Andolana originals

ಅದ್ದೂರಿಯಾಗಿ ನೆರವೇರಿದ ಶ್ರೀ ಮುತ್ತುರಾಯಸ್ವಾಮಿ ಜಾತ್ರೆ

ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ

ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು ಅರಣ್ಯ ಪ್ರದೇಶದ ಮಧ್ಯಭಾಗದಲ್ಲಿರುವ ಶ್ರೀ ಮುತ್ತುರಾಯಸ್ವಾಮಿ ದೇವಸ್ಥಾನದಲ್ಲಿ ೩೨ನೇ ವರ್ಷದ ಜಾತ್ರಾ ಮಹೋತ್ಸವವು ಅದ್ಧೂರಿಯಾಗಿ ನಡೆಯಿತು.

ದೇವಸ್ಥನದ ಮುಖ್ಯ ಅರ್ಚಕರಾದ ನರಸಿಂಹಮೂರ್ತಿರವರ ನೇತೃತ್ವದಲ್ಲಿ ಶ್ರೀ ಮುತ್ತುರಾಯಸ್ವಾಮಿ ಚಾರಿಟಬಲ್ ಟ್ರಸ್ಟ್ ಸೇವಾ ಸಮಿತಿ ವತಿಯಿಂದ ರಾತ್ರಿಯಿಂದಲೇ ಪೂಜಾ ಕಾರ್ಯಕ್ರಮಗಳು ನಡೆದವು. ಮಂಗಳವಾರ ಬೆಳಿಗ್ಗೆ ೬.೩೦ ಗಂಟೆಗೆ ಹೊಳೆ ಮಜ್ಜನ ಸೇವೆ, ಗಣಪತಿಹೋಮ, ನವಗ್ರಹ ಹೋಮ, ಶಾಂತಿಹೋಮ, ಮಹಾಮಂಗಳಾರತಿ ಮಾಡಿದ ನಂತರ ತೀರ್ಥಪ್ರಸಾದ ವಿತರಿಸಲಾಯಿತು. ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸ್ಥಳೀಯ ಗ್ರಾಮಸ್ಥರು ಸೇರಿದಂತೆ ತಾಲ್ಲೂಕಿನ ಸುತ್ತಮುತ್ತಲಿನ ಗ್ರಾಮದ ಭಕ್ತಾದಿಗಳು ಹಾಗೂ ಕೊಡಗು, ಮೈಸೂರು, ಬೆಂಗಳೂರಿನಿಂದ ಆಗಮಿಸಿದ್ದ ಅಪಾರ ಸಂಖ್ಯೆಯ ಭಕ್ತಾದಿಗಳು ಪಾಲ್ಗೊಂಡಿದ್ದರು. ಜಾತ್ರೆಗೆ ಬಂದಂತಹ ಭಕ್ತಾದಿಗಳಿಗೆ ಶ್ರೀಮುತ್ತುರಾಯಸ್ವಾಮಿ ಚಾರಿಟ ಬಲ್ ಟ್ರಸ್ಟ್ ವತಿಯಿಂದ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.

ಸಾವಿರಾರು ಭಕ್ತಾದಿಗಳು ಒಂದೇ ಸಮಯದಲ್ಲಿ ಜಾತ್ರೆಗೆ ಬಂದ ಕಾರಣ ಕೆಲವು ಗಂಟೆಗಳಕಾಲ ರಸ್ತೆ ಸಂಚಾರದಲ್ಲಿ ವ್ಯತ್ಯಯವಾಯಿತು. ಶ್ರೀ ಮುತ್ತುರಾಯಸ್ವಾಮಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ರಾಮಚಂದ್ರ ಮಾತನಾಡಿ, ಈ ದೇವಸ್ಥಾನಕ್ಕೆ ೧೦೦ ವರ್ಷಗಳ ಇತಿಹಾಸವಿದ್ದು, ರಾಜ್ಯಾದ್ಯಂತ ಭಕ್ತ ಸಮೂಹವನ್ನು ಹೊಂದಿದೆ.

ಈ ಹಿಂದೆ ದೇವಸ್ಥಾನವು ಆನೆಚೌಕೂರು ಮೀಸಲು ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿದ್ದ ಸಂದರ್ಭದಲ್ಲಿ ಈ ಭಾಗದ ಸುತ್ತಮುತ್ತಲ್ಲಿನ ಗ್ರಾಮದ ಬಡವರು ಹಾಗೂ ಮಧ್ಯಮ ವರ್ಗದವರಿಗೆ ಕಡಿಮೆ ದರದಲ್ಲಿ ಮದುವೆ, ನಾಮಕರಣ ಹಾಗೂ ಹರಕೆ ಮುಂತಾದ ಸಮಾರಂಭ ನಡೆಸಲು ಸಹಕಾರವಾಗುತ್ತಿತ್ತು. ಆದರೆ ಈಗ ಈ ಪ್ರದೇಶವನ್ನು ನಾಗರಹೊಳೆ ಹುಲಿ ಸಂರಕ್ಷಣಾ ಪ್ರದೇಶದ ಬಫರ್ ಜೋನ್ ವ್ಯಾಪ್ತಿಯ ಅರಣ್ಯಪ್ರದೇಶವೆಂದು ಗುರುತಿಸಿರುವುದರಿಂದ ಜಾತ್ರೆಯನ್ನು ಹೊರತುಪಡಿಸಿ ಯಾವುದೇ ರೀತಿಯ ಸಮಾರಂಭಗಳನ್ನು ನಡೆಸಲು ಅರಣ್ಯ ಇಲಾಖೆಯಿಂದ ನಿರ್ಬಂಧವಿದೆ. ದಿನದಿಂದ ದಿನಕ್ಕೆ ಭಕ್ತಾದಿಗಳ ಸಂಖ್ಯೆ ಕ್ಷೀಣಿಸುತ್ತಿದ್ದು ಭಕ್ತಾದಿಗಳಿಂದ ದೊರಕುತ್ತಿದ್ದ ಹರಕೆಯ ಹಣ ಹಾಗೂ ದಾನ ದತ್ತಿ ಸಂಗ್ರಹ ವಾಗದ ಕಾರಣ ದೇವಸ್ಥಾನದ ಎಲ್ಲಾ ರೀತಿಯ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ ಎಂದರು.

ಮಾಜಿ ಶಾಸಕರಾದ ಕೆ.ಮಹದೇವ್, ಪಿರಿಯಾಪಟ್ಟಣ ತಹಸಿಲ್ದಾರ್ ನಿಸರ್ಗಪ್ರಿಯ, ಉಪ ತಹಸಿಲ್ದಾರ್ ವಿನೋದ್ ಕುಮಾರ್, ಇನ್ ಸ್ಪೆಕ್ಟರ್ ಗೋವಿಂದರಾಜು, ಸಮಿತಿಯ ಕಾರ್ಯದರ್ಶಿ ಪಾಪಣ್ಣ, ಸದಸ್ಯರಾದ ಶ್ರೀನಿವಾಸ್, ಶಿವರಾಜ್, ಕಾಂತರಾಜು, ಕೃಷ್ಣೇಗೌಡ, ರಾಮೇಗೌಡ, ಸುರೇಶ್, ರಮೇಶ್, ಕುಮಾರ, ವಿ.ಎಸ್.ರಾಮಕೃಷ್ಣ, ಶಿವಣ್ಣ, ರಘು, ಮುತ್ತುರಾಜು, ನವೀನ್, ಸುಬ್ರಮಣಿ, ಸತೀಶ, ಪ್ರಭು ಕುಮಾರ್, ರಾಮಕೃಷ್ಣ, ಅರವಿಂದ, ನಂದಿ, ಅಕ್ಕಪಕ್ಕದ ಗ್ರಾಮಗಳ ಸಾವಿರಾರು ಭಕ್ತರು ಭಾಗವಹಿಸಿದ್ದರು.

ಸಂಚಾರ ದಟ್ಟಣೆ:  ಮಧ್ಯಾಹ್ನದ ವೇಳೆ ಭಕ್ತರು ಏಕಾಏಕಿ ಆಗಮಿಸಿದ್ದರಿಂದ ಒಂದೆರಡು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಉಂಟಾಗಿ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಯಿತು.

ಆಂದೋಲನ ಡೆಸ್ಕ್

Recent Posts

ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯ ಬಂಧನ: ಇಬ್ಬರ ರಕ್ಷಣೆ

ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…

10 hours ago

ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ

ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…

10 hours ago

ಪ್ರೀಮಿಯಂ ಪೆಟ್ರೋಲ್‌ ದರ 2 ರೂ ಏರಿಕೆ

ನವದೆಹಲಿ: ಇರಾನ್‌ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್‌ ದರವನ್ನು 2 ರೂಗೆ ಏರಿಕೆ ಮಾಡಿದೆ.…

11 hours ago

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್:‌ ಸವಾರ ಸಾವು

ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…

11 hours ago

ಚಿಕ್ಕಮಗಳೂರು| ಹೊತ್ತಿ ಉರಿಯುತ್ತಿರುವ ಶೋಲಾರಣ್ಯ: ಅಪರೂಪದ ಸಸ್ಯ ಸಂಪತ್ತು ನಾಶ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…

11 hours ago

ಇರಾನ್‌ ಮೇಲೆ ಅಮೇರಿಕಾ-ಇಸ್ರೇಲ್‌ ವೈಮಾನಿಕ ದಾಳಿ: ಇರಾನ್‌ ಗುಪ್ತಚರ ಸಚಿವ ಸಾವು

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್‌ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…

11 hours ago