Andolana originals

ಮಹಾಲಯ ಅಮಾವಾಸ್ಯೆ ಅಂಗವಾಗಿ ವಿಶೇಷ ಪೂಜೆ

ಮಹಾದೇಶ್ ಎಂ.ಗೌಡ

ಮ.ಬೆಟ್ಟದಲ್ಲಿ ಸಕಲ ಸಿದ್ಧತೆ; ೩೦೦ ಬಸ್‌ಗಳ ವ್ಯವಸ್ಥೆ, ಸಾವಿರಾರು ಜನರು ಆಗಮಿಸುವ ನಿರೀಕ್ಷೆ 

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಮಹಾಲಯಅಮಾವಾಸ್ಯೆಗೆ ಲಕ್ಷಾಂತರ ಜನರು ಆಗಮಿಸುವ ನಿರೀಕ್ಷೆ ಇರುವುದರಿಂದ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಸೆ.೧೯ರಿಂದ ಮೂರು ದಿನಗಳ ಕಾಲ ನಡೆಯುವ ಮಹಾಲಯ ಅಮಾವಾಸ್ಯೆಗೆ ಸಿದ್ಧತೆಗಳು ಭರದಿಂದ ಸಾಗಿವೆ.

ಸೆ.೧೯ರಂದು ಮಹಾಲಯ ಜಾತ್ರಾ ಮಹೋತ್ಸವ ಪ್ರಯುಕ್ತ ವಿಶೇಷ ಕಾರ್ಯಕ್ರಮಗಳು ಪ್ರಾರಂಭವಾಗ ಲಿವೆ. ಸೆ.೨೦ರಂದು ಮಹದೇಶ್ವರ ಸ್ವಾಮಿಗೆ ಎಣ್ಣೆ ಮಜ್ಜನ ವಿಶೇಷ ಪೂಜೆ ಮತ್ತು ಉತ್ಸವಗಳು ಜರುಗಲಿವೆ. ಬೆಳಿಗ್ಗೆ ೧೦ ಗಂಟೆಗೆ ವಡ್ಡನಹಳ್ಳಿ ಗೌರಮ್ಮ, ಶಿವಣ್ಣ ಸಿದ್ದಗಂಗಮ್ಮ ಕುಟುಂಬದವರಿಂದ ವಿಶೇಷ ಸೇವೆ ಮತ್ತು ಉತ್ಸವಗಳು ಜರುಗಲಿವೆ. ರಾತ್ರಿ ೭ ಗಂಟೆಗೆ ಮೈಸೂರಿನ ನೇತ್ರಸಿಂಹ ರವರ ಕುಟುಂಬದವರಿಂದ ವಿಶೇಷ ಸೇವೆ ಮತ್ತು ಉತ್ಸವ ನಡೆಯಲಿದೆ.

ಸೆ.೨೧ರಂದು ಮಹಾಲಯ ಅಮಾವಾಸ್ಯೆ ವಿಶೇಷ ಉತ್ಸವಗಳು ಜರುಗಲಿವೆ. ಸೆ.೨೨ರಂದು ನವರಾತ್ರಿ ಉಯ್ಯಾಲೆ ಉತ್ಸವದ ವಿಶೇಷ ಪೂಜೆಗಳು ನಡೆಯಲಿವೆ. ಜಾತ್ರಾ ಮಹೋತ್ಸವದ ಪ್ರಯುಕ್ತ ಕರ್ನಾಟಕ ಹಾಗೂ ತಮಿಳುನಾಡಿನಿಂದ ಲಕ್ಷಾಂತರ ಜನರು ಬೆಟ್ಟಕ್ಕೆ ಆಗಮಿಸುವುದರಿಂದ ಯಾವುದೇ ತೊಂದರೆ ಯಾಗದಂತೆ ಪ್ರಾಧಿಕಾರ ಈಗಾಗಲೇ ಸೂಕ್ತ ಕ್ರಮವಹಿಸಿದೆ.

ನೆರಳಿನ ವ್ಯವಸ್ಥೆ: ಸಾರ್ವಜನಿಕರಿಗೆ ಈಗಾಗಲೇ ನೆರಳಿನ ವ್ಯವಸ್ಥೆ ಕಲ್ಪಿಸಲಾಗಿದೆ. ಇದಲ್ಲದೆ ರಾಜಗೋಪುರ ಮುಂಭಾಗದ ಎಡ ಬದಿ ಹಾಗೂ ಬಲಬದಿಯಲ್ಲಿ ಶಾಮಿಯಾನದ ವ್ಯವಸ್ಥೆ ಕಲ್ಪಿಸಲಾಗಿದೆ. ಇದಲ್ಲದೆ ದೇವಸ್ಥಾನದ ಮುಂಭಾಗದಲ್ಲಿರುವ ರಂಗಮಂದಿರದಲ್ಲಿಯೂ ವಾಸ್ತವ್ಯಕ್ಕೆ ಅಗತ್ಯ ಸಿದ್ಧತೆ ಮಾಡಲಾಗಿದೆ.

ನಿರಂತರ ದಾಸೋಹ: ಸಾರ್ವಜನಿಕರು, ಪೊಲೀಸ್ ಸಿಬ್ಬಂದಿ, ಗೃಹರಕ್ಷಕ ದಳದವರು, ಅಧಿಕಾರಿ ವರ್ಗದ ವರಿಗೆ ನಿರಂತರ ದಾಸೋಹ ವ್ಯವಸ್ಥೆ ಕಲ್ಪಿಸಲಾಗಿದೆ. ಈಗಾಗಲೇ ಸಾರ್ವಜನಿಕರು ನೀಡಿರುವ ದವಸ-ಧಾನ್ಯ ಗಳು, ತರಕಾರಿಗಳನ್ನು ಶೇಖರಣೆ ಮಾಡಲಾಗಿದೆ. ಇದಲ್ಲದೆ ಈಗಾಗಲೇ ಸಂಗ್ರಹಣೆಯಾಗಿರುವ ಬೂದು ಗುಂಬಳಕಾಯಿಯಿಂದ ಮಜ್ಜಿಗೆ ಹುಳಿ ಮಾಡಲು ಕ್ರಮ ಕೈಗೊಳ್ಳಲಾಗಿದೆ.

ಈ ಬಾರಿ ಮಧುಮೇಹಿಗಳಿಗೆ ಪ್ರತ್ಯೇಕ ಕೌಂಟರ್ ತೆರೆದು ಸಿರಿಧಾನ್ಯಗಳ ಬಿಸಿಬೇಳೆ ಬಾತ್, ಪೊಂಗಲ್ ವ್ಯವಸ್ಥೆ ಮಾಡಲು ಕ್ರಮವಹಿಸಲಾಗಿದೆ ಎಂದು ಪ್ರಾಧಿಕಾರದ ಕಾರ್ಯದರ್ಶಿ ಎ.ಈ. ರಘು ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.

ಹಿರಿಯ ನಾಗರಿಕರಿಗೆ ನೇರ ದರ್ಶನ : ಅತಿಥಿ ಗಣ್ಯ ರಿಗೆ, ವಿಶೇಷಚೇತನರಿಗೆ ಗೇಟ್ ನಂಬರ್ ೪ರಲ್ಲಿ, ೬೦ ವರ್ಷ ಮೇಲ್ಪಟ್ಟವರಿಗೆ ರಾಜಗೋಪುರದ ಎಡಭಾಗದ ಗೇಟ್, ಶಿಫಾರಸು ಪತ್ರ ತೆಗೆದುಕೊಂಡು ಬರುವವರಿಗೆ ಗೇಟ್ ನಂಬರ್ ೫ರಲ್ಲಿ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಈ ಬಾರಿಯ ಮಹಾಲಯ ಅಮಾವಾಸ್ಯೆ ಶನಿವಾರ, ಭಾನುವಾರ ಹಾಗೂ ದಸರಾ ರಜೆ ಪ್ರಾರಂಭದ ದಿನಗಳಾಗಿರುವುದರಿಂದ ಲಕ್ಷಾಂತರ ಜನರು ಬೆಟ್ಟಕ್ಕೆ ಆಗಮಿಸುವ ನಿರೀಕ್ಷೆ ಇದೆ.

ಈ ನಿಟ್ಟಿನಲ್ಲಿ ಜನರ ಸುರಕ್ಷತೆಯ ದೃಷ್ಟಿಯಿಂದ ಹೆಚ್ಚು ಪೊಲೀಸ್ ಪೇದೆಗಳು ಹಾಗೂ ಗೃಹರಕ್ಷಕ ಸಿಬ್ಬಂದಿಯನ್ನು ನಿಯೋಜನೆ ಮಾಡಲು ಕ್ರಮವಹಿಸಲಾಗಿದೆ ಎಂದು ಮ.ಬೆಟ್ಟ ವೃತ್ತ ನಿರೀಕ್ಷಕ ಜಗದೀಶ್ ತಿಳಿಸಿದರು. ೨ ಲಕ್ಷ ಲಾಡು ಸಂಗ್ರಹ: ಮಹದೇಶ್ವರ ಬೆಟ್ಟಕ್ಕೆ ಬರುವಂತಹ ಜನರಿಗೆ ಈಗಾಗಲೇ ಪ್ರಾಧಿಕಾರದ ವತಿ ಯಿಂದ ೨ ಲಕ್ಷ ಲಾಡುಗಳನ್ನು ತಯಾರಿಸಿ ಸಂಗ್ರಹಿಸ ಲಾಗಿದೆ ಎಂದು ಲಾಡು ಘಟಕದ ಮೇಲುಸ್ತುವಾರಿ ಮಹದೇವಸ್ವಾಮಿ ತಿಳಿಸಿದರು.

” ಮಹಾಲಯ ಅಮಾವಾಸ್ಯೆ ಪ್ರಯುಕ್ತ ಶ್ರೀ ಕ್ಷೇತ್ರಕ್ಕೆ ಬರುವ ಜನರಿಗೆ ಮೂಲಸೌಲಭ್ಯಗಳನ್ನು ಕಲ್ಪಿಸಿಕೊಡಲು ಈಗಾಗಲೇ ಅಗತ್ಯ ಕ್ರಮ ವಹಿಸಲಾಗಿದೆ. ಭಕ್ತಾದಿಗಳಿಗೆ ನೆರಳಿನ ವ್ಯವಸ್ಥೆ, ಪ್ರತ್ಯೇಕ ದರ್ಶನ ವ್ಯವಸ್ಥೆ ಸೇರಿದಂತೆ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ. ಸ್ವಚ್ಛತೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಪ್ರಾಧಿಕಾರದ ಜೊತೆ ಕೈಜೋಡಿಸಬೇಕು.”

 – ಎ.ಇ.ರಘು, ಕಾರ್ಯದರ್ಶಿ, ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ

೩೦೦ ಬಸ್‌ಗಳ ವ್ಯವಸ್ಥೆ: ೩ ದಿನಗಳ ಕಾಲ ನಡೆಯುವ ಮಹಾಲಯ ಅಮಾವಾಸ್ಯೆ ಜಾತ್ರೆಗೆ ಮಹದೇಶ್ವರ ಬೆಟ್ಟಕ್ಕೆ ಹೆಚ್ಚಿನ ಭಕ್ತಾದಿಗಳು ಆಗಮಿಸುವುದರಿಂದ ಬೆಂಗಳೂರು, ಮೈಸೂರು, ಕೊಳ್ಳೇ ಗಾಲ, ಮಂಡ್ಯ, ನಂಜನಗೂಡು ಇನ್ನಿತರ ಡಿಪೋಗಳಿಂದ ೩೦೦ ಬಸ್‌ಗಳ ಸಿದ್ಧತೆ ಮಾಡಿಕೊಳ್ಳ ಲಾಗಿದೆ.”

ಆಂದೋಲನ ಡೆಸ್ಕ್

Recent Posts

ಪರಿಷತ್‌ ಚುನಾವಣೆಯಲ್ಲಿ ಕ್ರಾಸ್‌ ವೋಟ್‌ ಮಾಡಿದ ಶಾಸಕರು ಗೊತ್ತಿದೆ ; ಎಚ್‌.ಡಿ.ಕುಮಾರಸ್ವಾಮಿ

ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…

9 hours ago

ಮಂಡ್ಯ | ಐವರು ಅಂತರ್‌ ಜಿಲ್ಲಾ ಕಳ್ಳರ ಬಂಧನ

ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…

9 hours ago

ಜೂನ್‌ 21ರಂದು ನೀಟ್‌ ಮರುಪರೀಕ್ಷೆ ; ಮೈಸೂರು ಜಿಲ್ಲೆಯಲ್ಲಿ 7886 ಪರೀಕ್ಷಾರ್ಥಿಗಳ ನೋಂದಣಿ

ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…

9 hours ago

ನೀಟ್‌ಗಾಗಿ ಟೆಲಿಗ್ರಾಂ ನಿಷೇಧ ; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಕೋರ್ಟ್‌

ಹೊಸದಿಲ್ಲಿ : ನೀಟ್‌-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…

10 hours ago

ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ ; ಡಾ.ಎಚ್.ಸಿ.ಮಹದೇವಪ್ಪ

ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…

11 hours ago

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

19 hours ago