Andolana originals

ಅದ್ದೂರಿಯಾಗಿ ನೆರವೇರಿದ ಶ್ರೀ ಮುತ್ತುರಾಯಸ್ವಾಮಿ ಜಾತ್ರೆ

ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ

ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು ಅರಣ್ಯ ಪ್ರದೇಶದ ಮಧ್ಯಭಾಗದಲ್ಲಿರುವ ಶ್ರೀ ಮುತ್ತುರಾಯಸ್ವಾಮಿ ದೇವಸ್ಥಾನದಲ್ಲಿ ೩೨ನೇ ವರ್ಷದ ಜಾತ್ರಾ ಮಹೋತ್ಸವವು ಅದ್ಧೂರಿಯಾಗಿ ನಡೆಯಿತು.

ದೇವಸ್ಥನದ ಮುಖ್ಯ ಅರ್ಚಕರಾದ ನರಸಿಂಹಮೂರ್ತಿರವರ ನೇತೃತ್ವದಲ್ಲಿ ಶ್ರೀ ಮುತ್ತುರಾಯಸ್ವಾಮಿ ಚಾರಿಟಬಲ್ ಟ್ರಸ್ಟ್ ಸೇವಾ ಸಮಿತಿ ವತಿಯಿಂದ ರಾತ್ರಿಯಿಂದಲೇ ಪೂಜಾ ಕಾರ್ಯಕ್ರಮಗಳು ನಡೆದವು. ಮಂಗಳವಾರ ಬೆಳಿಗ್ಗೆ ೬.೩೦ ಗಂಟೆಗೆ ಹೊಳೆ ಮಜ್ಜನ ಸೇವೆ, ಗಣಪತಿಹೋಮ, ನವಗ್ರಹ ಹೋಮ, ಶಾಂತಿಹೋಮ, ಮಹಾಮಂಗಳಾರತಿ ಮಾಡಿದ ನಂತರ ತೀರ್ಥಪ್ರಸಾದ ವಿತರಿಸಲಾಯಿತು. ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸ್ಥಳೀಯ ಗ್ರಾಮಸ್ಥರು ಸೇರಿದಂತೆ ತಾಲ್ಲೂಕಿನ ಸುತ್ತಮುತ್ತಲಿನ ಗ್ರಾಮದ ಭಕ್ತಾದಿಗಳು ಹಾಗೂ ಕೊಡಗು, ಮೈಸೂರು, ಬೆಂಗಳೂರಿನಿಂದ ಆಗಮಿಸಿದ್ದ ಅಪಾರ ಸಂಖ್ಯೆಯ ಭಕ್ತಾದಿಗಳು ಪಾಲ್ಗೊಂಡಿದ್ದರು. ಜಾತ್ರೆಗೆ ಬಂದಂತಹ ಭಕ್ತಾದಿಗಳಿಗೆ ಶ್ರೀಮುತ್ತುರಾಯಸ್ವಾಮಿ ಚಾರಿಟ ಬಲ್ ಟ್ರಸ್ಟ್ ವತಿಯಿಂದ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.

ಸಾವಿರಾರು ಭಕ್ತಾದಿಗಳು ಒಂದೇ ಸಮಯದಲ್ಲಿ ಜಾತ್ರೆಗೆ ಬಂದ ಕಾರಣ ಕೆಲವು ಗಂಟೆಗಳಕಾಲ ರಸ್ತೆ ಸಂಚಾರದಲ್ಲಿ ವ್ಯತ್ಯಯವಾಯಿತು. ಶ್ರೀ ಮುತ್ತುರಾಯಸ್ವಾಮಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ರಾಮಚಂದ್ರ ಮಾತನಾಡಿ, ಈ ದೇವಸ್ಥಾನಕ್ಕೆ ೧೦೦ ವರ್ಷಗಳ ಇತಿಹಾಸವಿದ್ದು, ರಾಜ್ಯಾದ್ಯಂತ ಭಕ್ತ ಸಮೂಹವನ್ನು ಹೊಂದಿದೆ.

ಈ ಹಿಂದೆ ದೇವಸ್ಥಾನವು ಆನೆಚೌಕೂರು ಮೀಸಲು ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿದ್ದ ಸಂದರ್ಭದಲ್ಲಿ ಈ ಭಾಗದ ಸುತ್ತಮುತ್ತಲ್ಲಿನ ಗ್ರಾಮದ ಬಡವರು ಹಾಗೂ ಮಧ್ಯಮ ವರ್ಗದವರಿಗೆ ಕಡಿಮೆ ದರದಲ್ಲಿ ಮದುವೆ, ನಾಮಕರಣ ಹಾಗೂ ಹರಕೆ ಮುಂತಾದ ಸಮಾರಂಭ ನಡೆಸಲು ಸಹಕಾರವಾಗುತ್ತಿತ್ತು. ಆದರೆ ಈಗ ಈ ಪ್ರದೇಶವನ್ನು ನಾಗರಹೊಳೆ ಹುಲಿ ಸಂರಕ್ಷಣಾ ಪ್ರದೇಶದ ಬಫರ್ ಜೋನ್ ವ್ಯಾಪ್ತಿಯ ಅರಣ್ಯಪ್ರದೇಶವೆಂದು ಗುರುತಿಸಿರುವುದರಿಂದ ಜಾತ್ರೆಯನ್ನು ಹೊರತುಪಡಿಸಿ ಯಾವುದೇ ರೀತಿಯ ಸಮಾರಂಭಗಳನ್ನು ನಡೆಸಲು ಅರಣ್ಯ ಇಲಾಖೆಯಿಂದ ನಿರ್ಬಂಧವಿದೆ. ದಿನದಿಂದ ದಿನಕ್ಕೆ ಭಕ್ತಾದಿಗಳ ಸಂಖ್ಯೆ ಕ್ಷೀಣಿಸುತ್ತಿದ್ದು ಭಕ್ತಾದಿಗಳಿಂದ ದೊರಕುತ್ತಿದ್ದ ಹರಕೆಯ ಹಣ ಹಾಗೂ ದಾನ ದತ್ತಿ ಸಂಗ್ರಹ ವಾಗದ ಕಾರಣ ದೇವಸ್ಥಾನದ ಎಲ್ಲಾ ರೀತಿಯ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ ಎಂದರು.

ಮಾಜಿ ಶಾಸಕರಾದ ಕೆ.ಮಹದೇವ್, ಪಿರಿಯಾಪಟ್ಟಣ ತಹಸಿಲ್ದಾರ್ ನಿಸರ್ಗಪ್ರಿಯ, ಉಪ ತಹಸಿಲ್ದಾರ್ ವಿನೋದ್ ಕುಮಾರ್, ಇನ್ ಸ್ಪೆಕ್ಟರ್ ಗೋವಿಂದರಾಜು, ಸಮಿತಿಯ ಕಾರ್ಯದರ್ಶಿ ಪಾಪಣ್ಣ, ಸದಸ್ಯರಾದ ಶ್ರೀನಿವಾಸ್, ಶಿವರಾಜ್, ಕಾಂತರಾಜು, ಕೃಷ್ಣೇಗೌಡ, ರಾಮೇಗೌಡ, ಸುರೇಶ್, ರಮೇಶ್, ಕುಮಾರ, ವಿ.ಎಸ್.ರಾಮಕೃಷ್ಣ, ಶಿವಣ್ಣ, ರಘು, ಮುತ್ತುರಾಜು, ನವೀನ್, ಸುಬ್ರಮಣಿ, ಸತೀಶ, ಪ್ರಭು ಕುಮಾರ್, ರಾಮಕೃಷ್ಣ, ಅರವಿಂದ, ನಂದಿ, ಅಕ್ಕಪಕ್ಕದ ಗ್ರಾಮಗಳ ಸಾವಿರಾರು ಭಕ್ತರು ಭಾಗವಹಿಸಿದ್ದರು.

ಸಂಚಾರ ದಟ್ಟಣೆ:  ಮಧ್ಯಾಹ್ನದ ವೇಳೆ ಭಕ್ತರು ಏಕಾಏಕಿ ಆಗಮಿಸಿದ್ದರಿಂದ ಒಂದೆರಡು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಉಂಟಾಗಿ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಯಿತು.

ಆಂದೋಲನ ಡೆಸ್ಕ್

Recent Posts

ಉಡುಪಿ ಮಲ್ಪೆ ಬಳಿ ದೋಣಿ ಪಲ್ಟಿ: ಮೈಸೂರಿನ ಇಬ್ಬರು ಸಾವು

ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್‌ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…

6 hours ago

ಜೆಡಿಎಸ್‌ ಬಿಟ್ಟಿದ್ದು ದ್ರೋಹ ಹೇಗಾಗುತ್ತೆ: ಶಾಸಕ ಶಿವಲಿಂಗೇಗೌಡ

ಹಾಸನ: ನಾನು ಜೆಡಿಎಸ್‌ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್‌ ಜಾಸ್ತಿ ಆಗೋದು ಅಷ್ಟೇ. ಏನು…

6 hours ago

ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲರಿಗೆ ಅಡ್ಡಿಪಡಿಸಿದ ವಿಚಾರ: ರಾಷ್ಟ್ರಪತಿಗೆ ವರದಿ ರವಾನಿಸಿದ ಲೋಕಭವನ

ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಕಾಂಗ್ರೆಸ್‌ ಸದಸ್ಯರು…

6 hours ago

ಮಳವಳ್ಳಿ: ಈಜಲು ಹೋಗಿದ್ದ ಯುವಕ ಸಾವು

ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…

6 hours ago

ಮಂಡ್ಯದಲ್ಲಿ 3 ಕೋಟಿ ವೆಚ್ಚದಲ್ಲಿ ಗಾಂಧಿಭವನ ನಿರ್ಮಾಣ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…

6 hours ago

ಗ್ರಾಮ ಪಂಚಾಯತ್‌ಗಳ 590 ಸಿಬ್ಬಂದಿಗಳಿಗೆ ಅನುಮೋದನೆ: ಆದೇಶ ಪ್ರತಿ ವಿತರಿಸಿದ ಸಚಿವ ಎನ್‌.ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…

7 hours ago