Andolana originals

ಪ್ರತಿಯೊಬ್ಬರ ಆರೋಗ್ಯಕ್ಕೂ ಕ್ರೀಡೆ ಬೇಕೇ ಬೇಕು: ಆರ್.ನಾಗೇಶ

ಎಸ್.ಎಸ್.ಭಟ್

‘ಆಂದೋಲನ’ಕ್ಕೆ ನೀಡಿದ ಸಂದರ್ಶನದಲ್ಲಿ ಮನದಿಂಗಿತ ಹಂಚಿಕೊಂಡ ಹಿರಿಜೀವ 

ನಂಜನಗೂಡು: ಪ್ರತಿಯೊಬ್ಬರೂ ಆರೋಗ್ಯದಿಂದ ಇರಬೇಕಾದರೆ, ಯಾವುದಾದರೊಂದು ಕ್ರೀಡೆಯನ್ನು ಅಭ್ಯಾಸ ಮಾಡಲೇಬೇಕು. ಆರೋಗ್ಯಕ್ಕೆ ಕ್ರೀಡೆ ಮುಖ್ಯ ಎಂದು ಮೈಸೂರು ನಗರದ ಕಾಸ್ಮೋಪಾಲಿಟಿನ್ ಕ್ಲಬ್‌ನ ಹಿರಿಯ ಸದಸ್ಯ, ೮೧ ವರ್ಷದ ಆರ್. ನಾಗೇಶ ಅಭಿಪ್ರಾಯಪಟ್ಟರು.

ಕರ್ನಾಟಕ ಈಜು ಸಂಸ್ಥೆಯ ವತಿಯಿಂದ ಬೆಂಗಳೂರಿನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಈ ಸಾಲಿನ ರಾಜ್ಯ ಮಟ್ಟದ ಹಿರಿಯರ ವಿಭಾಗದ ಈಜು ಸ್ಪರ್ಧೆಯಲ್ಲಿ ಕಾಸ್ಮೊಪಾಲಿಟಿನ್ ಕ್ಲಬ್ ಪರವಾಗಿ ಸ್ಪರ್ಧಿಸಿದ ಅವರು, ೫ ಚಿನ್ನದ ಪದಕ ಹಾಗೂ ೧ ಬೆಳ್ಳಿ ಪದಕವನ್ನು ಗೆದ್ದಿದ್ದಾರೆ. ‘ಆಂದೋಲನ’ ನಡೆಸಿದ ವಿಶೇಷ ಸಂದರ್ಶನದಲ್ಲಿ ಅವರು ತಮ್ಮ ಅಭಿಪ್ರಾಯಗಳನ್ನು ಹಂಚಿ ಕೊಂಡಿದ್ದಾರೆ.

ಆಂದೋಲನ: ಇಲ್ಲಿಯವರೆಗೆ ಎಷ್ಟು ಈಜು ಸ್ಪರ್ಧೆಗಳಲ್ಲಿ ಭಾಗವಹಿಸಿದ್ದೀರಿ?

ನಾಗೇಶ: ಇದೇ ಮೊದಲ ಸ್ಪರ್ಧೆ; ಮೊದಲ ಬಹುಮಾನ ಪಡೆದಿದ್ದೇನೆ.

ಆಂದೋಲನ: ಈಜಿನಲ್ಲಿ ತಮಗೆ ಎಷ್ಟು ವರ್ಷಗಳ ಅನುಭವ ಇದೆ?

ನಾಗೇಶ: ನನ್ನ ಇಳಿವಯಸ್ಸಿನಲ್ಲಿ ಅಂದರೆ ೫೦ನೇ ವರ್ಷದಲ್ಲಿ ಈಜು ಕಲಿತೆ. ಇದರಲ್ಲಿ ೩೦ ವರ್ಷಗಳ ಅನುಭವ ಇದೆ. ಪ್ರತಿನಿತ್ಯ ೩೦ ನಿಮಿಷಗಳಿಂದ ೧ ಗಂಟೆ ಸಮಯದವರೆಗೆ ಈಜಾಡುತ್ತಿದ್ದೆ .

ಆಂದೋಲನ: ನಿತ್ಯ ಎಷ್ಟು ಗಂಟೆ ಈಜುಗಾರಿಕೆ ಅಭ್ಯಾಸ ಮಾಡುತ್ತೀರಿ?

ನಾಗೇಶ: ಕಳೆದ ೩೦ ವರ್ಷಗಳಿಂದ ಪ್ರತಿದಿನ ಈಜಾಡುತ್ತಿದ್ದೆ. ಈಗ ವೈದ್ಯರ ಸಲಹೆ ಮೇರೆಗೆ ವಾರದಲ್ಲಿ ಒಂದೆರಡು ಬಾರಿ ಮಾತ್ರ ಈಜಾಡುತ್ತೇನೆ.

ಆಂದೋಲನ: ನಿಮ್ಮ ಮೊದಲ ಪ್ರಯತ್ನಕ್ಕೇ ಚಿನ್ನದ ಬಹುಮಾನ ದಕ್ಕಿದೆ. ಇದರ ಬಗ್ಗೆ ಏನು ಹೇಳುತ್ತೀರಿ?

ನಾಗೇಶ: ನಿಜ, ಈ ಪದಕ ಪಡೆಯಲು ಕಾಸ್ಮೋಪಾಲಿಟನ್ ಕ್ಲಬ್‌ನ ಈಜು ತರಬೇತುದಾರ ಜಗದೀಶ ಅವರು ನೀಡಿದ ಸೂರ್ತಿಯೇ ಕಾರಣ. ಅವರು ಹುರಿದುಂಬಿಸದಿದ್ದರೆ ನಾನು ಸ್ಪರ್ಧೆಯಲ್ಲಿ ಭಾಗಿಯಾಗುತ್ತಿರಲಿಲ್ಲ. ಮೊದಲ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದಾಗ ನನ್ನ ಸೂರ್ತಿ ಮತ್ತಷ್ಟು ಹೆಚ್ಚಾಯಿತು. ಅಂತಾರಾಷ್ಟ್ರೀಯ ಈಜು ಪಂದ್ಯಾವಳಿಯಲ್ಲಿ ಭಾಗಿಯಾಗುವ ಹುಮ್ಮಸ್ಸು ಈಗ ನನ್ನದಾಗಿದೆ.

ಆಂದೋಲನ: ಈಜುಗಾರಿಕೆ ಬಗ್ಗೆ ಕಿರಿಯರಿಗೆ ಏನು ಸಂದೇಶ ಕೊಡುವುದಕ್ಕೆ ಬಯಸುತ್ತೀರಿ?

ನಾಗೇಶ: ಈಜು ಆರೋಗ್ಯಕ್ಕೆ ಅತ್ಯಮೂಲ್ಯವಾಗಿದ್ದು, ಪ್ರತಿಯೊಬ್ಬರೂ ಈಜು ಕಲಿಯಬೇಕು ಅಥವಾ ನಿತ್ಯ ಯಾವುದಾದರೂ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು.

ಆಂದೋಲನ: ನೀವು ಈಜು ಕಲಿತಿದ್ದು ಎಲ್ಲಿ ?

ನಾಗೇಶ: ಸಿಸಿ ಹಾಗೂ ಸ್ಪೋರ್ಟ್ಸ್ ಕ್ಲಬ್ ಸದಸ್ಯನಾದ ನಾನು, ಮೈಸೂರು ನಗರದ ಸದರ್ನ್ ಹಾಗೂ ವಿಶ್ವವಿದ್ಯಾಲಯದ ಈಜುಕೊಳಗಳಲ್ಲಿ ಕಲಿತೆ.

ಆಂದೋಲನ ಡೆಸ್ಕ್

Recent Posts

ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್‌ ಪತ್ನಿ, ಮಕ್ಕಳು ಗೈರು

ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…

10 hours ago

ಮಡಿಕೇರಿ | ನೀರಿನಲ್ಲಿ ಮುಳುಗಿ ಯುವಕ ಸಾವು

ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…

11 hours ago

ಗಡಿ ಜಿಲ್ಲೆಯಲ್ಲೂ ತಮಿಳು ಸಿಎಂ ವಿಜಯ್‌ ಹವಾ!

ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…

11 hours ago

ಪ್ರಧಾನಿ ಸಂಚಾರ ಮಾರ್ಗದಲ್ಲಿ ಜಿಲಿಟೆನ್ ಕಡ್ಡಿ ಪತ್ತೆ ; ಕೆಲಕಾಲ ಆತಂಕ ; ಓರ್ವ ವಶಕ್ಕೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…

11 hours ago

ತಮಿಳುನಾಡು | ತಿರುಚಿರಾಪಳ್ಳಿ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…

12 hours ago

ಹುಣಸೂರು | ಭಾರೀ ಗಾಳಿ-ಮಳೆಗೆ ಹಾರಿಹೋದ ಚಾವಣಿ

ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…

13 hours ago