಗುತ್ತಾರೆ. ಏನಾದರೂ, ದೇವರು ಇರುವ ತನಕ ಹಿಟ್ಟಾಗುತ್ತದೆಂಬ ನಂಬಿಕೆಯಲ್ಲೇ ಇದ್ದಾರೆ. ಮಧ್ಯಾಹ್ನದ ಉರಿಬಿಸಿಲಿರಲಿ, ಗಾಳಿ, ಮಳೆಯಿರಲಿ ಜಗ್ಗದ ಗಟ್ಟಿಗಿತ್ತಿ ಯರ ಬಳಗವೇ ಅಲ್ಲಿದೆ. ಒಂಭತ್ತು ಗಂಟೆಯವರೆಗೆ ಕತೆಯಾಡುತ್ತಾ, ನಗುತ್ತಾ, ಅರ್ಧಗಂಟೆಗೊಮ್ಮೆ ಜಗಳ ವಾಡುತ್ತಾ ಬದುಕು ಕಟ್ಟಿಕೊಳ್ಳುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

8 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

8 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

8 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

9 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

9 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

9 hours ago